• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬೊಮ್ಮನಹಳ್ಳಿಯಲ್ಲಿ ಶ್ರೀರಂಗನಾಥಸ್ವಾಮಿ ರಥೋತ್ಸವ
ದೇವಾಲಯದಲ್ಲಿ ಪೂಜೆಯನ್ನು ಪೂರ್ಣಗೊಳಿಸಿದ ನಂತರ ವಿವಿಧ ಬಗೆಯ ಪುಷ್ಪಗಳಿಂದ ಸರ್ವಾಲಂಕೃತಗೊಂಡ ಸ್ವಾಮಿಯ ಉತ್ಸವ ಮೂತಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಶ್ರೀ ಶಂಭುನಾಥ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿ ಕದಲಿ ಕಡಿಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಸ್ವಾಮಿಯ ಹರ್ಷೋಧ್ಘಾರ ಮಾಡುತ್ತಾ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ರಥ ಎಳೆದು, ರಥವನ್ನು ದೇವಾಲಯದ ಬಳಿಯಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಎಳೆದು ನಂತರ ದೇಗುಲದ ಬಳಿಗೆ ತಂದು ನಿಲ್ಲಿಸಲಾಯಿತು. ರಥದ ಮುಂದೆ ಸಾಗಿದ ಪೂಜಾ ಕುಣಿತ, ವೀರಗಾಸೆ ಕುಣಿತಗಳು ಮನಸೆಳೆದವು.
ಪಿಡಿಒ ಮೇಲೆ ಗ್ರಾಮ ಪಂಚಾಯತ್‌ ಸದಸ್ಯನಿಂದ ಹಲ್ಲೆ
ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಏಕಾಏಕಿ ಗ್ರಾಮ ಪಂಚಾಯಿತಿ ಸದಸ್ಯ ಪಿಡಿಒ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಏನೇ ಸಮಸ್ಯೆ ಇದ್ದರೂ ಕುಳಿತು, ಅಥವಾ ಮೇಲಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳುವುದನ್ನು ಬಿಟ್ಟು ನೌಕರನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹಲ್ಲೆ ಮಾಡಿದ ವ್ಯಕ್ತಿಯ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್‌ ಆಗಿದ್ದರೂ ಪೊಲೀಸರು ಹಲ್ಲೆಕೋರನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲರೊಂದಿಗೆ ಪವಿತ್ರ ರಂಜಾನ್ ಹಬ್ಬ ಆಚರಣೆ
ಸಾಮಾಜಿಕ ಹೋರಾಟಗಾರ ನೂರ್ ಅಹಮದ್ ಮಾತನಾಡಿ, ಅಲ್ಲಾಹು ನಮಗೆ ಉಪವಾಸ ಪ್ರಾರ್ಥನೆ ಮತ್ತು ಸತ್ಕರ್ಮಗಳನ್ನು ಸ್ವೀಕರಿಸಲಿ ಉತ್ತಮ ಆರೋಗ್ಯದೊಂದಿಗೆ ಇನ್ನಷ್ಟು ರಂಜಾನ್ ತಿಂಗಳನ್ನು ಸ್ವಾಗತಿಸಲು ನಮ್ಮನ್ನು ಅನುಗ್ರಹಿಸಲಿ. ಪವಿತ್ರ ರಂಜಾನ್ ಹಬ್ಬವು ಕೇವಲ ಹೊಸ ಬಟ್ಟೆ ಸಂಭ್ರಮಾಚರಣೆ ಸೀಮಿತವಾಗದೆ, ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ) ರವರ ಆದೇಶದಂತೆ ಬಡವರ ಪಾಲಿನ ಜಕಾತ್ ನೀಡುವುದರ ಜೊತೆಗೆ ನಿರ್ಗತಿಕ ಅನಾಥ ಮಕ್ಕಳೊಂದಿಗೆ ಪ್ರೀತಿ ವಿಶ್ವಾಸದಿಂದ ಹಬ್ಬ ಆಚರಿಸಬೇಕು. ನಮ್ಮ ಸುತ್ತಮುತ್ತ ಇರುವ ಅನಾಥ ಮಕ್ಕಳಿಗೆ ಆಶಾಕಿರಣವಾಗಿ ಅವರ ಹೃದಯಕ್ಕೆ ಹತ್ತಿರವಾಗಬೇಕು ಎಂದರು.
ಕಪ್ಪು ಪಟ್ಟಿ ಧರಿಸಿ ಹಳೆ ಈದ್ಗಾದಲ್ಲಿ ರಂಜಾನ್ ಪ್ರಾರ್ಥನೆ
ರಂಜಾನ್ ಹಬ್ಬದ ಅಂಗವಾಗಿ ಮುಸಲ್ಮಾನ ಬಾಂಧವರು ವಕ್ಫ್‌ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಭೇಟಿ ನೀಡಿ ವಕ್ಫ್ ಕಾಯಿದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಮುಸಲ್ಮಾನರ ಹೋರಾಟಕ್ಕೆ ಸಾಥ್ ನೀಡಿದರು. ನಾವು ಹಾಸನ ಜಿಲ್ಲೆಯಿಂದ ನಾವು ಮುಸಲ್ಮಾನ ಬಾಂಧವರ ಜೊತೆ ಸೌಹಾರ್ದಯುತವಾಗಿ ನಡೆದುಕೊಂಡಿದ್ದು, ನಮ್ಮ ತಂದೆ ಎಚ್.ಎಸ್. ಪ್ರಕಾಶ್ ಅವರು ಕೂಡ ಇದೆ ಭಾಗದಲ್ಲಿ ನಗರಸಭೆ ಸದಸ್ಯರಾಗಿ ಸಹೋದರರ ರೀತಿ ಬಂದಿದ್ದೇವೆ. ಈಗಲೂ ಕೂಡ ಕೂಡ ಜೊತೆಯಲ್ಲಿ ಇರುವುದಾಗಿ ಹೇಳಿದರು.
ಬಾಣಾವರದಲ್ಲಿ ರಂಜಾನ್‌ ಸಾಮೂಹಿಕ ಪ್ರಾರ್ಥನೆ
ಇಸ್ಲಾಂ ಧರ್ಮವು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಶಾಂತಿಯನ್ನು ಸಾರುವ ಧರ್ಮವಾಗಿದ್ದು ಇಸ್ಲಾಂ ಧರ್ಮದ ಪ್ರಕಾರ ಸಮಾಜದಲ್ಲಿ ವಾಸಿಸುವ ಎಲ್ಲರೂ ಸಹ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು. ಅಲ್ಲದೆ ಎಲ್ಲಿಯೂ ಯಾರಿಗೂ ಸಹ ನೋವಾದಾಗ ಅವರಿಗೆ ತನ್ನ ಕೈಲಾದ ಸೇವೆಯನ್ನ ಸಲ್ಲಿಸುತ್ತಾ ನೆರೆಹೊರೆಯವರ ಕಷ್ಟ- ಸುಖಗಳಿಗೆ ಸ್ಪಂದಿಸುತ್ತಾ ಅವರ ಸಂಕಷ್ಟಗಳಿಗೆ ಸಹಕರಿಸುತ್ತಾ ಬದುಕಬೇಕು ಎಂಬುದನ್ನು ಇಸ್ಲಾಂ ಧರ್ಮವು ತಿಳಿಸಿಕೊಟ್ಟಿದೆ.
ರಂಜಾನ್‌ ಶುಭಾಶಯ ವಿನಿಮಯ
ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಿದರು. ತದನಂತರ ಒಬ್ಬರಿಗೊಬ್ಬರು ಆಲಿಂಗನ ಮಾಡಿಕೊಳ್ಳುವ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ದೇಶದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಹೋದರತ್ವವು ನೆಲೆಸಲಿ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿ ಪ್ರತೀ ಸಮುದಾಯದ ಜನರ ಬದುಕು ಹಸನಾಗಿರಲಿ ಎಂದು ದೇವರಲ್ಲಿ ಮೊರೆಯಿಟ್ಟರು. ದೇಶದ ಏಳ್ಗೆಗೆ ಹಾಗೂ ಎಲ್ಲಾ ಸಮುದಾಯದ ಜನರ ಬದುಕಿಗೆ ನೆಮ್ಮದಿಯನ್ನು ತರಲಿ ಎಂದು ಹರಸಿದರು.
ಈದ್ಗಾದಲ್ಲಿ ರಂಜಾನ್‌ ಸಾಮೂಹಿಕ ಪ್ರಾರ್ಥನೆ
ಸಾಮೂಹಿಕ ಪ್ರಾರ್ಥನೆ ನಂತರ ಅಲಿರಜ ಮೌಲಾನ ನಡೆಸಿಕೊಟ್ಟ ಪ್ರವಚನದಲ್ಲಿ ಫಿತರ್(ಉಪವಾಸ), ಜಕಾತ್(ದಾನ ಧರ್ಮ) ಬಗ್ಗೆ ತಿಳಿಸಿಕೊಟ್ಟರು. ಉಳ್ಳವರು ಬಡವರಿಗೆ ದಾನವನ್ನು ಮಾಡಿ, ಅವರು ಸಹ ಹಬ್ಬವನ್ನು ನೆಮ್ಮದಿ ಮತ್ತು ನಿಶ್ಚಿಂತೆಯಿಂದ ಆಚರಣೆ ಮಾಡುವಂತೆ ಅವಕಾಶ ಕಲ್ಪಿಸಬೇಕು. ಫಿತರ್ ಆಚರಣೆಯಿಂದ ಬಡವರ ಸಂತೋಷದಲ್ಲಿ ದೇವರನ್ನು ಕಾಣಬಹುದು ಮತ್ತು ಅಲ್ಲಾಹ ಕೃಪೆಗೆ ಪಾತ್ರರಾಗಬಹುದು ಎಂದು ತಿಳಿಸಿದರು.
ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿದವರ ಮೇಲೆ ಕ್ರಮಕ್ಕೆ ಆಗ್ರಹ
ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿರುವ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಫಿ ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಮಲೆನಾಡು ಮೂಲನಿವಾಸಿಗಳ ಒಕ್ಕೂಟದ ಸದಸ್ಯರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಯುಗಾದಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿ ವ್ಯಾಪಾರ ಬಲುಜೋರು
ಸಂಜೆಯ ಹೊತ್ತಿಗಾಗಲೇ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಹಬ್ಬದ ವಹಿವಾಟು ರಾತ್ರಿಯ ತನಕವೂ ಮುಂದುವರಿದಿತ್ತು.
ಯುಕೆಜಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ಸವ
ಪಟ್ಟಣದ ಶಾಲಿನಿ ಇಂಟರ್ನ್ಯಾಷನಲ್ ಸ್ಕೂಲ್‌ನ ಶಾಲಿನಿ ಜ್ಯೂನಿಯರ್ ವಿಂಗ್ಸ್ ನ ಯುಕೆಜಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ಸವ ಸಮಾರಂಭವನ್ನು ಆಚರಿಸಲಾಯಿತು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 552
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved