• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಾಪಟ್ಟಣ ಲಕ್ಷ್ಮೀ ಕಾಂತಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ
ಬಸವಾಪಟ್ಟಣ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ಕಾಂತಸ್ವಾಮಿ ಬ್ರಹ್ಮರಥೋತ್ಸವ ದೇವಸ್ಥಾನದಲ್ಲಿ ಮಂಗಳವಾರ ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಬೆಳ್ಳಿ ಪಲ್ಲಕ್ಕಿ ಉತ್ಸವ, ವಾಹನ ಸ್ಥಳ ವಾಹನಹೋತ್ಸವ, ನಾದಸ್ವರ ಇನ್ನು ಹಲವಾರು ರೀತಿಯ ವಿವಿಧ ಉತ್ಸವಗಳು ಹಾಗೂ ವಿವಿಧ ಪೂಜಾ ಕೈಂಕರ್ಯದ ನಂತರ ಮಹಾರಥೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ರಥೋತ್ಸವದ ಹಿನ್ನೆಲೆಯಲ್ಲಿ ವಿವಿಧ ಸಮಾಜದವರು ಭಕ್ತರುಗಳಿಗೆ ದಾಸೋಹ, ಮಜ್ಜಿಗೆ, ಪಾನಕ ಮುಂತಾದ ವ್ಯವಸ್ಥೆಯನ್ನು ಮಾಡಿಸಿಕೊಟ್ಟರು.
ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಗತವೈಭವ ಕಾರ್ಯಕ್ರಮ
ಕಲಾ ಕಾಲೇಜು ಮೈದಾನದಲ್ಲಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪಕ್ಷಾತೀತವಾಗಿ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಗತವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ತಿಳಿಸಿದರು. ದೇಸಿ ಸೊಗಡಿನ ಕಲೆಯನ್ನು ಉಳಿಸುವ ಕೆಲಸವನ್ನು ಹಲವಾರು ವರ್ಷಗಳಿಂದ ನಿರ್ವಹಿಸುತ್ತಿದ್ದಾರೆ. ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ೩೫೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್‌ ಆಳ್ವ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.
ಹಾರೋಹಳ್ಳಿ ಶ್ರೀ ಬಸವಣ್ಣ ದೇವರ ನೂತನ ದೇಗುಲ ಲೋಕಾರ್ಪಣೆ
ಮಾದೀಹಳ್ಳಿ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿನ ಪುರಾಣಪ್ರಸಿದ್ದ ಶ್ರೀ ಬಸವಣ್ಣದೇವರ ನೂತನ ದೇಗುಲ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಫೆ. 10ರ ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಹಾರೋಹಳ್ಳಿ ಶ್ರೀ ಬಸವಣ್ಣ ದೇವರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಚ್.ಎಂ.ನಾಗೇಂದ್ರಪ್ಪ ಹಾಗೂ ಕಾರ್ಯದಶಿ ಎಚ್.ಪಿ.ಧರ್ಮಪ್ಪ ಹೇಳಿದರು. ಪುಷ್ಪಗಿರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ದೇವರ ಪ್ರತಿಷ್ಠಾಪನೆ ಹಾಗೂ ಕಲಶ ಪ್ರತಿಷ್ಠಾಪನೆ ನಡೆಸಲಾಗುತ್ತದೆ. ಪುಷ್ಪಗಿರಿ ಜಗದ್ಗುರುಗಳು, ತಮ್ಮಡಿಹಳ್ಳಿ ಶ್ರೀಗಳು ಮತ್ತು ಕೋಳಗುಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಸರ್ಕಾರದಲ್ಲಿ ನಿತ್ಯವೂ ಸೂತಕದಂತಾಗಿದೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿ ನಿತ್ಯವೂ ಸೂತಕದ ಮನೆಯಾಗಿದ್ದು, ಹಣವಿಲ್ಲದೇ ಪಾಪರ್ ಆಗಿ ನಿಗಮಗಳಿಗೆ ಹಣ ಕೊಟ್ಟಿಲ್ಲ. ಸರ್ಕಾರ ದಿವಾಳಿ ಆಗಿ ರಾಜ್ಯದೊಳಗೆ ಬರೀ ಆತ್ಮಹತ್ಯೆ ಆಗುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಮೈಕ್ರೋ ಫೈನಾನ್ಸ್ ನವರು ಈ ಸರ್ಕಾರವನ್ನು ಕೇರ್ ಮಾಡ್ತಾ ಇಲ್ಲ. ಜವಾಬ್ದಾರಿಯುತ ಸರ್ಕಾರವಾಗಿ ಏನಾದರೂ ಘೋಷಣೆ ಮಾಡಿದ್ರೆ ಹೇಗಿರಬೇಕು? ಉತ್ತರ ಪ್ರದೇಶದಲ್ಲಿ ನಮ್ಮ ಸಿಎಂ ಗುಡುಗಿದ್ರೆ ರೌಡಿಗಳು ಉತ್ತರ ಪ್ರದೇಶ ಅಲ್ಲ ದೇಶಬಿಟ್ಟೇ ಓಡಿ ಹೋಗ್ತಾರೆ. ನಮ್ಮ ಸಿಎಂ ಗುಡುಗಿದ್ದು ಆಯ್ತು, ಮಳೆ ಬಂದಿದ್ದು ಆಯ್ತು ಏನೂ ಕ್ರಮ ಆಗಿಲ್ಲ ಎಂದು ಕುಟುಕಿದರು.
ಪೋಷಕರು ಮಕ್ಕಳಿಗೆ ಬಾಂಧವ್ಯಗಳ ಬಗ್ಗೆ ತಿಳಿಸಿ
ಪೋಷಕರು ಮಕ್ಕಳಿಗೆ ಮೊದಲು ಬಾಂಧವ್ಯದ ಸಂಸ್ಕಾರವನ್ನು ಕಲಿಸುವುದು ಉತ್ತಮವಾಗಿದೆ ಎಂದು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲೇಶ್‌ ಗೌಡ ತಿಳಿಸಿದ್ದಾರೆ. ಪೋಷಕರು ತಮ್ಮ ಮನೆಗಳಲ್ಲಿ ಸಂಸ್ಕಾರದ ಬಾಂಧವ್ಯಗಳನ್ನು ಮಕ್ಕಳಿಗೆ ಕಲಿಸುವುದು ಉತ್ತಮವಾಗಿದೆ. ಜೊತೆಗೆ ಅದರಲ್ಲೂ ಈಗಿನ ಕಾಲದಲ್ಲಿ ಮಕ್ಕಳು ಒಂದು ಕಡೆ, ಪೋಷಕರು ಒಂದು ಕಡೆ ಇರುವುದನ್ನು ನಾವು ನೋಡುತ್ತಿದ್ದೇವೆ ಇವರ ಇಬ್ಬರ ನಡುವಿನ ಸಂಬಂಧಗಳು ಬಾಂಧವ್ಯಗಳು ಬಹು ಗಟ್ಟಿತನವಾಗಿ ಉಳಿಯಲು ಪ್ರಯತ್ನಗಳು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಳ್ಳತನವಾಗಿದ್ದ ಎಟಿಎಂ ಮಷಿನ್‌ ನಾಲೆಯಲ್ಲಿ ಪತ್ತೆ
ಕಳ್ಳತನವಾಗಿದ್ದ ಎಟಿಎಂ ಮಷಿನ್, ನಾಲೆಯಲ್ಲಿ ಪತ್ತೆಯಾಗಿದೆ. ನಗರದ ಹೊರವಲಯದ ಶಂಕರನಹಳ್ಳಿ ಗ್ರಾಮದ ಬಳಿ ಇರುವ ನಾಲೆಯಲ್ಲಿ ಎಟಿಎಂ ಮಷಿನ್ ಪತ್ತೆಯಾಗಿದ್ದು ಹಣ ತೆಗೆದುಕೊಂಡು ಎಟಿಎಂ ಮಷಿನ್ ಅನ್ನು ಕಳ್ಳರು ನಾಲೆಯಲ್ಲಿ ಬಿಸಾಡಿ ಹೋಗಿದ್ದಾರೆ. ಕಳೆದ ಜನವರಿ 29ರಂದು ಹನುಮಂತಪುರದಲ್ಲಿ ಎಟಿಎಂ ಮಿಷನ್ ಕಳ್ಳತನವಾಗಿತ್ತು. ಹಣದ ಸಮೇತ ಕಳ್ಳರು ಇಂಡಿಯಾ ಒನ್ ಎಟಿಎಂ ಮಷಿನ್ ಕದ್ದೊಯ್ದಿದ್ದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ನೃತ್ಯ ಪ್ರದರ್ಶಿಸಲಿರುವ ಆಳ್ವಾಸ್‌ ವಿದ್ಯಾರ್ಥಿಗಳು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆಳ್ವಾಸ್ ನುಡಿಸಿರಿ ವಿರಾಸತ್ ಎಂಬ ಸಾಂಸ್ಕೃತಿಕ ವೈಭವಕ್ಕೆ ವ್ಯಾಪಕ ಬೆಂಬಲ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಹೇಳಿದರು. ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ರಾಜೂರ ಜಮೀನಿನಲ್ಲಿ ಚಿರತೆ ಓಡಾಟ ಶಂಕೆ, ಶೋಧ ಕಾರ್ಯಕ್ಕೆ ವಿದ್ಯುತ್ ಅಡಚಣೆ
ಕೆಲ ಗ್ರಾಮಗಳಲ್ಲಿ ಆಗಾಗ ಚಿರತೆ ಓಡಾಟದಿಂದ ಭಯಗೊಳ್ಳುತ್ತಿರುವ ರೈತರು ಕೃಷಿ ಚಟುವಟಿಕೆ ನಡೆಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ
ಒಳಚರಂಡಿ ಕಾಮಗಾರಿಯನ್ನು ತುರ್ತಾಗಿ ಮುಗಿಸಿ
ನನೆಗುದಿಗೆ ಬಿದ್ದಿರುವ ಒಳಚರಂಡಿ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಂಡು ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಎ. ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು. 2013ರಲ್ಲಿ 18 ಕೋಟಿ ರು. ವೆಚ್ಚದಲ್ಲಿ ಆರಂಭಗೊಂಡ ಕಾಮಗಾರಿ 12 ವರ್ಷ ಕಳೆದರೂ ಇನ್ನೂ ಕುಂಟುತ್ತಾ ಸಾಗಿದೆ. ಕಾಮಗಾರಿ ವೆಚ್ಚ 39 ಕೋಟಿ ರು.ಗೆ ಏರಿಕೆಯಾಗಿದೆ, ಸರ್ಕಾರ ಹಣವನ್ನೂ ಬಿಡುಗಡೆಮಾಡಿದೆ. ತ್ಯಾಜ್ಯ ಘಟಕ ನಿರ್ವಹಣೆಗೆ ಅಗತ್ಯ ಜಮೀನು ಗುರುತಿಸಿ ನೋಂದಾಯಿಸಿ ಕೊಟ್ಟಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಪೂರ್ಣಗೊಳ್ಳದೆ ಪಟ್ಟಣದ ಜನತೆ ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸಿ ಚಾಲನೆ ನೀಡಲಿ
ಸಕಲೇಶಪುರ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸದೇ ಮೀರಿ ಉದ್ಘಾಟನೆ ಮಾಡಲು ಮುಂದಾದರೆ ಬೃಹತ್ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಾವು ಅಭಿವೃದ್ಧಿಗೆ ಕೇಳಿರುವುದು ೫ ಕೋಟಿ, ಅವರು ಕೊಡ್ತೀನಿ ಎಂದಿರುವುದು ೫೦ ಲಕ್ಷ. ಭೂಮಿ ಪೂಜೆ ಮಾಡಬೇಕಾದರೇ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಕೇವಲ ೧೪ ಲಕ್ಷ ರು.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved