• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪ್ರದಾಯದಂತೆ ತೆರೆದ ಹಾಸನಾಂಬ ದೇಗುಲದ ಬಾಗಿಲು
ಜಿಲ್ಲೆಯ ಹೆಮ್ಮೆ ಹಾಗೂ ನಗರದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನದ ಬಾಗಿಲನ್ನು ಈ ವರ್ಷದ ಪಂಚಾಂಗದ ಪ್ರಕಾರ ಗುರುವಾರ ಮಧ್ಯಾಹ್ನ 12.15ಕ್ಕೆ ಗರ್ಭಗುಡಿ ಮುಂದೆ ಬಾಳೆ ಕಂಬ ಕಡಿಯುವ ಮೂಲಕ ತೆರೆಯಲಾಯಿತು. ಇದರೊಂದಿಗೆ ಅ.24ರಿಂದ ಆರಂಭವಾಗಿರುವ ಹಾಸನಾಂಬ ಹಾಗೂ ಶ್ರೀ ಸಿದ್ಧೇಶ್ವರಸ್ವಾಮಿ ಜಾತ್ರೋತ್ಸವ ನವೆಂಬರ್‌ 3ರವರೆಗೆ ನಡೆಯಲಿದೆ. ಮೊದಲ ದಿನವಾದ ಗುರುವಾರ ಸಾರ್ವಜನಿಕರಿಗೆ ದೇವಾಲಯದ ಒಳ ಪ್ರವೇಶ ಇರಲಿಲ್ಲ. ಆದರೂ ಭಕ್ತರು ಮೊದಲ ದಿನದಲ್ಲಿ ದೇವಿ ದರ್ಶನ ಮಾಡಲು ಮುಗಿಬಿದ್ದಿದ್ದರು. ಹಾಸನಾಂಬೆ ಬಾಗಿಲು ತೆಗೆಯುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಒಳ ಬಂದರು.
ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.
ನಾಳೆ ಬಾಗಿಲು ತೆರೆಯಲಿರುವ ಹಾಸನಾಂಬೆ ದೇಗುಲ
ಅಕ್ಟೋಬರ್ ೨೪ರ ಗುರುವಾರದಂದು ಮಧ್ಯಾಹ್ನ ೧೨ ಗಂಟೆಗೆ ರಾಜ ಮನೆತನದ ನರಸಿಂಹ ರಾಜ ಅರಸು ಅವರು ಬಾಳೆಕಂದು ಕತ್ತರಿಸಿದ ನಂತರ ದೇವಿಯ ಗರ್ಭಗುಡಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಾಗಿಲನ್ನು ತೆಗೆದು ದರ್ಶನ ಆರಂಭವಾಗಿ ನವೆಂಬರ್ ೩ನೇ ತಾರೀಖು ಮುಚ್ಚಲಾಗುತ್ತದೆ. ಬ್ಯಾರಿಕೇಡ್, ನೆಲಹಾಸು, ಜರ್ಮನ್ ಟೆಂಟ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಒಂದು ಸಾವಿರ ಮತ್ತು ೩೦೦ ರು.ಗಳ ಟಿಕೆಟ್ ಪಡೆಯಲು ಪ್ರತ್ಯೇಕ ಕೌಂಟರ್ ವ್ಯವಸ್ಥೆ, ಲಾಡು ಪಡೆಯಲು ಪತ್ಯೇಕ ಕೇಂದ್ರ ಸ್ಥಾಪಿಸಲಾಗಿದೆ.
ನಗರಸಭೆ ಅಧಿಕಾರಿಗಳಿಂದ ಚಪ್ಪಲಿ ಅಂಗಡಿ ತೆರವು
ಡಿಸಿ ಮತ್ತು ನಗರಸಭೆ ಆಯುಕ್ತರ ಆದೇಶದಂತೆ ನಗರಸಭೆ ಅಧಿಕಾರಿಗಳು ರಸ್ತೆ ಬದಿ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ಮುಂದುವರೆದ ಭಾಗದಲ್ಲಿ ಮಂಗಳವಾರ ಕೂಡ ನಗರದ ಸಂತೇಪೇಟೆ ವೃತ್ತದಲ್ಲಿ ಇಡಲಾಗಿದ್ದ ಚಪ್ಪಲಿ ರಿಪೇರಿ ಪೆಟ್ಟಿಗೆ ಅಂಗಡಿ ತೆರವು ವೇಳೆ ಭಾರೀ ವಿರೋಧ ವ್ಯಕ್ತವಾಗಿ ವಾಗ್ವಾದ ಉಂಟಾಯಿತು. ತೆರವುಗೊಂಡ ಚಪ್ಪಲಿ ಅಂಗಡಿ ಮಾಲೀಕರಾದ ಕಮಲಮ್ಮ ಮಾಧ್ಯಮದೊಂದಿಗೆ ಮಾತನಾಡಿ, ಸಂತೇಪೇಟೆ ವೃತ್ತದಲ್ಲಿ ಕಳೆದ ೪೦ ವರ್ಷಗಳಿಂದಲೂ ಚಪ್ಪಲಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಬೆಳ್ಳಿ ರಥದಲ್ಲಿ ಇಡಲಾಗಿದ್ದ ಚೆನ್ನಮ್ಮರವರ ಭಾವಚಿತ್ರಕ್ಕೆ ಕ್ಷೇತ್ರದ ಶಾಸಕ ಸ್ವರೂಪ್ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ಮೊಟ್ಟಮೊದಲ ವೀರ ಮಹಿಳೆ, ಹೋರಾಟಗಾರ್ತಿ ಆಗಿದ್ದಾರೆ ಎಂದರು. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಧೀರ ಮಹಿಳೆಯಾಗಿ ಆಗಿನ ಕಾಲದಲ್ಲೇ ಬ್ರಿಟೀಷರ ಕ್ರೌರ್ಯಕ್ಕೆ ಎದೆಗುಂದದೆ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು.
ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು
ಕಾವೇರಿ ನದಿ ತೀರದ ಪ್ರತಿಯೊಬ್ಬರೂ ಸ್ವಚ್ಛ ಕಾವೇರಿ ನದಿಗಾಗಿ ಶುದ್ಧ ಮನಸ್ಸಿನಿಂದ ಎಲ್ಲರೂ ಸ್ವಚ್ಛತಾ ಬಗ್ಗೆ ಕೈಜೋಡಿಸಬೇಕು ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕರಾದ ಕುಶಾಲನಗರ ಚಂದ್ರಮೋಹನ್ ಮನವಿ ಮಾಡಿದರು. ರಾಮನಾಥಪುರ ಶ್ರೀ ರಾಮೇಶ್ವರಸ್ವಾಮಿ ದಂಡೆಯಲ್ಲಿರುವ ವಹ್ನಿಪುಕ್ಷರಣೆಯಲ್ಲಿ 132ನೇಯ ತಿಂಗಳ ಹುಣ್ಣಿಮೆಯ ಕಾವೇರಿ ಮಹಾ ಆರತಿಯನ್ನು ಕೊಡಗು ಜಿಲ್ಲಾ ಹಾಗೂ ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಶರಣ ಸಾಹಿತ್ಯ ಪರಿಷತ್, ಕರ್ನಾಟಕ ಮತ್ತು ತಮಿಳುನಾಡು ಅಖಿಲ ಭಾರತ ಸನ್ಯಾಸಿಗಳ ಸಂಘ ಸಂಯುಕ್ತಾಶ್ರಯದಲ್ಲಿ ನಡೆಸಲಾಯಿತು.
ಶಾಲೆ ವಿದ್ಯಾರ್ಥಿಗಳಿಗೆ ರೈಲ್ವೆ ಪೊಲೀಸ್‌ ಮಾರ್ಗದರ್ಶನ
ಮಾದಕ ವಸ್ತು ಬಾಲ್ಯ ವಿವಾಹ ಮತ್ತು ಅಪರಿಚಿತರು ಯಾವುದೇ ಆಹಾರ ವಸ್ತುಗಳನ್ನು ನೀಡಿದರೆ ಪಡೆಯಬಾರದು. ನೀವು ಅಪರಿಚಿತರು ಕರೆದರೆ ಯಾವುದೇ ವಾಹನಗಳನ್ನು ಹತ್ತಬಾರದು. ರಸ್ತೆಯನ್ನು ದಾಟುವಾಗ ಮತ್ತು ಇತರ ಕಡೆ ಸಂಚರಿಸುವಾಗ ಬಹಳ ಎಚ್ಚರಿಕೆಯನ್ನು ವಹಿಸಬೇಕು ಎಂದರು. ಅಪ್ರಾಪ್ತರ ವಿವಾಹ ಆಗುವ ಮಾಹಿತಿ ನಿಮಗೆ ಸಿಕ್ಕರೆ ಅದನ್ನು ತಿಳಿಸಬೇಕು ಎಂದ ಅವರು, ಸರಕಾರಿ ಶಾಲೆಗಳಲ್ಲಿ ಓದಿ ಅನೇಕ ಮಹನೀಯರುಗಳು ರಾಷ್ಟ್ರದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ರೈಲ್ವೆ ಸಬ್ ಇನ್ಸ್ಪೆಕ್ಟರ್‌ ಮಹೇಶ್ ಇ. ಜಿ ಸ್ಫೂರ್ತಿದಾಯಕ ಮಾತನಾಡಿದರು.
ಜನಗಣತಿಗೆ ಕೆಸವತ್ತೂರು ಮಠದ ಶ್ರೀಗಳ ವಿರೋಧ
ಜಾತಿಗಣತಿಯನ್ನು ಆಗಿಂದಾಗ್ಗೆ ನಡೆಸಿ ರಾಜ್ಯ ಸರ್ಕಾರ ವರದಿಯನ್ನು ಬಹಿರಂಗಪಡಿಸುತ್ತಿಲ್ಲ. ಜಾತ್ಯತೀತವಾಗಿರುವ ನಮ್ಮ ರಾಷ್ಟ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರದಲ್ಲಿ ಜನಗಣತಿಯ ಆದ್ಯತೆ ಇದೆಯೇ ಎಂದು ಅರಕಲಗೂಡು ತಾಲೂಕಿನ ಕೆಸವತ್ತೂರು ಶ್ರೀ ಸಿದ್ಧಲಿಂಗೇಶ್ವರ ಮಠದ ಶ್ರೀ ಬಸವ ರಾಜೇಂದ್ರ ಸ್ವಾಮೀಜಿ ಅವರು ಪ್ರಶ್ನಿಸಿದರು. ಒಳಮೀಸಲಾತಿಯನ್ನು ಈ ಹಿಂದಿನ ಸರ್ಕಾರ ಈ ವರದಿಯನ್ನು ತಿರಸ್ಕರಿಸಿತು. ಆದ್ದರಿಂದ ನಮ್ಮ ರಾಷ್ಟ್ರದಲ್ಲಿ ಜನಗಣತಿಯ ಆದ್ಯತೆ ಇಲ್ಲ ಎಂದು ಕೆಸವತ್ತೂರು ಮಠದ ಶ್ರೀಗಳು ತಿಳಿಸಿದರು.
ಕಿತ್ತೂರು ರಾಣಿ ಚನ್ನಮ್ಮ ಅವರ ಕೆಚ್ಚೆದೆಯ ಧೈರ್ಯ ಮಹಿಳೆಯರಿಗೆ ಸ್ಫೂರ್ತಿ
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ, ಅವರ ಕೆಚ್ಚೆದೆಯ ಧೈರ್ಯ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ತಹಸೀಲ್ದಾರ್‌ ಎಂ ಮಮತಾ ಹೇಳಿದರು. ದೇಶದಲ್ಲಿ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರು ತಾವು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ದಬ್ಬಾಳಿಕೆ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದರೂ ಎಲ್ಲವನ್ನು ಮೆಟ್ಟಿ ನಿಂತು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಧನೆ ತೋರುತ್ತಿರುವುದು ಹೆಮ್ಮೆಯ ವಿಷಯ. ಸರ್ಕಾರಗಳು ಸ್ತ್ರೀ-ಪುರುಷರು ಸಮಾನರು ಎಂಬ ಕಾನೂನುಗಳನ್ನು ಜಾರಿಗೆ ತಂದು ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದರು.
ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ
ಅಸ್ಪೃಶ್ಯತೆ ಆಚರಣೆಯು ಶಿಕ್ಷಾರ್ಹ ಅಪರಾಧವಾಗಿದೆ ಆಲೂರು ತಹಸೀಲ್ದಾರ್ ಸಿ.ಪಿ ನಂದಕುಮಾರ್ ತಿಳಿಸಿದರು. ನಮ್ಮ ದೇಶವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಸಮಾಜದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಪಿಡುಗುಗಳು ಅನಾದಿಕಾಲದಿಂದಲೂ ಬೇರೂರಿವೆ. ಅದರಲ್ಲಿ ಅಸ್ಪೃಶ್ಯತೆ ಆಚರಣೆ ಸಹ ಒಂದಾಗಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಸಮಾನತೆಯ ಹಕ್ಕನ್ನು ಕೂಡ ನೀಡಿರುವುದರಿಂದ, ಈ ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಪ್ರಾಣಿ, ಪಕ್ಷಿ ಹಾಗೂ ಮನುಷ್ಯನಿಗೂ ಕೂಡ ಸಮಾನತೆಯಿಂದ ಜೀವಿಸುವ ಹಕ್ಕಿದೆ ಎಂದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 418
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved