• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್ಐಎ ತನಿಖೆ ನಡೆಸಲಿ
ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್.ಐ.ಎ. ತನಿಖೆ ನಡೆಸಲು ಹಾಗೂ ನಕಲಿ ಆಧಾರ್‌ ಕಾರ್ಡ್‌ ಮಾಡುತ್ತಿರುವವರ ಜಾಲದ ಕುರಿತು ಸನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದಿಂದ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಗಾರೆ ಕೆಲಸದವರ ಸೋಗಿನಲ್ಲಿದ್ದ ಇಂತಹ ಮೂವರು ನುಸುಳುಕೋರರನ್ನು ಪೊಲೀಸರು ಬಂಧಿಸಿದ್ದು, ಮೂವರೂ ಪಶ್ಚಿಮ ಬಂಗಾಳ ವಿಳಾಸವಿರುವ ನಕಲಿ ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನಲಾಗಿದೆ.
ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಕ್ರಮ
ಕಳೆದ ಎರಡೂವರೆ ದಶಕದಿಂದ ಈ ಭಾಗದಲ್ಲಿ ಕಾಡಾನೆ ಸಮಸ್ಯೆ ನಿರಂತರವಾಗಿದೆ. ಜೀವ, ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗುತ್ತಿದೆ. ಆ ನಿಟ್ಟಿನಲ್ಲಿ ಈಗಾಗಲೇ ಬೆಳೆಗಾರರ ಸಂಘಟನೆಯೊಂದಿಗೆ ಅರಣ್ಯ ಸಚಿವರನ್ನು ಭೇಟಿಯಾಗಿ ಸಮಸ್ಯೆ ಗಂಭೀರತೆಯನ್ನು ತಿಳಿಸಲಾಗಿದೆ. ಕಾಫಿ ಬೆಳೆಗಾರರ ಸಂಘಟನೆ ಹೆಚ್ಚು ಬಲ ಹೊಂದಿದ್ದು, ಸಂಘಟನೆಯ ಶಕ್ತಿ ಹಾಗೂ ಶಾಸಕನಾಗಿ ಅಧಿಕಾರ ಬಳಸಿ ಸರ್ಕಾರದ ಮೇಲೆ ಹೆಚ್ಚು ಒತ್ತಡ ತಂದು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗುತ್ತೇನೆ ಎಂದು ಶಾಸಕ ಸಿಮೆಂಟ್‌ ಮಂಜು ತಿಳಿಸಿದರು.
ಟಿವಿ ಮೊಬೈಲ್‌ ದೂರವಿಟ್ಟು ಪುಸ್ತಕಗಳನ್ನು ಓದಿ
ಟಿವಿ, ಮೊಬೈಲ್‌ಗಳನ್ನು ಬದಿಗೊತ್ತಿ, ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗುವ ಬದಲು ವಿದ್ಯಾರ್ಥಿಗಳು ಪುಸಕ್ತಗಳನ್ನು ಸ್ನೇಹಿತರಾಗಿ ಮಾಡಿಕೊಂಡು, ಸತತ ಅಭ್ಯಾಸ ಮಾಡುವ ಮೂಲಕ ಬದುಕನ್ನು ಉತ್ತಮ ರೀತಿಯಲ್ಲಿ ಕಟ್ಟಿಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. ದೇವರ ಸೇವೆಗಿಂತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಮಾಡುವುದು ಉತ್ತಮ ಎಂದು ನಾವು ತಿಳಿದುಕೊಂಡು, ತಾಲೂಕಿನಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ಕಾಲೇಜಿಗೆ ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸುವುದಾಗಿ ಶಾಸಕರು ಹೇಳಿದರು.
ವಯನಾಡಿನ ಅನಾಥ ಮಕ್ಕಳ ದತ್ತು ಪಡೆಯಲು ಮನವಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ವೈ. ಎಸ್. ವೀರಭದ್ರಪ್ಪನವರು ಇತ್ತೀಚೆಗೆ ಕೇರಳ ರಾಜ್ಯದ ವಯನಾಡಿನ ಪ್ರದೇಶದಲ್ಲಿ ನಡೆದ ಪ್ರಕೃತಿ ವಿಕೋಪದಲ್ಲಿ ಅನಾಥರಾದ ಇಬ್ಬರು ಮಕ್ಕಳನ್ನು ತಾವು ದತ್ತು ಪಡೆಯಲು ನೆರವು ನೀಡುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಅನಾಥ ಮಕ್ಕಳ ಸೇವೆ ಮಾಡಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವೂ ಮುಖ್ಯ
ಮನುಷ್ಯ ದೈನಂದಿನ ಜೀವನದಲ್ಲಿ ಶಾರೀರಿಕ ಸದೃಢತೆ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪಿ.ಮಮತಾ ಹೇಳಿದರು. ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ನಿತ್ಯ ದುಡಿಯುವ ಕೈಗಳಿಗೆ ಒಂದಿಲ್ಲೊಂದು ಮಾನಸಿಕ ಒತ್ತಡ, ಖಿನ್ನತೆ ಕಾಡುವುದು ಕಂಡುಬರುತ್ತಿದೆ. ಅಂತಹ ಸನ್ನಿವೇಶದಲ್ಲಿ ತಜ್ಞ ವೈದ್ಯರ ಸಲಹೆ ಪಡೆಯವ ಅಗತ್ಯವಿದೆ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದರು.
ಹಾಸನ ಸೇರಿದಂತೆ ಸುತ್ತಮುತ್ತ ಭಾರೀ ಮಳೆ
ಹಾಸನದಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್, ಹಾಸನಾಂಬ ಬಡಾವಣೆ, ಉದ್ದೂರು ಹೀಗೆ ಹಲವು ಬಡಾವಣೆಗಳಲ್ಲಿ ನೀರು ತುಂಬಿ ಜಲಾವೃತಗೊಂಡಿದ್ದು, ಇದರಿಂದ ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತಾಗಿದೆ. ಅಲ್ಲದೆ ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿ ವಿವಿಧಡೆ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿಸಿದರು. ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದೆ.
ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ನಡೆಸೋಣ
ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನವೆಂಬರ್‌ ೧ರ ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಚೆನ್ನಾಂಬಿಕ ವೃತ್ತದಿಂದ ಅಲಂಕೃತ ವಾಹನದಲ್ಲಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಪಥಸಂಚಲನ, ಬ್ಯಾಂಡ್‌ಸೆಟ್ ಮೂಲಕ ಬಯಲು ಮಂದಿರದ ವೇದಿಕೆಗೆ ಕರೆ ತರುವುದು ಸೇರಿದಂತೆ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ನಡೆಸೋಣವೆಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಸಲಹೆ ನೀಡಿದರು. ರಾಜ್ಯೋತ್ಸವ ದಿನದಂದು ಸ್ವಚ್ಛತೆ, ಮೆರವಣಿಗೆ ವಾಹನ ಸಿದ್ಧಪಡಿಸುವ ಜವಾಬ್ದಾರಿಯನ್ನು ಪುರಸಭೆಗೆ, ಭದ್ರತೆ ಜವಾಬ್ದಾರಿಯನ್ನು ಪೊಲೀಸರಿಗೆ ನೀಡಲಾಯಿತು.
ಹಳ್ಳ ಹಿಡಿದ ಆಲೂರು ಪಟ್ಟಣದ ಮುಖ್ಯ ರಸ್ತೆ
ಲೋಕೋಪಯೋಗಿ ಇಲಾಖೆಗೆ ಸೇರಿದ ಈ ಮುಖ್ಯ ರಸ್ತೆಯನ್ನು ಪಟ್ಟಣ ಪಂಚಾಯಿತಿಯವರು, ಕಳೆದ ಕೆಲವು ವರ್ಷಗಳ ಹಿಂದೆ ನಗರೋತ್ಥಾನ ಅನುದಾನದಡಿ ಡಾಂಬರೀಕರಣ ನಡೆಸಿ ಆ ಸಮಯದಲ್ಲಿದ್ದ, ಏಕಪದ ಕಾಂಕ್ರೀಟ್ ರಸ್ತೆಯನ್ನು ತೆರವುಗೊಳಿಸದೆ ಅದರ ಮೇಲೆ ಡಾಂಬರೀಕರಣ ನಡೆಸಿ, ಅವೈಜ್ಞಾನಿಕ ಮಾದರಿಯಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರು ನಿಲ್ಲುವುದಿಲ್ಲವೆಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಅದನ್ನು ಲೆಕ್ಕಿಸದೆ, ಪಟ್ಟಣ ಪಂಚಾಯಿತಿಯವರು ವೀರಶೈವ ಕಲ್ಯಾಣ ಮಂಟಪದಿಂದ ರೇಣುಮಿಲ್‌ವರೆಗೂ ಡಾಂಬರೀಕರಣ ನಡೆಸಿ , ಮಧ್ಯದಲ್ಲಿ ಕಾಂಕ್ರೀಟ್ ಡಿವೈಡರ್‌ ನಿರ್ಮಿಸಿ ದ್ವಿಪಥ ರಸ್ತೆಯನ್ನಾಗಿಸಿದ್ದರು.
ಅಂಚೆ ಕಚೇರಿ ಎದುರು ಪಿಂಚಣಿದಾರರ ಪ್ರತಿಭಟನೆ
ಪ್ರತಿದಿನ ಪಟ್ಟಣದ ಅಂಚೆ ಇಲಾಖೆಯಿಂದ ಒಂದರಿಂದ ಎರಡು ಲಕ್ಷ ರು.ಗಳನ್ನು ಮಾತ್ರ ಪಿಂಚಣಿದಾರರಿಗೆ ವಿತರಣೆ ಮಾಡಲು ಕಳುಹಿಸುತ್ತಾರೆ, ಆದರೆ ಸಿಂಗಾಪುರ ಅಂಚೆ ವ್ಯಾಪಿಗೆ ೧೬ಕ್ಕೂ ಹೆಚ್ಚು ಹಳ್ಳಿಗಳು ಒಳಪಡುತ್ತದೆ. ಐದಾರು ಕಿ.ಮೀ. ದೂರದ ಈಡಿಗನಹೊಸೂರು, ಮಾರನಾಯಕನಹಳ್ಳಿ ಗುಂಜೇವು, ಅಡಿಕೆಕೆರೆಹೊಸೂರು, ಹಾಗೂ ಇತರೆ ಗ್ರಾಮದ ವೃದ್ಧರು ಪಿಂಚಣಿ ಪಡೆಯಲು ನಡೆದುಕೊಂಡು ಬರುವಷ್ಟರಲ್ಲಿ ಹಣ ಬಟವಾಡೆ ಮಾಡಿ ಆಗಿರುತ್ತದೆ. ಇದರಿಂದ ಇಳಿ ವಯಸ್ಸಿನಲ್ಲಿ ನಡೆದು ನಡೆದು ಸಾಕಾಗಿ ಹೋಗಿದೆ ಎಂದು ವೃದ್ಧರು ಬೇಸರದಿಂದ ನುಡಿದರು.
ಮಳೆ ನೀರಿನಲ್ಲಿ ಕೊಚ್ಚಿ ಹೋದ ರಿಂಗ್ ರಸ್ತೆ
ನಿರಂತರವಾಗಿ ಮಳೆ ಸುರಿದು ತೇಜೂರು ಕೆರೆ, ಸೀಗೆ ಕೆರೆ, ಚಿಕ್ಕಕೊಂಡಗುಳ, ಸೇರಿದಂತೆ ಹಲವಾರು ಕೆರೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿವೆ. ಈ ನೀರು ರಿಂಗ್‌ ರಸ್ತೆ ಮೂಲಕವೇ ತಮ್ಲಾಪುರ ಸಮೀಪ ಇರುವ ಹುಣಸಿನಕೆರೆಗೆ ಸೇರುತ್ತದೆ. ಹಾಗಾಗಿ ರಿಂಗ್‌ ರಸ್ತೆ ಮೇಲೆ ನೀರು ಪ್ರವಾಹದ ರೂಪದಲ್ಲಿ ನುಗ್ಗುತ್ತಿದೆ. ನೀರಿನ ರಭಸಕ್ಕೆ ರಸ್ತೆಯ ಡಾಂಬರ್‌ ಕೂಡ ಕೊಚ್ಚಿ ಹೋಗಿದೆ. ಇದನ್ನರಿತ ಗ್ರಾಮಸ್ಥರು ಪೊಲೀಸ್ ಠಾಣೆಗೆ ಕರೆ ಮಾಡಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ ಮಾಡುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 418
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved