• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆ ಕನ್ನಂಬಾಡಿಯಮ್ಮನ ದೇವಸ್ಥಾನ ಲೋಕಾರ್ಪಣೆ
ಬಸವನಹಳ್ಳಿಕೊಪ್ಪಲು ಆನೆಕನ್ನಂಬಾಡಿಯಮ್ಮ ದೇವಸ್ಥಾನದಲ್ಲಿ ಮಾ.21ರಿಂದ 23ರವರೆಗೆ ವಿವಿಧ ರೀತಿಯ ಹವನ ಹೋಮ ಪೂಜಾದಿ ಕೈಂಕರ್ಯಗಳು ಜರುಗಿದವು. ಧಾರ್ಮಿಕ ಕಾರ್ಯಗಳು ಮಾನವನಿಗೆ ನೆಮ್ಮದಿಯನ್ನು ನೀಡುತ್ತವೆ. ದೇವಸ್ಥಾನಗಳಿಂದ ಧಾರ್ಮಿಕ ಭಾವನೆ ಬೆಳೆಯಲು ಸಹಕಾರಿಯಾಗಿದೆ. ಆನೆಕನ್ನಬಾಂಡಿಯಮ್ಮ ಎಲ್ಲರಿಗೂ ಮಂಗಳವನ್ನು ಉಂಟುಮಾಡಲ ಎಂದು ಆಶೀರ್ವಚನ ನೀಡಿದರು.
ಮೈಸೂರು ಪ್ರಾಂತ್ಯದ ಏಳಿಗೆಯಲ್ಲಿ ಕಮೀಷನರ್‌ಗಳ ಪಾತ್ರ ಅಪಾರ
ಮೈಸೂರು ಸಂಸ್ಥಾನದಲ್ಲಿ ಆಳ್ವಿಕೆ ಮಾಡಿದ ರಾಜರು ಹಾಗೂ ಕಮಿಷನರ್‌ಗಳು ರಾಜ್ಯಕ್ಕೆ ಆಪಾರವಾದ ಕೊಡುಗೆ ನೀಡಿದ್ದಾರೆ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಎಂ.ಜಿ. ರಸ್ತೆ) ಸಹಾಯಕ ಪ್ರಾಧ್ಯಾಪಕ ಎಚ್.ವಿ. ಪುರುಷೋತ್ತಮ್ ಅಭಿಪ್ರಾಯಪಟ್ಟರು. ಹಲವಾರು ವಿಚಾರಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಮೈಸೂರಿನ ಸಂಸ್ಥಾನದ ಕಲಾಕೃತಿ ಮತ್ತು ವಾಸ್ತುಶಿಲ್ಪದ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಹಾಸನದ ಕೃಷಿ ಕಾಲೇಜು ಸ್ಥಳಾಂತರದ ಹಿಂದೆ ಸರ್ಕಾರದ ದುರುದ್ದೇಶವಿದೆ
ಕೃಷಿ ಕಾಲೇಜನ್ನು ಮಂಡ್ಯಕ್ಕೆ ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶವಿದ್ದು, ಕಾಲೇಜನ್ನು ಇಲ್ಲೆ ಉಳಿಸದಿದ್ದರೇ ರೈತರು ಮತ್ತು ಬಿಜೆಪಿ ಶಾಸಕರೊಂದಿಗೆ ಸೇರಿ ಬೃಹತ್ ಹೋರಾಟ ನಡೆಸುವುದಾಗಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿದರು. ಕಾಲೇಜಿನ ಅಭಿವೃದ್ಧಿಗಾಗಿ ಹೊಸ ಕೋರ್ಸ್‌ಗಳನ್ನು ಪ್ರಯತ್ನದಲ್ಲಿ ತೊಡಗಿದ್ದೇವೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೊಸ ಕೋರ್ಸ್‌ಗಳನ್ನು ತರಲು ಮನವಿ ಮಾಡಿದ್ದಾರೆ. ಆದರೆ, ಸರ್ಕಾರ ಈ ರೀತಿ ರೈತರ ಹಿತವನ್ನು ಕಡೆಗಣಿಸುತ್ತಿದೆ. ರೈತರೆಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ. ಬಿಜೆಪಿ ಶಾಸಕರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಹೋರಾಟ ನಡೆಸುತ್ತೇವೆ ಎಂದರು.
ರೈಲ್ವೆ ಪೊಲೀಸರ ಕಿರುಕುಳ ಖಂಡಿಸಿ ಗುಜರಿ ವ್ಯಾಪಾರಿಗಳ ಪ್ರತಿಭಟನೆ
ಬೆಂಗಳೂರಿನ ಯಶವಂತಪುರ ಹಾಗೂ ಹಾಸನದ ರೈಲ್ವೆ ಪೊಲೀಸರು ರೈಲ್ವೆ ಇಲಾಖೆಗೆ ಸೇರಿದ ಉಪಕರಣಗಳನ್ನು ಖರೀದಿ ಮಾಡಿರುತ್ತೀರಾ ಎಂದು ನಮಗೆ ಪದೇ ಪದೆ ಕಿರುಕುಳ ನೀಡಿ ನಮ್ಮಿಂದ ಹಣ ಪಡೆಯುತ್ತಿರುತ್ತಾರೆ. ಇದೇ ರೀತಿ ಇಲ್ಲಿನ ಪೊಲೀಸರು ಕೂಡ ಹಣ ವಸೂಲಿ ಮಾಡುತ್ತಿದ್ದು, ನಾವು ದುಡಿದಂತಹ ಹಣವನ್ನೆಲ್ಲಾ ಈ ಮೇಲ್ಕಂಡ ಪೊಲೀಸರಿಗೆ ಕೊಡುತ್ತಿದ್ದು, ಬಡ್ಡಿ ಸಾಲ ಮಾಡಿ ಹಣ ನೀಡಿರುತ್ತೇವೆ ಎಂದು ಗುಜರಿ ವ್ಯಾಪಾರಸ್ಥರು ಆರೋಪಿಸಿ ಪ್ರತಿಭಟಿಸಿದರು.
ಮಹಿಳೆಯರಿಗೆ ಪ್ರೋತ್ಸಾಹ ಕೊಡಿ ತುಳಿಯಬೇಡಿ
ಮಹಿಳೆಯರು ಉತ್ತಮ ಸಾಧನೆ ಮಾಡುವ ಸಂದರ್ಭದಲ್ಲಿ ಪ್ರೋತ್ಸಾಹ ನೀಡಬೇಕು. ಅದು ಬಿಟ್ಟು ಅವರನ್ನು ತುಳಿಯುವ ಕೆಲಸ ಮಾಡಬಾರದು ಎಂದು ತಹಸೀಲ್ದಾರ್ ಎಂ. ಮಮತಾ ಹೇಳಿದರು. ಕೆಲ ವಿದ್ಯಾವಂತ ಮಹಿಳೆಯರು ಸಣ್ಣಪುಟ್ಟ ಕೌಟುಂಬಿಕ ವ್ಯಾಜ್ಯಗಳಿಗೆ ನ್ಯಾಯಾಲಯದ ಮೆಟ್ಟಿಲು ಹತ್ತುತ್ತಿರುವುದು ದುರದೃಷ್ಟಕರ ಬೆಳವಣಿಗೆ ಎಂದರು. ಈ ಸಂದರ್ಭದಲ್ಲಿ ರೈತಮಹಿಳೆ ಕೃಷಿ ಪ್ರಶಸ್ತಿ ಪಡೆದಂತಹ ಮಮತಾ ಚಂದ್ರಶೇಖರ್‌ ಅವರನ್ನು ಅಭಿನಂದಿಸಲಾಯಿತು. ಬೆಂಗಳೂರಿನ ನೀಲಾಂಬಿಕ ಮಹಿಳಾ ಸಂಘದ ವತಿಯಿಂದ ವಚನ ಗಾಯನ ಏರ್ಪಡಿಸಲಾಗಿತ್ತು.
ಸಮಾಜಕ್ಕೆ ಕೊಡುಗೆ ಕೊಟ್ಟವರ ಸಾಲಿನಲ್ಲಿ ಪುನೀತ್ ಸೇರುತ್ತಾರೆ
ನಮ್ಮ ಕಲಾವಿದರಾದ ಕುಮಾರ್ ಅವರ ನೇತೃತ್ವದಲ್ಲಿ ಎಲ್ಲರ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ೫೦ನೇ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ನಾಯಕ ನಟ ಪುನೀತ್ ರಾಜಕುಮಾರ್ ಅವರನ್ನು ಇಷ್ಟೊಂದು ನೆನಪು ಮಾಡಿಕೊಳ್ಳುವುದಕ್ಕೆ ಕಾರಣಗಳಿವೆ. ಜನರಿಗೆ ಕಲೆ ಒಂದೇ ಅಲ್ಲ, ಮಾನವೀಯತೆಯ ಮೌಲ್ಯ ಏನು ಎಂಬುದನ್ನು ಸರಳತೆಯಿಂದ ತಿಳಿಸಿದ್ದಾರೆ. ಎಷ್ಟು ಹಣ ಇದ್ದರೂ ಹೇಗೆ ಬದುಕಬೇಕೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಪ್ರಕೃತಿಯ ಅದ್ಬುತ ಕೊಡುಗೆ ನೀರು
ನೀರು ಜೀವನದ ಅತ್ಯಂತ ಮುಖ್ಯ ಆಧಾರ. ಪ್ರಕೃತಿ ನೀಡಿರುವು ಅತ್ಯದ್ಭುತವಾದ ಕೊಡುಗೆ ನೀರು. ನೀರನ್ನು ವಿನಾಕಾರಣದಿಂದ ವ್ಯರ್ಥ ಮಾಡಬಾರದು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಎಸ್. ಮಹೇಶ್ ತಿಳಿಸಿದರು. ವಿಶ್ವಸಂಸ್ಥೆ ವರದಿಯಂತೆ ನೈರ್ಮಲ್ಯ ಮತ್ತು ಶುದ್ಧ ನೀರಿನ ಕೊರತೆಯಿಂದ ಉಂಟಾಗುವ ಕಾಯಿಲೆಗಳಿಂದ ಪ್ರತಿ ವರ್ಷ ೧೪ ಲಕ್ಷ ಜನರು ಮರಣ ಹೊಂದುತ್ತಿದ್ದಾರೆ. ಇಂದಿಗೂ ವಿಶ್ವದ ಸುಮಾರು ಶೇ. ೨೫ರಷ್ಟು ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ೨೦೫೦ರ ವೇಳೆಗೆ ಸುಮಾರು ಶೇ. ೫೫ರಷ್ಟು ನೀರಿನ ಮೇಲಿನ ಜಾಗತಿಕ ಬಯಕೆ ಹೆಚ್ಚಾಗಲಿದೆ. ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸುವುದು ಎಲ್ಲರ ಕರ್ತವ್ಯ ಎಂದರು.
ಹೆಬ್ಬನಹಳ್ಳಿ ಸಮೀಪ ಮಕ್ನಾ ಆನೆ ಸೆರೆ
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದ ಮಖ್ನಾ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಭಾನುವಾರ ಯಶಸ್ವಿಯಾಗಿದ್ದಾರೆ. ಯಾವುದೇ ಪ್ರತಿರೋಧ ತೋರದೆ ನಿಂತಿದ್ದ ಮಕ್ನಾ ಆನೆಗೆ ಸಾಕಾನೆಗಳ ಸಹಾಯದಿಂದ ಹಗ್ಗ ಹಾಕಿ ರಸ್ತೆಗೆ ಎಳೆದು ತರುವ ಪ್ರಯತ್ನ ನಡೆಸಲಾಯಿತು. ಆದರೆ, ಬೇರೆಡೆ ಸಾಗಿಸವು ಪ್ರಯತ್ನಕ್ಕೆ ಸತತ ಮೂರು ಗಂಟೆಗಳ ಪ್ರಬಲ ಪ್ರತಿರೋಧ ತೋರಿದ್ದರಿಂದ ಸಿಬ್ಬಂದಿ ಹೈರಾಣಾಗುವಂತೆ ಮಾಡಿತ್ತು.
ಅವ್ಯವಸ್ಥೆಗಳ ಆಗರವಾದ ಅರಸೀಕೆರೆ ಬಸ್ ನಿಲ್ದಾಣ
ಅರಸೀಕೆರೆ ಬಸ್‌ ನಿಲ್ದಾಣದಲ್ಲಿ ದೂರದಿಂದ ಬರುವ ಪ್ರಯಾಣಿಕರಿಗೆ ಬಾಯಾರಿಕೆಯಾದರೆ ಕುಡಿಯಲು ನೀರು ಸಿಗುವುದಿಲ್ಲ. ಇನ್ನು ಇಲ್ಲಿನ ಸ್ವಚ್ಛತೆ ಕೇಳುವಂತೆಯೇ ಇಲ್ಲ. ನಿಲ್ದಾಣದಲ್ಲಿ ಶುದ್ಧ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಆದರೂ ಅದು ಕೆಟ್ಟು ವರ್ಷಗಳೇ ಕಳೆದರೂ ರಿಪೇರಿ ಮಾಡಿಸುವ ಗೋಜಿಗೆ ಯಾರು ಹೋಗಿಲ್ಲ. ಈ ಬೇಸಿಗೆ ಬಿಸಿಲಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಜನ ಹಣವಿದ್ದವರು ಬಾಟಲಿ ನೀರು ಪಡೆಯುತ್ತಾರೆ, ಹಣ ವಿಲ್ಲದವರು ಬಾಯಾರಿಕೆಯಿಂದ ಬಳಲಿ ಸಾರಿಗೆ ಸಂಸ್ಥೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಪ ಹಾಕಿ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮಸ್ಥರಿಂದಲೇ ಬಿಲ್ವಪತ್ರೆ ಶಿವನ ದೇವಾಲಯ ಜೀರ್ಣೋದ್ಧಾರ
ವಡವನಹೊಸಹಳ್ಳಿ ಗ್ರಾಮದ ಹತ್ತಿರದ ಕಾವೇರಿ ನದಿ ದಂಡೆಯಲ್ಲಿರುವ ಬಿಲ್ವಪತ್ರೆ ಶಿವನ ದೇವಾಲಯ ಶಿಥಿಲವಾಗಿದ್ದು, ದೇವಾಲಯವನ್ನು ಗ್ರಾಮಸ್ಥರು ಸೇರಿ ಜೀರ್ಣೋದ್ಧಾರ ಮಾಡಿ ಪ್ರತಿನಿತ್ಯ ಪೂಜಾ ಕೈಂಕರ್ಯ ಹಾಗೂ ಹಬ್ಬ ಹರಿದಿನಗಳಲ್ಲಿ ರುದ್ರಾಭಿಷೇಕ ಇನ್ನಿತರ ಕಾರ್ಯಕ್ರಮಗಳು ನಡೆಸುತ್ತಿದ್ದಾರೆ ಎಂದು ದೇವಾಲಯದ ಮುಖ್ಯ ಅರ್ಚಕ ವಡವನಹೊಸಹಳ್ಳಿ ಶರಣ ದೇವರಾಜು ತಿಳಿಸಿದರು. ದೇವಸ್ಥಾನದ ಪುನರ್‌ ನಿರ್ಮಾಣಕ್ಕೆ ನದಿ ಪಾತ್ರದ ಗ್ರಾಮಸ್ಥರು ಮುನ್ನುಗುತ್ತಿದ್ದಾರೆ. ಇದಕ್ಕೆ ಸರ್ಕಾರ ಹೆಚ್ಚಿನ ಒತ್ತುಕೊಟ್ಟು ಸಹಕರಿಸಿ ಸಹಕರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 552
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved