• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಯೋಜನೆ ಹೆಸರಿನಲ್ಲಿ ರಾಜ್ಯದ ೪೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ೪ ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದರು.
ಅರೇಹಳ್ಳಿಯಲ್ಲಿ ಸುಟ್ಟು ಕರಕಲಾದ ಟ್ರಾನ್ಸ್‌ಫಾರ್ಮರ್‌
ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಇಂದಿರಾನಗರ ವ್ಯಾಪ್ತಿಯ ಮನೆಗಳಿಗೆ ಬೆಳಕು ಹಾಗೂ ಗೃಹೋಪಯೋಗಿ ಉಪಕರಣಗಳ ಬಳಕೆಗೆ ವಿದ್ಯುತ್ ಪೂರೈಸಲು 25 ಕೆ.ವಿ ಸಾಮರ್ಥ್ಯದ ಪರಿವರ್ತಕ ಅಳವಡಿಸಿದ್ದು, ಅಧಿಕ ವಿದ್ಯುತ್ ಪ್ರವಹಿಸಿ ಸುಟ್ಟು ಕರಕಲಾಗಿದೆ. ಕಡಿಮೆ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್ ಅಳವಡಿಸಿದ ಚೆಸ್ಕಾಂ ನಿರ್ಲಕ್ಷ್ಯವೇದಿದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಂಗನವಾಡಿ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹ
ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ (ಪ್ರಿಯಾಂಕಗಾಂಧಿ ಘೋಷಿಸಿದ ಆರನೇ ಗ್ಯಾರಂಟಿಯಂತೆ) ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಫೆಬ್ರವರಿ ೩ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಒಕ್ಕೂಟದ ಫೆಡರೇಷನ್ ಕಾರ್ಯಾಧ್ಯಕ್ಷೆ ಲೀನಾ ಡಯಾಸ್ ತಿಳಿಸಿದರು. ಪ್ರಿಯಾಂಕ ಗಾಂಧಿಯವರು ಘೋಷಿಸಿದ ಆರನೇ ಗ್ಯಾರಂಟಿಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರು.೧೫,೦೦೦ ಹಾಗೂ ಸಹಾಯಕಿಯರಿಗೆ ರು.೧೦,೦೦೦ ಗೌರವಧನ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.
ಲಿಂಗಾಯಿತ ಸಮಾಜದಲ್ಲಿ ಐಕ್ಯತೆ ಕುಗ್ಗುತ್ತಿದೆ
ರಾಜ್ಯದಲ್ಲಿ ಲಿಂಗಾಯಿತ ಸಮಾಜಕ್ಕೆ ತನ್ನದೇ ಆದಂತಹ ಮನ್ನಣೆ ಇದ್ದರೂ ಇಷ್ಟಲಿಂಗದ ಪರಿಕಲ್ಪನೆಯಿಂದ ದೂರ ಉಳಿದು ಆಚಾರ ವಿಚಾರಗಳನ್ನು ಪ್ರತಿಯೊಬ್ಬರು ಮರೆಯುತ್ತಿದ್ದು, ಲಿಂಗಾಯಿತ ಸಮಾಜದಲ್ಲಿನ ಐಕ್ಯತೆ ಕುಗ್ಗುತ್ತಿದೆ ಎಂದು ಸಿದ್ಧಗಂಗಾ ಮಠದ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ಹೇಳಿದರು. ವರ್ಷಕ್ಕೆ ಮಠಕ್ಕೆ ನೀಡುವ ಒಂದು ಲಕ್ಷವನ್ನು ಸಮಾಜದ ಜನರಿಗೆ ನೆರವು ನೀಡಲು ಬಳಸಿಕೊಳ್ಳಿ ಎಂದು ಟ್ರಸ್ಟ್‌ನವರಿಗೆ ತಿಳಿಸಿದರು.
ಪಡಿತರ ವಿತರಣೆಯಲ್ಲಿ ವ್ಯತ್ಯಯವಾದರೆ ಮಾಲೀಕರ ಮೇಲೆ ಕ್ರಮ
ಅನ್ನಭಾಗ್ಯದ ಪಡಿತರ ಅಕ್ಕಿ ವಿತರಣೆಯಲ್ಲಿ ಉಂಟಾಗುತ್ತಿರುವ ಲೋಪದೋಷಗಳು ಮರುಕಳಿಸುವುದು ಕಂಡುಬಂದರೆ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ವಿತರಕರನ್ನು ಹೊಣೆ ಮಾಡಿ ಕಾನೂನು ಕ್ರಮ ಜರುಗಿಸುವುದಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್‌ ಗೌಡ ಖಡಕ್ ಎಚ್ಚರಿಕೆ ನೀಡಿದರು. ಅಕ್ರಮಗಳನ್ನು ನಡೆಸುವ ಪ್ರಕರಣಗಳು ಕಂಡುಬಂದರೆ ವಿತರಕರ ಪರವಾನಗಿ ರದ್ದುಪಡಿಸಿ ಕಾನೂನು ಶಿಕ್ಷೆಗೆ ಗುರಿ ಪಡಿಸಲು ಕ್ರಮ ಕೈಗೊಳ್ಳುವುದಾಗಿ ಗುಡುಗಿದರು.
ಕೆಡಿಪಿ ಸದಸ್ಯರ ಪ್ರತಿಭಟನೆಗೆ ಗ್ಯಾರಂಟಿ ಅಧ್ಯಕ್ಷರ ಬೆಂಬಲ
ಕೆಡಿಪಿ ತ್ರೈಮಾಸಿಕ ಸಭೆಯನ್ನು ನಿಯಮಿತವಾಗಿ ಕರೆಯದ ತಾಲೂಕು ಪಂಚಾಯಿತಿ ವಿರುದ್ಧ ಧರಣಿ ನಡೆಸುತ್ತಿರುವ ಕೆಡಿಪಿ ನಾಮನಿರ್ದೇಶಿತ ಸದಸ್ಯರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಗೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಟಾನ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್. ಪಿ. ಪ್ರಕಾಶ್‌ಗೌಡ ಭೇಟಿ ನೀಡಿ ಬೆಂಬಲ ಸೂಚಿಸಿದರು. ಸರ್ಕಾರದ ನಾಮನಿರ್ದೇಶಿತ ಕೆಡಿಪಿ ಸದಸ್ಯರು ಸೇರಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ, ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡರವರು ಭೇಟಿ ನೀಡಿ ಬೆಂಬಲ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಬಸ್‌ ಕಲ್ಪಿಸಲು ಕ್ರಮ
ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಹೆಚ್ಚುವರಿಯಾಗಿ ೧೦ ಬಸ್ಸುಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ಈ ಗ್ರಾಮ ಸೇರಿ ತಾಲೂಕಿನ ಹಲವು ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಗ್ರಾಮಸ್ಥರು ಮನವಿ ಮಾಡಿದ್ದು, ಸಾರಿಗೆ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಬಸ್‌ಗಳು ಬಂದ ಬಳಿಕ ಚನ್ನರಾಯಪಟ್ಟಣ, ಹಿರೀಸಾವೆ, ಅರಕೆರೆ, ಸಬ್ಬನಹಳ್ಳಿ, ಆಯರಹಳ್ಳಿ, ಕಮರವಳ್ಳಿ ಮಾರ್ಗದ ಸಮೀಕ್ಷೆ ನಡೆಸಿ, ಬಸ್ ಸಂಚಾರ ಪ್ರಾರಂಭಿಸಲಾಗುವುದು. ಇದಕ್ಕೆ ೩ ತಿಂಗಳು ಕಾಲಾವಕಾಶ ಬೇಕು ಎಂದರು.
ಮಕ್ಕಳಿಂದಲೇ ಕೊಲೆ ಯತ್ನ ಕಾಪಾಡುವಂತೆ ತಂದೆ ಮನವಿ
ಆಸ್ತಿಗಾಗಿ ನನ್ನ ಮಕ್ಕಳೇ ನನ್ನನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದ್ದು, ಮಕ್ಕಳಿಂದಲೇ ನನ್ನ ಪ್ರಾಣಕ್ಕೆ ಅಪಾಯ ಇರುವುದರಿಂದ ರಕ್ಷಣೆ ಕೊಟ್ಟು ನ್ಯಾಯ ಕೊಡಿಸಬೇಕೆಂದು ನೊಂದ ಮಂಜುನಾಥ್ ಕೋರಿದರು. ಪಿತ್ರಾರ್ಜಿತವಾದ ಆಸ್ತಿಯನ್ನು ಮೂರು ಜನಕ್ಕೂ ೪ ಎಕರೆಯಂತೆ ವಿಭಾಗ ಮಾಡಿಕೊಟ್ಟಿದ್ದಾರೆ. ಕೆಲ ವರ್ಷಗಳಿಂದ ಆರೋಗ್ಯ ಸರಿಯಿಲ್ಲದೆ ಆಸ್ಪತ್ರೆಗಾಗಿ ಲಕ್ಷಾಂತರ ರುಪಾಯಿ ಖರ್ಚು ಮಾಡಿದ್ದೇನೆ. ಅದಕ್ಕಾಗಿ ಸಾಲ ಮಾಡಿದ್ದು, ನನ್ನ ಹೆಸರಿನಲ್ಲಿರುವ ಜಮೀನನ್ನು ಮಾರಾಟ ಮಾಡಲು ಬಿಡುತ್ತಿಲ್ಲ ಹಾಗೂ ನನ್ನ ಯೋಗಕ್ಷೇಮವನ್ನು ನೋಡುತ್ತಿಲ್ಲ ಎಂದು ಮಂಜುನಾಥ್‌ ದೂರಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಅಪರ ಜಿಲ್ಲಾಧಿಕಾರಿ ವರ್ಗಾವಣೆಗೆ ಒತ್ತಾಯ

ತಹಸೀಲ್ದಾರ್ ಸಂತೋಷ್‌ ಕುಮಾರ್‌ ಅವರಿಗೆ ಮನವಿ ಕೊಟ್ಟು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರ ವರ್ಗಾವಣೆಗೆ ಒತ್ತಾಯಿಸಿದರು.

ಹಾಸನ ವಿಮಾನ ನಿಲ್ದಾಣದ ಒತ್ತುವರಿಯಾಗಿದ್ದ ಜಾಗ ತೆರವು
ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡಿರುವ ಸುಮಾರು ಏಳು ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved