• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳ ಆಯ್ಕೆ
ಹೊಳೆನರಸೀಪುರ ತಾಲೂಕಿನ ಶಿಕ್ಷಕಿಯರು ಸೇರಿದ ಸಭೆಯಲ್ಲಿ ಜಿಲ್ಲೆಯ ಸಾವಿತ್ರಿಬಾಯಿ ಫುಲೆ ಸಂಘದ ಗೌರವಾಧ್ಯಕ್ಷೆ ಕುಸುಮ ಅವರ ಮಾರ್ಗದರ್ಶನದಲ್ಲಿ ತಾಲೂಕು ಘಟಕವನ್ನು ರಚಿಸಲಾಯಿತು. ತಾಲೂಕು ಸಾವಿತ್ರಿಬಾಯಿ ಪುಲೆ ಸಂಘದ ಅಧ್ಯಕ್ಷೆಯಾಗಿ ಕೆ.ಎಂ.ಮಮತ, ಪ್ರಧಾನ ಕಾರ್ಯದರ್ಶಿಯಾಗಿ ಭ್ರಮರಾಂಭ ಹಾಗೂ ಖಜಾಂಚಿಯಾಗಿ ಮಧುಮತಿ, ೧೦ ಜನ ಉಪಾಧ್ಯಕ್ಷರು,೧೦ ಜನ ಸಂಘಟನಾ ಕಾರ್ಯದರ್ಶಿಗಳು ಹಾಗೂ ೧೦ ಜನ ಸಹ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.
ಸರ್ಕಾರಿ ಶಾಲೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಕುರಿತು ಜನಜಾಗೃತಿ ಅಗತ್ಯ
ಸರ್ಕಾರಿ ಶಾಲೆಗಳಲ್ಲಿ ಸಿಗುವ ಸವಲತ್ತುಗಳು ಹಾಗೂ ಗುಣಮಟ್ಟದ ಶಿಕ್ಷಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಚನ್ನರಾಯಪಟ್ಟಣ ಲಯನ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಡಾ.ವಿ. ಮಹೇಶ್ ಅಭಿಪ್ರಾಯಪಟ್ಟರು. ತಿಯೊಂದು ಮಗುವಿನಲ್ಲೂ ವಿಭಿನ್ನ ಆಲೋಚನೆ ಹಾಗೂ ಆವಿಷ್ಕಾರ ಕಟ್ಟಿಕೊಳ್ಳುವ ಹುರುಪು ಇರುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೀಡುವ ಗುಣಮಟ್ಟದ ಶಿಕ್ಷಣ, ಸರ್ಕಾರಿ ಶಾಲೆಯಲ್ಲೇ ಸಿಗುತ್ತದೆ ಎಂದರು.
ಮಿತ ಬಳಕೆ ಮಾಡಿ ನೀರನ್ನು ಮುಂದಿನ ಪೀಳಿಗೆಗೂ ಉಳಿಸಿ
ನೀರನ್ನು ನಾವು ಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಸಂರಕ್ಷಿಸಿಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಎ. ಅರುಣ ಕುಮಾರಿ ತಿಳಿಸಿದರು. ಭೂಮಿಯ ಮೇಲೆ ಲಭ್ಯ ಇರುವ ನೀರಿನ ಪ್ರಮಾಣದಲ್ಲಿ ಶೇ. ೩ರಷ್ಟು ಮಾತ್ರ ಕುಡಿಯುವುದಕ್ಕೆ ಯೋಗ್ಯವಾಗಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು. ಜಲಮೂಲಗಳ ರಕ್ಷಣೆಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ನೀರಿನ ಮೂಲ ನಾಶ ಮಾಡುವ ಮೊದಲು ಯೋಚಿಸಿ
ನೈಸರ್ಗಿಕವಾಗಿ ಇರುವ ನೀರಿನ ಮೂಲವನ್ನು ನಾಶ ಮಾಡುವ ಮೊದಲು ನಾವು ಯೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಹೇಮಾವತಿ ತಿಳಿಸಿದರು. ಆಹಾರವಿಲ್ಲದೇ ಬದುಕಬಹುದು ಆದರೆ, ನೀರಿಲ್ಲದೇ ಬದುಕುವುದು ಬಹಳ ಕಷ್ಟ. ಇದನ್ನು ಮನಸ್ಸಿನಲ್ಲಿಟ್ಟುಕೊಂಡರೇ ಇಂತಹ ಗಿಡ ನೆಡುವ ಅವಶ್ಯಕತೆ ಇರುವುದಿಲ್ಲ. ಏಕೆ ನಾವು ಇನ್ನು ಎಚ್ಚೆತ್ತುಕೊಂಡಿಲ್ಲ ಎಂಬುದು ನನ್ನ ಪ್ರಶ್ನೆಯಾಗಿದೆ. ಉತ್ತಮ ಪರಿಸರಕ್ಕಾಗಿ ಪ್ರತಿಯೊಬ್ಬರ ಶ್ರಮ ಬೇಕು. ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಅರಿತುಕೊಳ್ಳಬೇಕು ಎಂದರು.
ಸಿದ್ದಾಪುರ ಗೇಟ್‌ನಲ್ಲಿ ಕೊಣನೂರು ಮಡಿಕೇರಿ ರಾಜ್ಯ ಹೆದ್ದಾರಿ ತಡೆ
ಕೆಎಸ್ಸಾರ್ಟಿಸಿ ಬಸ್ಸಿನ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರ ದೌರ್ಜನ್ಯ ಖಂಡಿಸಿ ಶನಿವಾರ ಕರೆ ನೀಡಲಾಗಿದ್ದ ಬಂದ್‌ ಬೆಂಬಲಿಸಿ ಸಮೀಪದ ಕೊಣನೂರಿನ ಕೊಣನೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ರಾಘವೇಂದ್ರಗೌಡ ನೇತೃತ್ವದಲ್ಲಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ವಾಹನಗಳನ್ನು ತಡೆಗಟ್ಟಿ ಬಂದ್‌ಗೆ ಬೆಂಬಲ ಸೂಚಿಸಿದರು.
ಹರಿಹರಪುರದಲ್ಲಿ ದುರ್ಗಾಪರಮೇಶ್ವರಿ ಉಡಸಲಮ್ಮ ಜಾತ್ರೆ
ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಹೋಬಳಿಯ ಹರಹರಪುರ ಗ್ರಾಮದ ಶ್ರೀ ದುರ್ಗಪರಮೇಶ್ವರಿ ಉಡಸಲಮ್ಮ ಜಾತ್ರೆ ಶನಿವಾರ ಸಂಪ್ರದಾಯದ ಆಚರಣೆಯಂತೆ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ, ಮಹಾಮಂಗಳಾರತಿ ನಂತರ ಜಾತ್ರೆಗೆ ಬಂದ ಭಕ್ತರಿಗೆ ಅನ್ನಸಂರ್ಪಣೆ ವ್ಯವಸ್ಥೆ ಮಾಡಿದ್ದರು. ಸಿಡಿ ಹಾರಿಸಬೇಕೆ, ಬೇಡವೇ ಎನ್ನು ವಿಚಾರದಲ್ಲಿ ಗೊಂದಲ ಉಂಟಾಗಿದ್ದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ಡಿವೈಎಸ್ಪಿ ಶಾಲು ಗ್ರಾಮದಲ್ಲಿದ್ದು ಸಿಡಿ ಉತ್ಸವ ಆಚರಿಸದಂತೆ ಮನವೊಲಿಸಿದ ಕಾರಣ ಸಿಡಿ ಉತ್ಸವ ನಡೆಯಲಿಲ್ಲ.
ಮಹಿಳೆಯ ಸ್ವಾಭಿಮಾನದ ಬದುಕಿಗೆ ಕಾನೂನು ಅರಿವು ಅಗತ್ಯ
ನೊಂದ, ಸಂತ್ರಸ್ತ ಮಹಿಳೆಯರು ಸ್ವಾಭಿಮಾನ ಉಳಿಸಿಕೊಳ್ಳಲು ಕಾನೂನು ಅರಿವು, ನೆರವು ಅಗತ್ಯ ಎಂದು ವಕೀಲ ಎಚ್. ಆರ್‌. ಚಂದ್ರು ಹೇಳಿದರು. ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣಹತ್ಯೆ, ಕನಿಷ್ಠ ವೇತನ ನೀಡದೇ ಇರುವುದು, ಉದ್ಯೋಗಸ್ಥೆ ಮಹಿಳೆಗೆ ಸೌಲಭ್ಯಗಳು ನೀಡಬೇಕು. ನೊಂದ ಹಾಗೂ ದೌರ್ಜನ್ಯಕ್ಕೆ ಒಳಗಾದ ಸಂತ್ರೆಸ್ತೆಯರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಪ್ರತಿ ನ್ಯಾಯಾಲಯದಲ್ಲಿ ಈ ವ್ಯವಸ್ಥೆ ಇದೆ ನೊಂದ ಮಹಿಳೆಯರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜನರ ಆರೋಗ್ಯ ಸುಧಾರಣೆಯಲ್ಲಿ ದಾದಿಯರ ಶ್ರಮವಿದೆ
ವೈದ್ಯರು ರೋಗಿಗಳ ಕಾಯಿಲೆಗಳನ್ನು ಸೂಚಿಸಿ ಚಿಕಿತ್ಸೆಗೆ ಸೂಚಿಸಿದರೇ ದಾದಿಯರು ಅವರ ಆರೋಗ್ಯವನ್ನು ರಕ್ಷಣೆಯನ್ನು ಮಾಡುವ ನಿಟ್ಟಿನಲ್ಲಿ ಉತ್ತಮವಾಗಿ ಶ್ರಮಿಸುತ್ತಾರೆ. ಇವರ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಭಾರತಿ ಹೇಳಿದರು. ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಪ್ರತಿ ಹಂತದಲ್ಲೂ ಧೈರ್ಯ ತುಂಬಿ ರೋಗಿಗಳು ಆರೋಗ್ಯವನ್ನು ಹೊಂದಲು ಸರಿಯಾದ ಸಮಯಕ್ಕೆ ಔಷಧೋಪಚಾರ ಮಾಡುವಲ್ಲಿ ಗಮನಹರಿಸುವವರು ದಾದಿಯರು ಎಂದರು.
ಎಂಇಎಸ್‌ ಗೂಂಡಾಗಳ ಗಡಿಪಾರಿಗೆ ಆಗ್ರಹ
ಕನ್ನಡಿಗರ ಮೇಲೆ ಬೆಳಗಾವಿಯಲ್ಲಿ ಪುಂಡಾಟಿಕೆ ಮಾಡಿದ ಎಂಇಎಸ್‌ ಗೂಂಡಾಗಳ ವಿರುದ್ಧ ಕನ್ನಡಪರ ಸಂಘಟನೆಗಳ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿದ್ದಂತೆ ಶನಿವಾರ ಜಿಲ್ಲಾ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದಿಂದ ಬಂದ್‌ ಬೆಂಬಲಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಗೂಂಡಾವರ್ತನೆ ತೋರುತ್ತಿರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ತಕ್ಷಣ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ನುಗ್ಗೇಹಳ್ಳಿಯನ್ನು ಧಾರ್ಮಿಕ ಪ್ರವಾಸಿ ಕೇಂದ್ರ ಮಾಡುವಂತೆ ಒತ್ತಾಯ
ನುಗ್ಗೇಹಳ್ಳಿ ಗ್ರಾಮವು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದ್ದು, ಗ್ರಾಮದಲ್ಲಿ ಕ್ರಿ. ಶ. 1543 ಮತ್ತು 1249 ಹಾಗೂ 1246ರಲ್ಲಿ ಶ್ರೀ ಚಂದ್ರಮೌಳೇಶ್ವರ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ, ಶ್ರೀ ಸದಾಶಿವ ಸ್ವಾಮಿ, ಶ್ರೀ ಜಯಗೊಂಡೇಶ್ವರ ದೇವಾಲಯಗಳನ್ನು ಆಗಿನ ವಿಜಯನಗರ ಸಾಮ್ರಾಜ್ಯದ ದೊರೆಗಳು ನಿರ್ಮಾಣ ಮಾಡಿರುವ ಬಗ್ಗೆ ಪುರಾವೆಗಳು ದೊರೆತಿದ್ದು, ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಪ್ರವಾಸಿ ಧಾರ್ಮಿಕ ಕ್ಷೇತ್ರದಂತೆ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದರೆ ಈ ದೇವಾಲಯಗಳು ಇನ್ನೂ ಹೆಚ್ಚು ಪ್ರಸಿದ್ಧಿ ಹೊಂದುವುದರ ಜೊತೆಗೆ ಈ ಭಾಗದ ಇತಿಹಾಸ ಎಲ್ಲರಿಗೂ ತಿಳಿಯುತ್ತದೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 552
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved