• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠಗಳ ಪರಂಪರೆಯಿಂದ ಮಾತ್ರ ಸಂಸ್ಕೃತಿಯ ಉಳಿವು
ಮಠಮಾನ್ಯಗಳ ಪರಂಪರೆಯಿಂದ ಮಾತ್ರ ಸಂಸ್ಕೃತಿ, ಧರ್ಮದ ಉಳಿವು ಸಾಧ್ಯವಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಮೈಸೂರು ದಸರವು ಕನ್ನಡ ನಾಡಿನ ಪರಂಪರೆಯನ್ನು ಇಡೀ ವಿಶ್ವಕ್ಕೆ ತೋರಿಸಿದೆ ಶ್ರೀ ಮಠದ ವತಿಯಿಂದ ಹಲವು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಶ್ರೀಮಠದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು. ಪೂಜಾ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಸುಮಂಗಲಿಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ವತಿಯಿಂದ ಆಯೋಜಿಸಲಾಗಿತ್ತು ಎಂದರು.
ಬನ್ನಿ ಕಡಿದು ಮರಸು ದಸರಾಕ್ಕೆ ತೆರೆ
ಮರಸು ಗ್ರಾಮದಲ್ಲಿ ವೈಭವದ ದಸರಾ ಮಹೋತ್ಸವ ಬನ್ನಿ ಮಂಟಪದಲ್ಲಿ ಬನ್ನಿ ಮುರಿಯುವುದರೊಂದಿಗೆ ಮುಕ್ತಾಯಗೊಂಡಿತು. ಸುಮಾರು ೮೦೦ ವರ್ಷಗಳ ಇತಿಹಾಸವಿರುವ ಮರಸು ಗ್ರಾಮದಲ್ಲಿ, ಮೈಸೂರಿನಲ್ಲಿ ದಸರಾ ನಡೆಯುವಂತೆ ಇಲ್ಲಿಯೂ ನಡೆಯುವುದರಿಂದ ಪ್ರಖ್ಯಾತಿ ಪಡೆದಿದೆ. ಬನ್ನಿ ಮಂಟಪದ ಮುಂದೆ ಬನ್ನಿಸೊಪ್ಪು, ಬಾಳೆಕಂದನ್ನು ನೆಟ್ಟು, ಮೊದಲು ಪಟೇಲ ವಂಶಸ್ಥರಾದ ಎಂ. ಕೆ. ಸುಪ್ರೀತ್ ಬಿಲ್ಲು ಬಾಣದಿಂದ, ನಂತರ ವಿಶ್ವಕರ್ಮ ವಂಶಸ್ಥರಾದ ಎಂ. ಪಿ. ಹರೀಶ್ ಬಂದೂಕಿನಿಂದ ಗುರಿಯಿಟ್ಟು ಗುಂಡು ಹಾರಿಸಿ ಬನ್ನಿಕಂಬವನ್ನು ತುಂಡು ಮಾಡಿದರು.
ಹಾಸನಾಂಬೆ ಉತ್ಸವ ಟೆಂಡರ್‌ನಲ್ಲಿ ಭಾರಿ ಅಕ್ರಮ
ಜಿಲ್ಲೆಯ ಅಧಿದೇವತೆ ಹಾಸನಾಂಬೆ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ನಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದ್ದಾರೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿ ಗೋಲ್ಡನ್ ಪಾಸ್ ವಿತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ. ಯಾರಿಗೆ ಪಾಸ್ ನೀಡಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಪ್ರತಿದಿನ 1 ಸಾವಿರ ಪಾಸ್ ವಿತರಣೆ, ಒಟ್ಟು 18 ಸಾವಿರ ಪಾಸ್ ಮುದ್ರಣಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ ಮುದ್ರಿಸಲಾಗಿದೆ ಎಂದು ಆರೋಪಿಸಿದರು.
ದಸರಾ ಉತ್ಸವದ ಮೆರವಣಿಗೆಗೆ ಚಾಲನೆ
ಇತಿಹಾಸ ಪ್ರಸಿದ್ದ ಲಕ್ಷ್ಮೀ ನರಸಿಂಹಸ್ವಾಮಿ, ಅಮೃತೇಶ್ವರ ಸ್ವಾಮಿ, ಉಮಾಮಹೇಶ್ವರಿ, ಗ್ರಾಮದೇವತೆ ದೊಡ್ಡಮ್ಮ ದೇವಿ ದೇವಾಲಯದಲ್ಲಿ ವಿವಿಧ ಮಠಾಧೀಶರು, ಶಾಸಕ ಎ.ಮಂಜು, ಜಿಲ್ಲಾಧಿಕಾರಿ ಲತಾಕುಮಾರಿ ಪೂಜೆ ಸಲ್ಲಿಸಿದರು. ದಸರಾ ಉತ್ಸವವನ್ನು ಉದ್ಘಾಟಿಸಿದ ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ದೀಪಾ ಭಾಸ್ತಿ ತಾಲೂಕು ಕೇಂದ್ರದಲ್ಲಿ ಇಷ್ಟು ವೈಭವ ಸಂಭ್ರಮದಿಂದ ದಸರಾ ಆಚರಣೆ ನಡೆಯುತ್ತಿರುವುದು ವಿಶೇಷವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆತದ್ದು ಸಂತಸದ ಸಂಗತಿ, ಸಾಹಿತಿಗಳಿಗೆ ಜನರ ಪ್ರೋತ್ಸಾಹ ಅಗತ್ಯ, ತಮ್ಮ ಸಾಹಿತ್ಯ ಕೃಷಿಗೆ ದೊಡ್ಡಮ್ಮ ದೇವಿಯ ಆಶೀರ್ವಾದ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿ ಜನರಿಗೆ ಶುಭಾಶಯ ಕೋರಿದರು.
ನೀರು ಸರಬರಾಜು ನೌಕರರ ಬೇಡಿಕೆ ಈಡೇರಿಸದ ಸರ್ಕಾರ
ನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.
ಸಾಹಿತ್ಯದಲ್ಲಿ ಮಾಡಬೇಕಿರುವ ಕೆಲಸಗಳು ನನಗೆ ಮುಖ್ಯ
‘ರಾಜಕೀಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ವೈಯುಕ್ತಿಕ ದೃಷ್ಟಿಯಲ್ಲಿ ಚರ್ಚೆ ಮಾಡುವ ಆಸಕ್ತಿ ನನಗೆ ಯಾವತ್ತೂ ಇಲ್ಲ. ಅಂತಹ ವಿಷಯಕ್ಕೆ ನಾನು ಬರಲ್ಲ. ನಾನು ಸಾಹಿತ್ಯದಲ್ಲಿ ಮಾಡಿರುವ ಹಾಗೂ ಮಾಡಬೇಕಿರುವ ಕೆಲಸಗಳು ಕೆಲಸ ನನಗೆ ಮುಖ್ಯ ಎಂದು ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಪುರಸ್ಕೃತ ಅನುವಾದಕಿ ದೀಪಾ ಭಾಸ್ತಿ ಹೇಳಿದರು. ‘ಮೂಲ ಕರ್ತೃ ಹಾಸನದ ಬಾನು ಮುಷ್ತಾಕ್ ಅವರು. ಬುಕರ್ ಪ್ರಶಸ್ತಿ ಅನುವಾದಿತ ಕೃತಿಗೆ ಕೊಡುವುದು ಎಂದು ನಿಯಮ ಇದೆ. ಅದರಲ್ಲಿ ಅವರು ಬೇರೆ ಬೇರೆ ಮಾಡಲ್ಲ. ಅನುವಾದಕರು ಇದ್ದ ತಕ್ಷಣ ಲೇಖಕರು ಮುಖ್ಯವಲ್ಲ ಅಥವಾ ಲೇಖಕರು ಇದ್ದ ತಕ್ಷಣ ಅನುವಾದಕರು ಮುಖ್ಯವಲ್ಲ ಎನ್ನುವ ರೀತಿ ಆಯ್ಕೆ ಮಂಡಳಿಯವರು ನೋಡುವುದಿಲ್ಲ. ಪ್ರಶಸ್ತಿ ಹಣ ಸಮನಾಗಿ ಹಂಚಿಕೆ ಮಾಡುತ್ತಾರೆ ಎಂದು ಹೇಳಿದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಮಹೋತ್ಸವ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಜಯದಶಮಿ ಅಂಗವಾಗಿ ಗುರುವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು ಹಾಗೂ ಸೆಪ್ಟೆಂಬರ್ 22ರ ಸೋಮವಾರದಿಂದ ಪ್ರಾರಂಭಗೊಂಡಿದ್ದ ಶ್ರೀ ಶರನ್ನವರಾತ್ರಿ ಪೂಜಾ ಮಹೋತ್ಸವ ಗುರುವಾರ ಸಂಜೆ ಶಮೀವೃಕ್ಷದ ಪೂಜಾ ಮಹೋತ್ಸವದೊಂದಿಗೆ ಸಂಪನ್ನವಾಯಿತು. . ಧಾರ್ಮಿಕ ವಿಧಿ ವಿಧಾನಗಳ ಆಚರಣೆಯಂತೆ ಪೂಜಾ ಮಹೋತ್ಸವ ಜರುಗಿದ ನಂತರ ಬನ್ನಿ ವೃಕ್ಷಕ್ಕೆ ಮಲ್ಲಪ್ಪ ಜಯಮ್ಮ ಕುಟುಂಬಸ್ಥರು ಪೂಜೆ ಸಲ್ಲಿಸಿ, ಅರ್ಚಕ ನಾರಾಯಣ ಭಟ್ಟರು ಮಾರ್ಗದರ್ಶನದಂತೆ ವಿನಯ್ ಹಾಗೂ ಶ್ರೀಕಾಂತ್ ಕತ್ತಿಯಿಂದ ಬನ್ನಿ ಛೇದಿಸಿದರು.
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ
ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ಸನ್ಮಾನಿಸಿದ ಶಾಸಕ ಬಾಲಕೃಷ್ಣ
ಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ತಾವೆದ್ದು ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಪಟ್ಟಣದ ಗರಿಮೆ ಹಿರಿಮೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಶ್ಲಾಘಿಸಿದರು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಃಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ. ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.
ವೈಭವದಿಂದ ನಡೆದ ಬೈರಾಂಬುದಿಯ ದಸರಾ ಮಹೋತ್ಸವ
ಅರಸೀಕೆರೆ ತಾಲೂಕಿನ ಬೈರಾಂಬುದಿಯ ಶ್ರೀ ಹೊಂಗ್ಯಮ್ಮ ದೇವಿ ಹಾಗೂ ಮಲ್ಲಿಗಮ್ಮ ದೇವಿಯವರ ದಸರಾ ಮಹೋತ್ಸವವು ಶುಕ್ರವಾರ ತುಂತುರು ಮಳೆಯ ನಡುವೆಯೇ ವೈಭವದಿಂದ ನೆರವೇರಿತು. ಶ್ರೀ ಚೆಲುವರಾಯಸ್ವಾಮಿಯವರ ಗಣಮಗನಾದ ಮಂಜಣ್ಣ ಬಾಳೇಕಂದ ಪೂಜೆಯನ್ನೂ, ತುಪಾಕಿ ಛೇದನವನ್ನೂ ನೆರವೇರಿಸಿದರು. ನೂರಾರು ಭಕ್ತರು ಬನ್ನಿ ಪಡೆದು ದೇವರ ದರ್ಶನ ಪಡೆದರು. ಶ್ರೀ ಚೆಲುವರಾಯಸ್ವಾಮಿ ಹಾಗೂ ದೂತರಾಯಸ್ವಾಮಿಯವರ ಕುಣಿತ ಭಕ್ತರನ್ನು ಆಕರ್ಷಿಸಿತು. ಅಂತಿಮವಾಗಿ ಮೂಲಸ್ಥಾನ ಹೊಂಗ್ಯಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ದಸರಾ ಮಹೋತ್ಸವ ಸಮಾರೋಪಗೊಂಡಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved