• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಿನಲ್ಲಿ ಅದ್ಧೂರಿ ಬಸವ ಜಯಂತ್ಯುತ್ಸವ
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ, ಯುವ ಘಟಕ ಮತ್ತು ಮಹಿಳಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮೇ ೨೭ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಡಾ. ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಮಹೋತ್ಸವವನ್ನು ಪುಷ್ಪಗಿರಿ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯಿತ ಮಹಾಸಭಾ ಘಟಕದ ಅಧ್ಯಕ್ಷ ಎ.ಎಸ್.ಬಸವರಾಜು ಹೇಳಿದರು.
ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಮಾಜಿಕ ಸೇವೆ ಮಾಡುವವರಿಗೆ ಇದೊಂದು ಪ್ರೇರಣೆ. ಮತ್ತಷ್ಟು ಈ ಕ್ಷೇತ್ರದಲ್ಲಿ ಸೇವೆಗೈಯಲು ಸಹಕಾರಿಯಾಗುತ್ತದೆ ಎಂದು ಪುಷ್ಪಗಿರಿ ಮಹಾಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಪಟ್ಟರು. ಸಮಾಜ ಸೇವಕ, ಸಾಹಿತ್ಯ ಪೋಷಕ ವೈ. ಎಸ್. ರಮೇಶ್ ಅವರಿಗೆ ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ರಮೇಶ್ ಅವರ ಸಾಧನೆ ಕೇವಲ ಹಾಸನಕ್ಕಷ್ಟೇ ಸೀಮಿತವಾಗಿಲ್ಲ ಎಂದರು.
ಮೈನವಿರೇಳಿಸಿದ ರಾಷ್ಟ್ರ ಮಟ್ಟದ ಡರ್ಟ್‌ ಟ್ರ್ಯಾಕ್‌
ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ಅವರ ಸಹೋದರ ಪುರಸಭೆ ಮಾಜಿ ಸದಸ್ಯ ಎಚ್.ಕೆ.ಗಂಗಾಧರ ಹಾಗೂ ಸ್ನೇಹಿತರು ಆಯೋಜಿಸಿರುವ ೨ ದಿನಗಳ ರಾಷ್ಟ್ರ ಮಟ್ಟದ ಡರ್ಟ್ ಟ್ರ್ಯಾಕ್ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸ್ಪರ್ಧಿಗಳು ಧೂಳೆಬ್ಬಿಸಿ, ಮೈ ನವಿರೇಳಿಸಿದರು. ವಿಶಿಷ್ಟವಾಗಿ ಸಿದ್ಧಪಡಿಸಿದ್ದ ಅಂಕುಡೊಂಡು, ತಿರುವುಗಳಿಂದ ಕೂಡಿದ ರಸ್ತೆಯಲ್ಲಿ ಬೈಕ್ ಹಾಗೂ ಕಾರುಗಳ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ, ೧೩ ವಿಭಾಗಗಳ ದ್ವಿಚಕ್ರ ವಾಹನಗಳ ಸ್ಪರ್ಧೆ ಹಾಗೂ ೯ ವಿಭಾಗದಲ್ಲಿ ನಾಲ್ಕು ಚಕ್ರ ವಾಹನಗಳ ಸ್ಪರ್ಧೆ ಆಯೋಜಿಸಲಾಗಿದೆ.
ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ
ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಶೇ. 99.22ರಷ್ಟು ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು, ಯೋಜನೆಯ ಲಾಭ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್‌ ಗೌಡ ತಿಳಿಸಿದರು. ಸೌಕರ್ಯ ಪಡೆಯುತ್ತಿರುವ ಜನರಲ್ಲಿ ಯೋಜನೆಗಳ ಪ್ರಯೋಜನ ಪಡೆಯುತ್ತಿರುವ ಬಗ್ಗೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿಲ್ಲ. ಆಯಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.
ಬಾನು ಮುಷ್ತಾಕ್‌ಗೆ ಬುಕರ್‌ ಪ್ರಶಸ್ತಿ ಹಿನ್ನೆಲೆ ಬೇಲೂರು ಕಸಾಪ ಸಂಭ್ರಮ
ಹಾಸನ ಜಿಲ್ಲೆಯ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಸಂದ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಸಾಹಿತಿ ಇಂದಿರಮ್ಮ ಮಾತನಾಡಿ, ಕನ್ನಡ ಭಾಷೆ ಶ್ರೇಷ್ಠತೆಯ ಜೊತೆಗೆ ಬಾನು ಮುಷ್ತಾಕ್ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿಯುವ ಧೀರ ಮಹಿಳೆ ಎಂದರು.
ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ
ಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಪ್ಪಾರ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ನೀಡಿ ಅವರನ್ನೇ ಸಮಾಜದ ಆಸ್ತಿಯನ್ನಾಗಿ ರೂಪಿಸುವಂತೆ ತಿಳಿಸಿ ಸಮುದಾಯದ ಮುಖಂಡರು ಭಿನ್ನಾಭಿಪ್ರಾಯ ಬದಿಗೊತ್ತಿ ಬಂದಲ್ಲಿ ನೆನಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ನೆರವು ನೀಡುವುದಾಗಿ ಹೇಳಿದರು.
ತಾಲೂಕು ಕಚೇರಿ ಸಿಬ್ಬಂದಿಯಿಂದ ರೈತರ ಶೋಷಣೆ
ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಮಾಡುವ ತಪ್ಪಿಗೆ ರೈತರು ಹೈರಾಣಾಗುವ ಪರಿಸ್ಥಿತಿ ಎದುರಾಗಿದೆ ಎಂದು ಟಿಎಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್‌. ಅನಿಲ್ ಕುಮಾರ್ ಕಚೇರಿಯ ಕಾರ್ಯವೈಖರಿಯನ್ನ ತರಾಟೆಗೆ ತೆಗೆದುಕೊಂಡ ಪ್ರಸಂಗ ಕೆಡಿಪಿ ಸಭೆಯಲ್ಲಿ ನಡೆಯಿತು. ಜೂನ್ ೬ರಂದು ಮಧ್ಯಾಹ್ನ ೨:೩೦ಕ್ಕೆ ತಾಲೂಕು ಕಚೇರಿಯಲ್ಲಿ ಸ್ಥಳದಲ್ಲಿ ತಿದ್ದುಪಡಿ ಮಾಡುವ ಕಾರ್ಯಕ್ರಮ ರೂಪಿಸುವಂತೆ ಸೂಚಿಸಿದರು. ಅಲ್ಲದೆ ಸಾರ್ವಜನಿಕರು ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಅಂದು ಹಾಜರಿದ್ದು ಸರಿಪಡಿಸಿಕೊಳ್ಳುವಂತೆ ಶಾಸಕ ಮನವಿ ಮಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ದೈಹಿಕ ಶಿಕ್ಷಣ ಪೂರಕ
ಸರ್ಕಾರಿ ಕಲಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕಲಾ ಕಾಲೇಜು ನುರಿತ ಉಪನ್ಯಾಸಕರ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗಲಿ ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.
ಚನ್ನರಾಯಪಟ್ಟಣದಲ್ಲಿ ತಿರಂಗಾ ಯಾತ್ರೆ ಯಶಸ್ವಿ
ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣೆಗಾಗಿ ಪಟ್ಟಣದ ನಾಗರಿಕರ ವತಿಯಿಂದ ನಡೆದ ಬೃಹತ್ ತಿರಂಗಾ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿ ಯಶಸ್ವಿಗೊಳಿಸಿದರು. ಪಾಪಿ ಪಾಕಿಸ್ತಾನದ ದೇಶದ್ರೋಹಿ ಕೆಲಸಗಳನ್ನು ಭಾರತೀಯರಾದ ನಾವೂ ಯಾವಾಗಲೂ ಖಂಡಿಸುತ್ತೇವೆ. ದೇಶ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿರುತ್ತೇವೆ. ಆದ್ದರಿಂದ ಎಲ್ಲರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಮತ್ತು ದೇಶದ ಬಗ್ಗೆ ಚಿಂತನೆ ಮಾಡಬೇಕು ಎಂದರು.
ಪ್ರೇಕ್ಷಕರನ್ನು ರಂಜಿಸಿದ ಸಂಗೀತ ಕಛೇರಿ
ರುದ್ರಪಟ್ಟಣದಲ್ಲಿ ಹಮ್ಮಿಕೊಂಡಿರುವ 22ನೇ ಸಂಗೀತೋತ್ಸವದಲ್ಲಿ ಪ್ರಸಿದ್ಧ ಕಲಾವಿದರು ಸಂಗೀತ ಕಚೇರಿ ಪ್ರಸ್ತುತ ಪಡಿಸಿ ರಾಗಸುಧೆ ಹರಿಸಿ ಪ್ರೇಕ್ಷಕರನ್ನು ರಂಜಿಸಿದರು. ವಿದ್ವಾನ್ ಚಂದನ್ ಕುಮಾರ್ ಎರಡು ತಾಸು ನಿರಂತರವಾಗಿ ನುಡಿಸಿದ ಕೊಳಲು ವಾದನದ ನೀನಾದ ಜನರನ್ನು ನಾದಲೋಕದಲ್ಲಿ ತೇಲಿಸಿತು. ಪುರಂದರ ದಾಸರ ಗಜವದನ ಬೇಡುವೆ, ಮುತ್ತುಸ್ವಾಮಿ ದೀಕ್ಷಿತರ ಅಖಿಲಾಂಡೇಶ್ವರಿ - ದ್ವಿಜಾವಂತಿ ಆದಿತಾಳದಲ್ಲಿ ಹಾಗೂ ಪಿಟೀಲು ಚೌಡಯ್ಯ ಅವರ ಶ್ರೀರಾಮ ಆನಂದಭೈರವಿ ಖಂಡ ಛಾಪು ಮನಸೆಳೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 441
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved