ಹಾಸನದಲ್ಲಿ ಬಂದ್ ಕರೆಗೆ ನೀರಸ ಪ್ರತಿಕ್ರಿಯೆಕನ್ನಡಿಗರ ಮೇಲೆ ಬೆಳಗಾವಿಯ ಎಂಇಎಸ್ ಗೂಂಡಾಗಳು ಹಲ್ಲೆ ಮಾಡುವುದನ್ನು ಖಂಡಿಸಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಶನಿವಾರ ಹಾಸನದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆ.ಎಸ್.ಆರ್.ಟಿ.ಸಿ. ಬಸ್, ಖಾಸಗೀ ಬಸ್, ಆಟೋ, ಕಾರು ಸೇರಿದಂತೆ ಎಲ್ಲಾ ವಾಹನಗಳು ಎಂದಿನಂತೆ ಸಂಚರಿಸಿದವು. ಇನ್ನು ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಯಾವ ಕಚೇರಿಗಳು ಬಾಗಿಲು ಹಾಕಲಿಲ್ಲ. ಆದರೇ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.