• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡು ತಾಲೂಕಲ್ಲಿ ಹೆಚ್ಚು ವಲಸೆ ಕಾರ್ಮಿಕರು
ಅರಕಲಗೂಡು ತಾಲೂಕಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಕಾರ್ಮಿಕ ಮತ್ತು ಪೊಲೀಸ್ ಇಲಾಖೆ ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಶಾಸಕ ಎ. ಮಂಜು ಸೂಚಿಸಿದರು. ಇವರು ಹೊರರಾಜ್ಯದವರಾಗಿದ್ದು ಎಲ್ಲಿಂದ ಬರುತ್ತಿದ್ದಾರೆ, ಕರೆತರುತ್ತಿರುವವರು ಯಾರು, ಅಗತ್ಯ ದಾಖಲೆಗಳಿವೆಯೆ ಎಂಬ ಕುರಿತು ಸರಿಯಾದ ಮಾಹಿತಿ ಇಲ್ಲ. ಇವರಿಂದಾಗಿ ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರೆಯದಂತಾಗಿದೆ. ಅಪರಾಧ ಪ್ರಕರಣಗಳು ವರದಿಯಾಗುತ್ತಿದ್ದು ಸಮಸ್ಯೆ ಗಂಭೀರವಾಗುವ ಮುನ್ನವೆ ಅಧಿಕಾರಿಗಳು ಎಚ್ಚೆತ್ತು ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು.
ವಿದ್ಯೆ ಜತೆಗೆ ಸಂಸ್ಕಾರವನ್ನೂ ಕಲಿಸಿ
ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡುವುದು ಬಹಳ ಮುಖ್ಯ ಎಂದು ಮಾಜಿ ಶಾಸಕ ಎ. ಟಿ. ರಾಮಸ್ವಾಮಿ ತಿಳಿಸಿದರು. ಎಳೆಯ ಮಕ್ಕಳು ಬಿಳಿಯ ಹಾಳೆಯಿದ್ದಂತೆ. ಅದರ ಮೇಲೆ ಏನು ಬರೆಯುತ್ತೇವೋ ಅದು ಕಾಣಿಸುತ್ತದೆ. ಇಂದು ಮೌಲ್ಯಯುತ ಶಿಕ್ಷಣ ಕೊಡಿಸುತ್ತಿದ್ದೇವೆ ಹೊರತು ಸಂಸ್ಕಾರ ಕೊಡಿಸುತ್ತಿಲ್ಲ. ಇದರಿಂದ ದೊಡ್ಡ ದೊಡ್ಡ ಅನಾಹುತಗಳೆ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆಗೆ ಸಿದ್ಧ
ನಗರಸಭೆ ಅಧ್ಯಕ್ಷನಾಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಮಾಜಿ ಅಧ್ಯಕ್ಷ ಸಿ.ಗಿರೀಶ್ ಸವಾಲು ಹಾಕಿದರು. ಹಾಲಿ ಅಧ್ಯಕ್ಷರು ಅಧಿಕಾರದ ಆಸೆ ತೋರಿಸಿ ಹಲವರಿಗೆ ಮೋಸ ಮಾಡಿರುವುದು ಜಗಜ್ಜಾಹೀರಾಗಿದೆ. ಮಾಜಿ ಅಧ್ಯಕ್ಷ ಸಿದ್ದರಾಮಶೆಟ್ಟಿ, ದೇವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಿ ಶ್ರೀರಾಮನ ಜಪ ಮಾಡಿದರೆ ಪಾಪಕೃತ್ಯ ದೂರವಾಗದು. ನಗರದ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇವೆಯೇ ಹೊರತು ಅಡ್ಡಿಪಡಿಸುವ ಕೆಲಸ ಮಾಡುವುದಿಲ್ಲ ಎಂದರು.
ಶುಂಠಿ ಬೆಲೆ ಹೆಚ್ಚಳಕ್ಕೆ ರಾಜ್ಯ ಶುಂಠಿ ಬೆಳೆಗಾರರ ಸಂಘ ಮನವಿ
ರಾಜ್ಯ ಶುಂಠಿ ಬೆಳೆಗಾರರ ಸಂಘದ ಭೋಮೇಶ್ ಮತ್ತು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಶುಂಠಿ ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆ ಬಗ್ಗೆ ವರದಿ ನೀಡಿ ನಮ್ಮ ಜಿಲ್ಲೆಯ ಶುಂಠಿ ಬೆಳೆಗಾರರ ನೆರವಿಗೆ ತಕ್ಷಣ ಧಾವಿಸುವಂತೆ ಮಾಡಬೇಕೆಂದು ವಿನಂತಿಸಿದರು. ಕ್ವಿಂಟಲ್‌ಗೆ ೭೦೦೦ ರು. ಬೆಲೆ ನಿಗದಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳಿಗೆ ತಾಯಂದಿರು ಮನೆಯಲ್ಲೇ ಸಂಸ್ಕಾರ ಕೊಡಿ
ಯುಗವನ್ನೇ ಸೃಷ್ಠಿ ಮಾಡುವ ಶಕ್ತಿ ತಾಯಂದಿರಿಗೆ ಇದೆ. ಭವಿಷ್ಯದ ಮುಂದುವರಿದ ಭಾಗವಾಗಿರುವ ಮಕ್ಕಳಿಗೆ ಮನೆಯಲ್ಲಿಯೇ ತಾಯಂದಿರು ಉತ್ತಮ ಸಂಸ್ಕಾರ ನೀಡಿದ್ದೇ ಆದಲ್ಲಿ ಶಾಲಾ ಕಾಲೇಜುಗಳ ಭಾರ ಕಡಿಮೆಯಾಗುತ್ತದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು. ಲಕ್ಷಾಂತರ ಮಂದಿಯ ಅಂತಃರಂಗದ ಕರೆ, ಮೊರೆ, ಪ್ರಾರ್ಥನೆ ಚುಂಚನಗಿರಿ ಮಠವನ್ನ ಬೆಳೆಸುತ್ತಿದೆ, ಇನ್ನಷ್ಟು ಬೆಳೆಸುತ್ತದೆ. ಬೆಳೆಯುವಿಕೆ ಸಂದರ್ಭದಲ್ಲಿ ಎಲ್ಲರೂ ಜತೆಯಲ್ಲಿ ನಿಂತ್ತು ಮಠ, ಶಿಕ್ಷಣ ಸಂಸ್ಥೆ ಬೆಳವಣಿಗೆಗೆ ಸದಾ ಸ್ಪಂದಿಸಬೇಕಿದೆ ಎಂದರು.
ಸಂತೋಷ್ ಮತ್ತು ಬೆಂಬಲಿಗರ ಮೇಲೆ ಅಟ್ರಾಸಿಟಿ ಕೇಸ್‌
ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಹಾಗೂ ಇತರೆ 13 ಮಂದಿಯ ಮೇಲೆ ಅಟ್ರಾಸಿಟಿ ದೂರನ್ನು ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ ನೀಡಿರುವ ಹಿನ್ನೆಲೆಯಲ್ಲಿ ಎನ್ ಆರ್ ಸಂತೋಷ್ ಹಾಗೂ ಬೆಂಬಲಿತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಘಟನೆ ನಡೆದು 7 ದಿವಸದ ನಂತರ ದೂರು ನೀಡಲಾಗಿದೆ. ಏಕೆ ಈ ಮೊದಲು ಕೊಡಲಿಲ್ಲ ಎಂದು ಪ್ರಶ್ನಿಸಿದರು. ಶಾಸಕರ ಮತ್ತು ನಗರಸಭಾ ಅಧ್ಯಕ್ಷರ ಬೆದರಿಕೆಗೆ ನಾನು ಜಗ್ಗುವನಲ್ಲ, ನ್ಯಾಯಕ್ಕಾಗಿ ಹೋರಾಡುತ್ತೇನೆ ನನಗೂ ಬೆಂಬಲಿತರು ಇದ್ದಾರೆ ಎಂದರು.
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಹೊಂದಿರುವುದು ಭಾರತ
ಭಾರತವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು, ಸಂವಿಧಾನ ರಚಿಸುವಲ್ಲಿ ಡಾ. ಅಂಬೇಡ್ಕರ್‌ರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ತಿಳಿಸಿದರು.
ಕಾಡಾನೆಗಳ ದಾಳಿಗೆ ಇನ್ನೆಷ್ಟು ಜೀವ ಬಲಿಯಾಗಬೇಕು
ಬೇಲೂರು ತಾಲೂಕಿನಲ್ಲಿ ಸೋಮವಾರ ಒಂದೇ ದಿನ ನಾಲ್ವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಫಿ ತೋಟಕ್ಕೆ ಕೆಲಸಕ್ಕೆಂದು ಹೋಗುತ್ತಿದ್ದ ಇಬ್ಬರು ಮಹಿಳೆಯರನ್ನು ಸೊಂಡಿಲಿನಿಂದ ಎಸೆದು ಗಾಯಗೊಳಿಸಿದೆ. ತಾಲೂಕಿನ ಬಿಕ್ಕೋಡು ಎಸ್ಟೇಟ್‌ನಲ್ಲಿ ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಗೀತಾ (40) ಮತ್ತು ಹೇಮ (38) ಎಂಬ ಇಬ್ಬರು ಮಹಿಳೆಯರ ಮೇಲೆ ಕಾಡಾನೆ ದಾಳಿ ಮಾಡಿದೆ. ಗೀತಾ ಅವರ ಹೊಟ್ಟೆ ಮತ್ತು ತಲೆಗೆ ತೀವ್ರ ಗಾಯವಾಗಿದ್ದು, ಹೇಮ ಅವರ ಮುಖ ಮತ್ತು ಬಲ ಕೈಗೆ ಗಂಭೀರ ಪೆಟ್ಟಾಗಿದೆ.
ರಾಜ್‌ಕುಮಾರ್ ರಸ್ತೆಗೆ ಶಾಸಕ ಬಾಲಕೃಷ್ಣ ಗುದ್ದಲಿ ಪೂಜೆ
ಲೋಕೋಪಯೋಗಿ ಇಲಾಖೆಯ ಒನ್ ಟೈಮ್ ಇಂಪ್ರ್ಯೂಮೆಂಟ್ ಕಾರ್ಯಕ್ರಮದ ಅಡಿ ೨ ಕೋಟಿ ರು. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, ಡ್ರೈನೇಜ್ ದುರಸ್ತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ತಾಲೂಕು ಪಂಚಾಯಿತಿ ಸಮೀಪದ ವಾಣಿಜ್ಯ ಸಂಕೀರ್ಣವನ್ನು ನೂತನವಾಗಿ ನಿರ್ಮಾಣ ಮಾಡಲು ಟೆಂಡರ್‌ ಆಹ್ವಾನ ಮಾಡಲಾಗುವುದು. ಪುರಸಭೆಯ ಪುರಭವನದ ಕಾಮಗಾರಿ ಮೊದಲನೇ ಅಂತಸ್ತು ಪೂರ್ಣಗೊಂಡಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved