• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ಬಂದ್‌ ಕರೆಗೆ ನೀರಸ ಪ್ರತಿಕ್ರಿಯೆ
ಕನ್ನಡಿಗರ ಮೇಲೆ ಬೆಳಗಾವಿಯ ಎಂಇಎಸ್ ಗೂಂಡಾಗಳು ಹಲ್ಲೆ ಮಾಡುವುದನ್ನು ಖಂಡಿಸಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಶನಿವಾರ ಹಾಸನದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆ.ಎಸ್.ಆರ್‌.ಟಿ.ಸಿ. ಬಸ್, ಖಾಸಗೀ ಬಸ್, ಆಟೋ, ಕಾರು ಸೇರಿದಂತೆ ಎಲ್ಲಾ ವಾಹನಗಳು ಎಂದಿನಂತೆ ಸಂಚರಿಸಿದವು. ಇನ್ನು ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಯಾವ ಕಚೇರಿಗಳು ಬಾಗಿಲು ಹಾಕಲಿಲ್ಲ. ಆದರೇ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಈಜಲು ಹೋದ ಯುವಕರಿಬ್ಬರು ಸಾವು
ಹೆನ್ನಲಿ ಗ್ರಾಮದ ಎತ್ತಿನಹೊಳೆ ಸೇತುವೆ ಸಮೀಪ ವಿಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರಕಾಶ್ ನದಿಗೆ ಇಳಿದು ಈಜಾಡುತ್ತಿದ್ದ ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮುಳಗಲಾರಂಭಿಸಿದ್ದಾನೆ. ಈತನನ್ನು ರಕ್ಷಿಸಲು ತೆರಳಿದ ಭರತ್ ಸಹ ನೀರಿನ ಸೆಳೆತದಿಂದ ಹೊರಬರಲಾಗದೆ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹೋಬಳಿ ಬಾಳೆಹಳ್ಳ ಗ್ರಾಮದ ಭರತ್ (೩೪) ಹಾಗೂ ತಾಲೂಕಿನ ಕಾಟಿಹಳ್ಳಿ ಗ್ರಾಮದ ಪ್ರಕಾಶ್(೨೯) ಮೃತರು.
ಕರ್ನಾಟಕ ಬಂದ್‌ ಅರಸೀಕೆರೆಯಲ್ಲಿ ಸಂಪೂರ್ಣ ವಿಫಲ
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಹುಟ್ಟೂರಾಗಿರುವುದರಿಂದ ಸಹಜವಾಗಿಯೇ ತಾಲೂಕಿನಲ್ಲಿ ಕರವೇ ಸಂಘಟನೆ ಪ್ರಬಲವಾಗಿದೆ. ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಂದ್‌ಗೆ ಬೆಂಬಲ ನೀಡದ ಕಾರಣ ಸಹಜ ದಿನಗಳಂತೆ ಅಂಗಡಿ ಮುಂಗಟ್ಟುಗಳು ನಗರದಲ್ಲಿ ತೆರೆದರೆ, ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದವು. ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಬಂದ್ ಹೆಸರಿನಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಂದೋಕಮಬಸ್ತ್ ಮಾಡಿದ್ದು ಕಂಡು ಬಂತು.
ನಮ್ಮ ತಂಡ ಗೆದ್ದರೆ ಹೊನ್ನೇಗೌಡರ ತಂಡದ ಅಕ್ರಮ ಬಯಲಿಗೆ
ಸಾರಿಗೆ ನಿಗಮದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅವ್ಯವಹಾರದ ಕುರಿತು ಚರ್ಚೆಗಳು ಜೋರಾಗಿವೆ. ಇದೀಗ ನಡೆಯಲಿರುವ ಚುನಾವಣೆಯಲ್ಲಿ ನಮ್ಮ ತಂಡದ ೧೫ ಜನ ಗೆದ್ದ ಕೂಡಲೇ ಹೊನ್ನೇಗೌಡರ ತಂಡ ಮಾಡಿದೆ ಎನ್ನಲಾಗುತ್ತಿರುವ ಅವ್ಯವಹಾರ ಮತ್ತು ಭ್ರಷ್ಟಾಚಾರದ ಬಗ್ಗೆ ಸರ್ವ ಸದಸ್ಯರ ಸಭೆಯಲ್ಲಿ ಮಂಡಿಸಿ ಅನುಮೋದನೆ ತೆಗೆದುಕೊಂಡು ತನಿಖೆಗೆ ಒಳಪಡಿಸಲಾಗುವುದು. ಕಾರ್ಮಿಕರಿಗೆ ಆದ ಅನ್ಯಾಯವನ್ನು ಸರಿಪಡಿಸಲಾಗುವುದು ಎಂದು ಕೆ.ಎಸ್.ಆರ್‌.ಟಿ.ಸಿ. ಸ್ಟಾಫ್‌ ಅಂಡ್ ಫೆಡರೇಷನ್ ಬೆಂಗಳೂರು ಕಾರ್ಯಾಧ್ಯಕ್ಷ ಹಾಗೂ ಹಾಸನ ವಿಭಾಗದ ಪ್ರಧಾನ ಕಾರ್ಯದರ್ಶಿ ಜಿ.ಟಿ. ರಂಗೇಗೌಡ ತಿಳಿಸಿದರು.
ಹೊಳೆಬೆಳ್ಳೂರು ಸೊಸೈಟಿಯಲ್ಲಿ ಕಬ್ಬಿನಳ್ಳಿ ಜಗದೀಶ್‌ ಬಣ ಮೇಲುಗೈ
ಹೊಳೆಬೆಳ್ಳೂರು ಗ್ರಾಮದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಎಚ್.ಜಿ.ಪ್ರವೀಣ್ ಕುಮಾರ್ ಮತ್ತು ಭೈರೇಶ್ ನಾಮಪತ್ರ ಸಲ್ಲಿಸಿದರು. ಇವರನ್ನು ಅಭಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹಾಸನ ಸಹಕಾರ ಇಲಾಖೆಯ ಅಧಿಕಾರಿ ವಾಸಿಮ್ ಘೋಷಣೆ ಮಾಡಿದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಘೋಷಣೆ ಆಗುತ್ತಿದ್ದಂತೆ ಸಹಕಾರ ಸಂಘದ ನಿರ್ದೇಶಕರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಮೀಣರ ಆರೋಗ್ಯ ಕಾಪಾಡುವಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯ
ತಂತ್ರಜ್ಞಾನದ ಪ್ರಯೋಜನಗಳ ಜತೆಗೆ ವಿನೂತನ ಅವಿಷ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ರೈತಾಪಿ ವರ್ಗದ ಗ್ರಾಮೀಣ ಜನರ ಬದುಕಿನಲ್ಲಿ ಅಗತ್ಯ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆಯಾಗದಂತೆ ಅವರ ಸಮಸ್ಯೆಗೆ ಸ್ಪಂದಿಸುವ ಕಾರ್ಯದಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯವಾಗಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಸಲಹೆ ನೀಡಿದರು.
ಪರೀಕ್ಷೆಯ ಭಯ ಬಿಟ್ಟು ಆತ್ಮವಿಶ್ವಾಸದಿಂದ ಬರೆಯಿರಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ಅದರಂತೆ ವಿದ್ಯಾರ್ಥಿಗಳು ಯಾವುದೇ ಭಯ ಆತಂಕವಿಲ್ಲದೆ ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳು ತಮ್ಮೊಳಗೆ ಇರುವ ಭಯ ಹೋಗಲಾಡಿಸಬೇಕು. ಶಿಕ್ಷಣ ಎಂಬುದು ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ಜಗತ್ತನ್ನು ಗೆಲ್ಲಲು ಅಗತ್ಯವಾದ ಕೌಶಲ್ಯ ಜ್ಞಾನದೊಂದಿಗೆ ನಮ್ಮನ್ನು ಸಜ್ಜುಗೊಳಿಸುತ್ತದೆ. ಯಶಸ್ಸನ್ನು ಸಾಧಿಸಲು ಮತ್ತು ಮುಂದೆ ಒಳ್ಳೆಯ ಹುದ್ದೆ ಪಡೆಯಲು ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದೆ ಎಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಶುಭ ಹಾರೈಸಿದರು.
ಸರ್ಕಾರಿ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ
ದೇಖ್ಲಾ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಮಧೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಅರವಿಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳಪರಿಶೀಲನೆ ಮಾಡಿ ವರದಿ ಪಡೆದು ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ನೂರಾರು ಕಾರ್ಯಕರ್ತರು ಸ್ಥಳಕ್ಕೆ ನುಗ್ಗಿ ನಾವು ಸಹ ಒತ್ತುವರಿ ಮಾಡಬೇಕಾಗುತ್ತದೆ ಎಂದಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ ಸಲ್ಲದು
ನಮಗೆ ತಾಯಿಯಾಗಿ, ತಂಗಿಯಾಗಿ, ಗೆಳತಿಯಾಗಿ ಹೆಣ್ಣು ಬೇಕು. ಆದರೆ ಅದೇ ಹೆಣ್ಣು ಮಗುವನ್ನು ಸ್ವೀಕರಿಸಲು ಮನಸ್ಸು ಒಪ್ಪದೇ ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುತ್ತಿರುವುದು ಅವರ ಮೇಲೆ ಎಸಗುತ್ತಿರುವ ಪ್ರಮುಖ ದೌರ್ಜನ್ಯವಾಗಿದೆ. ಹೆಣ್ಣು ಇಂದು ಬರೀ ಅಡುಗೆ ಮನೆಗೆ ಸೀಮಿತವಾಗಿರದೆ ಬಾಹ್ಯಾಕಾಶಯಾನ ಮಾಡುತ್ತಿರುವುದು ಸಮಾಜದಲ್ಲಿ ಕಂಡು ಬರುತ್ತಿರುವ ಅತ್ಯುತ್ತಮ ಬೆಳವಣಿಗೆಯಾಗಿದೆ ಎಂದು ದೇಶಭಕ್ತಬಳಗದ ಅಧ್ಯಕ್ಷ ಡಾ. ಸಂತೋಷ್ ಹೇಳಿದರು.
ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಗ್ರಾಪಂ ಅಧ್ಯಕ್ಷೆ
ಬಾಣಾವರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀಣಾ ವಿಶ್ವನಾಥ್ ಅವರು ಭೇಟಿ ನೀಡಿ ಪರೀಕ್ಷೆ ಬರೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವನ್ನು ತುಂಬುವುದರ ಜೊತೆಗೆ ಶುಭಹಾರೈಸಿದರು. ಎಸ್ ಎಸ್ ಎಲ್ ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಒಂದು ತಿರುವಿನ ಘಟ್ಟವಾಗಿದ್ದು ಇದು ವಿದ್ಯಾರ್ಥಿ ಜೀವನದ ಮುಂದಿನ ಭವಿಷ್ಯಕ್ಕೆ ಭದ್ರಾ ಬುನಾದಿಯಾಗಿದೆ ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ಉತ್ತಮವಾದ ಆಯ್ಕೆಯನ್ನು ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved