ಎರಡನೇ ದಿನವೂ ಆಪರೇಷನ್ ವಿಕ್ರಾಂತ್ ವಿಫಲಕಾನನಹಳ್ಳಿ ಕಾಫಿತೋಟದ ಸಮೀಪ ಗುಂಪಿನಿಂದ ಬೇರ್ಪಟ್ಟ ಪುಂಡಾನೆ ವಿಕ್ರಾಂತ್ನನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಆಪರೇಷನ್ ವಿಕ್ರಾಂತ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ವಿಕ್ರಾಂತ್ ಇರುವ ಸ್ಥಳವನ್ನು ಪತ್ತೆಹಚ್ಚಿರುವ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಬುಧವಾರ ಇಟಿಎಫ್ ತಂಡವು ವಿಕ್ರಾಂತ್ನನ್ನು ಕಾಡಾನೆಗಳ ಗುಂಪಿನಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ವಿಕ್ರಾಂತ್ ಅರಣ್ಯದೊಳಗೆ ಒಂಟಿಯಾಗಿ ನಿಂತಿದ್ದು, ವೈದ್ಯರು ಸಾಕಾನೆಗಳೊಂದಿಗೆ ಕಾಡಿನೊಳಗೆ ತೆರಳಿ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಯತ್ನದಲ್ಲಿದ್ದಾರೆ.