ರಸ್ತೆಬದಿ ಅಂಗಡಿಗಳ ಒತ್ತುವರಿ ಜಾಗ ತೆರವುಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆಗೆಯಲು ಇನ್ನು ಕೆಲವು ದಿನಗಳು ಬಾಕಿ ಇದ್ದು, ರಾಜ್ಯ ಮತ್ತು ದೇಶದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಾಗಿ ಹಾಸನ ಜಿಲ್ಲೆಗೆ ಬರುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್, ಪೆಟ್ಟಿಗೆ ಅಂಗಡಿಗಳನ್ನು ಬುಧವಾರ ಬೆಳಿಗ್ಗೆ ಜೆಸಿಬಿ ಹಾಗೂ ನಗರಸಭೆ ಸಿಬ್ಬಂದಿಯ ಸಹಕಾರದಲ್ಲಿ ನಗರಸಭೆ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ತೆರವು ಕಾರ್ಯಾಚರಣೆ ನಡೆಸಿತು.