• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
ಸ್ನೇಹಿತರೊಂದಿಗೆ ಕಟ್ಟೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ತಾಲೂಕಿನ ಎಂ. ದಾಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಮರುವನಹಳ್ಳಿ ಗ್ರಾಮದ ಸೋಮಶೇಖರ್ ಹಾಗೂ ಮಣಿ ದಂಪತಿ ಪುತ್ರ ಕಿರಣ್ (೧೪) ಮೃತ ದುರ್ದೈವಿ. ದಾಸಾಪುರದ ನಿರ್ಮಲ ವಿದ್ಯಾ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸ್ನೇಹಿತರಾದ ಹೇಮಂತ್ ಹಾಗೂ ಹರ್ಷಿತ್ ಜೊತೆಗೆ ಈಜಲು ಊರ ಹೊರವಲಯದಲ್ಲಿರುವ ಕಟ್ಟೆಗೆ ತೆರಳಿದ್ದ. ಮೂವರಿಗೂ ಪರಿಪೂರ್ಣ ಈಜು ಬರುತ್ತಿರಲಿಲ್ಲ.
ಸಮಾಜದಲ್ಲಿ ಸಮಾನತೆಯಿಂದ ಬದುಕಬೇಕು
ಆಲೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕಾರ್ಜುವಳ್ಳಿ ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ಆಲೂರು ಪಟ್ಟಣ ಕೆ.ಇ.ಬಿ ವೃತ್ತದಲ್ಲಿರುವ ಶ್ರೀ ಸಂಗಮೇಶ್ವರ ದೇವಾಲದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ರೇಣುಕಾಚಾರ್ಯರ ಭಾವಚಿತ್ರ ಹಾಗೂ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಭಾಗವಹಿಸಿದ್ದರು.
ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿ ಮಹಾ ರಥೋತ್ಸವ
ಜಯಚಾಮರಾಜಪುರ ಗ್ರಾಮದ ಶ್ರೀ ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿಯವರ ಮಹಾ ರಥೋತ್ಸವ ಗೋಧೂಳಿ ಲಗ್ನದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಭಕ್ತರು ಸಿದ್ದೇಶ ಸಿದ್ದೇಶ ಎಂಬ ಘೋಷದೊಂದಿಗೆ ಹರ್ಷೋದ್ಗಾರದಿಂದ ರಥವನ್ನು ಎಳೆದು ಸಂಭ್ರಮಿಸಿದರು ಹಾಗೂ ರಥಕ್ಕೆ ಬಾಳೆಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಗ್ರಾಮದ ಚೌಡೇಶ್ವರಿ ದೇವಿಯವರ ಕುಣಿತವು ನೋಡುಗರ ಮನಸೂರೆಗೊಂಡಿತ್ತು.
ವಿವೇಕಾನಂದರ ಆದರ್ಶ ರೂಢಿಸಿಕೊಳ್ಳಿ
ವಿವೇಕಾನಂದರ ವಾಣಿ ಮತ್ತು ಆದರ್ಶಗಳನ್ನು ನೀವು ರೂಢಿಸಿಕೊಳ್ಳಬೇಕು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಕೆಲ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಾಗುತ್ತದೆ. ಅಂತಹ ಜ್ಞಾನವನ್ನು ಶ್ರೀ ಕೃಷ್ಣ ಗೀತೆಯ ಮೂಲಕ ನೀಡಿದ್ದಾನೆ. ಅಂತಹ ಜ್ಞಾನವನ್ನು ಸಹ ಜೀವನದಲ್ಲಿ ಅನುಸರಿಸಬೇಕು ಎಂದು ಕರೆ ನೀಡಿದರು. ಭಾಷಣ ಮಾಡದೆ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ಮಕ್ಕಳ ಮನಮುಟ್ಟುವಂತೆ ತಾವು ನೀಡಬೇಕಾದ ಮಾಹಿತಿಯನ್ನು ಕತೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಅರಸೀಕೆರೆಯಲ್ಲಿ ಶೀಘ್ರ ಎಂಜಿನಿಯರಿಂಗ್‌ ಕಾಲೇಜು ಲೋಕಾರ್ಪಣೆ
ವಿದ್ಯಾರ್ಥಿಗಳು ಹಾಗೂ ತಾಲೂಕಿನ ಜನತೆಯ ದಶಕಗಳ ಅಪೇಕ್ಷೆಯಾಗಿದ್ದ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಮೇ ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಬಡ ಹಾಗೂ ಮಧ್ಯಮ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು ಒಂದೆಡೆ ಉಳಿದುಕೊಂಡು ವ್ಯಾಸಂಗ ಮಾಡಲು ಯಾವುದೇ ರೀತಿಯ ಅಡಚಣೆ ಆಗದಂತೆ ವಸತಿ ನಿಲಯಗಳನ್ನೂ ನಿರ್ಮಿಸಿಕೊಡಲಾಗುವುದು ಎಂದೂ ಭರವಸೆ ನೀಡಿದರು.
ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶ ಅನುಸರಿಸಿ
ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ನಡೆಯೋಣ. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದಂತಹ ಕ್ರಾಂತಿ ವೀರರು. ಅವರ ಧೈರ್ಯ, ಸ್ಥೈರ್ಯ ಮತ್ತು ನೇರ ನುಡಿಯನ್ನು ಮೆಚ್ಚಬೇಕಾಗಿದೆ. ಯುದ್ಧದ ರೀತಿ ಜೊತೆಯಲ್ಲಿ ನಾವು ಹೋಗುತ್ತಿದ್ದೇವೆ. ಮುಂದಿನ ಪೀಳಿಗೆಯವರಾದಂತಹ ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಅವರು ಕರೆ ನೀಡಿದರು.
ಎಲ್ಲಾ ಶಾಸಕರ ಜೊತೆಗೂಡಿ ಹಾಸನ ವಿವಿ ಉಳಿಸಿ ಹೋರಾಟ
ಪಕ್ಷಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಯಾವುದೇ ರೀತಿಯ ಅನುಮಾನ ಬೇಡ. ಎಲ್ಲಾ ಶಾಸಕರ ಒಟ್ಟುಗೂಡಿ, ನಮ್ಮ ಜೊತೆ ಸಮಿತಿಯಿಂದ ೧೫ ಜನರ ತಂಡ ಈ ವಾರದಲ್ಲಿ ದಿನ ನಿಗದಿ ಮಾಡಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಿ ಗಮನ ಸೆಳೆಯಲಾಗುವುದು ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಭರವಸೆ ನೀಡಿದರು.
ಸಾವಾದಾಗ ಮಾತ್ರ ಕಾಡಾನೆ ಹಿಡಿಯುವ ಕಾರ್ಯಾಚರಣೆ
ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ, ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಕಾಡಾನೆ ಸಮಸ್ಯೆ ಇದೆ. ಈ ಭಾಗದಲ್ಲಿ ಕಾಡಾನೆಗಳಿಂದಾಗಿ ಈ ಭಾಗದ ಕಾಫಿ ಬೆಳೆಗಾರರು ಹಾಗೂ ರೈತರು ತಮ್ಮ ಹೊಲ ತೋಟಗಳಲ್ಲಿ ಓಡಾಡಲಿಕ್ಕೂ ಭಯಪಡುತ್ತಿದ್ದಾರೆ. ಕಾಡಾನೆಗಳಿಂದಾಗಿ ಪ್ರತಿನಿತ್ಯ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಿವೆ. ಒಂದು ಆನೆಯಿಂದ ಮಾನವನ ಸಾವಾದರೆ ಮಾನವನಿಂದ ಆನೆಯ ಸಾವಾಗುತ್ತಿದೆ. ಸಾವು ಸಂಭವಿಸಿದಾಗಲೆಲ್ಲಾ ಅಲ್ಲಿನ ಜನರು ಆಕ್ರೋಶಗೊಂಡು ರಸ್ತೆತಡೆ ಮಾಡಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾರೆ. ಆ ಸಂದರ್ಭಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ, ಶಾಸಕರಾಗಲಿ ಅಥವಾ ಅರಣ್ಯ ಇಲಾಖೆ ಸಚಿವರೇ ಸ್ಥಳಕ್ಕೆ ಬಂದು ಸಾಂತ್ವನ ಹೇಳಿ ಭವಿಷ್ಯದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಸಾವಿಗೆ ಬೆಲೆ ಕಟ್ಟುವ ಪರಿಹಾರದ ಚೆಕ್‌ ಅನ್ನು ನೀಡಿ ಫೋಟೋಗೆ ಫೋಸ್ ನೀಡಿ ಪೊಳ್ಳು ಆಶ್ವಾಸನೆ ನೀಡಿ ತೆರಳುತ್ತಾರಷ್ಟೆ.
ಕೋಡಿಮಠದಲ್ಲಿ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಹಾರನಹಳ್ಳಿ ಕೋಡಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಜಾತ್ರಾ ಮಹೋತ್ಸವದ ಮೊದಲೇ ದಿನವಾದ ಶನಿವಾರ, ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಮಠದ ಸಂಪ್ರದಾಯದಂತೆ ಸಾವಿರಾರು ಮುತ್ತೈದೆಯರಿಗೆ ಉಡಿ ತುಂಬಿ, ಕುಂಕುಮ ನೀಡಿ, ಬಾಗಿನ ಕೊಟ್ಟು ಸತ್ಕರಿಸಲಾಯಿತು. ಜಾತಿ, ಮತ, ಪಂಥ ಬೇಧವಿಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಹೆಂಗೆಳೆಯರು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಂದ ಸಾಂಪ್ರದಾಯಿಕ ಗೌರವ ಜೊತೆಗೆ ಆಶೀರ್ವಚನ ಪಡೆದರು.
ಮಹಿಳೆಯರ ಹಕ್ಕುಗಳ ಮೇಲಿನ ದಾಳಿಗಳು ಹೆಚ್ಚುತ್ತಿವೆ
ಜಗತ್ತಿನ ಮಹಿಳಾ ಕಾರ್ಮಿಕರ ಹೋರಾಟದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹೊರಹೊಮ್ಮಿದ್ದು, ಮಹಿಳೆಯರ ನ್ಯಾಯಯುತ ಹಕ್ಕುಗಳಿಗಾಗಿ ಮಂಡಿಸಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಎನ್.ಡಿ.ಎ ಸರಕಾರದ ಅವಧಿಗಳಲ್ಲಂತೂ ಸರಕುಗಳು ಮತ್ತು ಅಗತ್ಯ ಸೇವೆಗಳ ಮೇಲಿನ ಜಿ.ಎಸ್.ಟಿ. ಅಗತ್ಯ ಔಷಧಗಳ ಬೆಲೆಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳ ಮೇಲೆ ನಿಯಂತ್ರಣ ರದ್ದಾಗಿರುವುದು ದೇಶದ ಸಾಮಾನ್ಯ ಜನರ ದೈನಂದಿನ ವೆಚ್ಚಗಳನ್ನು ಹೆಚ್ಚಿಸಿವೆ ಎಂದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved