• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರೆಯಲಿ
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಬೇಕು ಎಂದು ಹಾಸನ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬನವಾಸಿ ರಂಗಸ್ವಾಮಿ ಅವರು ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಯುವನಿಧಿ ಪೋಸ್ಟರ್‌ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಿ ಪದವಿ ಮತ್ತು ಡಿಪ್ಲೋಮಾ ಪಡೆದಿರುವ ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಆದರವಳ್ಳಿ ಶಾಲೆಯ ಮೂವರು ಬಾಲಕರು ನಾಪತ್ತೆ
ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತಾಲೂಕಿನ, ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರತ್ (16), ಧನಂಜಯ್ (16), ಮುರುಳಿ (16) ಕಾಣಿಯಾಗಿರುವ ವಿದ್ಯಾರ್ಥಿಗಳು. ಕಾಣೆಯಾಗಿರುವ ಮೂವರು ಬಾಲಕರು ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆಗೆ ಮುಂದಾಗಿರುವ ಪೊಲೀಸರಿಗೆ ಬಾಲಕರು ಮೈಸೂರಿನತ್ತ ತೆರಳಿರುವ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪೊಲೀಸರು ಮೈಸೂರಿಗೆ ತೆರಳಿದ್ದಾರೆ.
ಬೇಲೂರು ಪಟ್ಟಣದಲ್ಲಿ ಫುಟ್ಪಾತ್‌ ಅಂಗಡಿಗಳ ತೆರವು
ಜೂನಿಯರ್‌ ಕಾಲೇಜು ಆವರಣದ ಫುಟ್ಪಾತ್‌ ಮೇಲೆ ಅಂಗಡಿ ಹಾಕಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ವಿದ್ಯಾರ್ಥಿಗಳ ದೂರಿನ ಮೇರೆಗೆ ಪುರಸಭಾ ಅಧ್ಯಕ್ಷ ಎ.ಆರ್‌.ಅಶೋಕ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಫುಟ್ಪಾತ್‌ ಮೇಲಿನ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಮೆಚ್ಚುಗಾಗಿ ಪಾತ್ರರಾಗಿದ್ದಾರೆ. ತಳ್ಳುವ ಗಾಡಿಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತದೆ ಎಂಬ ನಿಟ್ಟಿನಲ್ಲಿ ಹರ್ಡಿಕರ್‌ ವೃತ್ತದ ಬಳಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದೆ ಎಂದರು.
ಜಾವಗಲ್ ಹೋಬಳಿಯ ಅಭಿವೃದ್ಧಿ ಕಡೆಗಣಿಸುವಂತಿಲ್ಲ
ಜಾವಗಲ್ ಹೋಬಳಿಯು ಬೇಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದರೂ ಆಡಳಿತಾತ್ಮಕವಾಗಿ ಅರಸೀಕೆರೆ ತಾಲೂಕಿನ ವ್ಯಾಪ್ತಿಯಲ್ಲಿದೆ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಜಾವಗಲ್ ಹೋಬಳಿಯ ಪ್ರಗತಿ ಬಗ್ಗೆ ಏನೇ ಇದ್ದರೂ ನನ್ನ ಗಮನಕ್ಕೆ ತರುವುದರ ಜತೆಗೆ ನನ್ನೊಂದಿಗೆ ಚರ್ಚಿಸಬೇಕು, ಇಲ್ಲದಿದ್ದರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಕೆ. ಸುರೇಶ್ ತಾಕೀತು ಮಾಡಿದರು.
ಅಂಧಮಕ್ಕಳ ಶಾಲೆಯ ನೂತನ ಕಟ್ಟಡಕ್ಕೆ ಶೀಘ್ರ ಗುದ್ದಲಿ ಪೂಜೆ
ಎಂ. ಕೃಷ್ಣ ಅಂಧ ಮಕ್ಕಳ ವಸತಿಯುತ ಶಾಲೆಯು ಹಳೆಯದಾಗಿದ್ದು, ನೂತನ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಸಮಿತಿ ರಚನೆ ಮಾಡಿ ಇನ್ನೊಂದು ವಾರದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಿ ಕೆಲಸ ಮುಗಿಸಿ ನಾನೇ ಉದ್ಘಾಟನೆ ಮಾಡುವವರೆಗೂ ನೋಡಿಕೊಳ್ಳುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವಗಳು ಉತ್ತಮ ವೇದಿಕೆ
ವಿದ್ಯಾರ್ಥಿಗಳಲ್ಲಿ ಅಡಗಿರುವ ಶೈಕ್ಷಣೇತರ ಚಟುವಟಿಕೆಗಳನ್ನು ಪ್ರದರ್ಶಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿ ಹೊರ ಹೊಮ್ಮುತ್ತದೆ ಎಂದು ಮಲ್ನಾಡ್ ಪ್ರೌಢಶಾಲೆ ಸಂಘದ ಅಧ್ಯಕ್ಷ ಎನ್. ಕೆ. ಶ್ಯಾಮರಾವ್ ತಿಳಿಸಿದರು. ಮಕ್ಕಳ ಸಾಮರ್ಥ್ಯವನ್ನು ಶಿಕ್ಷಕರು ಮತ್ತು ಪೋಷಕರು ಗಮನಿಸಿ, ಅವರಲ್ಲಿರುವ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹಿಸಬೇಕು. ಸೌಲಭ್ಯ ಹೊಂದಿರುವುದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.
ಜಿಪಂ ತಾಪಂ ಚುನಾವಣೆಗೆ ಗ್ಯಾರಂಟಿ ಯೋಜನೆಗಳು ದಿಕ್ಸೂಚಿ
ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದ್ದು ಫೆಬ್ರವರಿ ಮೊದಲ ವಾರದಿಂದ ಗ್ರಾಮ ಪಂಚಾಯಿತಿಗಳ ಪ್ರವಾಸವನ್ನು ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಎಲ್. ಪಿ. ಪ್ರಕಾಶ್‌ ಗೌಡ ತಿಳಿಸಿದರು. ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಸೌಲಭ್ಯಗಳು ದೊರೆಯುತ್ತಿಲ್ಲದಿದ್ದರೆ ಸ್ಥಳದಲ್ಲಿ ಅಧಿಕಾರಿಗಳ ಜೊತೆ ಸಮಸ್ಯೆ ಬಗೆಹರಿಸಲು ಮುಂದಾಗುತ್ತೇವೆ. ತಾಲೂಕಿನಲ್ಲಿ ಒಟ್ಟು ೪೦ ಗ್ರಾಮ ಪಂಚಾಯಿತಿಗಳಿದ್ದು ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಲಾಗುವುದು ಎಂದರು.
ವಕ್ಫ್‌ ಅಧಿಕಾರಿ ವಿರುದ್ಧ ಡೆತ್‌ ಫ್ರೀಜರ್‌ ಹಂಚಿಕೆಯಲ್ಲಿ ಅಕ್ರಮ ಆರೋಪ
ಜಿಲ್ಲೆಯ ವಕ್ಫ್ ಬೋರ್ಡ್ ಅಧಿಕಾರಿ ಜರೀನಾ ಬೇಗಂರವರ ಬಗ್ಗೆ ಅನುಮಾನ ಇರುವುದರಿಂದ ಜಿಲ್ಲೆಯ ವಕ್ಫ್‌ ಬೋರ್ಡ್‌ನಲ್ಲಿ ಇಲ್ಲಿವರೆಗೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಬಿ.ಎಚ್. ಸುಲೇಮಾನ್ ಆಗ್ರಹಿಸಿದರು. ತಿಂಗಳಿಗೆ ಒಮ್ಮೆ ಸಲಹಾ ಸಮಿತಿಯ ಸಭೆಯನ್ನು ಕರೆಯುವ ಪದ್ಧತಿ ಇದ್ದು, ಅದನ್ನು ಉಲ್ಲಂಘಿಸಿದ್ದಾರೆ. ರಾಜ್ಯದಿಂದ ೦೮ ಡೆತ್ ಫ್ರೀಜರ್‌ಗಳನ್ನು ತಾಲೂಕುವಾರು ವಿತರಿಸಲು ರಾಜ್ಯ ವಕ್ಫ್‌ ಬೋರ್ಡ್‌ನಿಂದ ಹಾಸನ ಜಿಲ್ಲಾ ವಕ್ಫ್‌ ಬೋರ್ಡ್‌ಗೆ ಬಂದಿರುತ್ತದೆ ಎಂದರು.
ಕನ್ನಡ ಶಾಲೆಗಳಿಗೆ ದಾನಿಗಳ ಸಹಕಾರ ಶ್ಲಾಘನೀಯ
ಗೋಶಾಲೆಯಲ್ಲಿ ಸೇವೆ ಮತ್ತು ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ಕೊಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಹೆಸರನ್ನು ಹೇಳಲು ಇಚ್ಛಿಸದ ದಾನಿಗಳಿಗೆ ಅಭಿನಂದನೆಗಳು ಎಂದು ಸಿಆರ್‌ಪಿ ವಿಷ್ಣುವರ್ಧನ್ ಹೇಳಿದರು. ಕಲಿಕಾ ಉಪಕರಣಗಳನ್ನು ಕೊಟ್ಟಿರುವ ಹೆಸರು ಹೇಳಲಿಚ್ಛಿಸದ ದಾನಿಗಳು ಒಂದು ಗೋವಿನ ನಿರ್ವಹಣೆಯ ದತ್ತು ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಮನೆಗಳ ಶುಭ ಕಾರ್ಯಗಳಲ್ಲಿ ಮತ್ತು ಹುಟ್ಟುಹಬ್ಬದ ನೆನಪಿನಲ್ಲಿ ಗೋ ಶಾಲೆಗೆ ಬಂದು ಗೋವುಗಳಿಗೆ ಸೇವೆ ಸಲ್ಲಿಸಬಹುದು ಎಂದರು.
ರೈತ ಸಂಘದಿಂದ ೨೬ರಂದು ರಸ್ತೆತಡೆ
ಹಳೇಬೀಡು ಹೋಬಳಿ ಐದಳ್ಳ ಕಾವಲು ಸರ್ವೆ ನಂ. ೧ರ ೨೬೮೦ ಎಕರೆ ಭೂಮಿಗೆಂದು ಅರ್ಜಿ ಸಲ್ಲಿಸಿದ ರೈತರಿಗೆ ನೀಡುವುದು ಸೇರಿದಂತೆ ೪೦ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜನವರಿ ೨೬ ರಂದು ಬೇಲೂರಿಗೆ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ಹಾಸನ-ಚಿಕ್ಕಮಗಳೂರು ರಸ್ತೆತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರಮುಖಬೀದಿಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಅಂದಿನ ಗಣರಾಜ್ಯೋತ್ಸವದ ಅಂಗವಾಗಿ ಭಾರತಾಂಬೆ ಮತ್ತು ಅಂಬೇಡ್ಕರ್‌ ಭಾವಚಿತ್ರದೊಂದಿಗೆ ರಸ್ತೆತಡೆ ಚಳವಳಿ ನಡೆಸಲು ಮುಂದಾಗುವುದಾಗಿ ತಿಳಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved