• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗಳಿಗೆ ನುಗ್ಗಿದ ಮಳೆನೀರು
ಅರಸೀಕೆರೆ ನಗರದಲ್ಲಿ ಸುರಿದ ಮಳೆಗೆ ಐದು ಮನೆಗಳಿಗೆಸಂಪೂರ್ಣ ಹಾನಿಯಾಗಿ ಹತ್ತಾರು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಎರಡನೇ ವಾರ್ಡಿನಲ್ಲಿ ಐದು ಮನೆಗಳು ಕುಸಿದಿದ್ದು ಘಟನಾಸ್ಥಳಕ್ಕೆ ನಗರಸಭೆ ಅಧ್ಯಕ್ಷ ಎಂ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ ಮೇಸ್ತ್ರಿ, ಆರ್‌ ಐ ಶಿವಾನಂದ್ ನಾಯ್ಕ ನಗರಸಭೆಯ ಎಇಇ ಸುನಿಲ್, ವಾರ್ಡಿನ ಸದಸ್ಯರಾದ ಕಲೈಅರಸೀ ಸುಧಾಕರ್ ಸೇರಿದಂತೆ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹರಿಯಾಣದಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ಸಂಭ್ರಮಾಚರಣೆ
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು.
ಕೆಂಪು ಸೀರೆ ಉಟ್ಟ ಕೋರ್ಟ್ ಮಹಿಳಾ ಸಿಬ್ಬಂದಿ
ಹೊಳೆನರಸೀಪುರ ಪಟ್ಟಣದ ನ್ಯಾಯಾಲಯದ ಮಹಿಳಾ ನೌಕರರು ಶರನ್ನವರಾತ್ರಿ ಆಚರಣೆಯ ೬ನೇ ದಿನವಾದ ಮಂಗಳವಾರ ಕೆಂಪು ಬಣ್ಣದ ಪ್ರತೀಕವಾಗಿ ಕೆಂಪು ಬಣ್ಣದ ಸೀರೆಯನ್ನು ತೊಟ್ಟು ಸಂಭ್ರಮಿಸಿದರು. ಶರನ್ನವರಾತ್ರಿಯ ೬ನೇ ದಿನವಾದ ಮಂಗಳವಾರ ನ್ಯಾಯಾಲಯದ ಮಹಿಳಾ ನೌಕರರು ಕೆಂಪು ಬಣ್ಣದ ಸೀರೆಯ ತೊಟ್ಟು ಭಾರತೀಯ ಸಂಸ್ಕೃತಿಯ ಪಾಲನೆಯಲ್ಲಿ ಮಹಿಳೆಯರ ಪಾತ್ರ ಹಾಗೂ ಕೆಲಸದ ಒತ್ತಡದಲ್ಲೂ ತೊಡಗಿಸಿಕೊಳ್ಳುವ ಮನಸ್ಥಿತಿ ಮತ್ತು ಆಚರಣೆಗಳಿಗೆ ಅವರು ನೀಡುವ ಗೌರವಕ್ಕೆ ಸಾಕ್ಷಿಯಾಗಿದೆ.
ಪಟಾಕಿ ವ್ಯಾಪಾರಿಗಳಿಗೆ ಎಎಸ್ಪಿ ವೆಂಕಟೇಶ್‌ ನಾಯ್ಡು ಮುಂಜಾಗ್ರತೆ ಪಾಠ
ಪಟಾಕಿ ಮಾರಾಟದ ವೇಳೆ ಉಂಟಾಗುವ ಅವಘಡದಿಂದ ಹೇಗೆ ರಕ್ಷಣೆ ಪಡೆಯಬೇಕು ಎನ್ನುವ ಬಗ್ಗೆ ಪಟಾಕಿ ವ್ಯಾಪಾರಸ್ಥರಿಗೆ ಹಮ್ಮಿಕೊಳ್ಳಲಾಗಿದ್ದ ಅಗ್ನಿ ಶಮನ ಉಪನ್ಯಾಸ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ನಾಯ್ಡು ತಿಳಿಸಿಕೊಟ್ಟರು. ಪಟಾಕಿ ವ್ಯಾಪಾರ ಮಾಡುವವರಿಗೆ ಅಧಿಕಾರಿಗಳು ನಮಗೆ ಯಾವ ರೀತಿ ಸಹಕಾರ ಕೊಟ್ಟಿರುವುದಿಲ್ಲ ಎನ್ನುವ ಮಾತು ಬರಬಾರದು ಎಂದು ಇಂತಹ ಜಾಗೃತಿ ಕಾರ್ಯಾಗಾರ ನಡೆಸಿ ನಿಮಗೆ ಶಾಶ್ವತವಾದ ಒಂದು ಸರ್ಟಿಫಿಕೆಟನ್ನು ವಿತರಣೆ ಮಾಡುವ ನಿರ್ಧಾರ ಮಾಡಲಾಗಿದೆ.
ಪೋಷಣ್‌ ಅಭಿಯಾನದ ಸದುಪಯೋಗ ಮಾಡಿಕೊಳ್ಳಬೇಕು
ಹಿಂದಿನ ಪೀಳಿಗೆಯ ಉತ್ತಮ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯು ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದರಿಂದ ಮಕ್ಕಳ ಮೇಲೆ ನೇರ ಪ್ರಭಾವ ಬೀರಿ ಮೇಲಿಂದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಯಾವುದಾದರೊಂದು ರಸ್ತೆಗೆ ಕಸಾಪ ಮಾಜಿ ಅಧ್ಯಕ್ಷ ಹನುಮಂತೇಗೌಡರ ಹೆಸರಿಡಲು ಹಾಸನದಲ್ಲಿ ಅಭಿಮಾನಿಗಳ ಒತ್ತಾಯ
ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷರಾದ ಮಾ. ಹನುಮಂತೇಗೌಡ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ಇಡಲಾಗಿತ್ತು. ಈ ಸಂದರ್ಭದಲ್ಲಿ ಹನುಮಂತೇಗೌಡರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.
ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣ ಸಾವು
ಧಾರಾಕಾರ ಮಳೆ, ಗಾಳಿಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಲ್ಲುಸಾದರಹಳ್ಳಿ ಬಳಿ ನಡೆದಿದೆ. ಕಲ್ಲು ಸಾಗರಹಳ್ಳಿ ರೈತರೊಬ್ಬರ ಜಮೀನಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಏಳು ವರ್ಷದ ಒಂದು ಹೆಣ್ಣು ಹಾಗು ಒಂದು ಗಂಡು ಕರಡಿ ಮತ್ತು ಮರಿ ಸೇರಿ ಮೂರು ಮೂಕ ಪ್ರಾಣಿಗಳು ಸಾವನ್ನಪ್ಪಿವೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯ ತಾವೇ ಎಚ್ಚರಿಸಿಕೊಳ್ಳಬೇಕು: ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ
ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯನ್ನು ತಾವೇ ಎಚ್ಚರಿಸಿಕೊಳ್ಳುವ ಗುಣ ಬೆಳೆಸಿಕೊಂಡರೇ ಮುಂದೆ ಹೆಚ್ಚಿನ ಸಾಧನೆ ಮಾಡುವ ಅವಕಾಶ ಸಿಗುತ್ತದೆ ಎಂದು ಭಾರತ ಮತ್ತು ಪ್ರಚಾರ ಸಚಿವಾಲಯ ಮೈಸೂರಿನ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ ತಿಳಿಸಿದರು. ಹಾಸನದಲ್ಲಿ ದೇವಾಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆಲಸದ ಒತ್ತಡ ಕಡಿಮೆ ಮಾಡಲು ಗ್ರಾಮ ಪಂಚಾಯತ್‌ ನೌಕರರ ಪ್ರತಿಭಟನೆ
ಗ್ರಾಮ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ನೌಕರರು ಸರ್ಕಾರದ ಬಹುತೇಕ ಸವಲತ್ತುಗಳನ್ನು ಹಾಗೂ ಅರ್ಜಿಗಳನ್ನು ಮೊಬೈಲ್‌ ಆ್ಯಪ್‌ ಮೂಲಕವೇ ಜನರಿಗೆ ತಲುಪಿಸಬೇಕಿದ್ದು, ಇದರಿಂದ ಕೆಲಸದ ಒತ್ತಡ ಹೆಚ್ಚುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಪಂಚನೌಕರರ ಸಹಯೋಗದಲ್ಲಿ ಆರ್‌ಡಿಪಿಆರ್‌ ಕುಟುಂಬದಿಂದ ಮಂಗಳವಾರ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದರು.
ಸಕಲೇಶಪುರದ ವಾಣಿಜ್ಯ ಮಳಿಗೆಗಳ ಹರಾಜಿನಲ್ಲಿ ಭಾರಿ ಷಡ್ಯಂತ್ರ ಆರೋಪ
ಸಕಲೇಶಪುರ ತಾಲೂಕಿನ ಆನೇಮಹಲ್ ಗ್ರಾಮ ಪಂಚಾಯತ್ ಆಡಳಿತ ಬುಧವಾರ ನಡೆಸಲು ಉದ್ದೇಶಿಸಿರುವ ಹರಾಜಿನಲ್ಲಿ ಭಾರಿ ಷಡ್ಯಂತ್ರ ಅಡಗಿದೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 418
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
ಭಿಕ್ಷುಕ ಪಾಕ್‌ ಸಾಲಕ್ಕೆ ಐಎಂಎಫ್‌ 50 ಷರತ್ತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved