• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರ ಪುರಸಭೆ ಹರಾಜಿನಲ್ಲಿ ಭ್ರಷ್ಟಾಚಾರ
ಸಕಲೇಶಪುರ ಪುರಸಭೆಯ ಕೆಲವು ಸದಸ್ಯರು ಜನಸಾಮಾನ್ಯರ ಸಮಸ್ಯೆಯನ್ನು ಸರಿಪಡಿಸದೇ ಸರ್ಕಾರದ ಸುತ್ತೋಲೆಯನ್ನೇ ಧಿಕ್ಕರಿಸಿರುವುದು ಜಗಜ್ಜಾಹೀರಾತಾಗಿದೆ ಹಾಗೂ ಪುರಸಭೆಯ ಅಧಿಕಾರಿಗಳು ಅಲ್ಲಿನ ಸದಸ್ಯರು ಹಾಸನ ಜಿಲ್ಲಾಧಿಕಾರಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಸದಸ್ಯರು ಪ್ರತಿನಿತ್ಯ ಸಾರ್ವಜನಿಕರಿಂದ ಹಣವನ್ನು ಪಡೆದು ಎಗ್ಗಿಲ್ಲದೆ ಬಕಪಕ್ಷಿಗಳಂತೆ ಸಾರ್ವಜನಿಕರ ರಕ್ತವನ್ನು ಹೀರುತ್ತಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ಆಗ್ರಹಿಸಿದರು.
ಸಾಧಕರ ಪಟ್ಟಿಯಲ್ಲಿ ಮಹಿಳೆ ಅಗ್ರಗಣ್ಯ ಸ್ಥಾನ ಪಡೆಯಬೇಕು
ಆಧುನಿಕ ಯುಗದಲ್ಲಿ ಮಹಿಳೆ ಸಾಕಷ್ಟು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ಧಾಳೆ. ದೇಶದ ಸಾಧಕರ ಪಟ್ಟಿಯಲ್ಲಿ ಮಹಿಳೆ ಅಗ್ರಗಣ್ಯ ಸ್ಥಾನ ಪಡೆಯಬೇಕು ಎಂದು ಚಲನಚಿತ್ರ ಹಿರಿಯ ನಟಿ ಸುಧಾರಾಣಿ ಅಭಿಪ್ರಾಯಪಟ್ಟರು. ನಾಲ್ಕೈದು ದಶಗಳ ಹಿಂದೆ ಪ್ರತಿ ಕುಟುಂಬ ಒಂದು ಗಂಡು ಮಗು ಬೇಕು ಎನ್ನುತ್ತಿದ್ದರು, ಈಗ ಕಾಲ ಬದಲಾಗಿದೆ ಹೆಣ್ಣಾಗಲಿ ಗಂಡಾಗಲಿ ಒಂದು ಮಗುವನ್ನು ಪಡೆದು ಉತ್ತಮ ಶಿಕ್ಷಣ ಕೊಡಿಸಿ ದೇಶಕ್ಕೆ ಉತ್ತಮ ಪ್ರಜೆ ಮಾಡುವುದರೊಂದಿಗೆ ಕುಟುಂಬ ನಿರ್ವಹಣೆ ಜವಾಬ್ದಾರಿಯನ್ನು ಕಲಿಸುತ್ತಿದ್ದಾರೆ ಎಂದರು.
ನಡುರಾತ್ರಿ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಸುರೇಶ್‌
ಕಾಡಾನೆಯಿಂದ ಮೃತಪಟ್ಟ ಕೋಗೋಡು ಗ್ರಾಮದ ಮಹಿಳೆ ಸುಶೀಲಮ್ಮ ಕುಟುಂಬಕ್ಕೆ ಶಾಸಕ ಎಚ್. ಕೆ. ಸುರೇಶ್ ನಡುರಾತ್ರಿ ಸ್ಥಳಕ್ಕೆ ಆಗಮಿಸಿ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಇನ್ನು ಮುಂದೆ ಕ್ಷೇತ್ರದಲ್ಲಿ ಒಂದೇ ಒಂದು ಆನೆಯ ದಾಳಿಗೆ ಸಾವನ್ನಪ್ಪಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳೆ ಹೊಣೆಯಾಗುತ್ತಾರೆ. ಅಂದು ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾರೂ ಸಹ ಭಯಪಡದೆ ನಗುಮುಖದಿಂದ ಇರಿ ಎಂದು ಸೂತಕದ ಮನೆಯಲ್ಲಿ ಸಂಸದರು ಹೇಳುವುದು ಎಷ್ಟು ಸರಿ. ನಾಲ್ಕು ಪುಂಡಾನೆಗಳನ್ನು ಹಿಡಿದರೆ ಸಾಲದು ಇಲ್ಲಿರುವ ೭ಕ್ಕೂ ಹೆಚ್ಚು ಪುಂಡಾನೆಗಳನ್ನು ಹಿಡಿಯಬೇಕು ಉಳಿದ ಕಾಡಾನೆಗಳನ್ನು ಭದ್ರಾ ಅರಣ್ಯಕ್ಕೆ ಕಳಿಸುವ ಕೆಲಸ ಮಾಡಬೇಕು ಎಂದರು.
ವಿದ್ಯುತ್‌ ತಂತಿಬೇಲಿ ತಗುಲಿ ಗಂಡಾನೆ ಸಾವು
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿ ನೆಲಬಳ್ಳಿ ಗ್ರಾಮದ ವೆಂಕಟೇಗೌಡ ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿ ತಗುಲಿ ಗಂಡಾನೆ ಸಾವನ್ನಪ್ಪಿದೆ. ಶುಕ್ರವಾರ ರಾತ್ರಿ ಮರಿಯೊಂದಿಗೆ 2 ಆನೆಗಳು ನೆಲಬಳ್ಳಿ ಗ್ರಾಮದ ಸುತ್ತ ಮುತ್ತ ಆಹಾರವನ್ನು ಅರಸಿ ಸುತ್ತಾಡಿ ಹಲವು ಬೆಳೆಗಳನ್ನು ನಾಶಗೊಳಿಸಿದ್ದವು. ಇದೇ ಗ್ರಾಮದ ಪ್ರಕಾಶ್ ಎಂಬುವವರ ತೋಟದಲ್ಲಿ 80ಕ್ಕು ಅಧಿಕ ಅಡಿಕೆ ಗಿಡಗಳನ್ನು ಧ್ವಂಸಗೊಳಿಸಿವೆ. ಮೂರು ನಾಲ್ಕು ದಿನಗಳಿಂದ ಬೈಸೂರು ಅರಣ್ಯದಲ್ಲಿ ಬೀಡುಬಿಟ್ಟಿದ್ದ ಆನೆಗಳ ಗುಂಪಿನ ಗಂಡಾನೆ ಇಂದು ಬೆಳಗಿನ ಜಾವ ಗೆಣಸು ಹೊಲದಲ್ಲಿ ಸಾವನ್ನಪ್ಪಿದೆ.
ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ
ಪಾಶ್ಚಿಮಾತ್ಯ ದೇಶಗಳ ಉಡುಗೆ ತೊಡುಗೆ ಹಾಗೂ ಇತರೆ ಕಾರಣಗಳಿಗೆ ಆಕರ್ಷಿತರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಗುರು, ಹಿರಿಯರು, ತಂದೆ, ತಾಯಿ ಮತ್ತು ಪೋಷಕರಿಗೆ ಹಿಂದಿನಂತೆ ಗೌರವ ಕೊಡುವುದಿಲ್ಲ ಎಂದು ದೊಡ್ಡಕಾಡನೂರು ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಚೌಡಯ್ಯ ಕಟ್ನವಾಡಿ ಆತಂಕ ವ್ಯಕ್ತಪಡಿಸಿದರು. ಶಿಬಿರಗಳಲ್ಲಿ ವಿದ್ಯಾರ್ಥಿಗಳು ಬಹಳಷ್ಟು ವಿಷಯಗಳನ್ನು ಕಲಿಯಲು ಅವಕಾಶವಿದೆ ಮತ್ತು ಇಲ್ಲಿ ಕಲಿತಂತಹ ವಿಷಯಗಳನ್ನು ತಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾಡಾನೆಗಳಿಂದ ಮಾನವನ ಸಾವಾಗದಂತೆ ಕ್ರಮ ಕೈಗೊಳ್ಳಿ
ಅರಣ್ಯ ಇಲಾಖೆ ಕಾಡಾನೆ ದಾಳಿಯಿಂದ ಮಾನವನ ಸಾವುಗಳು ಆಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸರ್ಕಾರ ಹಲವು ತಂತ್ರಜ್ಞಾನಗಳನ್ನು ಕಾಡಾನೆ ನಿಯಂತ್ರಣಕ್ಕೆ ಬಳಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ನಿಯಂತ್ರಣಕ್ಕೆ ಇರುವ ಸಿಬ್ಬಂದಿ ಸಹ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದು, ಇವರಿಗೂ ಸಹ ಯಾವುದೇ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಸರ್ಕಾರ ಸರಿಯಾದ ಸಲಕರಣೆಗಳನ್ನು ನೀಡಬೇಕು ಹಾಗೂ ಸೂಕ್ತ ಸಂಬಳ ನೀಡಬೇಕು. ಈ ನಿಟ್ಟಿನಲ್ಲಿ ನಾನು ಅಧಿವೇಶನದಲ್ಲಿ ಪ್ರಸ್ತಾವನೆ ಮಾಡುತ್ತೇನೆ ಎಂದರು.
ತ್ಯಾಜ್ಯದ ಪುನರ್ ಬಳಕೆಗೆ ಮುಂದಾದ ನಗರಸಭೆ
ಸಂಗ್ರಹವಾಗುವ ತ್ಯಾಜ್ಯವನ್ನು ಹಸಿ ಮತ್ತು ಒಣ ಕಸವೆಂದು ಪ್ರತ್ಯೇಕವಾಗಿ ವಿಂಗಡಿಸಿ ಹಸಿ ಕಸವನ್ನು 60 ದಿನಗಳ ಕಾಲ ಒಂದೆಡೆ ಸಂಗ್ರಹಿಸಿ ನಂತರ ಈ ಕಸವನ್ನು ಈಗಾಗಲೇ 70 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಯಂತ್ರೋಪಕರಣಗಳ ಸಹಕಾರದಿಂದ ಸಾವಯವ ಗೊಬ್ಬರವನ್ನು ತಯಾರಿಸಿ ರೈತರಿಗೆ ರಿಯಾಯಿತಿ ದರದಲ್ಲಿ ಮಾರುವ ಸಂಕಲ್ಪ ನಗರಸಭೆಯದ್ದಾಗಿದೆ. ನಿತ್ಯ ನಗರದಲ್ಲಿ ಹತ್ತಾರು ಟನ್ ಗಳಷ್ಟು ಸಂಗ್ರಹವಾಗುವ ತ್ಯಾಜ್ಯವನ್ನು ಪುನರ್ ಬಳಕೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಎಪಿಎಂಸಿ ವರ್ತಕರ ಸಮಸ್ಯೆ ಪರಿಹರಿಸುವೆ
ಕೆಲ ವರ್ತಕರು ಇಲ್ಲಿನ ಮಳಿಗೆಯನ್ನು ಬೇರೆಯವರಿಗೆ ಬಾಡಿಗೆ ನೀಡುತ್ತಿದ್ದಾರೆ. ಇನ್ನು ಅರ್ಹರಿಗೆ ಮಳಿಗೆ ಸಿಗುತ್ತಿಲ್ಲ ಎಂದು ದೂರಿದರು. ಎಲ್ಲವನ್ನು ಆಲಿಸಿ ನಂತರ ಎಪಿಎಂಸಿ ಕಚೇರಿಯಲ್ಲಿ ವರ್ತಕರ ಜೊತೆ ಸಭೆ ನಡೆಸಿ ಸಲಹೆ ಸೂಚನೆ ಮತ್ತು ಆಗಬೇಕಾಗಿರುವ ಅಭಿವೃದ್ಧಿ ಕೆಲಸದ ಬಗ್ಗೆ ತಿಳಿಸಿದರು. ಇಡೀ ಜಿಲ್ಲೆಯಿಂದ ಮುಖ್ಯ ವ್ಯಾಪಾರ ಸ್ಥಳವಾದ ಈ ಸ್ಥಳಕ್ಕೆ ಬರುತ್ತಾರೆ. ಇಲ್ಲಿ ಜಾಗ ಕಿರಿದಾಗಿದೆ. ಮಳಿಗೆಗಳ ಸಮಸ್ಯೆಯಿದೆ. ಈ ಬಗ್ಗೆ ಪರಿಶೀಲಿಸಿ ಮುಂದೆ ಏನೇನು ಕ್ರಮ ತೆಗೆದುಕೊಳ್ಳಬಹುದು ಚರ್ಚಿಸಲಾಗಿದ್ದು, ಮುಂದೆ ಹಂತಹಂತವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಎಚ್‌ಪಿವಿ ಚುಚ್ಚುಮದ್ದು ನೀಡಿ
ಮಹಿಳಾ ಸಬಲೀಕರಣ ಉತ್ತೇಜಿಸುವ ದೃಷ್ಠಿಯಿಂದ ರಾಷ್ಟ್ರ ಹಾಗೂ ರಾಜ್ಯ ಸರ್ಕಾರಗಳು ಗರ್ಭಕೋಶದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ ಎಚ್‌ಪಿವಿ ಚುಚ್ಚುಮದ್ದನ್ನು ಉಚಿತವಾಗಿ ನೀಡಲೇಬೇಕಿದೆ. ಕುಟುಂಬದಲ್ಲಿ ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆ ಬಹುಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಉತ್ತಮ ನಿರ್ಧಾರ ಕೈಗೊಂಡು ಚುಚ್ಚುಮದ್ದು ಕೊಡಿಸಲೇಬೇಕು ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಒತ್ತಾಯಿಸಿದರು.
ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಂದು ಬಲಿ
ಮಹಿಳೆಯು ತಮ್ಮ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ 12 ಗಂಟೆಯ ಸಮಯದಲ್ಲಿ ತಮ್ಮ ಮನೆಯ ಹಿಂದಿನ ಕಾಫಿ ತೋಟದಲ್ಲಿ ಕೆಲಸವನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿ ಸೊಂಡಿಲಿನಿಂದ ಎತ್ತಿ ಬಿಸಾಡಿ ತಲೆಯ ಮೇಲೆ ಹೆಜ್ಜೆಯನ್ನಿಟ್ಟು ತುಳಿದು ಬಿಸಾಕಿದೆ. ಈಗಾಗಲೇ ಕಳೆದ ತಿಂಗಳಿನಲ್ಲಿ ಕಾಡಾನೆ ದಾಳಿಯಿಂದ 3 ಅಮಾಯಕರು ಸಾವನ್ನಪ್ಪಿದ್ದು ನಾಲ್ಕನೇ ಸಾವು ಸಂಭವಿಸಿದೆ. ಕಾಡಾನೆ ದಾಳಿಯಿಂದ ಬೆಳೆ ಹಾನಿ ಹಾಗೂ ಪ್ರಾಣ ಹಾನಿ ಬಗ್ಗೆ ನಿರಂತರ ಹೋರಾಟ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved