• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು
ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು, ದೇಶಕ್ಕೆ ಸತ್ಪ್ರಜೆಯಾಗಬಲ್ಲರು, ಜೀವನದಲ್ಲಿ ಯಶಸ್ಸು ಗಳಿಸುವರು. ಏಕೆಂದರೆ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖವಿದ್ದಂತೆ, ಕ್ರೀಡಾಪಟುಗಳು ಮಾತ್ರ ಅದನ್ನು ಸಮನಾಗಿ ಸ್ವೀಕರಿಸುವರು. ಧರ್ಮ, ಜಾತಿ ಭೇದ ಇಲ್ಲದೆ ಇರುವುದು ಕ್ರೀಡೆಯಲ್ಲಿ ಮಾತ್ರ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ತಂದೆತಾಯಿ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಡುತ್ತಾರೆ, ಅವರ ತ್ಯಾಗಗಳಿಗೆ ಮಕ್ಕಳು ಸಾರ್ಥಕತೆಯನ್ನು ನೀಡಬೇಕು, ಆ ದೃಷ್ಟಿಯಲ್ಲಿ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವನ್ನು ದೃಢಶಕ್ತಿ ಮತ್ತು ದೃಢಸಂಕಲ್ಪದಿಂದ ರೂಪಿಸಿಕೊಳ್ಳಬೇಕು ಎಂದರು.
ನವಿಲೆ ನಾಗೇಶ್ವರ ಕ್ಷೇತ್ರದಲ್ಲಿ 5 ಕೋಟಿ ವೆಚ್ಚದಲ್ಲಿ ನೂತನ ಕಲ್ಯಾಣ ಮಂಟಪ
ಬಾಗೂರು ಹೋಬಳಿಯ ನವಿಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ನಾಗೇಶ್ವರ ಸನ್ನಿಧಿಯಲ್ಲಿ ಸುಮಾರು 5 ಕೋಟಿ ರು. ವೆಚ್ಚದಲ್ಲಿ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೋಬಳಿಯ ನವಿಲೆ ನಾಗೇಶ್ವರ ಸನ್ನಿಧಿಯಲ್ಲಿ ದೇವಾಲಯ ಆಡಳಿತ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದ್ಯ ದೇವಾಲಯದ ಬ್ಯಾಂಕ್ ಖಾತೆಯಲ್ಲಿ ಸುಮಾರು 2 ಕೋಟಿ ಹಣವಿದ್ದು, ಈ ಹಣದಲ್ಲಿ ನೂತನ ಕಲ್ಯಾಣ ಮಂಟಪದ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.
ಶೀತಲಗೃಹ ನಿರ್ಮಾಣಕ್ಕೆ ಶಾಸಕ ಸ್ವರೂಪ್‌ ಗುದ್ದಲಿಪೂಜೆ
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕದೆ ಇದ್ದಾಗ ಅವುಗಳ ಶೇಖರಣೆ ಮಾಡಲು ಹಳೆಯ ಶೀತಲಗೃಹ ನಿರ್ಮಾಣಗೊಂಡಿರುವುದರಿಂದ ೨೦೦೦ ಮೆಟ್ರಿಕ್ ಟನ್ ಸಾಮರ್ಥ್ಯವುಳ್ಳ ದೊಡ್ಡ ಮಟ್ಟದ ಶೀತಲಗೃಹ ಗೃಹ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅವರು ತಿಳಿಸಿದ್ದಾರೆ. ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು. ಈ ಶೀತಲಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ ಎಂದರು.
ರಸ್ತೆ ಸುರಕ್ಷತಾ ಅರಿವು ಕುರಿತು ಜಾಥಾ
ಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು.
ನಾಳೆಯಿಂದ ರಾಜ್ಯಮಟ್ಟದ ಮಹಿಳಾ ಕ್ರಿಕೆಟ್‌ ಪಂದ್ಯಾವಳಿ
ವಿಜಯನಗರದಲ್ಲಿರುವ ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ ಆವರಣದಲ್ಲಿ ಟೈಮ್ಸ್ ಗ್ರೂಪ್ ಆಫ್ ಇನ್ಟಿಟ್ಯೂಟ್ ಸಂಯುಕ್ತಾಶ್ರಯದಲ್ಲಿ ಜ.೨೨ರಿಂದ ಜ.೨೬ರವರೆಗೂ ರಾಜ್ಯ ಮಟ್ಟದ ಲೆದರ್ ಬಾಲ್ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ ಹಮ್ಮಿಕೊಳ್ಳಲಾಗಿದೆ ಎಂದು ಟೈಮ್ಸ್ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ತಿಳಿಸಿದರು. ಈ ಕ್ರೀಡೆಗೆ ರಾಜ್ಯದ ವಿವಿಧ ಭಾಗಗಳಿಂದ ಎಂಟು ತಂಡಗಳು ಭಾಗವಹಿಸಲಿದೆ. ಮೈಸೂರಿನಿಂದ ಇಂದು ತಂಡ, ಬೆಂಗಳೂರಿನಿಂದ ಎರಡು ತಂಡ, ಹಾಸನದಿಂದ ಒಂದು ತಂಡ, ಶಿವಮೊಗ್ಗ ಒಂದು, ಹುಬ್ಬಳಿಯಿಂದ ಹಾಗೂ ವಿಜಯಪುರ, ಬ್ರಹ್ಮಾವರದಿಂದ ಒಂದೊಂದು ತಂಡ ಪಾಲ್ಗೊಳ್ಳಲಿದೆ ಎಂದರು.
ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ನೀಡಿ
ಪ್ರಸ್ತುತ ಮಕ್ಕಳು ಮೊಬೈಲ್ ಪೀಡಿತರಾಗುತ್ತಿದ್ದು, ಇದರಿಂದ ಕಣ್ಣಿನ ದೃಷ್ಠಿ ಸಮಸ್ಯೆ ಜೊತೆಗೆ ತನ್ನ ಭವಿಷ್ಯವನ್ನೇ ಹಾಳು ಮಾಡುವ ಪರಿಸ್ಥಿತಿಗೆ ಬರುತ್ತಿದೆ. ಅದನ್ನು ತಪ್ಪಿಸಿ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ಪದ್ಮಶ್ರೀ ಪುರಸ್ಕೃತೆ ಡಾ. ಜೋಗತಿ ಮಂಜಮ್ಮ ಸಲಹೆ ನೀಡಿದರು. ವಿದ್ಯೆ ಎಂಬ ಸಂಸ್ಕಾರ ಕೊಟ್ಟಾಗ ಮಾತ್ರ ಮಕ್ಕಳು ಸುಸಂಸ್ಕೃತರಾಗಲು ಸಾಧ್ಯ. ಶಾಲೆಯ ಶಿಕ್ಷಕರ ಜೊತೆಗೆ ಮನೆಯಲ್ಲೂ ಕೂಡ ಗುರು ಹಿರಿಯರನ್ನ ಗೌರವಿಸುವ ಉತ್ತಮ ಸಂಸ್ಕಾರವನ್ನು ನೀಡಬೇಕೆಂದರು.
ಅಧ್ಯಕ್ಷನಾಗಿ ಪ್ರಾಮಾಣಿಕ ಸೇವೆ ಸಂತಸ ತಂದಿದೆ ನಾರಾಯಣ ಸ್ವಾಮಿ
ಮೂರು ವರ್ಷಗಳ ಅವಧಿಯಲ್ಲಿ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಸ್ವತ್ತು ಹಲವು ವರ್ಷಗಳಿಂದ ಒತ್ತುವರಿಯಾಗಿದ್ದ ಜಾಗಗಳನ್ನು ಸರ್ವೆ ಮಾಡಿಸಿ ಉಚ್ಚ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿ ಜಾಗವನ್ನು ದೇವಸ್ಥಾನಕ್ಕೆ ಉಳಿಸಿಕೊಟ್ಟ ತೃಪ್ತಿ ತಮಗೆ ಹಾಗೂ ದೇಗುಲ ಸಮಿತಿಯ ಸದಸ್ಯರಿಗಿದೆ ಎಂದು ವೈದ್ಯ ನಾರಾಯಣಸ್ವಾಮಿ ಹೇಳಿದರು. ಬೇಲೂರಿನ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ತಲೆನೋವಾಗಿದ್ದ ಪಾರ್ಕಿಂಗ್ ಸಮಸ್ಯೆಯನ್ನು ಆಲಿಸಿ ಸ್ಥಳ ಕಲ್ಪಿಸಿ ವಾಹನಗಳನ್ನು ನಿಲ್ಲಿಸಲು ಅನುಕೂಲ ಮಾಡಿರುವೆ ಎಂದರು.
ಶಿಕ್ಷಣದೊಂದಿಗೆ ಸಾಮಾನ್ಯ ಜ್ಞಾನವೂ ಅಗತ್ಯ
ಮಕ್ಕಳಿಗೆ ಆಸ್ತಿ ಮಾಡಬೇಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡಿ. ಒಳ್ಳೆಯ ವಾತಾವರಣ ಇರುವ ಶಾಲೆ, ಪ್ರೋತ್ಸಾಹ ನೀಡುವ ಪೋಷಕರು, ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಶಿಕ್ಷಕರು ಒಂದೆಡೆ ಸೇರಿದರೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು. ಅವರು ನಗರದ ಕನ್ನಿಕಾ ಆಂಗ್ಲ ಮಾಧ್ಯಮ ಶಾಲಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಅರ್ಜುನ ಸ್ಮಾರಕ ಸ್ಥಳ ಪರಿಶೀಲಿಸಿದ ಶಾಸಕ ಸಿಮೆಂಟ್‌ ಮಂಜು
ಅರ್ಜುನ ಆನೆ ಮೃತಪಟ್ಟು ವರ್ಷ ಕಳೆದರೂ ಯಾವುದೇ ಪ್ರಗತಿಯಾಗದಾಗಿದ್ದು ಈ ಪ್ರದೇಶದ ಅಭಿವೃದ್ಧಿಗೆ ಐದು ಕೋಟಿ ಅನುದಾನದ ಬೇಡಿಕೆ ಇಟ್ಟಿದ್ದೆ. ೩.೫ ಲಕ್ಷದ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಕಂಚಿನ ಪ್ರತಿಮೆ ಸ್ಥಾಪನೆ ನಮ್ಮ ಆಶಯವಾಗಿತ್ತು. ಆದರೆ, ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೇವಲ ೧೬ ಲಕ್ಷ ಬಿಡುಗಡೆ ಮಾಡಿದ್ದು ಫೈಬರ್ ಪ್ರತಿಮೆ ಸ್ಥಾಪಿಸಿದೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಓದಗಿಸದೆ ತಾರತುರಿಯಲ್ಲಿ ಉದ್ಘಾಟನೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಶಾಸಕ ಸಿಮೆಂಟ್‌ ಮಂಜು ಹೇಳಿದರು.
ಕಾರ್ಯಕರ್ತರ ವಾಗ್ವಾದಕ್ಕೆ ಸಾಕ್ಷಿಯಾದ ನಗರಸಭೆ
ನಗರಸಭೆಯ ಕಾರ್ಯ ವೈಖರಿಯನ್ನು ಖಂಡಿಸಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರು ನಗರಸಭಾ ಆವರಣದಲ್ಲಿ ಜೆಡಿಎಸ್‌ ಮುಖಂಡ ಸಂತೋಷ್‌ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಗಿರೀಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಇದನ್ನು ವಿರೋಧಿಸಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ಮತ್ತು ಅವರ ಬೆಂಬಲಿಗರು ಪ್ರಶ್ನಿಸಲು ಬಂದಾಗ ಎರಡು ಗುಂಪಿನ ನಡುವೆ ಕೈ ಕೈ ಮಿಲಾಯಿಸಿ ಪರಸ್ಪರ ಆರೋಪ ಪ್ರತ್ಯಾರೋಪ ನಡೆಸಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved