• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ಎಲೆಮರೆ ಕಾಯಿಗಳಂತೆ: ಶಿಕ್ಷಕ ಕೆ.ಜೆ.ಶಿವಲಿಂಗಯ್ಯ
ವಿದ್ಯಾದಾನ ಮಾಡುವ ಶಿಕ್ಷಕರ ಸಮೂಹ ಎಂದರೆ ಅವರು ಎಲೆಮರೆ ಕಾಯಿಗಳಂತೆ. ಯಾವುದೇ ಪ್ರಶಸ್ತಿಗೆ ನಿರೀಕ್ಷೆ ಮಾಡದೇ ತಮ್ಮ ಸೇವೆಯನ್ನು ಸಲ್ಲಿಸುತ್ತಿರುತ್ತಾರೆ ಎಂದು ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಜೆ.ಶಿವಲಿಂಗಯ್ಯ ತಿಳಿಸಿದರು. ಹಾಸನದಲ್ಲಿ ಶಿಕ್ಷಕ ಸೇವಾ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಮಾನವೀಯತೆ ಮುಖ್ಯ: ಪುಷ್ಪಗಿರಿಯ ಶ್ರೀ
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ, ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು. ಬೇಲೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ಮಾತನಾಡಿದರು.
ವಾಲಿಬಾಲ್‌: ಕಣ್ತಣಿಸಿದ ಕರ್ನಾಟಕ, ತಮಿಳುನಾಡು ಪಂದ್ಯ
ಚನ್ನರಾಯಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಆಲ್ ಇಂಡಿಯಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಮೊದಲ ಆಟವಾಡಿದ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಜನರಿಗೆ ತಮ್ಮ ಆಟದ ಮೂಲಕ ರಸದೌತಣ ನೀಡಿದವು.
ಡಿಜೆ ಸದ್ದಿಲ್ಲದ ಹೊ.ನ.ಪುರದ ಗಣಪತಿ ವಿಸರ್ಜನೆ
ಹೊಳೆನರಸೀಪುರ: ಶ್ರೀ ಮಹಾಗಣಪತಿ ಸೇವಾ ಸಮಿತಿಯು ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಯ ವಿಸರ್ಜನಾ ಮಹೋತ್ಸವದ ಉತ್ಸವ ಶನಿವಾರ ರಾತ್ರಿ ಪೊಲೀಸ್ ಬಿಗಿ ಬಂದೋಬಸ್ತು ನಡುವೆ ಪಟಾಕಿ ಪ್ರದರ್ಶನ ಹಾಗೂ ಡಿಜೆ ಸದ್ದು ಇಲ್ಲದೆ, ಯಾವುದೇ ಜೋಶ್ ಇಲ್ಲದೆ ತರಾತುರಿಯಲ್ಲಿ ನಡೆಯಿತು. ಬೆರಳೆಣಿಕೆಯಷ್ಟು ಕಲಾ ತಂಡಗಳು ಮಾತ್ರ ಪ್ರದರ್ಶನ ಮಾಡಿದವು.
ಚನ್ನರಾಯಪಟ್ಟಣದ ಶಿವನಗೌಡ ಪಾಟೀಲಗೆ ವರ್ಷದ ವ್ಯಕ್ತಿ ಪ್ರಶಸ್ತಿ
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶಿವನಗೌಡ ಪಾಟೀಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಣಘಟ್ಟ ಸುರಂಗದಲ್ಲಿ ಅಂರ್ತಜಲ ಸೋರಿಕೆ; ಆತಂಕ
ಹೊಯ್ಸಳರ ಕಾಲದ ಹಳೇಬೀಡಿನ ದ್ವಾರಸಮುದ್ರ ಕೆರೆಗೆ ಶಾಶ್ವತವಾಗಿ ನೀರು ಪೂರೈಸುವ ರಣಘಟ್ಟ ಯೋಜನೆಯಲ್ಲಿ ನಿರ್ಮಾಣವಾಗಿರುವ ಸುರಂಗದ ಒಳಾಂಗಣವನ್ನು ಕಾಂಕ್ರಿಟೀಕರಣ ಮಾಡದಿರುವುದರಿಂದ ಆ ಭಾಗದ ಅಂರ್ತಜಲ ಸೋರಿಕೆಯಾಗಿ ಆ ಭಾಗದ ರೈತರ ಕೊಳವೆಬಾವಿಗಳು ಬತ್ತಿಹೋಗುವ ಆತಂಕ ಎದುರಾಗಿದೆ.
ನವದುರ್ಗೆಯ ನವರಾತ್ರಿಯು ನವ ಜೀವನಕ್ಕೆ ನಾಂದಿ: ವಿದ್ಯಾನಗರ ಮಹಿಳಾ ಸಂಘದ ಇಂದ್ರಮ್ಮ ಸತೀಶ್ ಶರ್ಮ
ನವ ದುರ್ಗೆಯರ ಆರಾಧನೆಯ ಆಚರಣೆ ದೈಹಿಕ ಮತ್ತು ಮಾನಸಿಕ ಶಕ್ತಿ ನೀಡುವುದರೊಂದಿಗೆ ನವ ಜೀವನಕ್ಕೆ ಚೈತನ್ಯ ನೀಡುವ ದಿನಗಳಾಗಿವೆ ಎಂದು‌ ವಿದ್ಯಾನಗರ ಮಹಿಳಾ ಸಂಘದ ಗೌರವಾಧ್ಯಕ್ಷೆಯಾದ ಇಂದ್ರಮ್ಮ ಸತೀಶ್ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು. ಅರಸೀಕೆರೆಯಲ್ಲಿ ನವರಾತ್ರಿ ಮೂರನೇ ದಿನವಾದ ಶನಿವಾರ ಚಂದ್ರಘಂಟಾ ದೇವಿ ಆಚರಣೆ ಸಂದರ್ಭದಲ್ಲಿ ಮಾತನಾಡಿದರು.
ಸಂಸ್ಕಾರ ಬಾಲಧರ್ಮ ಪುಸ್ತಕ ಬಿಡುಗಡೆ
ಶ್ರೀ ಕ್ಷೇತ್ರ ಕಾಳಿಕಾಂಬ ಕರ್ಮಟೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಪ್ರತಿದಿನದಂತೆ ಬೆಳಗ್ಗೆಯಿಂದ ದೇವಿಗೆ ಪಂಚಾಮೃತ ಅಭಿಷೇಕ ಹಾಗೂ ಈ ದಿನದ ಬ್ರಹ್ಮಚಾರಿಣಿ ಅಲಂಕಾರ, ಶ್ರೀ ಗಾಯತ್ರಿ ವೈಶ್ವಕರ್ಮಣ ಹೋಮ ನೆರವೇರಿತು. ಈ ಸಮಯದಲ್ಲಿ ಅರೇಮಾದನಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪೂರ್ಣಾಹುತಿ ನೆರವೇರಿಸಿದರು. ನಂತರ ಶ್ರೀಗಳು ಸಂಸ್ಕಾರ ಬಾಲಧರ್ಮ ಪುಸ್ತಕದ ಬಿಡುಗಡೆ ಮಾಡಿದರು.
ಆನೆಗಳ ಹಾವಳಿಯಿಂದ ಲಕ್ಷಾಂತರ ರುಪಾಯಿ ನಷ್ಟ
ಬೇಲೂರು ತಾಲೂಕಿನ ಕೋಗಿಲಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊತ್ನಳ್ಳಿ ಗ್ರಾಮದಲ್ಲಿರುವ ಚೇತನ್, ಸಿ,ಗೌಡ ಎಂಬುವರಿಗೆ ಸೇರಿದ ಜೋಳದ ಹೊಲ, ಹಾಗೂ ಮನೆ ಕಾಂಪೌಂಡ್, ಗೇಟು, ನೀರಿನ ಟ್ಯಾಂಕ್, ಪೈಪ್, ಇನ್ನೂ ಮುಂತಾದ ವಸ್ತುಗಳನ್ನು ಪುಡಿ ಮಾಡಿದ್ದು, ಜೋಳ ಕಟಾವಿಗೆ ಬಂದಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಸುತ್ತಮುತ್ತ ರೈತರು ಭಯಭೀತರಾಗಿದ್ದು, ಆನೆಗಳನ್ನು ಸ್ಥಳಅಂತರಿಸಿ, ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಕೊಡಿಸಿ ಎಂದು ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 418
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved