• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ವಿಭಾಗಕ್ಕೆ ಮಟ್ಟಕ್ಕೆ ಗೊರಮಾರನಹಳ್ಳಿ ಮೊರಾರ್ಜಿ ವಿದ್ಯಾರ್ಥಿಗಳು
ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೊರಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ೧೪ ಮತ್ತು ೧೭ ವಯೋಮಿತಿ ಒಳಗಿನ ಎರಡು ತಂಡಗಳು ಪ್ರಥಮ ಸ್ಥಾನಗಳಿಸಿವೆ. ಉತ್ತಮ ಸಾಧನೆ ಮಾಡಿರುವ ಶಾಲೆಯ ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎನ್. ದೀಪಾ ಇತರರು ಅಭಿನಂದಿಸಿದ್ದಾರೆ.
ಅರಕಲಗೂಡಲ್ಲಿ ನೌಕರರ ದಸರಾ
ಕೊತ್ತಲು ಗಣಪತಿ ಉದ್ಯಾನದಲ್ಲಿ ಶನಿವಾರ ನಡೆದ ನೌಕರರ ದಸರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಉತ್ಸವದ 7 ದಿನಗಳು ವಿವಿಧ ಇಲಾಖೆಗಳ ಮೂಲಕ ವಿವಿಧ ದಸರಾವನ್ನು ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದೆ. ನೌಕರರಿಗಾಗಿಯೇ ದಸರಾ ಆಯೋಜಿಸಿದ್ದರೂ ಸರ್ಕಾರಿ ನೌಕರರು ಪಾಲ್ಗೊಳ್ಳದಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ನೌಕರರ ಸಂಘ ಎಚ್ಚರ ವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕೆ ಮಹಿಳೆ ತನ್ನ ಸಾಮರ್ಥ್ಯ ತೋರಬೇಕು
ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಶೀಲ್ದಾರ್‌ ಕೆ. ಸಿ. ಸೌಮ್ಯ ಮಾತನಾಡಿದರು. ಮಹಿಳೆಯರು ಸಾಮಾಜಿಕವಾಗಿ ನಿರಂತರ ಶೋಷಣೆಗೆ ಒಳಗಾಗುತ್ತಿದ್ದು, ಇದರಿಂದ ಮುಕ್ತರಾಗಲು ತನ್ನ ಸಾಮರ್ಥ್ಯ ಏನು ಎಂಬ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ತಹಶೀಲ್ದಾರ್‌ ಕೆ. ಸಿ. ಸೌಮ್ಯ ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ಮಹಿಳೆಯರಿಗೆ ಹೇರಳವಾದ ಅವಕಾಶಗಳು ಲಭ್ಯವಿದ್ದು ಅದನ್ನು ಸಮರ್ಥವಾಗಿ ಬಳಸಿಕೊಳ್ಳವ ಮೂಲಕ ಸಬಲತೆ ಸಾಧಿಸಬೇಕು ಎಂದರು.
ಜಿಪಂ ಮಾಜಿ ಉಪಾಧ್ಯಕ್ಷರು ನಿರ್ಮಿಸಿದ್ದ ತಡೆಗೋಡೆ ತೆರವು
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರೊಬ್ಬರು ಹಿನ್ನೀರು ನಿಲುಗಡೆ ಪ್ರದೇಶದಲ್ಲಿ ಕಲ್ಯಾಣ ಮಂಟಪ ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿದ್ದು, ೨೦೧೯ರಲ್ಲಿ ಮಳೆಗಾಲದಲ್ಲಿ ಹೇಮಾವತಿ ಪ್ರವಾಹ ಕಲ್ಯಾಣ ಮಂಟಪವನ್ನು ಆವರಿಸಿದ್ದರಿಂದ ದೊಡ್ಡ ಸಮಸ್ಯೆ ಸೃಷ್ಟಿಯಾಗಿತ್ತು. ಕಳೆದೊಂದು ವರ್ಷದಿಂದ ನದಿಗೆ ಹೊಂದಿಕೊಂಡಂತೆ ದೊಡ್ಡ ತಡೆಗೋಡೆ ನಿರ್ಮಿಸಲಾಗುತಿತ್ತು. ತಡೆಗೋಡೆ ನಿರ್ಮಾಣವಾದರೆ ನದಿ ನೀರು ಹಿಮ್ಮುಖವಾಗಿ ಚಲಿಸಿ ಪಟ್ಟಣಕ್ಕೆ ನುಗ್ಗಲಿದೆ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ವ್ಯಾಪಕವಾಗಿ ಕೇಳಿ ಬಂದಿತ್ತು. ಈ ಹಿನ್ನೆಲೆ ತಡೆಗೋಡೆಯನ್ನು ತೆರವುಗೊಳಿಸಲಾಯಿತು.
ಗ್ಯಾರಂಟಿ ಯೋಜನೆಗಳು ಪೂರ್ಣವಾಗಿ ಜನರಿಗೆ ತಲುಪಬೇಕು
ಸರ್ಕಾರದ ಪಂಚ ಗ್ಯಾರಂಟಿಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿದ್ದು ಗ್ಯಾರಂಟಿ ಯೋಜನೆಗಳನ್ನು 100ಕ್ಕೆ 100ರಷ್ಟು ಕ್ಷೇತ್ರದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು ಶ್ರಮಿಸಬೇಕು ಎಂದು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ವಿಜೃಂಭಣೆಯಿಂದ ನಡೆದ ಗಣಪತಿ ವಿಸರ್ಜನಾ ಮಹೋತ್ಸವ
ಸಾರ್ವಜನಿಕ ಸಮುದಾಯ ಭವನದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ೬೭ನೇ ವರ್ಷದ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವವು ಶಾಸಕ ಎಚ್.ಡಿ.ರೇವಣ್ಣ ಉಪಸ್ಥಿತಿಯಲ್ಲಿ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ಜರುಗಿತು. ಶ್ರೀ ಸ್ವಾಮಿಯ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿ, ಹೇಮಾವತಿ ನದಿಯಲ್ಲಿ ತೆಪ್ಪೋತ್ಸವ ನಡೆಸಿ, ಶ್ರೀಸ್ವಾಮಿಯ ಮೂರ್ತಿಯನ್ನು ವಿಸರ್ಜಿಸಲಾಯಿತು.
ನಾಗತವಳ್ಳಿಯ ಪಾರ್ಕ್‌ ಜಾಗವನ್ನು ಪಾರ್ಕ್‌ಗೇ ಮೀಸಲಿಡದಿದ್ದರೆ ಹೋರಾಟ
ಜಿಲ್ಲೆಯ ಸಂಸದರು ಹಲವರ ಹಿತ ಕಾಯುವುದರ ಬದಲು ಗ್ರಾಮಸ್ಥರ ಹಿತ ಮೊದಲು ಕಾಯಲಿ. ತಾಲೂಕಿನ ನಾಗತವಳ್ಳಿ ಗ್ರಾಮದ ಸರ್ವೆ ನಂಬರ್‌ ೫೪ ರ ೨ ಎಕರೆ ಜಾಗವನ್ನು ಪಾರ್ಕ್‌ಗಾಗಿಯೇ ಮೀಸಲಿಡಬೇಕು. ಇಲ್ಲವಾದರೇ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿದರು. ಹಿಂದೆ ಗ್ರಾಮದ ಜನರ ಅನುಕೂಲಕ್ಕೆಂದು ನಾಗತವಳ್ಳಿ ಗ್ರಾಮದ ಸರ್ವೆ ನಂಬರ್ ೫೪ರಲ್ಲಿ ೨ ಎಕರೆ ಜಾಗವನ್ನು ಮೀಸಲಿಡಲಾಗಿತ್ತು, ಆದರೆ ಕೆಐಎಡಿಬಿ ಅಧಿಕಾರಿಗಳು ಖಾಸಗಿ ಪುಷ್ಪಗಿರಿ ವೇರ್‌ಹೌಸ್ ಮಾಲೀಕನಿಗೆ ಅಕ್ರಮವಾಗಿ ಮಂಜೂರು ಮಾಡಿಕೊಟ್ಟಿದ್ದಾರೆ ಎಂದು ದೂರಿದರು.
ಗಿಡಮರಗಳನ್ನು ಬೆಳೆಸುವತ್ತ ಪ್ರತಿಯೊಬ್ಬರಿಗೂ ಒಲವು ಮೂಡಬೇಕು
ಪ್ರಕೃತಿ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರಕೃತಿಯನ್ನು ರಕ್ಷಣೆ ಮಾಡದೆ ಹೋದ ಪಕ್ಷದಲ್ಲಿ ನಾವು ಉಸಿರಾಡಲು ಉತ್ತಮ ಆಮ್ಲಜನಕ ಸಿಗದೇ ನಾವು ಮರಣ ಒಪ್ಪುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಜೊತೆಗೆ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ಬೆಳಕು, ನೀರು ಇವುಗಳು ಸಹ ಪ್ರಕೃತಿಯಲ್ಲಿ ದೊರಕದೆ ಮುಂದಿನ ಪೀಳಿಗೆಯ ನಾಶಕ್ಕೆ ನಾವು ಕೂಡ ಕಾರಣಕರ್ತರಾಗುತ್ತೇವೆ. ಆ ನಿಟ್ಟಿನಿಂದ ಪ್ರತಿಯೊಬ್ಬರೂ ಕೂಡ ಮರ ಗಿಡಗಳನ್ನು ಬೆಳೆಸುವ ಕಡೆ ಹೆಚ್ಚಿನ ಒಲವನ್ನು ತೋರಿಸಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಖಲಂದರ್ ಹೇಳಿದರು.
ಮುತ್ತೂಟ್ ಫಿನ್‌ಕಾರ್ಪ್‌ನಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ
ಮುತ್ತೂಟ್ ಪಿನ್‌ಕಾರ್ಪ್‌ ಕಚೇರಿಯಲ್ಲಿ ೧೪ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಆಯೋಜನೆ ಮಾಡಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ೩೭೫೦ ಪಿನ್‌ಕಾರ್ಪ್‌ ಸಂಸ್ಥೆಯು ಕಚೇರಿಗಳನ್ನು ತೆರೆದು, ಸಾರ್ವಜನಿಕರಿಗೆ ಬ್ಯಾಂಕಿನ ರೀತಿಯಲ್ಲಿ ಸೇವಾ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿ, ಸಂಸ್ಥೆಯ ಸೌಲಭ್ಯಗಳು ಹಾಗೂ ಜನಪರ ಕಾಳಜಿಯ ಕಾರ್ಯಗಳ ಕುರಿತು ವಿವರಿಸಿದರು. ಹಾಸನದ ಐದೃಷ್ಟಿ ಕಣ್ಣಿನ ಆಸ್ಪತ್ರೆಯ ತಾಂತ್ರಿಕ ತಂತ್ರಜ್ಞ ಮಹೇಶ್ ಅವರು ೧೦೦ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆ ನಡೆಸಿದರು.
ನ್ಯಾಯಾಧೀಶರಿಂದ ನ್ಯಾಯಾಲಯದ ಆವರಣ ಸ್ವಚ್ಛತೆ
ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ವಕೀಲರ ಸಂಘ, ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ "ಸ್ವಚ್ಛತೆಯೇ ಸಂಸ್ಕಾರ ಮತ್ತು ಸ್ವಚ್ಚತೆಯೇ ಸ್ವಭಾವ " ಎಂಬ ಘೋಷ ವಾಕ್ಯದಡಿಯಲ್ಲಿ ಸ್ವಚ್ಛತೆಯೇ ಸೇವೆ ೨೦೨೪ರ ಅಂಗವಾಗಿ ಜನಾಂದೋಲನ ಕಾರ್ಯಕ್ರಮಗಳನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿರ್ದೇಶನದನ್ವಯ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಂಡು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ನೇತೃತ್ವದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 418
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved