• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರದಲ್ಲಿ ತಿರಂಗಾ ಯಾತ್ರೆ ಯಶಸ್ವಿ
ಹಿಂಸೆಯನ್ನು ಸಹಿಸುವ ರಾಷ್ಟ್ರ ಭಾರತವಲ್ಲ. ಬದಲಾದ ಭಾರತದ ಬಗ್ಗೆ ಮಾತನಾಡುವ ಮುನ್ನ ಶತ್ರು ರಾಷ್ಟ್ರಗಳು ಯೋಚಿಸಬೇಕಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ಬಿಜೆಪಿ, ವಿಶ್ವಹಿಂದೂ ಪರಿಷತ್ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿ, ಅಹಿಂಸೆಯನ್ನೇ ದೇಶದ ದೌರ್ಬಲ್ಯವೆಂದು ಕೊಂಡಿದ್ದ ನಮ್ಮ ಶತ್ರುಗಳು ಕಳೆದ ಏಳು ದಶಕದಿಂದ ಭಯೋತ್ಪಾದನೆ ಮೂಲಕ ಗಡಿ ಪ್ರದೇಶದ ಜನರ ನೆಮ್ಮದಿ ಹಾಳು ಮಾಡಿದ್ದಾರೆ ಎಂದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸುವಂತೆ ಸೂಚನೆ
ಮಳೆಗಾಲ ಆರಂಭವಾಗಿರೋ ಹಿನ್ನೆಲೆಯಲ್ಲಿ ಲಾರ್ವ ಸಮೀಕ್ಷೆ, ಡೆಂಘೀ ನಿಯಂತ್ರಣ, ಮಲೇರಿಯಾ ರೋಗ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಗ್ರಾಮ ಹಾಗೂ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು, ಚರಂಡಿ ಮತ್ತು ಇನ್ನಿತರೆ ಗುಂಡಿಗಳಲ್ಲಿ ಹೆಚ್ಚು ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹರಿಸಬೇಕು ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ್ ತಿಳಿಸಿದರು.
ರುದ್ರಪಟ್ಟಣದ ಸಂಗೀತೋತ್ಸವಕ್ಕೆ ಮಾಜಿ ಶಾಸಕ ಎಟಿಆರ್‌ ಶ್ಲಾಘನೆ
ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಪಂಚದ ಐತಿಹಾಸಿಕ ಕ್ಷೇತ್ರವಾಗಿದೆ. ಜಗತ್ತಿನ ಮೂಲೆ ಮೂಲೆಗಳಲ್ಲಿ ಸ್ಥಳೀಯ ಶಾಸ್ತ್ರೀಯ ಸಂಗೀತ ಸಂಸ್ಕೃತಿಯೊಂದಿಗೆ ಬೆರೆತು ಆತ್ಮೀಯವಾಗಿ ಹಿಡಿಯಬಲ್ಲ ಸಂಗೀತ ಸಾಧನವನ್ನು ವಿದ್ವಾನ್ ಆರ್‌.ಕೆ. ಪದ್ಮನಾಭ ಅವರು 22 ವರ್ಷಗಳಿಂದ ಸಂಗೀತ ಗ್ರಾಮ ರುದ್ರಪಟ್ಟಣದಲ್ಲಿ ನಡೆಸಿಕೊಂಡು ಬರುತ್ತಿರುವುದಕ್ಕೆ ಸದನ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರು ಡಾ. ಎ.ಟಿ. ರಾಮಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ಭಾಷೆಯನ್ನು ಜಗತ್ತಿನ ಮೂಲೆಮೂಲೆಗಳಲ್ಲಿ ಸ್ಥಳೀಯ ಸಂಸ್ಕೃತಿಯೊಂದಿಗೆ ಬೆರೆತು ತಮ್ಮನ್ನು ತೊಡಗಿಸಿಕೊಂಡು ಜನಜನಿತವಾಗಿದ್ದಾರೆ. ಇಂತಹ ವಿದ್ವಾಂಸರು ನಮ್ಮ ರುದ್ರಪಟ್ಟಣದಲ್ಲಿರುವುದು ಹೆಮ್ಮೆಯ ವಿಷಯ ಎಂದು ಡಾ. ಎ.ಟಿ. ರಾಮಸ್ವಾಮಿ ಬಣ್ಣಿಸಿದರು.
ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ
ಕೃಷಿ ಇಲಾಖೆ ವತಿಯಿಂದ ಕೃಷಿಭಾಗ್ಯ ಯೋಜನೆ ಮೂಲಕ 2025 - 26ನೇ ಸಾಲಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ 1.25 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ. ರೈತರು ಈ ಯೋಜನೆಯ ಲಾಭ ಪಡೆಯುವಂತೆ ಹೋಬಳಿ ಕೃಷಿ ಅಧಿಕಾರಿ ರಕ್ಷಿತ್ ಎಚ್ ಎಸ್ ತಿಳಿಸಿದರು. ಈ ಯೋಜನೆಯ ಲಾಭ ಪಡೆಯಲು ಕೃಷಿ ಇಲಾಖೆಯ ನಿಬಂಧನೆ ಯಂತೆ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಹಾಗೂ ಈಗಾಗಲೇ ಕೃಷಿ ಹೊಂಡ ಪಡೆದಿದ್ದರೆ ಈ ಯೋಜನೆಗೆ ಅನ್ವಯಿಸುವುದಿಲ್ಲ ಹೊಸ ರೈತರಿಗಾಗಿ ಈ ಯೋಜನೆಯನ್ನು ಕೃಷಿ ಇಲಾಖೆ ಜಾರಿಗೆ ತಂದಿದೆ ಎಂದರು.
ತಾಳಿ ಕಟ್ಟುವ ವೇಳೆ ಮದುವೆ ಒಲ್ಲೆ ಎಂದ ಹುಡುಗಿ
ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ಜಿ. ವೇಣುಗೋಪಾಲ್ ಮದುವೆ ನಿಗದಿಯಾಗಿತ್ತು. ಮುಹೂರ್ತದ ವೇಳೆಯಲ್ಲಿ ಪಲ್ಲವಿಗೆ ಬಂದ ಒಂದು ಕರೆ ಬಂದ ನಂತರ ಮನಸ್ಸು ಬದಲಾವಣೆಯಾಗಿ ತಾಳಿ ಕಟ್ಟುವ ಸಮಯದಲ್ಲಿ ವಧು ಪಲ್ಲವಿ ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದು, ಈ ಮದುವೆ ಬೇಡ ಎಂದು ಹಠ ಹಿಡಿದಿದ್ದು, ಈ ವೇಳೆ ಮದುವೆ ಗಂಡು ವೇಣುಗೋಪಾಲ್ ಕೊನೆಯ ಕ್ಷಣದವರೆಗೂ ಆಕೆಗೆ ಮನವರಿಕೆ ಮಾಡಿ ನನಗೆ ಬಲವಂತದ ಮದುವೆ ಬೇಡ ಒಪ್ಪಿದರೇ ತಾಳಿ ಕಟ್ಟುತ್ತೇನೆ ಎಂದು ಮನವಿ ಮಾಡಿದರೂ ವಧು ಒಪ್ಪದ ಕಾರಣ ಮದುವೆಯನ್ನು ನಿಲ್ಲಿಸಲಾಯಿತು.
ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕುರುಬರ ಸಂಘ ಮತ್ತು ತಾ. ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾಲುಮತ ಮಹಾಸಭಾ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪ - ೨೦೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ ೮೦ % ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನವೋದಯ ಪ್ರವೇಶ ಪರೀಕ್ಷೆ ೨೦೨೫ನೇ ಸಾಲಿನಲ್ಲಿ ಉತ್ತೀರ್ಣರಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ೨೦೨೪ನೇ ಸಾಲಿನಲ್ಲಿ ಐಟಿಐ ಪ್ರವೇಶ ಪರೀಕ್ಷೆ ಬರೆದು ಪ್ರವೇಶ ಪರೀಕ್ಷೆ ಪಡೆದ, ತಾ. ಕುರುಬ ಸಮುದಾಯದ ಮಕ್ಕಳಿಗೆ ಜೂನ್ ೧೫ನೇ ಭಾನುವಾರ ಕನಕ ಭವನದಲ್ಲಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೌರಾಣಿಕ ನಾಟಕ ಪ್ರದರ್ಶಿಸಲು ಮಕ್ಕಳಿಗೆ ಆಡಿಷನ್
ಮಕ್ಕಳಿಂದಲೇ ಕುರುಕ್ಷೇತ್ರ ಪೌರಣಿಕ ನಾಟಕ ಪ್ರದರ್ಶಿಸಲು ಆಸಕ್ತಿ ಇರುವ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲು ಆಡಿಷನ್ ನಡೆಸಲು ಮುಂದಾಗಿದ್ದು, ಜೂನ್ ೧೫ರಂದು ಚನ್ನರಾಯಪಟ್ಟಣದಲ್ಲಿರುವ ಮಹಾಭುಜ ಮಾರುತಿ ಇಂಡಿಯನ್ ಸೇವಾ ಟ್ರಸ್ಟ್ ಇಲ್ಲಿ ನಡೆಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ರಾಜೇಶ್ ಹಾಗೂ ಗೌರವಾಧ್ಯಕ್ಷ ಜಿ.ಎಸ್. ರಾಜಕುಮಾರ್ ತಿಳಿಸಿದರು. ಕುರುಕ್ಷೇತ್ರ ಪೌರಣಿಕ ನಾಟಕವನ್ನು ಅಭಿನಯಿಸುವ ಇಂಗಿತದೊಂದಿಗೆ, ನಾಟಕದಲ್ಲಿ ಆಸಕ್ತಿ ಇರುವ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಆಡಿಷನ್ ನಡೆಸಲು ಮುಂದಾಗಿದ್ದೇವೆ ಎಂದರು.
ಸಂವಿಧಾನದ ಬಲದಿಂದಲೆ ದೇಶದ ಪ್ರಜಾಪ್ರಭುತ್ವ ಬಲಿಷ್ಟ
ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿದ ಸಂವಿಧಾನದಿಂದ ವಿಶ್ವದಲ್ಲಿಯೇ ಭಾರತ ಮಾದರಿ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪರವಾನಗಿ ಪಡೆಯದೆ ಕ್ಲಿನಿಕ್ ನಡೆಸುವವರನ್ನು ಪತ್ತೆ ಹಚ್ಚಿ
ಆಯುರ್ವೇದ ಕ್ಲಿನಿಕ್ ಗೆ ನೋಂದಣಿ ಪಡೆದು ಅಲೋಪತಿ ಚಿಕಿತ್ಸೆ ನೀಡುತ್ತಿರುವುದು ಕಂಡುಬರುತ್ತಿದೆ. ಇಂತಹ ವೈದ್ಯರುಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದರು.
ಓಟಿಎಸ್ ಮೂಲಕ ಸಾಲ ಮರುಪಾವತಿಗೆ ಅವಕಾಶ ನೀಡಿ
ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಸಾಲವನ್ನು ಪಡೆದ ಶಾಂತೇಗೌಡರು ಮೃತರಾಗಿದ್ದು, ನಂತರ ಅವರ ಮಗ ಜಿ.ಎಸ್. ಶಿವಕುಮಾರ್‌ಗೆ ಓಟಿ.ಎಸ್. ಮುಖಾಂತರ ಮರುಪಾವತಿ ಮಾಡಲು ಅವಕಾಶ ಮಾಡಿಕೊಟ್ಟು ಹಾಗೂ ಜಮೀನನ್ನು ಹರಾಜು ಹಾಕದೆ ಬಗೆಹರಿಸಿಕೊಡುವಂತೆ ಆಗ್ರಹಿಸಿ ನಗರದ ಕೆ.ಆರ್. ಪುರಂನಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ರೈತರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 441
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved