• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಕುಟುಂಬಗಳಿಗೆ ಉಚಿತ ಔಷಧಿ ವಿತರಣೆ
ಸ್ನೇಹಿತರ ಬಳಗದಿಂದ ಪ್ರತಿ ತಿಂಗಳು ವಾರ್ಡ್ ನಂ. ೩೦, ೩೧ನೇ ವಾರ್ಡ್‌ಗಳಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಅನಾರೋಗ್ಯದಿಂದ ಬಳಲುತ್ತಿದ್ದರೇ ಉಚಿತ ಔಷಧಿಗಳನ್ನು ನೀಡುವ ಕಾರ್ಯವನ್ನು ೨೦೨೧ರಿಂದ ಮಾಡಿಕೊಂಡು ಬರುತ್ತಿದ್ದೇವೆ. ಅದೇ ರೀತಿ ನಗರದ ೧ನೇ ಮತ್ತು ೧೭ನೇ ವಾರ್ಡ್‌ನಲ್ಲಿ ಈ ತಿಂಗಳಿನಿಂದ ಪ್ರಾರಂಭಿಸಲಾಗಿದೆ. ಅಲ್ಲದೇ ಈ ವಾರ್ಡ್‌ನಲ್ಲಿ ಯಾರಾದರೂ ಮೃತರಾದರೇ ಅವರ ಅಂತ್ಯಸಂಸ್ಕಾರಕ್ಕಾಗಿ ೫ ಸಾವಿರ ಸಹಾಯಧನವನ್ನು ಕೊಡುವಂತಹ ಯೋಜನೆಯನ್ನು ಸಹ ನಾವು ಮಾಡಿದ್ದೇವೆ ಎಂದು ಸಮಾಜ ಸೇವಕ ರಮೇಶ್ ತಿಳಿಸಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ದೈಹಿಕ ಆಕರ್ಷಣೆಯಿಂದ ವಿದ್ಯಾರ್ಥಿಗಳು ವಿಚಲಿತರಾಗದೇ ಅನ್ಯ ವಿಚಾರಗಳಿಂದ ದೂರವಿದ್ದು ಮುಂಬರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು ಶ್ರಮವಹಿಸಬೇಕು ಎಂದು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವ್ಯವಸ್ಥಾಪಕ ಫಾ.ಕಿರಣ್ ಮೆಲ್ವಿನ್ ಹೇಳಿದರು. ವಿದ್ಯಾರ್ಥಿ ಜೀವನದಲ್ಲಿ ಅಂಕಗಳು ಕಲಿಕೆಯ ಮಾನದಂಡವಾದ್ದರಿಂದ ಕಲಿಕೆಯಲ್ಲಿ ಏರುಪೇರಾದರೆ ಯಾವುದೇ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಉತ್ತಮ ಕಲಿಕೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಶಿಕ್ಷಕರನ್ನು, ಶಾಲೆಯನ್ನು ಹಾಗೂ ತಂದೆ ತಾಯಿಯರನ್ನು ಗೌರವಿಸಬೇಕಾಗಿರುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ. ಮಾನವ ಧರ್ಮದ ತತ್ವದ ಆಧಾರದ ಮೇಲೆ ನಾವೆಲ್ಲ ಬದುಕಿ ಬಾಳಬೇಕು ಎಂದರು.
ಆಲೂರು ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯ ಖಂಡಿಸಿ ಪ್ರತಿಭಟನೆ
ಆಲೂರು ತಾಲೂಕಿನಲ್ಲಿ ಪ್ರತಿನಿತ್ಯ ವಿದ್ಯುತ್ ವ್ಯತ್ಯಯವಾಗುತ್ತಿದ್ದು ಕೃಷಿ ಜಮಿನಿಗೆ ನೀರನ್ನು ಹರಿಸಲು ಸಮರ್ಪಕ ವಿದ್ಯುತ್ ಸರಬರಾಜು ಮಾಡದೇ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ಪಟ್ಟಣದ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ರೈತರಿಗೆ ಕೃಷಿ ಜಮೀನಿನಲ್ಲಿ ಬೆಳೆ ಬೆಳೆಯಲು ನೂತನ ವಿದ್ಯುತ್ ತಂತಿ ಮಾರ್ಗವನ್ನು ಕೂಡಲೇ ಸಕ್ರಿಯಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಅಲ್ಲದೆ ಉಪ ವಿಭಾಗ ಕೇಂದ್ರಗಳಲ್ಲಿ ಸುಟ್ಟು ಹೋಗುವ ಪರಿವರ್ತಗಳನ್ನು ಕೂಡಲೇ ಬದಲಾಯಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ಸಾವಿಗೆ ಸ್ಪಂದಿಸದ ಜಿಲ್ಲಾಡಳಿತ
ಬೇಲೂರು ಬಸ್ ನಿಲ್ದಾಣ ಮುಂಭಾಗ ಖಾಸಗಿ ವಾಣಿಜ್ಯ ಕಟ್ಟಡದ ಸಜ್ಜಾ ಕುಸಿದು ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಬಗ್ಗೆ ಸೋಮವಾರ ಅಧಿವೇಶನದ ಶೂನ್ಯ ವೇಳೆಯಲ್ಲಿ ಬೇಲೂರು ಶಾಸಕ ಎಚ್ ಕೆ ಸುರೇಶ್ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರಲ್ಲದೆ ಆ ಸಮಯದಲ್ಲಿ ಸೂಕ್ತವಾಗಿ ಸ್ಪಂದಿಸದ ಜಿಲ್ಲಾಡಳಿತದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಮೌನವಾಗಿದ್ದಾರೆ. ಜಿಲ್ಲಾ ಸಚಿವರಂತೂ ಹೊರಗಡೆ ಇರುತ್ತಾರೆ, ಆದರೆ ಜಿಲ್ಲೆಯಲ್ಲಿ ಇದ್ದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಯಾಕೆ ಭೇಟಿ ನೀಡಲಿಲ್ಲ, ರಾಜ್ಯ ಸರ್ಕಾರದವರು ಹಾಸನ ಜಿಲ್ಲೆಯನ್ನು ಹೊರಗಿಟ್ಟು ರಾಜ್ಯಭಾರ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.
ಮಹಿಳೆಯ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ
ಮಹಿಳೆಯು ಈ ದೇಶದ ಆಸ್ತಿ ಒಬ್ಬ ಮಹಿಳೆ ತನ್ನ ಇಡೀ ಸರ್ವಸ್ವವನ್ನು ತನ್ನ ಕುಟುಂಬಕ್ಕಾಗಿ ತ್ಯಾಗ ಮಾಡುತ್ತಾಳೆ. ಅವಳ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ, ಈ ಪ್ರಪಂಚದಲ್ಲಿ ತಾಯಿಗಿಂತ ದೇವರಿಲ್ಲ ಎಂದು ವರ್ಣಿಸುತ್ತಾರೆ, ಇಂದು ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಅತಿ ಹೆಚ್ಚು ಉನ್ನತ ಹುದ್ದೆಗಳಲ್ಲಿ ದೇಶಕ್ಕೆ ತಮ್ಮದೇ ಆದಂತ ಸೇವೆ ಸಲ್ಲಿಸುತ್ತಾ ಗಂಡು ಹೆಣ್ಣು ಎನ್ನುವ ಭೇದವಿಲ್ಲ ಎಂದು ಸಮಾನತೆಯನ್ನು ತೋರಿದ್ದಾರೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಘಟಕದ ಚೇರ್ಮನ್ ಭರತ್ ಕುಮಾರ್ ಎಚ್. ಜಿ. ತಿಳಿಸಿದರು.
ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ಅಂಗಡಿ ಮಳಿಗೆಗಳ ಸಜ್ಜೆ ಕುಸಿದು ಇಬ್ಬರು ಸಾವು

ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ನಾಲ್ಕು ವಾಣಿಜ್ಯ ಮಳಿಗೆಗಳ ಸಜ್ಜೆ ಕುಸಿದು ಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ  

ಚಟುವಟಿಕೆ ಆಧಾರಿತ ಶಿಕ್ಷಣ ನೀಡಬೇಕಿದೆ
ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆಯಲ್ಲಿ ಎಲೈಟ್ ಪುರಸ್ಕಾರ ನೆರವೇರಿಸಲಾಯಿತು. ಮೌಲ್ಯಯುತವಾದ ನೀತಿಕತೆಗಳೊಂದಿಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮಗುವಿನ ಕಲಿಕೆಗೆ ಆತ್ಮಸ್ಥೈರ್ಯ ತುಂಬಬೇಕು. ಪ್ರಸ್ತುತ ದಿನಗಳಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣ ಹಾಗೂ ಸಂಶೋಧನೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಶಿಕ್ಷಣ ತಜ್ಞ ಹಾಗೂ ಶೈಕ್ಷಣಿಕ ಸಲಹೆಗಾರ ಡಾ. ಟಿ.ಎನ್. ರಾಜು ತಿಳಿಸಿದರು.
ಅರೇಹಳ್ಳಿಯಲ್ಲಿ ಮಹಿಳೆ ಮೇಲೆ ಕಾಡಾನೆ ದಾಳಿ
ಬೇಲೂರು ತಾಲೂಕಿನ ದೊಡ್ಡಸಾಲವಾರ ಗ್ರಾಮದಲ್ಲಿ ಇಂದು ಮುಂಜಾನೆ ಕೂಲಿ ಕೆಲಸಕ್ಕೆಂದು ರೇವತಿ ಎಂಬುವವರು ಗ್ರಾಮದ ಉಮೇಶ್ ಎಂಬುವವರ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾಣೆ ಮಹಿಳೆ ಮೇಲೆ ದಾಳಿ ನಡೆಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ವಾಹನದಲ್ಲಿಯೇ ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ.
ಇಂದು ಶಂಭುನಾಥ ಶ್ರೀಗಳ ವರ್ಧಂತೋತ್ಸವ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಪರಮಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರ 46ನೇ ವರ್ಧಂತೋತ್ಸವದ ಸಂಭ್ರಮಾಚರಣೆ ನಗರದ ಎಂ.ಜಿ.ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಾ. 10ರ ಸಂಜೆ 5.30 ಗಂಟೆಗೆ ನಡೆಯಲಿದೆ. ಹಾಸನ ಮತ್ತು ಕೊಡಗು ಜಿಲ್ಲೆಯ ಎಲ್ಲ ಸಮಸ್ತ ಭಕ್ತಾಧಿಗಳು ಶ್ರೀಗಳ ಹುಟ್ಟುಹಬ್ಬ ಆಚರಿಸುತ್ತಿದ್ದು, ಶ್ರೀಮಠದ ಆವರಣದಲ್ಲಿ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಹೋಮ ಹಾಗೂ ಷೋಡಶೋಪಚಾರ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಹೊಳೆನರಸೀಪುರದಲ್ಲಿ ಜನವರಿಯಿಂದ 20 ಅಗ್ನಿ ಅವಘಡ
ಹೊಳೆನರಸೀಪುರ ತಾಲೂಕಿನಲ್ಲಿ 2025 ಜನವರಿಯಿಂದ 20 ಅಗ್ನಿ ಅವಘಡಗಳು ನಡೆದಿದೆ ಜತೆಗೆ ಅಗ್ನಿಶಾಮಕ ಅಧಿಕಾರಿಗಳು ಸಕಾಲದಲ್ಲಿ ತಲುಪಿ ಹೆಚ್ಚಿನ ಅನಾಹುತ ಆಗದಂತೆ ತಡೆದಿದ್ದಾರೆ. ತಾಲೂಕಿನಲ್ಲಿ ಬೆಂಕಿ ಅವಘಡಗಳು ಮೇಲಿಂದ ಮೇಲೆ ನಡೆಯುತ್ತಿದ್ದು, ಇತ್ತೀಚೆಗೆ 500 ಲೀಟರ್ ಸಾಮರ್ಥ್ಯದ ಮತ್ತೊಂದು ಚಿಕ್ಕ ವಾಹನ ತರಿಸಿಕೊಂಡಿದ್ದಾರೆ. ಹೊಳೆನರಸೀಪುರದ ಅಗ್ನಿಶಾಮಕ ಠಾಣೆಯಲ್ಲಿ ಒಂದೇ ಒಂದು ಅಗ್ನಿಶಾಮಕ ವಾಹನ ಇದ್ದು ಬೇಸಿಗೆಯಲ್ಲಿ ಅಗ್ನಿಅವಗಡಗಳು ಸಂಭವಿಸಿದರೆ ಹೇಗೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದ್ದು ಮತ್ತೆರೆಡು ವಾಹನದ ಅವಶ್ಯಕತೆ ಇದೆ.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved