• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡಿತರ ವಿತರಣೆಗಾಗಿ ಉಪ ಕೇಂದ್ರಕ್ಕೆ ಶಾಸಕ ರೇವಣ್ಣ ಚಾಲನೆ
3 ಕಿಲೋಮೀಟರ್ ಒಳಗಡೆ ಪಡಿತರ ವಿತರಣೆಗಾಗಿ ಉಪ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಮತ್ತು ಒಂದು ಅಂಗಡಿಯ ನಿರ್ವಹಣೆಗೆ ಸಾಗಣಿಕೆ ಹಾಗೂ ಮನೆ ಬಾಡಿಗೆ ಸೇರಿ 3 ಸಾವಿರ ರು. ಬೇಕಾಗುತ್ತೆ. ಮಾನವೀಯ ದೃಷ್ಠಿಯಿಂದ ಇವರ ಕೋರಿಕೆಗೆ ಸ್ಪಂದಿಸಬೇಕಾಗುತ್ತೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಕೆಲವೊಂದು ಸೊಸೈಟಿಗಳಲ್ಲಿ 100ಕ್ಕೂ ಹೆಚ್ಚು ಸದಸ್ಯರು ಇದ್ದು, ಪಡಿತರ ವಿತರಣೆಯಲ್ಲಿ ಬಹಳ ತೊಂದರೆಯಾಗುತ್ತಿತ್ತು. ಈ ಉಪ ಕೇಂದ್ರಗಳಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಇಂದು ಅರಸೀಕಟ್ಟೆ ಅಮ್ಮನವರ ಜಾತ್ರಾ ಮಹೋತ್ಸವ
ಮೂರನೇ ವರ್ಷದ ಶ್ರೀ ಅರಸೀಕಟ್ಟೆ ಅಮ್ಮನವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿಯು ದೇವಾಲಯದ ಆವರಣದಲ್ಲಿ 17ರ ಶುಕ್ರವಾರ ಬೆಳಗ್ಗಿನಿಂದ ಸಂಜೆಯವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಕ್ತಿ ದೇವತೆ ಅರಸೀಕಟ್ಟೆ ಅಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಪೂಜಾ ವಿಶೇಷಗಳ ಜೊತೆಗೆ 2 ದಿನಗಳ ಕಾಲ ದೇವಾಲಯ ಸಮಿತಿಯು ಆಯೋಜಿಸಿರುವ ವೈವಿಧ್ಯಮಯ ಚಟುವಟಿಕೆಗಳು ಭಕ್ತರ ಮತ್ತು ಜನಮನಗೆಲ್ಲಲಿವೆ.
ಗುತ್ತಿನಕೆರೆಯಲ್ಲಿ ರಂಗನಾಥ ಸ್ವಾಮಿಯವರ ಬ್ರಹ್ಮರಥೋತ್ಸವ
ಶ್ರೀ ರಂಗನಾಥ ಸ್ವಾಮಿಯವರ ಬ್ರಹ್ಮರಥೋತ್ಸವವು ಮಂಗಳವಾರ ವೈಭವದಿಂದ ನಡೆಯಿತು. ಮೂಲ ಸನ್ನಿಧಾನದಲ್ಲಿ ಶ್ರೀ ರಂಗನಾಥ ಸ್ವಾಮಿಯವರಿಗೆ ಅಭಿಷೇಕ, ಪುಷ್ಪಾರ್ಚನೆ ಹೂವಿನ ಅಲಂಕಾರ ನಡೆಸಿದ ನಂತರ ಶ್ರೀ ರಂಗನಾಥ ಸ್ವಾಮಿಯವರ ಉತ್ಸವ ಮೂರ್ತಿಗೆ ಹೂವಿನಿಂದ ಶೃಂಗರಿಸಿ ನೆಡೆಮುಡಿ ಸೇವೆಯಲ್ಲಿ ಶ್ರೀಸ್ವಾಮಿಯವರನ್ನು ಉತ್ಸವ ಮಾಡಿ ರಥದಲ್ಲಿ ಕುಳ್ಳಿರಿಸಿ ಕರ್ಪೂರ ಸೇವೆ ನೆಡೆದ ನಂತರ ಬ್ರಹ್ಮರಥೋತ್ಸವ ನಡೆಯಿತು.
ಪ್ರಥಮ ದರ್ಜೆ ಸಹಾಯಕನ ಮೇಲೆ ದೂರು ದಾಖಲಿಸಲಿ
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಬಿ.ಎಚ್.ಮಂಜುನಾಥ ವಿರುದ್ಧ ಅಸ್ಪೃಶ್ಯತೆ ದೌರ್ಜನ್ಯ ತಡೆ ಕಾಯಿದೆ ಅನ್ವಯ ದೂರು ದಾಖಲಾಗಿರುವುದರಿಂದ ಇವರನ್ನು ಬಂಧಿಸುವಂತೆ ಹಾಗೂ ಸೇವೆಯಿಂದ ಅಮಾನತು ಮಾಡಬೇಕೆಂದು ದಲಿತ ಜನಪರ ಚಳವಳಿಗಳ ಒಕ್ಕೂಟದ ಧರ್ಮೇಶ್ ಮತ್ತು ಎಚ್. ಕೆ. ಸಂದೇಶ್ ಒತ್ತಾಯಿಸಿದರು. ಮಂಜುನಾಥ ಅವರನ್ನು ಸೇವೆಯಿಂದ ಕೂಡಲೇ ಅಮಾನತು ಮಾಡುವಂತೆ ಜಿಲ್ಲಾಡಳಿತ ಹಾಗೂ ಸರ್ಕಾರವನ್ನು ಹಾಸನ ಜಿಲ್ಲಾ ದಲಿತ ಮತ್ತು ಜನಪರ ಚಳುವಳಿಗಳ ಒಕ್ಕೂಟವು ಆಗ್ರಹಿಸುತ್ತದೆ ಎಂದು ಹೇಳಿದರು.
ಸಿದ್ಧರಾಮೇಶ್ವರರು ವಚನಗಳಿಂದಲೇ ಸಮಾಜವನ್ನು ಎಚ್ಚರಿಸುತ್ತಿದ್ದರು
ಶಿವಯೋಗಿ ಶ್ರೀ ಸಿದ್ಧರಾಮೇಶ್ವರರು ಚಿಕ್ಕಂದಿನಲ್ಲೇ ಪವಾಡಗಳ ಮೂಲಕ ಮನೆ ಮಾತಾಗಿದ್ದಲ್ಲದೆ, ಪರಿಸರ ಸಂರಕ್ಷಣೆ, ಕೆರೆ ಕಟ್ಟೆಗಳನ್ನು ನಿರ್ಮಿಸಿ ೧೨ನೇ ಶತಮಾನದಲ್ಲೇ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದ ಮಹಾನ್ ಸಾಧಕರು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಮಾ.ನಾ.ಮಂಜೇಗೌಡ ಹೇಳಿದರು. ಚಿಕ್ಕಂದಿನಿಂದಲೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಅಂದೇ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗುವ ಮೂಲಕ ಬಸವೇಶ್ವರರ ಜತೆ ೧೨ನೇ ಶತಮಾನದಲ್ಲಿ ಕ್ರಾಂತಿ ಮಾಡಿದವರು ಎಂದರು.
ಅಡ್ವೊಕೇಟ್‌ ಸ್ಟಿಕ್ಕರ್‌ ಹಾಕಿದ ಕಾರಿನಲ್ಲಿ ಗೋಮಾಂಸ ಮಾರಾಟ ಯತ್ನ
ಕಾರಿಗೆ ಅಡ್ವೋಕೇಟ್ ಸ್ಟಿಕ್ಕರ್ ಹಾಕಿ ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ತುಂಬಿ ಮಾರಾಟ ಮಾಡಲು ಮುಂದಾದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ನಗರ ಠಾಣೆಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕಾರು ಸಕಲೇಶಪುರ ನಗರ ಬೈಪಾಸ್ ರಸ್ತೆಯಿಂದ ಕಪ್ಪಿನಕೋಡಿ ಸಮೀಪ ಕುಶಾಲನಗರ ಬಡಾವಣೆ ಒಳಗೆ ತಿರುಗುತ್ತಿದ್ದಂತೆ ತಡೆದು ಪರಿಶೀಲನೆ ನಡೆಸಿದ್ದಾರೆ. ಕಾರಿನ ಒಳಗೆ ಸುಮಾರು ೧೦೦ ಕೆ.ಜಿಗೂ ಅಧಿಕ ಗೋಮಾಂಸ ಪತ್ತೆಯಾಗಿದೆ.
ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯ ಯಶಸ್ವಿಯಾಗಲಿ
ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಎಲ್ಲಾ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ಶುಭ ಹಾರೈಸಿದರು. ತಹಸೀಲ್ದಾರ್ ಕಚೇರಿಯಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಗೊಳಿಸಲು ಬುಧವಾರ ಆಯೋಜಿಸಿದ್ದ ಡಿಜಿಟಲ್ ರೆಕಾರ್ಡ್ ರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ನಡೆಯುತ್ತಿದೆ ಎಂದು ಅಭಿನಂದಿಸಿದರು.
ಸಂಗೀತ ಮತ್ತು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಿ
ಸಂಗೀತ ಮತ್ತು ಸಾಹಿತ್ಯದ ಕಡೆ ಸ್ವಲ್ಪವಾದರೂ ಆಸಕ್ತಿ ಮತ್ತು ಪರಿಜ್ಞಾನ ಇಲ್ಲ ಎಂದರೆ ನಾವು ಪ್ರಾಣಿಗಳು ಹಾಗೂ ಪಕ್ಷಿಗಳು ಎಂದು ಹೇಳಿ ಬಿಡುತ್ತಾರೆ. ಹಾಗಾಗಿ ಅವುಗಳ ಬಗ್ಗೆ ಸ್ವಲ್ಪವಾದರೂ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಸಂಸ್ಕೃತ ಭವನದ ಕಾರ್ಯದರ್ಶಿ ಪರಮೇಶ್ವರ ವಿ. ಭಟ್ ತಿಳಿಸಿದರು. ಮನುಷ್ಯ ಜನ್ಮದಲ್ಲಿ ನಮಗೆ ಸಾಹಿತ್ಯ, ಸಂಗೀತ ಇವುಗಳ ಬಗ್ಗೆ ಸಲ್ಪ ಆಸಕ್ತಿ ಇಲ್ಲ, ಪರಿಜ್ಞಾನ ಇಲ್ಲ ಎಂದರೇ ನಾವು ಸಾಕ್ಷತ್ ಪಶುಗಳು ಎಂದು ಹೇಳಿ ಬಿಡುತ್ತಾರೆ. ಸಾಹಿತ್ಯದಲ್ಲಿ, ಸಂಗೀತದಲ್ಲಿ ಸ್ವಲ್ಪವಾದರೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಾಲಗಾಮೆ ಸರ್ಕಲ್‌ನಲ್ಲಿ ಸಂಚಾರಿ ಫಲಕ ಲೋಕಾರ್ಪಣೆ
ಇನ್ನರ್ ವ್ಹೀಲ್ ಕ್ಲಬ್ ಆಫ್ ಹಾಸನ್ ಗೋಲ್ಡ್ ಸಂಸ್ಥೆಯಿಂದ ಸ್ಥಾಪಿಸಲಾಗಿರುವ ಸಂಚಾರಿ ದಿಕ್ಸೂಚಿ ಫಲಕವನ್ನು ನಗರಸಭಾಧ್ಯಕ್ಷ ಎಂ. ಚಂದ್ರೇಗೌಡ ಅವರು ಇತ್ತೀಚೆಗೆ ಅನಾವರಣಗೊಳಿಸಿದರು. ಚಿಕ್ಕಮಗಳೂರು, ಮಂಗಳೂರು ಹಳೇಬೀಡು ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುವವರಿಗೆ ಅನುಕೂಲವಾಗುವ ದೃಷ್ಟಿಯಿಂದ ದಿಕ್ಸೂಚಿ ಫಲಕವನ್ನು ಅಳವಡಿಸಿದ್ದು ಇದಕ್ಕೆ ಸಹಕಾರ ನೀಡಿದ ನಗರಸಭೆ ಹಾಗೂ ದಾನಿಗಳನ್ನು ಇದೇ ವೇಳೆ ಸ್ಮರಿಸಿದ್ದರು.
ದುರುದ್ದೇಶದಿಂದ ಜಾತಿ ನಿಂದನೆ ಕೇಸ್‌
ಡಿಡಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಬಿ. ಎಚ್. ಮಂಜುನಾಥ್ ಮೇಲೆ ದುರುದ್ದೇಶಪೂರಿತ ವೈಯಕ್ತಿಕ ಧ್ವೇಷದ ಹಿನ್ನೆಲೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿರುವುದನ್ನು ಜಿಲ್ಲಾಧಿಕಾರಿಗಳು ಪರಾಮರ್ಶಿಸಿ ಸೂಕ್ತ ನ್ಯಾಯವನ್ನು ದೊರಕಿಸಿಕೊಡಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಆದ್ದರಿಂದ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 509
  • next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved