• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿವರ್ಷ 30 ಲಕ್ಷ ಜನ ಸಾವು
ಭಾರತ ದೇಶದಲ್ಲಿ ಪ್ರತಿವರ್ಷ ಹೃದಯ ಸಂಬಂಧಿ ಕಾಯಿಲೆಯಿಂದ 30 ಲಕ್ಷಕ್ಕೂ ಹೆಚ್ಚು ಜನ ಸಾವನಪ್ಪುತ್ತಿದ್ದಾರೆ. ಇದರಲ್ಲಿ 20ರಿಂದ 40ವರ್ಷದ ಒಳಗಿನ ವಯೋಮಿತಿಯ ಯುವಕರೇ ಹೆಚ್ಚು ಮೃತ ಪಡುತ್ತಿದ್ದಾರೆ. ಸರಿಯಾದ ಆಹಾರ ಕ್ರಮಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಆಗಮಾತ್ರ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೃದ್ರೋಗ ತಜ್ಞ ಸಂಸದ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು. ಕೋಟಿ ಮನೆ ಇಂಟರ್‌ನ್ಯಾಷನಲ್ ಸ್ಕೂಲ್ ವತಿಯಿಂದ ತೃತೀಯ ವರ್ಷದ ಕೋಟೆ ಮನೆ ಕಲೋತ್ಸವ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಕ್ಕೆ ರೈತರ ಬಗ್ಗೆ ಹೆಚ್ಚಿನ ಕಾಳಜಿ ಇಲ್ಲ
ವಿಧಾನ ಪರಿಷತ್ ಸದಸ್ಯರೊಬ್ಬರು ಹೆಣ್ಣು ಮಗಳಿಗೆ ಬೈದರೆಂದು ಅವರನ್ನ ೧೮ ಗಂಟೆ ವಿನಾಕಾರಣ ಸುತ್ತಿಸುವ ಇಂದಿನ ಆಡಳಿತದಲ್ಲಿ, ರೈತ ಮಹಿಳೆ ಕತ್ತಿನಿಂದ ಸರ ಕಿತ್ತುಕೊಂಡು, ರೆಕಾರ್ಡ್ ಮಾಡುತ್ತಿರುವ ಪಿಯು ವಿದ್ಯಾರ್ಥಿನಿ ಕೈಯಿಂದ ಮೊಬೈಲ್ ಕಿತ್ತುಕೊಂಡ ಸಂಬಂಧ ಪ್ರಕರಣ ದಾಖಲಿಸಿಲ್ಲ ನೋಡಿ ಎಂದು ಶಾಸಕ ಎಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು. ರಸ್ತೆ ಮಾಡುವುದಾದರೇ ಬೆಳೆದಿರುವ ಪೈರು ಕಟಾವು ಮಾಡಿದ ನಂತರ ರಸ್ತೆ ಮಾಡಬಹುದಿತ್ತು, ಆದರೆ ಬೆಳೆನಾಶ ಮಾಡಿ ರಸ್ತೆ ಮಾಡಿಕೊಡುವ ಅವಶ್ಯಕತೆ ಏನಿತ್ತು ಎಂದು ಆಕ್ರೋಶದಿಂದ ನುಡಿದರು.
18 ವರ್ಷ ತುಂಬದವರು ವಾಹನ ಚಲಾಯಿಸಬೇಡಿ
ರಸ್ತೆ ನಿಯಮವನ್ನು ಉಲ್ಲಂಘಿಸುತ್ತ ಈ ಹಲವಾರು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು ಬೀದಿಗೆ ಬೀಳುತ್ತಿರುತ್ತವೆ. ಮತ್ತು ೧೮ ವರ್ಷ ದಾಟುವ ಮೊದಲು ಯಾರೂ ಸಹ ವಾಹನಗಳನ್ನು ಚಲಾವಣೆ ಮಾಡಬಾರದು. ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ರಘುಪತಿ ಸಲಹೆ ನೀಡಿದರು. ರೋಟರಿ ಕ್ಲಬ್ ವಿಷನ್ ವತಿಯಿಂದ ತಾಲೂಕಿನ ಶ್ರವಣಬೆಳಗೊಳದ ಸರ್ಕಾರಿ ಪಿ.ಯು. ಕಾಲೇಜಿನ ಮುಂಭಾಗ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಒಂದು ಸೂಚನಾ ಫಲಕವನ್ನು ಅಳವಡಿಸಲಾಯಿತು.
ಪ್ರಮೋದ್‌ ಮುತಾಲಿಕ್‌ ಮೇಲೆ ಪ್ರಕರಣ ದಾಖಲು
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್‌ ಹಾಗೂ ಇತರರ ಮೇಲೆ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಕೋಮು ಪ್ರಚೋದನೆ ಆರೋಪದ ಪ್ರಕರಣ ದಾಖಲಾಗಿದೆ. ಸಕಲೇಶಪುದರಲ್ಲಿ ನಡೆದ "ವಿರಾಟ್ ಹಿಂದೂ ಸಮಾಜೋತ್ಸವ " ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಮೋದ್ ‌ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೂವರ ವಿರುದ್ಧ ಶಾಸಕ ರೇವಣ್ಣ ಕೆಂಗಣ್ಣು
ಡಿಸಿ, ಎಸ್ಪಿ, ಜಿ.ಪಂ ಸಿಇಒ, ಎಸಿ ನನ್ನ ಕೈಗೆ ಸಿಗದಲೇ ಎಲ್ಲಿ ಹೋಗ್ತಾರೆ? ಈ ಮೂವರು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಶಾಶ್ವತವಾಗಿ ಇರುತ್ತದೆ ಎಂದುಕೊಂಡಿರಬೇಕು. ನಮಗೂ ಟೈಂ ಬರುತ್ತದೆ. ಆಗ ತೋರಿಸ್ತೀನಿ ಎಂದು ಮಾಜಿ ಸಚಿವರು ಹಾಗೂ ಜೆಡಿಎಸ್‌ ಶಾಸಕರೂ ಆದ ಎಚ್‌.ಡಿ.ರೇವಣ್ಣ ಅವರು ಅಧಿಕಾರಿಗಳ ಆಕ್ರೋಶ ಹೊರಹಾಕಿದರು. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ಥರ ಏನೇನು ಮಾಡಿದ್ದಾರೆ ಎಂದು ಪಾರ್ಟ್-೧, ಪಾರ್ಟ್-೨, ಪಾರ್ಟ್-೩ ಬಿಡುಗಡೆ ಮಾಡ್ತೀನಿ ಎಂದು ಎಚ್ಚರಿಸಿದರು. ಇಂತಹವನ್ನೆಲ್ಲಾ ನಾನು ಬಹಳ ನೋಡಿ ಬಿಟ್ಟಿದ್ದೇನೆ ಎಂದರು.
ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ನೌಕರರ ಉಡಾಫೆ ವರ್ತನೆ
ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಏಜೆನ್ಸಿಗಳಿಗೆ ನೀಡುತ್ತಿದ್ದು, ಡಿ ಗ್ರೂಪ್ ನೌಕರರು ಸಮರ್ಪಕವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ತಾಲೂಕು ವೈದ್ಯಾಧಿಕಾರಿಗಳ ಮೇಲೆ ಉಡಾಫೆ ವರ್ತನೆ ತೋರುತ್ತಿದ್ದು, ‌ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿಗಳ ಜೊತೆ‌ ಚರ್ಚಿಸಲಾಗುವುದು ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಈ ಬಗ್ಗೆ ಜಿಲ್ಲೆಯ ಗುತ್ತಿಗೆದಾರನನ್ನು ಕೇಳಲು ಹೋದರೆ ಅವರು ಸಿಗುತ್ತಿಲ್ಲ. ಹೊರಗಿನವರಿಗೆ ಗುತ್ತಿಗೆ ನೀಡುತ್ತಿರುವುದರಿಂದ ಡಿ ಗ್ರೂಪ್ ನೌಕರರು ತಮ್ಮ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದು, ಸ್ವಚ್ಛತೆಯಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದರು.
ಬೇಲೂರು ಪುರಸಭೆ ಮಳಿಗೆಗಳ ಹರಾಜು ರದ್ದುಗೊಳಿಸಿ
ಒಳ್ಳೆಯ ಕೆಲಸಗಳಲ್ಲಿ ಹೆಸರು ಮಾಡುತ್ತಿರುವ ಪುರಸಭೆ ಅಧ್ಯಕ್ಷರು ಟೆಂಡರ್ ಪ್ರಕ್ರಿಯೆಯಲ್ಲಿ ಮಳಿಗೆಗಳ ಬಾಡಿಗೆಯನ್ನು ಕಡಿಮೆ ಮಾಡಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಿ ಈ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ ಎಸ್ ಭೋಜೇಗೌಡ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಎಲ್ಲಿಂದಲೋ ಬಂದು ಮುಖ್ಯ ರಸ್ತೆಯಲ್ಲಿರುವ ಪುರಸಭೆ ಮಳಿಗೆಗಳ ಮೇಲೆ ಎರಡು ದಶಕಗಳಿಂದ ತನ್ನ ಹಿಡಿತ ಸಾಧಿಸುವಲ್ಲಿ ವ್ಯಾಪಾರಸ್ಥರು ಯಶಸ್ವಿಯಾಗಿದ್ದು, ಪುರಸಭೆಯವರು ಇವರ ಕೈಗೊಂಬೆಯಾಗಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆರೋಪಿಸಿದರು.
ಸಮಯ ಪ್ರಜ್ಞೆ ಇಲ್ಲದ ಮುಖ್ಯ ಶಿಕ್ಷಕಿ ವಿರುದ್ಧ ದೂರು
ಬಿ.ಜಿ ಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 12 ವಿದ್ಯಾರ್ಥಿಗಳಿದ್ದು, ಇಲಾಖೆ ಇಬ್ಬರು ಶಿಕ್ಷಕರನ್ನು ಈ ಶಾಲೆಗೆ ಒದಗಿಸಿದೆ. ಸೌಲಭ್ಯದ ಕೊರತೆ ಇಲ್ಲ, ಪೋಷಕರ ಕಿರಿಕಿರಿ ಇಲ್ಲ , ಆದರೆ ಮುಖ್ಯ ಶಿಕ್ಷಕರದೇ ಸಮಸ್ಯೆ . ಈ ಬಡಾವಣೆ ಸಮೀಪವೇ ಖಾಸಗಿ ಶಾಲೆಗಳು ಇದ್ದರೂ ಸಹ ಪೋಷಕರು ಶಾಲೆಯ ಇಲಾಖೆಯ ಬಗ್ಗೆ ಪೂರ್ಣ ಭರವಸೆ ಇಟ್ಟು ತಮ್ಮ ಮಕ್ಕಳನ್ನು ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂದು ಕಳಿಸುತ್ತಿದ್ದಾರೆ. ಆದರೆ ಶಾಲಾ ಮುಖ್ಯ ಶಿಕ್ಷಕರೇ ಶಾಲೆಗೆ ವಿಳಂಬವಾಗಿ ಆಗಮಿಸುತ್ತಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಳಂಬವಾಗಿ ಬಂದರೂ ನಂತರ ಮನೆಯಿಂದ ತಂದ ಉಪಹಾರವನ್ನು ಸೇವಿಸುತ್ತಾ ಕೂರುತ್ತಾರೆ. ಇದು ಒಂದೆರಡು ದಿನದ ಕಥೆಯಲ್ಲ.
ಸ್ನೇಹಿತನ ಕೊಂದು ಶಿರಾಡಿಗೆ ಶವ ಎಸೆದ ಸ್ನೇಹಿತರು
ಜತೆಯಲ್ಲಿದ್ದ ಸ್ನೇಹಿತರೇ ಕೊಲೆ ಮಾಡಿ ಶವವನ್ನು ಶಿರಾಡಿ ಘಾಟಿಯ ಪ್ರಪಾತಕ್ಕೆ ಎಸೆದಿರುವ ಘಟನೆ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೈದರಾಬಾದ್‌ನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಶಿವಕುಮಾರ್ (34) ಕೊಲೆಯಾದ ಯುವಕ. ಅದೇ ಗ್ರಾಮದ ಶರತ್ ಹಾಗೂ ಪ್ರತಾಪ್ ಎಂಬುವವರಿಂದ ಈ ಕೃತ್ಯ ನಡೆದಿದ್ದು, ಆರೋಪಿಗಳು ತಲೆಮೆರೆಸಿಕೊಂಡಿದ್ದಾರೆ. ಶರತ್ ಹಾಗೂ ಪ್ರತಾಪ್ ಮಾಡಿದ್ದ ಕಳ್ಳತನದ ಬಗ್ಗೆ ಶಿವಕುಮಾರ್‌ಗೆ ತಿಳಿದಿತ್ತು. ಹಾಗಾಗಿ ಕಳೆದ ನಾಲ್ಕು ದಿನಗಳ ಹಿಂದೆ ಶಿವಕುಮಾರ್‌ನನ್ನು ಹೈದರಾಬಾದ್‌ನಿಂದ‌‌ ಶರತ್ ಹಾಗೂ ಪ್ರತಾಪ್ ಕರೆಸಿಕೊಂಡು ಕೊಲೆ ಮಾಡಿದ್ದಾರೆ.
ಖಾತೆ ಮಾಡಿಕೊಡಲು ರೈತರನ್ನು ಅಲೆಸಬೇಡಿ
ರೈತರಿಗೆ ಖಾತೆ ಮಾಡಿಕೊಡಲು ವಿನಾಕಾರಣ ಅಲೆಸದೆ ಅವರ ದಾಖಲೆಗಳು ಕಾನೂನು ರೀತಿ ಸರಿಯಾಗಿ ಇದ್ದಲ್ಲಿ ತ್ವರಿತವಾಗಿ ಖಾತೆ ಮಾಡಿಕೊಡಿ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಗ್ರಾಮ ಲೆಕ್ಕಾಧಿಕಾರಿಗಳಿಗೆ ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜನೆ ಮಾಡಿದ್ದ ಅಭಿಲೇಖಾಲಯದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ರೈತರು ಪಡೆಯಬೇಕೆಂದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 509
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved