• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನ ವಿವಿ ಉಳಿಸಲು ಹೋರಾಟ ಸಮಿತಿ ಅಸ್ತಿತ್ವಕ್ಕೆ
ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಲಾಗಿದ್ದು, ಮಾರ್ಚ್ ೧೬ರಂದು ದುಂಡು ಮೇಜಿನ ಸಭೆ ಹಾಗೂ ಮಾರ್ಚ್ ೧೯ರಂದು ಬೃಹತ್ ಪ್ರತಿಭಟನಾ ಸಭೆ ಏರ್ಪಡಿಸಲಾಗಿದೆ ಎಂದು ನೂತನ ಸಮಿತಿ ಅಧ್ಯಕ್ಷ ಡಾ. ವೈ.ಎಸ್. ವೀರಭದ್ರಪ್ಪ ತಿಳಿಸಿದರು. ಜಿಲ್ಲೆಯ ಜನಪರ ಸಂಘಟನೆಗಳು, ಸಾಹಿತಿಗಳು, ವಿಚಾರವಾದಿಗಳು ಮತ್ತು ಶಿಕ್ಷಣ ಪ್ರೇಮಿಗಳನ್ನು ಒಳಗೊಂಡ ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ. ಹಾಸನ ಜಿಲ್ಲೆಯ ಹಿರಿಯ ಸಾಮಾಜಿಕ ಹೋರಾಟಗಾರರಾದ ಡಾ. ವೈ.ಎಸ್. ವೀರಭದ್ರಪ್ಪ ಅವರು ಈ ಹೋರಾಟ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.
ಪುಟ್ಟ ಮಗುವಿನೊಂದಿಗೆ ತಾಯಿ ಕಣ್ಮರೆ
ಗೋವಿಂದರಾಜು ಹಾಗೂ ವೇದಾವತಿ ಅವರಿಗೆ ೭ ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು ಹಾಗೂ ೧೦ ತಿಂಗಳ ಎಂಬ ಹೆಣ್ಣು ಮಗುವಿದೆ. ಗೋವಿಂದರಾಜುಗೆ ಬೇರೊಬ್ಬರೊಂದಿಗೆ ಸಂಬಂಧವಿರುವ ಬಗ್ಗೆ ಗುಮಾನಿ ಇದ್ದು, ಈ ಬಗ್ಗೆ ದಂಪತಿಗಳ ನಡುವೆ ವೈಮಸ್ಸಿತ್ತು. ಜತೆಗೆ ಈ ವಿಚಾರದಲ್ಲಿ ನ್ಯಾಯ ಪಂಚಾಯಿತಿ ಮಾಡಿದ್ದು, ಈ ವಿಚಾರದಲ್ಲಿ ಹಲವಾರು ಬಾರಿ ಗಲಾಟೆ ನಡೆದ ಬಗ್ಗೆ ತನ್ನ ಮಗಳು ತಿಳಿಸಿದ್ದಳು. ಮಾರ್ಚ್ ೧ರಂದು ಹಣಕಾಸಿನ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದು, ಮಾರನೇ ದಿನ ಮಾರ್ಚ್ ೨ರ ಸಂಜೆ ೫.೩೦ರ ಸುಮಾರಿನಲ್ಲಿ ಮಗುವೊಂದಿಗೆ ತನ್ನ ಮಗಳು ಮನೆ ಬಿಟ್ಟು ಹೋಗಿದ್ದಾರೆ ಎಂದು ಆಕೆಯ ಪೋಷಕರು ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ನುಗ್ಗೇಹಳ್ಳಿ ಹಾಸ್ಟೆಲ್‌ಗಳಿಗೆ ಡಿಸಿ ದಿಢೀರ್‌ ಭೇಟಿ
ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಸತಿ ನಿಲಯಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ಅಡುಗೆ ಮನೆಯ ನಿರ್ವಹಣೆ, ಆಹಾರ ಪದಾರ್ಥಗಳಿರುವ ಕೊಠಡಿ ಸೇರಿದಂತೆ ಕಟ್ಟಡದ ದುಸ್ಥಿತಿಯ ಬಗ್ಗೆಯೂ ಪರಿಶೀಲನೆ ನಡೆಸಿ ಉತ್ತಮವಾಗಿ ನಿರ್ವಹಣೆ ಮಾಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಅಗತ್ಯ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಬೇಕಾದರೆ ಇಂತಹ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗುತ್ತದೆ ಎಂದು ಗೌರಮ್ಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಧನಂಜಯಮೂರ್ತಿ ಅಭಿಪ್ರಾಯಪಟ್ಟರು. ನಾವು ವೈಜ್ಞಾನಿಕವಾಗಿ ನೋಡಿದಾಗ ಅಲ್ಲಿ ವಿಜ್ಞಾನ ಕಾಣುತ್ತದೆ. ವಿಜ್ಞಾನ ಎಂದರೆ ವಿಶೇಷವಾದ ಜ್ಞಾನ. ವೈಜ್ಞಾನಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳ ಕೊಡುಗೆ ಬಹಳವಾಗಿದೆ. ಪ್ರಯೋಗಗಳ ಮೂಲಕ ಮಕ್ಕಳು ಅಧ್ಯಯನ ಮಾಡಿದ್ದು ಬಹಳ ಕಾಲ ನೆನಪಿನಲ್ಲಿ ಇರುತ್ತದೆ, ಇದು ಒಂದು ವಿಧದಲ್ಲಿ ಪರಿಣಾಮಕಾರಿ ಬೋಧನೆ ಕೂಡ ಎಂದರು.
ಹೊಳೆನರಸೀಪುರ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಹೊಳೆನರಸೀಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಕಾರ್ಯದರ್ಶಿಯಾಗಿ ಎ.ರಾಮಕೃಷ್ಣ, ಖಜಾಂಚಿಯಾಗಿ ಎಚ್.ವಿ. ರವಿಕುಮಾರ್, ಉಪಾಧ್ಯಕ್ಷರಾಗಿ ಡಿ.ಕೆ.ವಸಂತಯ್ಯ ಹಾಗೂ ಕೆ.ಎ.ರವಿಕುಮಾರ್, ಸಹ ಕಾರ್ಯದರ್ಶಿಯಾಗಿ ವೆಂಕಟೇಶ ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಕುಮಾರ್, ಉಪಾಧ್ಯಕ್ಷರಾದ ವಿಶ್ವನಾಥ್, ಎಚ್.ಸಿ.ಎನ್.ಚಂದ್ರು, ಕೃಷ್ಣ, ಅಭಿಲಾಷ್, ಭಾನುಮತಿ, ರಂಗಸ್ವಾಮಿ, ಧನಂಜಯ, ಚಂದ್ರಶೇಖರ್, ನಾಜಿರ್ ನೂತನ ಕಾರ್ಯಕಾರಿ ಮಂಡಳಿ ಸದಸ್ಯರಿಗೆ ಶುಭಕೋರಿದರು.
ಹೆಣ್ಣು ಅಕ್ಷರಸ್ಥಳಾದರೂ ಸ್ವಾವಲಂಬಿಯಾಗುವಲ್ಲಿ ಹಿಂದೇಟು ಹಾಕುತ್ತಿದ್ದಾಳೆ
ಆರೋಗ್ಯವಂತ ಸಮ ಸಮಾಜ ನಿರ್ಮಾಣ ಹೆಣ್ಣಿಗೆ ಕೊಡುವ ಅವಕಾಶಗಳಿಂದ ಮಾತ್ರ ಸಾಧ್ಯ ಎಂದು ಖ್ಯಾತ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಎ.ಸಾವಿತ್ರಿ ತಿಳಿಸಿದರು. ನಮ್ಮ ಹೆಣ್ಣುಮಕ್ಕಳು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತಿದ್ದಾರೆ. ಅಲ್ಲದೆ ಎಲ್ಲಾ ಹಂತದ ವಿದ್ಯೆಯನ್ನು ಪಡೆದವರೇ ಆಗಿದ್ದಾರೆ. ಇಷ್ಟೊಂದು ಪ್ರಬುದ್ಧತೆಯನ್ನು ಹೊಂದಿದ್ದರೂ ಕೂಡ ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸಹ ಕಂಡುಬಂದಿದೆ. ಸ್ವಾತಂತ್ರ್ಯ ಭಾರತದಲ್ಲಿ ಸಮಾನವಾದ ಸಂವಿಧಾನದ ಹಕ್ಕುಗಳನ್ನು ಹೊಂದಿದ್ದೇವೆ. ಇವುಗಳನ್ನು ಬಳಕೆ ಮಾಡಿಕೊಂಡು ಎದುರಾಗುವ ಸಮಸ್ಯೆ, ಶೋಷಣೆಗಳನ್ನು ಮೆಟ್ಟಿನಿಲ್ಲಬೇಕಿದೆ ಎಂದು ಹೇಳಿದರು.
ಸಾಧಿಸಬೇಕೆಂಬ ಛಲ ದೃಢವಾಗಿದ್ದರೆ ಬಡತನ ಅಡ್ಡಿಯಾಗುವುದಿಲ್ಲ
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಗರದ ಎಸ್.ಜೆ.ಪಿ. ರಸ್ತೆಯಲ್ಲಿರುವ ವಿಗ್ಯಾನ್ ಗ್ಲೋಬಲ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಿತು. ಮಕ್ಕಳಿಗೆ ಪಾಠ ವಿಷಯ ಜ್ಞಾನದ ಜೊತೆಗೆ ದೈಹಿಕ ಚಟುವಟಿಕೆಗಳು ಅತ್ಯಗತ್ಯವಾಗಿದ್ದು, ಮಕ್ಕಳು ನಿಯಮಿತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ಉತ್ತಮ ವಿಜ್ಞಾನದ ಮಾದರಿಗಳಿಗೆ ಬಹುಮಾನ ವಿತರಿಸಲಾಯಿತು.
ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ
ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗೆ ಸಂಬಂಧಿಸಿದಂತೆ ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ ಮೀಸಲಿಟ್ಟಿದ್ದು, ಈ ಭಾರಿಯ ಬಜೆಟ್‌ನಲ್ಲಿ 100 ಕೋಟಿ ರು. ಆಯವ್ಯಯ ಹಣ ನೀಡಲಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಮಂತ್ರಿ ಈಶ್ವರ್ ಬಿ ಖಂಡ್ರೆ ಹೇಳಿದರು. ಆನೆಗಳ ಕಾರಿಡಾರ್ ನಿರ್ಮಿಸಿ ಆನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋಳಿ ಮಾರಾಟ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಡೀಸಿ ಸೂಚನೆ
ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌಲ್ಟ್ರಿ ಫಾರಂಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸುರಕ್ಷತಾ ಸಲಕರಣೆಗಳನ್ನು ನೀಡುವಂತೆ ಮಾಲೀಕರಿಗೆ ತಿಳಿಸಿದರಲ್ಲದೆ, ಪೌಲ್ಟ್ರಿ ಮಾಲೀಕರೆಲ್ಲರಿಗೂ ಅರಿವು ಮೂಡಿಸಿ, ತಮ್ಮ ತಮ್ಮ ಫಾರಂಗಳಲ್ಲಿ ಕಡ್ಡಾಯವಾಗಿ ಜೈವಿಕ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಿದರು.
ಶೌಚಾಲಯದ ನಿರ್ವಹಣೆಯನ್ನೇ ಕೈಬಿಟ್ಟ ಪುರಸಭೆ
ನಿತ್ಯ ನೂರಾರು ಜನರು ಬಳಸುವ ಸಾರ್ವಜನಿಕರ ಶೌಚಗೃಹ ಕಾಲಿಡಲಾಗದಷ್ಟು ಗಬ್ಬೆದ್ದು ನಾರುತ್ತಿದೆ. ಒಂದು ವರ್ಷಗಳ ಕಾಲ ವಾರಕ್ಕೊಮ್ಮೆ ಸ್ವಚ್ಛತೆ ನಡೆಸುತ್ತಿದ್ದ ಪುರಸಭೆ ಆಡಳಿತ ಕಳೆದೊಂದು ವರ್ಷದಿಂದ ಸ್ವಚ್ಛತೆ ಮಾಡುವುದನ್ನು ಕೈಬಿಟ್ಟಿದೆ. ಪರಿಣಾಮ ಶೌಚಗೃಹದ ನೀರಿನ ಪೈಪ್ ಒಡೆದು ಅಡಿಗಳಷ್ಟು ನೀರು ಶೌಚಗೃಹದೊಳಗೆ ಸಂಗ್ರಹವಾಗಿರುವ ಕಾರಣ ಶೌಚಗೃಹಕ್ಕೆ ಕಾಲಿಡದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯದ ಆಧೋಗತಿಯ ಪರಿಣಾಮ ಉಪವಿಭಾಗಾಧಿಕಾರಿಗಳ ಕಚೇರಿ, ಪುರಸಭೆ, ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ಎಸ್.ಬಿ.ಐ ಬ್ಯಾಂಕ್‌ಗೆ ಬರುವ ಸಾರ್ವಜನಿಕರು ದೇಹಬಾಧೆ ತೀರಿಸಿಕೊಳ್ಳಲು ಪರದಾಡುವಂತಾಗಿದೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 553
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved