• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ ಪೂರ್ವಭಾವಿ ಸಭೆಗೆ ಜನಪ್ರತಿನಿಧಿಗಳ ನಿರಾಸಕ್ತಿ
ಸಾರ್ವಜನಿಕರ ಬಜೆಟ್ ಪೂರ್ವಭಾವಿ ಸಭೆಗೆ ಬಹಳಷ್ಟು ಸದಸ್ಯರು ಗೈರು ಹಾಜರಾಗಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎ. ಪಿ.ಶಂಕರ್, 17 ಸದಸ್ಯರಲ್ಲಿ 7 ಮಂದಿ ಮಾತ್ರ ಸಭೆಗೆ ಹಾಜರಾಗಿದ್ದಾರೆ. ಸದಸ್ಯರ ಗೈರುಹಾಜರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ, ಸಾರ್ವಜನಿಕರಿಂದ ಬಂದಿರುವ ಆಕ್ಷೇಪಗಳ ಕುರಿತು ನಿರ್ಣಯ ಕೈಗೊಂಡು ಸಾಮಾನ್ಯ ಸಭೆಯಲ್ಲಿ ಜನರ ಭಾವನೆಗಳ ಕುರಿತು ಸದಸ್ಯರಿಗೆ ಮನವರಿಕೆ ಮಾಡಬೇಕು ಎಂದರು.
ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
ತಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆಯನ್ನು ಮತ್ತೊಮ್ಮೆ ಎಳೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬಸ್ ದರ ಏರಿಕೆ ಮತ್ತು ಅಗತ್ಯ ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಸರ್ಕಾರ ಜನರಿಗೆ ಉಚಿತ ಗ್ಯಾರಂಟಿ ಕೊಡುವುದಾಗಿ, ವಿವಿಧ ವರ್ಗಗಳ ಜನರನ್ನು ಬೇರೊಂದು ರೀತಿಯಲ್ಲಿ ಸುಲಿಗೆ ಮಾಡಲು ಹೊರಟಿದೆ ಎಂದು ಆಕ್ರೋಶ ಹೊರಹಾಕಿದರು.
ಮಕ್ಕಳನ್ನು ಧೈರ್ಯವಾಗಿ ಸರ್ಕಾರಿ ಶಾಲೆಗೆ ಸೇರಿಸಿ
ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಪತಿ-ಪತ್ನಿಯರು ದುಡಿಮೆಯಿಂದ ಆರ್ಥಿಕವಾಗಿ ಉತ್ತಮವಾಗಿರುವ ಕಾರಣ ಖಾಸಗಿ ಶಾಲೆಯಲ್ಲಿ ದುಬಾರಿ ಶುಲ್ಕವಾದರೂ ಮಕ್ಕಳನ್ನು ಸೇರಿಸಲು ಆಸಕ್ತಿ ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರು, ಶಿಕ್ಷಣ ವ್ಯವಸ್ಥೆಗೆ ಬೇಕಿರುವ ಉತ್ತಮ ಸಾಮರ್ಥ್ಯ ಹೊಂದಿರುತ್ತಾರೆ. ಸರ್ಕಾರ ಇಂತಹವರನ್ನೇ ಆಯ್ಕೆ ಮಾಡಿಕೊಳ್ಳುತ್ತದೆ ಇದನ್ನು ಪಾಲಕರು ಅರಿತುಕೊಳ್ಳಬೇಕು ಎಂದು ಹೇಳಿದರು.
ಕಡೇಗರ್ಜೆ ಬಳಿ ಸುಟ್ಟು ಕರಕಲಾದ ಕಾರು
ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡೆಗರ್ಜೆ ಗ್ರಾಮದ ಬಳಿ ರಸ್ತೆ ಪಕ್ಕ ನಿಲ್ಲಿಸಿದ ಕಿಯಾ ಸೆಲ್ವಾಸ್ ಕಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಎಂಜಿನ್ ಬಳಿ ಸಣ್ಣ ಪ್ರಮಾಣದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ರಸ್ತೆ ಪಕ್ಕಕ್ಕೆ ಕಾರು ನಿಲ್ಲಿಸಿದ್ದರು. ಅವರು ಕಾರಿನಿಂದ ಕೆಳಗಿಳಿದ ತಕ್ಷಣ, ದಿಢೀರ್ ಬೆಂಕಿ ವ್ಯಾಪಿಸಿ ಕೆಲವೇ ಸೆಕೆಂಡುಗಳಲ್ಲಿ ವಾಹನವನ್ನು ಸುಟ್ಟುಹಾಕಿತು.
ಹುಲಿಕಲ್ ಪ್ರಸನ್ನ ವೆಂಕಟರಮಣನಿಗೆ ಏಕಾದಶಿ ಪೂಜೆ
ಅರಕಲಗೂಡು ತಾಲೂಕಿನ ಹುಲಿಕಲ್ ಗ್ರಾಮದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶುಕ್ರವಾರನಡೆದ ವೈಕುಂಠ ಏಕಾದಶಿ ಪೂಜಾ ಕಾರ್ಯದಲ್ಲಿ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಭಾಗಿಯಾಗಿ ದೇವರ‌ ದರ್ಶನ ಪಡೆದರು. ದೇವರ ದರ್ಶನ ಪಡೆದ ಭಕ್ತರು ವೈಕುಂಠ ದ್ವಾರದ ಪ್ರವೇಶ ಮಾಡಿದರು. ನಂತರ ದೇವಾಲಯದಲ್ಲಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.
ಮಾವಿನಕೆರೆಯ ವೆಂಕಟರಮಣಸ್ವಾಮಿಗೆ ಏಕಾದಶಿ ಪೂಜೆ
ಮಾವಿನಕೆರೆ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ, ಪಟ್ಟಣದ ಶ್ರೀ ದೇವಾಂಗ ಶ್ರೀ ರಾಮಮಂದಿರ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ, ದಾಸಗೌಡರ ಬೀದಿಯ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಹಾಗೂ ರಾಯರಾವುತ್ತರ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಪ್ರಾಕಾರೋತ್ಸವ ನಂತರ ದೇವಾಲಯ ಪ್ರಾಂಗಣದಲ್ಲಿ ನಿರ್ಮಿಸಿರುವ ವೈಕುಂಠದ್ವಾರದ ಮೇಲೆ ಶ್ರೀಸ್ವಾಮಿ ಉತ್ಸವ ಮೂರ್ತಿಯನ್ನಿಟ್ಟು, ವಿಶೇಷವಾಗಿ ಅಲಂಕರಿಸಿ, ಮಹಾ ಮಂಗಳಾರತಿ ನೆರವೇರಿಸಿ, ಭಕ್ತರು ವೈಕುಂಠದ್ವಾರದಲ್ಲಿ ಸಾಗಲು ಅವಕಾಶ ಕಲ್ಪಿಸಲಾಯಿತು.
ವೈಕುಂಠ ದ್ವಾರ ಪ್ರವೇಶಿಸಿದ ಶಾಸಕ ಸ್ವರೂಪ್
ವೈಕುಂಠ ಏಕಾದಶಿಯ ಅಂಗವಾಗಿ ನಗರದ ಮಹಾರಾಜ ಪಾರ್ಕ್ ಬಳಿ ಇರುವ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಶುಕ್ರವಾರ ಬೆಳಗಿನಿಂದಲೇ ದೇವರಿಗೆ ವಿಶೇಷ ಪೂಜೆ-ಪುನಸ್ಕಾರ ನಡೆದು ಸಾವಿರಾರು ಭಕ್ತಾದಿಗಳು ಆಗಮಿಸಿ ಸ್ವರ್ಗದ ಬಾಗಿಲ ಒಳಗೆ ನುಸುಳಿ ಶ್ರೀ ಲಕ್ಷ್ಮೀವೆಂಕಟರಮಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ಇದೇ ವೇಳೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಕೂಡ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಸ್ವರ್ಗದ ಬಾಗಿಲ ಮೂಲಕ ಹಾದುಹೋದರು.
ಕಿಡಿಗೇಡಿಗಳಿಂದ ಭತ್ತದ ಮೆದೆಗೆ ಬೆಂಕಿ
ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು ಭತ್ತದ ಕಣಕ್ಕೆ ಬೆಂಕಿ ಹಾಕಿದ್ದು, ಸುಮಾರು ೪ ಲಕ್ಷ ರು. ಮೌಲ್ಯದ ಭತ್ತದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿದ್ದ ರೈತರು ತಮ್ಮ ಬೆಳೆಗಳನ್ನು ರಾತ್ರಿ ಕಾದು ತಮ್ಮ ಬೆಳೆಯನ್ನು ರಕ್ಷಿಸಿಕೊಂಡಿದ್ದರು. ಎರಡು ದಿನಗಳ ಹಿಂದಷ್ಟೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಒಣವೆ ಹಾಕಿದ್ದರು. ಆದರೆ ಭತ್ತದ ಬಣವೆಗೆ ಬೆಂಕಿ ಹಾಕಿದ ಕಾರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಹಿಂದೂಗಳು ಒಂದಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ
ಧರ್ಮದ ಬಗ್ಗೆ ಜಾಗೃತಿ ಅಗತ್ಯ. ಒಡಕು ಧರ್ಮದ ಅವನತಿಗೆ ಕಾರಣ ಇದನ್ನು ಇತಿಹಾಸದಲ್ಲಿ ನಾವು ಕಂಡು, ಕೇಳಿದ್ದೇವೆ. ಆದ್ದರಿಂದ ಎಂದಿಗೂ ಜಾತಿ ಆಧಾರದ ಮೇಲೆ ಹಿಂದೂಗಳನ್ನು ವಿಭಜನೆ ಮಾಡಬೇಡಿ. ಸನ್ಯಾಸಿಗಳು ಸಹ ಧರ್ಮಕ್ಕೆ ದಕ್ಕೆ ಬಂದಾಗ ಶಸ್ತ್ರ ಹಿಡಿದಿರುವುದು ಇತಿಹಾಸದಲ್ಲಿ ದಾಖಲಾಗಿದೆ. ಆದ್ದರಿಂದ ತೋರಿಕೆ ಹಿಂದೂಗಳಾಗದೆ ನಿಜವಾದ ಹಿಂದೂಗಳಾಗಿ ಧರ್ಮಕ್ಕೆ ದಕ್ಕೆ ಬಂದಾಗಲೆಲ್ಲ ತೀವ್ರವಾಗಿ ಪ್ರತಿಭಟಿಸಿ ಎಂದು ಸದಾಶಿವಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು.
ಮಾಲೇಕಲ್‌ ತಿರುಪತಿಯಲ್ಲಿ ವೈಭವದ ವೈಕುಂಠ ಏಕಾದಶಿ
ಮಾಲೇಕಲ್ ಅಮರಗಿರಿ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ದೇವಾಲಯಕ್ಕೆ ಮುಂಜಾನೆಯಿಂದಲೇ ಆಗಮಿಸಿದ ಭಕ್ತರು, ಸರದಿ ಸಾಲಿನಲ್ಲಿ ನಿಂತು ಗಜೇಂದ್ರ ಮೋಕ್ಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಗೋವಿಂದರಾಜ ಸ್ವಾಮಿಯ ದರ್ಶನ ಮಾಡಿದರು. ನಂತರ ಸ್ವಾಮಿಯ ಪಾದದ ದಿಕ್ಕಿನಲ್ಲಿ ಬರುವ ವೈಕುಂಠ ದ್ವಾರದ ಮೂಲಕ ನಿರ್ಗಮಿಸಿದರೆ ಮನದ ಇಷ್ಟಾರ್ಥ ಮಾತ್ರವಲ್ಲ, ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಇರುವುದರಿಂದ ವೈಕುಂಠ ದ್ವಾರದ ಮೂಲಕ ನಿರ್ಗಮಿಸಿ ಧನ್ಯತಾ ಭಾವ ಅನುಭವಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved