• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಆಲೂರು: ಮೂಲಭೂತ ಸೌಕರ್ಯಗಳು, ಸೇವಾಭದ್ರತೆ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟ ಅವಧಿ ಪ್ರತಿಭಟನೆಯನ್ನು ನಡೆಸಿ ತಹಸೀಲ್ದಾರ್ ಸಿ.ಪಿ ನಂದಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಪ್ರವಾಸೋದ್ಯಮದಿಂದ ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ಇದೆ
ವಿಶ್ವ ಪ್ರವಾಸೋದ್ಯಮ ಸಂಘಟನೆಯ ಅಧಿಕೃತ ಕಾರ್ಯಕ್ರಮಗಳೊಂದಿಗೆ ಬೇಲೂರಿನ ಹೋಟೆಲ್‌ ಮಯೂರ ವೇಲಾಪುರಿಯಲ್ಲಿ ಆಚರಿಸಲಾಗುತ್ತಿದ್ದು, ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಸಾಂಸ್ಕೃತಿಕ ವಿನಿಮಯವನ್ನು ಪೋಷಿಸುತ್ತದೆ, ಲಕ್ಷಾಂತರ ಮಂದಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಉದ್ಯೋಗ ಸೃಷ್ಟಿ ಮಾಡುವುದರೊಂದಿಗೆ ಸಮುದಾಯದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೂಡ ಸಹಕರಿಸುತ್ತದೆ ಎಂದು ಮಯೂರ ಯಗಚಿ ಹೋಟೆಲ್ ವ್ಯವಸ್ಥಾಪಕರಾದ ಪಾಪಣ್ಣ ಹೇಳಿದರು.
ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್‌ ವರದಿ ಜಾರಿಗೆ ಬಿಡುವುದಿಲ್ಲ
ಮಲೆನಾಡಿನ ಸಾಕಷ್ಟು ಜನರು ಪ್ರವಾಸೋದ್ಯಮ ನಂಬಿ ಬದುಕುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ತಾಲೂಕಿನಲ್ಲಿ ಸಂಪೂರ್ಣ ಪ್ರವಾಸೋದ್ಯಮ ನೆಲ ಕಚ್ಚಲಿದೆ. ವಾರ್ಷಿಕ ಕೋಟ್ಯಂತರ ತೆರಿಗೆ ಪಾವತಿಸುವ ತಾಲೂಕಿನ ಪ್ರವಾಸೋದ್ಯಮದ ಸಂರಕ್ಷಣೆಗೆ ಸರ್ಕಾರ ಮುಂದಾಗ ಬೇಕು.ಮಲೆನಾಡಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ಜಾರಿಗೆ ಯಾವುದೆ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಶಾಸಕ ಮಂಜು ಅಸಮಾಧಾನ
ಬೆಟ್ಟದ ಬೈರವೇಶ್ವರ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹಿಂದಿನ ಸಭೆಯಲ್ಲೆ ಹೇಳಿದ್ದೆ. ಇನ್ನೊಂದು ವಾರದಲ್ಲಿ ಕೆಲಸವಾಗಲಿದೆ ಎಂದು ಹೇಳಿಕೆ ನೀಡಿದ್ದಿರಿ. ಆರು ತಿಂಗಳಾದರೂ ಇನ್ನೂ ಕಥೆ ಹೇಳುತ್ತಿದ್ದೀರ. ಕೆಲಸ ಮಾಡುವ ಮನಸ್ಸಿದ್ದರೆ, ಕಾಮಗಾರಿ ನಡೆಸಲು ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳುತ್ತಿದ್ದಿರಿ. ನಿಮಗೆ ಕೆಲಸ ಮಾಡುವ ಮನಸ್ಸೆ ಇಲ್ಲ. ಹೀಗಾದರೆ ಹೇಗೆ ಎಂದು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹರೀಶ್ ವಿರುದ್ಧ ಶಾಸಕ ಮಂಜು ಹರಿಹಾಯ್ದರು.
ಗಣಿತ ಶಿಕ್ಷಕ ಮೋಹನ್‌ಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಜಿಲ್ಲಾಡಳಿತದಿಂದ ಅತ್ಯುತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಬೆಳವಾಡಿ ಶಾಲೆಯ ಗಣಿತ ಶಿಕ್ಷಕರಾದ ಎಂ ಮೋಹನ್ ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೆಲಸದ ಒತ್ತಡದಿಂದ ಬೇಸತ್ತು ಪ್ರತಿಭಟನೆ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸೇವಾ ಸೌಲಭ್ಯಗಳನ್ನು ನೀಡುವಂತೆ, ಮೊಬೈಲ್ ಆ್ಯಪ್‌ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗಿರುವ ಒತ್ತಡವನ್ನು ನಿಲ್ಲಿಸಲು ಆಗ್ರಹಿಸಿ ತಮ್ಮ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನಗರದ ತಹಸೀಲ್ದಾರ್‌ ಕಚೇರಿ ಮುಂದೆ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ಗುರುವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಸರ್ಕಾರಿ ರಜಾ ದಿನಗಳಲ್ಲೂ ಕೆಲಸ ಮಾಡಬೇಕಾದ ಅನಿವಾರ್ಯತೆ
ಬಹಳ ಒತ್ತಡದಿಂದ ಸರ್ಕಾರಿ ರಜಾ ದಿನಗಳಲ್ಲೂ ಅನಿವಾರ್ಯವಾಗಿ ಕೆಲಸ ಮಾಡಬೇಕಿದೆ ಎಂದು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪೃಥ್ವಿರಾಜ್ ಆರ್‌. ಬೇಸರದಿಂದ ನುಡಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ಅನಿರ್ದಿಷ್ಟಾವಧಿ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮವಾದ ಪೀಠೋಪಕರಣ, ಅತ್ಯುತ್ತಮ ಮೊಬೈಲ್ ಫೋನ್, ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್ ಅಥವಾ ಲ್ಯಾಪ್‌ಟಾಪ್, ಪ್ರಿಂಟರ್‌, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಹೇಮಾವತಿ ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆ
ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಷೇರುದಾರರ ಒತ್ತಾಯದ ಮೇರೆಗೆ ಮರಣ ನಿಧಿ ಸ್ಥಾಪನೆಗಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ೫೦ ಲಕ್ಷ ರುಪಾಯಿಗಳನ್ನು ಮೀಸಲಿಟ್ಟು, ಸಕ್ಕರೆ ನಿರ್ದೇಶನಾಲಯ ಮತ್ತು ಆಡಳಿತ ಮಂಡಳಿಯೊಂದಿಗೆ ಕೂಲಂಕಷವಾಗಿ ಚರ್ಚಿಸಿ ಗಮನಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ೩೨ ಸಾವಿರ ಷೇರುದಾರರಿದ್ದು, ಅವರಿಗೆ ಗೌರವ ಕೊಡುವ ರೀತಿಯಲ್ಲಿ ಮರಣ ನಿಧಿ ನೀಡುವಂತಾಗಬೇಕಾಗಿರುವುದರಿಂದ ಈ ಕುರಿತು ಸಮಗ್ರವಾಗಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದೆಂದರು.
ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಜೀವನ ಕೌಶಲ್ಯ ವೃದ್ಧಿಸುತ್ತದೆ
ಭಾರತ್ ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ರೂಪಿಸುವುದರ ಜೊತೆಗೆ ಅವರಲ್ಲಿ ಜೀವನ ಕೌಶಲ್ಯಗಳನ್ನು ವೃದ್ಧಿಸುತ್ತದೆ ಎಂದು ಹಾಸನ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಮಕ್ಕಳ ಸಂಖ್ಯೆ ಅಧಿಕವಾಗಿದ್ದಾಗ ಜಿಲ್ಲಾ ಹಂತದ ಪರೀಕ್ಷಾ ಶಿಬಿರಗಳನ್ನು ಸ್ಥಳೀಯ ಸಂಸ್ಥೆಗಳು ಹಮ್ಮಿಕೊಳ್ಳುವುದರಿಂದ ಆಯಾಯ ತಾಲೂಕಿನ ಮಕ್ಕಳಿಗೆ ಅನುಕೂಲವಾಗುತ್ತದೆ. ಕೊಟ್ರೇಶ್ ಎಸ್. ಉಪ್ಪಾರ್‌ ಆಲೂರು ತಾಲೂಕು ಕಾರ್ಯದರ್ಶಿಯಾದ ನಂತರ ತಾಲೂಕಿನಲ್ಲಿ ಸ್ಕೌಟ್ಸ್, ಗೈಡ್ಸ್ ತುಂಬಾ ಕ್ರಿಯಾಶೀಲವಾಗಿ ನಡೆಯುತ್ತಿದೆ. ಯುನೀಟ್ ಹಾಗೂ ಮಕ್ಕಳ ಸಂಖ್ಯೆಯೂ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.
ಸಕಲೇಶಪುರದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಎಲ್ಲ ಮೊಬೈಲ್‌ ಆ್ಯಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿದ್ದಾರೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿವೆ. ಆಧಾರ್ ಸೀಡಿಂಗ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆ್ಯಪ್ ಹೀಗೆ ಹತ್ತಾರು ಆ್ಯಪ್‌ಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡಬೇಕಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ಇದರಿಂದ ಬೇಸತ್ತು ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳು ತಿಳಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved