• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಭಸ್ಮ : ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಗೃಹರಕ್ಷಕ ದಳದ ದಿನಾಚರಣೆ
ಗೃಹ ರಕ್ಷಕ ಸಿಬ್ಬಂದಿಯು ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರ್‌ಟಿಒ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಜತೆಗೆ ಆಯಾ ಇಲಾಖೆಗಳ ನಿಯಮಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಾರೆ. ತುರ್ತು ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಪ್ರಾಣ ರಕ್ಷಣೆಗೆ ಮುಂದಾಗುತ್ತಾರೆ ಎಂದು ವೃತ್ತ ನಿರೀಕ್ಷಕ ಪ್ರದೀಪ್ ಬಿ.ಆರ್. ಶ್ಲಾಘಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧಿಕಾರಿ ಧರ್ಮೇಂದ್ರ ಎಚ್.ಎಲ್. ಕಾರ್ಯಕ್ರಮದ ಆದ್ಯಕ್ಷತೆ ವಹಿಸಿ ಮಾತನಾಡಿದರು. ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಕೃಷ್ಣಯ್ಯ ಅವರನ್ನು ಗೌರವಿಸಿ, ಆತ್ಮೀಯವಾಗಿ ಬೀಳ್ಕೊಡಲಾಯಿತು.
ಇರೋ ರಸ್ತೆಗಳನ್ನು ಹದಗೆಡಿಸುತ್ತಿರುವ ಜಲ್‌ಜೀವನ್‌ ಮಿಷನ್‌
ಆಲೂರು ಪಟ್ಟಣದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಲಾಗುತ್ತಿದ್ದು, ಇದಕ್ಕಾಗಿ ಜೆಸಿಬಿ ಮೂಲಕ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಗುಂಡಿಗಳನ್ನು ಬಗೆದು ರಸ್ತೆಯನ್ನು ಹದಗೆಡಿಸಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಏನಾದರೂ ಬಂದರೆ ಈ ರಸ್ತೆಗಳು ಸಂಪೂರ್ಣ ಕೆಸರುಮಯವಾಗಲಿದ್ದು, ಜನರು ಓಡಾಡಲು ಹರಸಾಹಸ ಪಡಬೇಕಾಗುತ್ತದೆ.
ಕಾಡಾನೆಯಿಂದ ಬೆಳೆ ಹಾನಿ ವೀಕ್ಷಿಸಿದ ಶಿವರಾಂ
ಅರೇಹಳ್ಳಿಯ ಮಾಲಹಳ್ಳಿ ಚಂದ್ರು ಅವರ ತೋಟದಲ್ಲಿ ಕಾಡಾನೆಗಳು ೩ ದಿನ ದಾಳಿ ಮಾಡಿ ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಮಾಜಿ ಸಚಿವ ಬಿ ಶಿವರಾಂ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರ ಮಧ್ಯಾಹ್ನ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಬೆಳೆ ಹಾನಿಗೊಳಗಾಗಿರುವ ಕಾಫಿ ಬೆಳೆಗಾರರು, ರೈತರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಕಲ್ಕೆರೆ ಶ್ರೀ ರಾಘವೇಂದ್ರ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಣೆ
ಕಲ್ಕೆರೆ ಗ್ರಾಮದ ಶ್ರೀ ರಾಘವೇಂದ್ರ ಅಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಿಂದ ವಸ್ತು ಪ್ರದರ್ಶನ ನಡೆಯಿತು. ಭಾರತ ದೇಶ ವಿಜ್ಞಾನ ಕ್ಷೇತ್ರದಲ್ಲಿ ಇಡೀ ವಿಶ್ವದಲ್ಲೇ ವಿವಿಧ ತಂತ್ರಜ್ಞಾನ ಪ್ರಯೋಗಗಳಿಂದ ಮುನ್ನುಗುತ್ತಿದ್ದು, ಇದಕ್ಕೆ ಇಸ್ರೋನ ಚಂದ್ರಯಾನವೇ ಸಾಕ್ಷಿಯಾಗಿದೆ. ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡಿದರೆ ಅವರ ಮುಂಬರುವ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೆ. ಟಿ. ಕುಮಾರ್‌ ಹೇಳಿದರು.
ಮಲೆನಾಡಿಗರಿಗೀಗ ಪೊಲೀಸರಿಗಿಂತ ಅರಣ್ಯಾಧಿಕಾರಿಗಳದ್ದೇ ಭಯ
ಅರಣ್ಯ ಇಲಾಖೆಯ ಅಧಿಕಾರಿಗಳ ಕಟ್ಟುನಿಟ್ಟಿನ ಕಾನೂನು ಪಾಲನೆ ಮಲೆನಾಡಿಗರ ಕಿರಿಕಿರಿಗೆ ಕಾರಣವಾಗಿದೆ ಎಂಬುದು ತಾಲೂಕಿನ ಎಲ್ಲೆಡೆಯಿಂದ ಕೇಳಿ ಬರುತ್ತಿರುವ ಮಾತು. ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿ ಎಂಬ ಮಾತು ತಾಲೂಕಿನಲ್ಲಿ ಚಾಲ್ತಿಯಲ್ಲಿದೆ. ಆದರೆ, ಅರಣ್ಯ ಇಲಾಖೆಯ ಕಾನೂನು ಮಲೆನಾಡಿಗರ ವಿರುದ್ಧವಾಗಿದ್ದು, ಈ ವಿರುದ್ಧವಾಗಿರುವ ಕಾನೂನನ್ನು ಈ ಅಧಿಕಾರಿ ಯಥಾವತ್‌ ಚಾಲ್ತಿಗೆ ತರುತ್ತಿರುವುದು ಸದ್ಯ ಜನರ ಸಂಕಷ್ಟಕ್ಕೆ ಕಾರಣವಾಗಿದೆ.
ಪ್ರಶ್ನಿಸದೆ ಏನನ್ನೂ ಒಪ್ಪಿಕೊಳ್ಳಬಾರದು
ಪೋಷಕರೆ ಆಗಲಿ, ಗುರುಗಳೇ ಆಗಲಿ ಸ್ನೇಹಿತರೇ ಆಗಲಿ ಯಾರು ಏನೇ ಹೇಳಿದರೂ ಪ್ರಶ್ನೆ ಮಾಡದೇ ಏನನ್ನೂ ಒಪ್ಪಿಕೊಳ್ಳಬೇಡಿ. ಪ್ರಶ್ನಿಸದೆ ಒಪ್ಪಿಕೊಂಡರೆ ನೀವು ಕಲಿತ ವಿದ್ಯೆಗೆ ಅರ್ಥವೇ ಇರುವುದಿಲ್ಲ. ಹಾಗಾಗಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎನ್ನುವಂತೆ ಪ್ರತಿಯೊಂದನ್ನೂ ಓರೆಗೆ ಹಚ್ಚುವ ಕೆಲಸವನ್ನು ನೀವು ಮಾಡಬೇಕು ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಚಿನ್ನೇನಹಳ್ಳಿ ಸ್ವಾಮಿ ಹೇಳಿದರು. ಇಂದು ವಿದ್ಯಾವಂತರೇ ಮೌಢ್ಯದ ಕೂಪಕ್ಕೆ ಬೀಳುತ್ತಿರುವುದು ದುರಂತ ಮತ್ತು ವಿಪರ್ಯಾಸದ ಸಂಗತಿಯಾಗಿದೆ. ದೇವರಲ್ಲಿ ನಂಬಿಕೆ ಇರಲಿ, ಆದರೆ ಅದರಿಂದಲೇ ಎಲ್ಲವೂ ಆಗುತ್ತದೆ ಎಂಬ ಭ್ರಮೆ ಬೇಡ ಎಂದು ಹೇಳಿದರು.
ನಗರಸಭೆ ಅಧ್ಯಕ್ಷರಿಂದ ಅಧಿಕಾರ ದುರುಪಯೋಗ
ನಗರಸಭೆ ಅಧ್ಯಕ್ಷರು ಹಾಗೂ ಅಧಿಕಾರಿಗಳು ಶಾಮೀಲಾಗಿ ಹಲವು ಅಕ್ರಮಗಳನ್ನು ಮಾಡುವ ಮೂಲಕ ನಗರಸಭೆಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸಿ. ಗಿರೀಶ್ ಆರೋಪಿಸಿದ್ದಾರೆ. ಹಾಲಿ ಅಧ್ಯಕ್ಷರ ಕುಟುಂಬದ ಹೆಸರಿನಲ್ಲಿರುವ ೧೪ ಎಕರೆ ಜಮೀನಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‌ಟಿಪಿ ಪ್ಲಾಂಟ್‌ವರೆಗೆ ಬೀದಿ ದೀಪ ಅಳವಡಿಸಲು ಮುಂದಾಗಿರುವುದು ಖಂಡನೀಯವಾಗಿದೆ ಎಂದರು.
ಸೋಲಾರ್ ಕಂಬ ಮುರಿದು ತೋಟದೊಳಗೆ ನುಗ್ಗಿದ ಕಾಡಾನೆ
ಕಾಡಾನೆಯು ತೋಟದೊಳಗೆ ನುಗ್ಗದಿರಲಿ ಎಂದು ಸೋಲಾರ್ ತಂತಿ ಅಳವಡಿಸಿದ್ದ ತೋಟದ ಮುಂಭಾಗದ ಗೇಟನ್ನು ಬಹಳ ನಾಜೂಕಾಗಿ ಮುರಿದು ತೋಟದೊಳಗೆ ಕಾಡಾನೆ ನುಗಿದ್ದ ದೃಶ್ಯಾವಳಿಯನ್ನು ಕೆಲದಿನಗಳ ಹಿಂದೆ ತಾಲೂಕು ಅರೇಹಳ್ಳಿ ಹೋಬಳಿಯ ಲಿಂಗಾಪುರದಲ್ಲಿ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಇದೀಗ ಇಂತಹದ್ದೆ ಮತ್ತೊಂದು ವಿಡಿಯೋ ಲಭ್ಯವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.
ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆ ಸುಸೂತ್ರ
ದ್ವಿತೀಯ ಪರೀಕ್ಷೆ ಶನಿವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಬೆಳಿಗ್ಗೆ 8.30ರಿಂದಲೇ ಪರೀಕ್ಷೆ ನಡೆಯುವ ಆವರಣಕ್ಕೆ ಬಂದು ಕೊನೆಯ ಕಸರತ್ತು ಎಂಬಂತೆ ಕೆಲವರು ಪುಸ್ತಕ ಹಿಡಿದು ಓದುತ್ತಿರುವುದು ಕಂಡುಬಂದಿತು. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ ೧ರಿಂದ ೨೦ರವರೆಗೆ ನಡೆಯಲಿದೆ. ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ೧೫,೪೪೦ ಹೊಸ ವಿದ್ಯಾರ್ಥಿಗಳು, ೪೦೦ ಖಾಸಗಿ, ೫೮೩ ಪುನರಾರ್ವತಿತರು ಸೇರಿ ೧೬,೪೨೩ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಾದ್ಯಂತ ೩೩ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 553
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved