• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೂರಿನ ದೇಗುಲಗಳಲ್ಲಿ ವೈಕುಂಠ ಏಕಾದಶಿ ಪೂಜೆ
ಆಲೂರು ತಾಲೂಕಿನ ಗಂಜಿಗೆರೆ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ, ಅಡಿಬೈಲು ರಂಗನ ಬೆಟ್ಟದ ಲಕ್ಷ್ಮೀ ರಂಗನಾಥ ಸ್ವಾಮಿ, ಕುಂದೂರಿನ ಲಕ್ಷ್ಮೀನಾರಾಯಣ ಸ್ವಾಮಿ ಗಂಗರದ ಲಕ್ಷ್ಮೀನಾರಾಯಣ ಸ್ವಾಮಿ, ಕರಿಗೌಡನಹಳ್ಳಿಯ ಲಕ್ಷ್ಮೀ ಶ್ರೀನಿವಾಸ ಸ್ವಾಮಿ, ಹಳೆಪಾಳ್ಯದ ಲಕ್ಷ್ಮಿ ಜನಾರ್ಧನ ಸ್ವಾಮಿ, ಬೆಟ್ಟದಳ್ಳಿಯ ಗುಹೇಗುಡ್ಡದ ಉದ್ಧಾರ ರಂಗನಾಥಸ್ವಾಮಿ, ಮರಸು ತಿರುಮಲ ರಂಗನಾಥ ಸ್ವಾಮಿ ದೇಗುಲಗಳಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ ನಡೆಯಿತು.
ರೈತರು ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು
ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ೩-೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯವಿದ್ದು, ಈ ಶಿಬಿರದ ಪ್ರಯೋಜನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ ಎಂದು ಮಹಾಲಕ್ಷ್ಮಿ ಮಂಜಪ್ಪ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉಮೇಶ್ ತಿಳಿಸಿದರು. ರೈತರು ನಿಮ್ಮ ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು. ಸಾಮಾನ್ಯವಾಗಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಕಣ್ಣಿನ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆಗಳನ್ನು ಮಾಡಿಸಿಕೊಂಡರೆ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.
ಆರ್‌ಟಿಇ ಅನುದಾನ ನೀಡದ ಗುಮಾಸ್ತನಿಗೆ ತರಾಟೆ
ಆರ್.ಟಿ.ಇ ಅನುದಾನ ಬಿಡುಗಡೆ ಮಾಡಿ ಮತ್ತು ಆರು, ಏಳು, ಎಂಟನೇ ತರಗತಿ ಪ್ರಾರಂಭ ಮಾಡಲು ನಮಗೆ ಅನುಮತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕನಿಗೆ ೫೦ ಸಾವಿರ ಲಂಚ ನೀಡಿದ್ದರೂ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿ ಕರ್ತವ್ಯದ ವೇಳೆ ಅಧಿಕಾರಿ ವಿರುದ್ಧ ಜೋರಾಗಿಯೇ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ.
ನಗರಸಭೆ ಆಯುಕ್ತ, ಎಂಜಿನಿಯರ್‌ ಲೋಕಾಯುಕ್ತ ಬಲೆಗೆ
ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ನೀಡಿದ್ದ ಸ್ವಚ್ಛತಾ ಟೆಂಡರ್‌ ಬಿಲ್ ಪಾಸ್‌ ಮಾಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ನಗರಸಭೆ ಆಯುಕ್ತ ನರಸಿಂಹಮೂರ್ತಿ ಮತ್ತು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್‌. ವೆಂಕಟೇಶ್ ಗುರುವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆದರೆ ಇದೇ ವೇಳೆ ನಗರಸಭೆ ಆಯುಕ್ತರನ್ನ ಬಂಧಿಸಿ, ಎ.ಆರ್‌. ವೆಂಕಟೇಶ್ ಅವರನ್ನು ಬಿಟ್ಟು ಬಿಡಿ ಎಂದು ನಗರಸಭೆ ಸದಸ್ಯರು ಲೋಕಾಯುಕ್ತರಲ್ಲಿ ಮನವಿ ಮಾಡಿದ ವಿಲಕ್ಷಣ ಘಟನೆಯೂ ನಡೆದಿದೆ.
ಶಿಕ್ಷಣದ ಜತೆ ಗುರುಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಖ್ಯಾತ ವಿಮರ್ಶಕ ಹಾಗೂ ಸಂಸ್ಕೃತ ಚಿಂತಕ ಡಾ. ಎಚ್.ಎಸ್.ಸತ್ಯನಾರಾಯಣ ಹೇಳಿದರು. ಮಕ್ಕಳ ಮೇಲೆ ಶಿಕ್ಷಕರು ಪೋಷಕರು ಬೆದರಿಸುವ ಬದಲು ತಿಳಿಹೇಳಬೇಕು. ಶಾಲೆಗಳಲ್ಲಿ ಪಠ್ಯದ ಜೊತೆಗೆ ಸಂಸ್ಕಾರ ಬಿತ್ತುವ ಕೆಲಸವನ್ನು ಗುರುಕುಲ ಎಜುಕೇಶನ್ ಟ್ರಸ್ಟ್ ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಹಂಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ
ನಿಸ್ವಾರ್ಥ ಸೇವಾ ಮನೋಭಾವ, ನಮ್ಮೂರು ಎಂಬ ಅಭಿಮಾನ ಹಾಗೂ ಮಕ್ಕಳ ಶೈಕ್ಷಣಿಕ ಏಳಿಗೆಗೆ ಅನಂತ್ ಕುಮಾರ್‌ ಅವರ ದೂರದೃಷ್ಠಿಯ ಕಾರಣದಿಂದ ಹಂಗರಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಶಾಲೆ ಎಂಬ ಹೆಗ್ಗಳಿಕೆಯ ಜತೆಗೆ ಪ್ರಖ್ಯಾತಿ ಗಳಿಸಿದೆ. ಇಂತಹ ಯಶಸ್ಸಿಗೆ ಕಾರಣಕರ್ತರಾದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಆರ್.ಅನಂತ್ ಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಅವರ ಸ್ನೇಹಿತರ ಕಾರ್ಯ ಶ್ಲಾಘನೀಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಪ್ರಶಂಸಿದರು.
ಅಕ್ರಮ ಲೇಔಟ್ ಕಾಮಗಾರಿ ನಿಲ್ಲಲಿ
೨೦೨೫ ಜನವರಿಯಲ್ಲಿ ೭೩-೩ ಎಕರೆ ಜಾಗವನ್ನು ಮಾಜಿ ಶಾಸಕರೋರ್ವರು ಮತ್ತವರ ತಂಡದವರು ೯೭ ಮಂದಿಗೆ ಅಕ್ರಮವಾಗಿ ಖಾಯಂ ಸಾಗುವಳಿ ಚೀಟಿ ನೀಡಿ ಭೂ ಕಬಳಿಕೆ ಮಾಡಿ, ಲೇಔಟ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿ ೨೫ ಎಕರೆ ಖರಾಬು ಜಾಗವನ್ನೂ ಕಬಳಿಸಿ ಅಕ್ರಮವಾಗಿ ಲೇಔಟ್ ಮಾಡುತ್ತಿದ್ದು, ಈ ಕಾಮಗಾರಿ ನಿಲ್ಲಬೇಕು. ಅಲ್ಲಿಯವರೆಗೂ ನಮ್ಮದು ನಿರಂತರ ಕಾನೂನು ಹೋರಾಟ ಇರುತ್ತದೆ. ಇಲ್ಲವಾದರೆ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ವಕೀಲರಾದ ಎಂ.ಡಿ. ಗೋಪಾಲೇಗೌಡ ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕೆ ಅನುದಾನ
ಶೀಘ್ರದಲ್ಲಿ ೧೨೦೦ ಕೋಟಿ ರು. ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಲಿದ್ದು, ಕಾಮಗಾರಿ ಪ್ರಾರಂಭವಾಗಿ ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ತಿಳಿಸಿದ್ದಾರೆ. ಮೂಡಿಗೆರೆ ರಸ್ತೆಯ ಚೀಕನಹಳ್ಳಿಯಿಂದ ಬಾಣಾವರ ಹತ್ತಿರದ ಅರಕೆರೆ ಗ್ರಾಮದವರೆಗೆ ಸುಮಾರು ೧೨೦೦ ಕೋಟಿ ರು.ಗಳ ವೆಚ್ಚದಲ್ಲಿ ೮೦ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.
ನಾಡಿನ ಸಂಸ್ಕೃತಿ ಸಾರುವಲ್ಲಿ ನಾಟಕಗಳ ಪಾತ್ರ ಮಹತ್ವದ್ದು
ಕನ್ನಡ ನಾಡಿನ ಸಂಸ್ಕೃತಿ, ಸಂಪ್ರದಾಯವನ್ನು ನಾಡಿಗೆ ಸಾರುವಲ್ಲಿ ನಾಟಕಗಳು ಪ್ರಮುಖ ಪಾತ್ರವನ್ನು ವಹಿಸುವ ಜತೆಯಲ್ಲಿ ಉತ್ತಮ ಸಂದೇಶಗಳನ್ನು ತಳಿಸುವ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ ಎಂದು ಕರವೇ ತಾಲೂಕು ಅಧ್ಯಕ ಹೇಮಂತ್ ಕುಮಾರ್ ಹೇಳಿದರು. ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾಟಕ ಕ್ಷೇತ್ರ ಮಾಡುತ್ತಾ ಬರುತ್ತಿದೆ. ಕನ್ನಡದ ಮಂದಿ ನಾಟಕಗಳನ್ನು ಹೆಚ್ಚು ವೀಕ್ಷಿಸುವ ಜತೆಯಲ್ಲಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು. ಅಲ್ಲದೇ ತಮ್ಮ ಮಕ್ಕಳನ್ನು ರಂಗಭೂಮಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.
ಬೇಲೂರಿನ ಕಾಲೇಜು ಮೈದಾನ ಕಬಳಿಸಲು ಬಿಡುವುದಿಲ್ಲ
ಬೇಲೂರು ಪಟ್ಟಣದ ಹೃದಯ ಭಾಗದಲ್ಲಿರುವ ಕಾಲೇಜು ಮೈದಾನವನ್ನು ಕಬಳಿಸಲು ದುಷ್ಟ ಶಕ್ತಿಗಳು ಹಾತೊರೆಯುತ್ತಿದ್ದು, ಯಾವುದೇ ಕಾರಣಕ್ಕೂ ಭೂ ಮಾಫಿಯಾ ಕಳ್ಳರಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಎಚ್ ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ಮುಂಭಾಗ ಮತ್ತು ಹಿಂಭಾಗ ಕ್ರೀಡಾಂಗಣ ಮಾಡಿ ಅಲ್ಲಿ ನಿರಂತರ ಚಟುವಟಿಕೆಗಳು ನಡೆಯುತ್ತಿದ್ದರೆ ಆ ಜಾಗ ಅನ್ಯರ ಪಾಲಾಗುವುದು ತಪ್ಪುತ್ತದೆ ಎಂದರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved