• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳಲು ಆಹಾರ ಮೇಳಗಳು ಪೂರಕ
ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿಯೇ ವ್ಯವಹಾರಿಕ ಜ್ಞಾನವನ್ನು ಗಳಿಸಬೇಕು. ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಆಯೋಜನೆ ಮಾಡುವ ಆಹಾರ ಮೇಳ ಉತ್ತೇಜಿತವಾಗಿದೆ ಎಂದು ಟೈಮ್ಸ್ ಹಾಸನ ಪಿಯು ಕಾಲೇಜಿನ ಪ್ರಾಂಶುಪಾಲ ನವೀನ್ ಪಿ. ಉಲಿವಾಲ ತಿಳಿಸಿದರು. ವಿದ್ಯಾರ್ಥಿಗಳು ನಿತ್ಯವೂ ನಡೆಯುವ ವ್ಯವಹಾರವನ್ನು ಅವಲೋಕನ ಮಾಡಿದರೆ ಆಹಾರ ಉತ್ಪಾದನೆ, ಬಳಕೆ ಕುರಿತು ಅರಿವನ್ನು ಹೊಂದಬಹುದಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ ಎಂದರು.
ಸಂಸದ ಶ್ರೇಯಸ್‌ ಮೇಲೆ ಶಾಸಕ ಮಂಜು ಮುನಿಸು
ಸಂಸದ ಶ್ರೇಯಸ್ ಪಟೇಲ್ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಾಸಕರ ಗೈರಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಅಧೀಕೃತ ಸಭೆ ನಡೆಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಭೆ ನಡೆಸಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಹಾಗೂ ಸಂಸದರ ವಿರುದ್ಧ ಸರ್ಕಾರಕ್ಕೆ ದೂರು ನೀಡಲು ಶಾಸಕ ಮಂಜು ಸಜ್ಜಾಗಿದ್ದಾರೆ. ಅನಾವಶ್ಯಕವಾಗಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಸಂಸದರ ನಡೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ
ದಿನದ ೨೪ ಗಂಟೆಗಳ ಕಾಲ ಯಾವಾಗಲೂ ಒತ್ತಡದಲ್ಲಿಯೇ ಕರ್ತವ್ಯ ನಿರ್ವಹಿಸುವ ಪೊಲೀಸರು ಮತ್ತು ಪತ್ರಕರ್ತರಿಗೆ ಕ್ರೀಡೆಗಳು ಮಾನಸಿಕ ಉತ್ಸಾಹ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ನಾಯ್ಡು ತಿಳಿಸಿದರು. ಆಗಾಗ್ಗೆ ನಡೆಯುತ್ತಿದ್ದರೇ ನಮ್ಮೊಳಗಿನ ಬಾಂಧವ್ಯದ ಜೊತೆಗೆ ಆರೋಗ್ಯಕ್ಕೂ ಸಹಕಾರಿಯಾಗುತ್ತದೆ. . ಪೊಲೀಸ್ ಇಲಾಖೆ- ಪತ್ರಕರ್ತರ ಸಂಘದಿಂದ ಸೌಹಾರ್ದಯುತ ಕ್ರಿಕೆಟ್ ಇಂತಹ ಪಂದ್ಯಾವಳಿಗಳ ಆಯೋಜನೆಯಿಂದ ಕ್ರೀಡಾಸಕ್ತಿ ಮತ್ತು ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಒಂದು ದಿನದ ಈ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಲಿ ಎಂದು ಇದೇ ವೇಳೆ ಶುಭಹಾರೈಸಿದರು.
ಅನುದಾನ ಕೊರತೆಯಿಂದಾಗಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ
ಅನುದಾನದ ಕೊರತೆಯಿಂದ ರಸ್ತೆಗಳ ಅಭಿವದ್ದಿಯನ್ನು ಒಂದೇ ಬಾರಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದ್ದು, ಸಿಕ್ಕ ಅನುದಾನದಲ್ಲಿ ಆದ್ಯತೆ ಮೇರೆಗೆ ಕಾಮಗಾರಿ ಮಾಡಲಾಗುವುದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು, ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ಸಾಧ್ಯ ಎಂದು ನುಡಿದರು.
ಮಾಹಿತಿ ಇಲ್ಲದೆ ಮಾತನಾಡುವ ಎಂಎಲ್ಸಿ ಸೂರಜ್‌ಗೆ ಬುದ್ಧಿ ಭ್ರಮಣೆಯಾಗಿದೆ
ಮೂರು ವರ್ಷಗಳ ಹಿಂದೆ ಉದ್ಭವ ಮೂರ್ತಿಯಾಗಿ ಕುಟುಂಬದ ಹಿನ್ನೆಲೆಯಿಂದ ರಾಜಕಾರಣಕ್ಕೆ ಬಂದು ವಿಧಾನ ಪರಿಷತ್‌ ಸದಸ್ಯರಾಗಿರುವ ಸೂರಜ್‌ ರೇವಣ್ಣ ಅವರಿಗೆ, ಕೆಲ ವಿಷಯಗಳಲ್ಲಿ ಮಾಹಿತಿ ಕೊರತೆ ಇದೆ. ಹಾಗಾಗಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ದೇವರಾಜೇಗೌಡ ದೂರಿದರು. ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ರಾಜಕೀಯಕ್ಕೆ ಉದ್ಭವ ಮೂರ್ತಿಯಾಗಿ ಕಾಲಿಟ್ಟಿದ್ದಾರೆ. ಎಂಎಲ್‌ಸಿ ಅನುದಾನ ಬಿಟ್ಟು ವೈಯಕ್ತಿಕವಾಗಿ ಸರ್ಕಾರದಿಂದ ಎಷ್ಟು ಅನುದಾನ ತಂದಿದ್ದಾರೆ. ಈ ಸಂದರ್ಭದಲ್ಲಿ ಆಸಿಡ್ ದಾಳಿ ಪ್ರಕರಣವನ್ನು ಪ್ರಸ್ತಾಪಿಸುವ ಅಗತ್ಯ ಇರಲಿಲ್ಲ ಎಂದರು.
ಅಮಿತ್‌ ಶಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಸನದ ಬೂವನಹಳ್ಳಿ ಬೈಪಾಸ್ ಬಳಿ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು. ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಅಮಿತ್‌ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಬಸ್ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಜನವರಿ ೧೦ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ತಮ್ಮ ಘೋಷಣೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚು ಮಾಡುತ್ತಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಸ್ ಪ್ರಯಾಣದ ಹೆಚ್ಚಿಸಿರುವುದು ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದರು.
ಚೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ
ಹೊಳೆನರಸೀಪುರ ತಾಲೂಕಿನ ಬನಶೆಟ್ಟಿಹಳ್ಳಿಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಕೆಟ್ಟು ೧೫ ದಿನ ಕಳೆದರೂ ರಿಪೇರಿಯಾಗದ ಕಾರಣದಿಂದ ಗ್ರಾಮಸ್ಥರು ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಲ್ಪಿಸುವ ಸಲುವಾಗಿ ಜಮೀನುಗಳಿಗೆ ಅಂತರ್‌ಜಲ ವ್ಯವಸ್ಥೆ ಮಾಡುವ ವಿದ್ಯುತ್ ಕಂಬದಿಂದ ವಿದ್ಯುತ್ ವ್ಯವಸ್ಥೆ ಮಾಡಿದ್ದಾರೆ, ಆದರೆ ಮೂರು ಫೇಸ್ ವಿದ್ಯುತ್ ಸ್ಥಗಿತಗೊಂಡ ನಂತರ ಮನೆಗಳಲ್ಲಿ ಸಿಂಗಲ್ ಲೈನ್(ಪ್ಯೂಸ್)ನಿಂದಾಗಿ ಯಾವುದೇ ಉಪಯೋಗವಿಲ್ಲದೇ ಪ್ರತಿನಿತ್ಯ ಸಮಸ್ಯೆಗೆ ಸಿಲುಕಿದ್ದಾರೆ.
ಗ್ಯಾರಂಟಿಗಳಿಂದ ಅಭಿವೃದ್ಧಿ ಶೂನ್ಯ ಎಂದ ಸೂರಜ್‌ ರೇವಣ್ಣ
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಜನರು ಯಾವುದೇ ಭಾಗ್ಯಗಳನ್ನು ಕೇಳದಿದ್ದರೂ ಸಹ ಓಟ್ ಬ್ಯಾಂಕ್‌ಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಕೇವಲ ಅನ್ನಭಾಗ್ಯ ಮಾತ್ರ ಅವಶ್ಯಕತೆಯಿತ್ತು. ಏಕೆಂದರೆ ಇದು ಕೂಲಿ ಕಾರ್ಮಿಕರಿಗೆ, ಬಡವರಿಗೆ ಅನುಕೂಲವಾಗುತ್ತದೆ. ಅನುದಾನಗಳ ಅಭಾವ ತುಂಬಾ ಇದ್ದು ಈ ಹಿನ್ನೆಲೆಯಲ್ಲಿ ನಾನು ಅಭಿವೃದ್ಧಿ ಕಾರ್ಯಗಳಿಗೆ ಹಣ ಕೊಡುತ್ತೇನೆ ಎಂದು ಹೇಳುವುದಿಲ್ಲ ಎಂದರು.
ಪ್ರಕೃತಿ ಏರುಪೇರಿನ ಬಗ್ಗೆ ಸಾಹಿತ್ಯ ಕ್ಷೇತ್ರವೂ ಗಮನಹರಿಸುತ್ತಿಲ್ಲ
ನಾಳಿನ ಆತಂಕಗಳ ಬಗ್ಗೆ ಅತಿವೃಷ್ಟಿ, ಸುಂಟರಗಾಳಿ, ಕಾಳ್ಗಿಚ್ಚು, ಹಿಮ ಕುಸಿತ, ಬರಗಾಲ ರೂಪದಲ್ಲಿ ಭೂಮಿಯೇ ಮಾತನಾಡುತ್ತಿದ್ದರೂ, ಕೇಳಿಸಿಕೊಳ್ಳುವ ವ್ಯವಧಾನ ಯಾರಿಗೂ ಇಲ್ಲವಾಗಿದೆ ಎಂದು ಹಿರಿಯ ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಕಳವಳ ವ್ಯಕ್ತಪಡಿಸಿದರು. ಸಾಹಿತ್ಯ ವಲಯವೂ ಈ ಬಗ್ಗೆ ಚಿತ್ತ ಹರಿಸಿಲ್ಲ. ವಾತಾವರಣ ಬದಲು, ಹವಾಗುಣದ ಬಗ್ಗೆ ಕತೆ, ಕಾದಂಬರಿ ಬರೆದಿಲ್ಲ. ಗ್ರಾಮೀಣ, ನಗರ ಹೀಗೆ ಎರಡು ಕತ್ತಲೆ ಮಧ್ಯೆ ಬದುಕುತ್ತಿರುವ ನಾವು ಎಚ್ಚೆತ್ತುಕೊಳ್ಳಬೇಕಿದೆ. ಮತ್ತೊಂದು ವಿಪರ್ಯಾಸ ಎಂದರೆ, ಭೂಮಿ ಇಷ್ಟೊಂದು ಸಂಕಟ ಪಡುತ್ತಿದ್ದರೂ, ಅಧಿಕಾರಿಗಳಾಗಲೀ, ರಾಜಕಾರಣಿಗಳಾಗಲೀ ಮಾತನಾಡುತ್ತಿಲ್ಲ ಎಂದು ಬೇಸರ ಹೊರಹಾಕಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved