• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯು ವಿದ್ಯಾರ್ಥಿಗಳಿಗೆ ಚಿಕ್ಕಬೆಟ್ಟದಲ್ಲಿ ಇತಿಹಾಸದ ಪಾಠ
ಶ್ರವಣಬೆಳಗೊಳದ ಎಸ್.ಎನ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ಆಯೋಜಿಸಿದ್ದ ಚಂದ್ರಗಿರಿ ಚಿಕ್ಕಬೆಟ್ಟ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಾವಿರಾರು ವರ್ಷಗಳ ಪ್ರಾಚೀನತೆ ಹೊಂದಿರುವ ಇತಿಹಾಸವನ್ನು ತಿಳಿಸುವುದು ಬಹಳ ಮುಖ್ಯವಾಗಿದ್ದು, ಶ್ರವಣಬೆಳಗೊಳದ ಸಾಂಸ್ಕೃತಿಕ, ಧಾರ್ಮಿಕ, ಐತಿಹಾಸಿಕವಾದ ಮೌಲಿಕ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕಾಗಿದೆ ಎಂದರು. ಚಂದ್ರಗಿರಿ ಚಿಕ್ಕಬೆಟ್ಟವು ಧಾರ್ಮಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಮಹತ್ವ ಹೊಂದಿದ ಸ್ಥಳ. ಕ್ರಿಸ್ತ ಪೂರ್ವದಲ್ಲಿ ಆಚಾರ್ಯ ಭದ್ರಬಾಹು ಮುನಿಗಳು ಸಹಸ್ರಾರು ತ್ಯಾಗಿಗಳೊಂದಿಗೆ ಶ್ರವಣಬೆಳಗೊಳಕ್ಕೆ ಬಂದ ಉಲ್ಲೇಖವಿದೆ. ಶ್ರವಣಬೆಳಗೊಳದಲ್ಲಿ ಒಟ್ಟು ೫೭೨ ಶಿಲಾ ಶಾಸನಗಳು ಇದ್ದು, ಅವುಗಳಲ್ಲಿ ೨೭೧ ಶಿಲಾ ಶಾಸನಗಳು ಚಂದ್ರಗಿರಿ ಬೆಟ್ಟದಲ್ಲೆ ಇವೆ.
ಸರ್ಕಾರಿ ವೈದ್ಯರಿಗೆ ಸಚಿವ ಶರಣಪ್ರಕಾಶ ಪಾಟೀಲ್‌ ಎಚ್ಚರಿಕೆ
ಸರ್ಕಾರಿ ವೈದ್ಯರು ಬೆಳಗ್ಗೆಯಿಂದ ಸಂಜೆ ೪ ಗಂಟೆವರೆಗೆ ಆಸ್ಪತ್ರೆಯಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆಯಲ್ಲಿ ಹೊರಗಡೆ(ಖಾಸಗಿ ಆಸ್ಪತ್ರೆ, ಕ್ಲಿನಿಕ್‌) ಕೆಲಸ ಮಾಡುತ್ತಿರುವುದರ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಿಮ್ಸ್ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್‌. ಪಾಟೀಲ ಅವರು ಸೂಚಿಸಿದ್ದಾರೆ.
ಮುಸುಕಿನ ಜೋಳವೂ ಕಾಡಾನೆಗಳ ಪಾಲು
ಮಲೆನಾಡು ಭಾಗದಲ್ಲಿ ಉಪದ್ರವ ಕೊಡುತ್ತಿದ್ದ ಕಾಡಾನೆಗಳು ಈಗ ಬಯಲುಸೀಮೆಯ ಜೋಳ, ಶುಂಠಿ, ಭತ್ತದ ರುಚಿ ಸವಿಯಲು ಮುಂದಾಗುತ್ತಿವೆ. ಬಿಕ್ಕೋಡು, ಕೋಗಿಲೆಮನೆ ವ್ಯಾಪ್ತಿಯಲ್ಲಿ ತಮ್ಮ ಬಿಡಾರವನ್ನು ಹೂಡಿದ್ದು ದನಕರುಗಳಂತೆ ಆರಾಮವಾಗಿ ರಸ್ತೆಯಲ್ಲಿ ಅಡ್ಡಾಡುತ್ತಾ ತಮಗೆ ಇಷ್ಟವಾದ ತೋಟಕ್ಕೆ ನುಗ್ಗಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಸ್ವಾಹ ಮಾಡುತ್ತಿವೆ. ರೈತರು ಎರಡು ದಿಕ್ಕಿನಿಂದ ತೊಂದರೆಗೆ ಸಿಲುಕಿದ್ದು ಒಂದು ಕಡೆ ಅತಿಯಾದ ಮಳೆ, ಮತ್ತೊಂದು ಕಡೆ ಕಾಡಾನೆಗಳ ನಿರಂತರ ಹಾವಳಿ. ಈ ಎರಡೂ ಬಾಧೆಗಳ ಮಧ್ಯೆ ರೈತರ ಪರಿಶ್ರಮದ ಫಸಲು ಸಂಪೂರ್ಣವಾಗಿ ಹಾಳಾಗಿದ್ದು, ಲಕ್ಷಾಂತರ ರು. ಮೌಲ್ಯ ನಷ್ಟ ಸಂಭವಿಸಿದೆ.
ಸಕಲೇಶಪುರ ಪುರಸಭೆ ಮುಖ್ಯಾಧಿಕಾರಿ ಕಚೇರಿಗೆ ಬೆಂಕಿ

ಪಟ್ಟಣ ಪುರಸಭೆಯ ಮುಖ್ಯಾಧಿಕಾರಿಯ ಕಛೆರಿಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಪುರಸಭೆಯ ಮುಖ್ಯಾಧಿಕಾರಿ ಕಚೇರಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೊಠಡಿಗೆ ನುಗ್ಗಿ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.

ಶಿರಾಡಿಯಲ್ಲಿ ಹೊಳೆಗೆ ಬಿದ್ದ ಕಾರು
ಮೂಲತಃ ಶಿವಮೊಗ್ಗ ಜಿಲ್ಲೆಯ ಗೋವಿಂದ ನಾಯ್ಕ ಎಂಬುವವರು ತಮ್ಮ ಮಗನನ್ನು ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿರುವ ನವೋದಯ ವಸತಿ ಶಲೆಗೆ ಬಿಟ್ಟುಬರೆಲೆಂದು ತಮ್ಮ ಪತ್ನಿ ಹಾಗೂ ಮಗಳ ಜತೆ ಕಾರಿನಲ್ಲಿ ಹೋಗುತ್ತಿದ್ದಾಗ ಮಾರನಹಳ್ಳಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಈ ವೇಳೆ ರಸ್ತೆ ಬದಿ ತಡೆಗೋಡೆ ಕೂಡ ಇಲ್ಲದಿದ್ದರಿಂದ ಕಾರು ಸುಮಾರು 80 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಉರುಳಿದ್ದನ್ನು ಕಮಡ ಸ್ಥಳೀಯರು ಹಾಗೂ ಚಾಲಕರು ಕೂಡಲೇ ಕೆಳಗಿಳಿದು ಎಲ್ಲರನ್ನೂ ಕಾರಿನಿಂದ ಹೊರಕ್ಕೆ ಕರೆತಂದಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಮೂಹ ನಮಾಜ್ ನಿಷೇಧಿಸಲಿ
ಸಾರ್ವಜನಿಕ ಸ್ಥಳಗಳಲ್ಲಿ “ಸಮೂಹ ನಮಾಜ್” ಹೆಸರಿನಲ್ಲಿ ರಸ್ತೆ, ಸರ್ಕಾರಿ ಆವರಣ ಹಾಗೂ ಸಾರ್ವಜನಿಕ ಸೌಲಭ್ಯಗಳ ದುರುಪಯೋಗ ನಡೆಯುತ್ತಿರುವುದನ್ನು ಖಂಡಿಸಿ, ತಕ್ಷಣವೇ ಸರ್ಕಾರ ನಿಷೇಧ ಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಶ್ರೀರಾಮಸೇನೆಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು. ರಸ್ತೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಕಡ್ಡಾಯ. ಆದರೆ ಕೆಲವಡೆ ಪೊಲೀಸರು ಅನುಮತಿ ಪಡೆಯದೇ ಟ್ರಾಫಿಕ್ ತಿರುಗಿಸುವ ಮೂಲಕ ಸಾರ್ವಜನಿಕರ ಹಕ್ಕನ್ನು ದಾರಿ ತಪ್ಪಿಸುತ್ತಿದ್ದಾರೆ. ಸಿ.ಆರ್‌.ಪಿ.ಸಿ. ೧೪೪ ಮತ್ತು ಪಬ್ಲಿಕ್ ರೈಟ್ ಆಫ್ ವೇ ಆಕ್ಟ್ ಪ್ರಕಾರ ರಸ್ತೆ ಎಲ್ಲರಿಗೂ ಸೇರಿದ್ದು, ಅದನ್ನು ಧಾರ್ಮಿಕ ಕಾರ್ಯಕ್ಕಾಗಿ ತಡೆಹಿಡಿಯುವುದು ಕಾನೂನು ಉಲ್ಲಂಘನೆ ಎಂದು ಹೇಳಿದರು.
ಶಿಥಿಲಗೊಂಡ ರಂಗನಕೊಪ್ಪಲು ಸರ್ಕಾರಿ ಶಾಲೆ ಕಟ್ಟಡ
ಮಾದಿಹಳ್ಳಿ ಹೋಬಳಿ, ಆಂದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿ ರಂಗನಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಪ್ರತಿವರ್ಷ ಸುರಿಯುವ ಭಾರಿ ಮಳೆಯಿಂದ ಶಾಲೆಯ ಆರ್‌ಸಿಸಿ ಮೇಲ್ಛಾವಣಿ ಮತ್ತು ಗೋಡೆಗಳು ಹಾಳಾಗಿದ್ದು, ಈಗ ಸುರಿಯುತ್ತಿರುವ ಮಳೆಗೆ ಸೋರುತ್ತಿದೆ. ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೇಳಲು ಮಕ್ಕಳು ಹೆದರುತ್ತಿದ್ದಾರೆ. ಮಕ್ಕಳು ಜೀವಭಯದ ನಡುವೆ ಮುಂದೇನು ಗತಿ ಕಾದಿದೆ ಎಂದು ಶಾಲೆಗೆ ತೆರಳುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆಯಿಂದ ಹಾಸನಾಂಬೆ ಹಿರಿಯಕ್ಕ ಕೆಂಚಾಂಬಿಕೆ ಜಾತ್ರೆ
ಸಪ್ತಮಾತೃಕೆಯರಲ್ಲಿ ಹಿರಿಯರಾದ ಕೆಂಚಾಂಬಿಕೆಯ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲದೆ ಇರುವ ಕಾರಣ, ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯುವ ಇಲ್ಲಿನ ಜಾತ್ರಾ ಮಹೋತ್ಸವ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದಷ್ಟು ಜನಮನ್ನಣೆ ಪಡೆದಿಲ್ಲ. ಸಪ್ತಮಾತ್ರಕ್ಕೆಯರಾದ ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ, ಚಾಮುಂಡಿ ಇವರಲ್ಲಿ ಹಿರಿಯರಾದ ಬ್ರಾಹ್ಮಿ ದೇವಿ ತಾಲೂಕಿನ ಹರಿಹಳ್ಳಿಯಲ್ಲೂ ವೈಷ್ಣವಿ, ಮಹೇಶ್ವರಿ, ಕೋಮಾರಿಯರು ಹಾಸನಾಂಬೆ ದೇಗುಲದಲ್ಲೂ ವಾರಾಹಿ, ಇಂದ್ರಾಣಿ, ಚಾಮುಂಡೀಯರು ಹಾಸನದ ದೇವಿಗೆರೆಯಲ್ಲೂ ಪೂಜಿಸಲ್ಪಡುತ್ತಾರೆ.
ಅಸಮರ್ಪಕ ಬಸ್‌ ಖಂಡಿಸಿ ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಬಸ್ ಡಿಪೋ ಇದ್ದರೂ ಸಹ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲ.ಇನ್ನು ಪ್ರತಿನಿತ್ಯ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಉನ್ನತ ವ್ಯಾಸಂಗ ಮಾಡಲು ಸುಮಾರು ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಬೆಳಗಿನ ಸಮಯ ೭ರಿಂದ ೮ ಗಂಟೆ ಸಮಯದವರೆಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಭಾಗೀಯ ಅಧಿಕಾರಿಗಳನ್ನು ವಿಚಾರಿಸಲು ಹೋದರೆ ನಮಗೆ ಬಸ್ ಕೊರತೆ ಇದೆ. ನಿಮಗೆ ಬೇಕಾದ ಸಮಯದಲ್ಲಿ ಬಸ್‌ಗಳನ್ನು ನೀಡಲು ಅವಕಾಶ ಇಲ್ಲ ಎಂದು ಉಡಾಫೆಯಿಂದ ವರ್ತಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಲಮುರಿ ಗಣಪತಿ ದೇವಾಲಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
ಶ್ರೀಲಕ್ಷ್ಮೀ ಬಡಾವಣೆಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ನಿರ್ವಿಘ್ನ ಬಲಮುರಿ ಗಣಪತಿಯನ್ನು ಲೋಕಾರ್ಪಣೆಗೊಳಿಸಲಾಗುವುದು. ಬಡಾವಣೆಯ ನಿವಾಸಿಗಳಿಗೆ ಸುತ್ತಮುತ್ತ ದೇವಸ್ಥಾನ ಇಲ್ಲದೆ ಪಟ್ಟಣಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದನ್ನು ಮನಗಂಡು ಬಡಾವಣೆಯ ಪ್ರಮುಖರು ದೇವಸ್ಥಾನ ನಿರ್ಮಾಣ ಮಾಡಲು ಮುಂದಾದರು. ಪಟ್ಟಣದಲ್ಲೇ ಪ್ರಥಮ ಬಾರಿಗೆ ನಿರ್ವಿಘ್ನ ಗಣಪತಿ ಸ್ಥಾಪಿಸಲಾಗುತ್ತಿದ್ದು, ೪೦ ಅಡಿ ಆಂಜನೇಯಸ್ವಾಮಿ ದೇವಸ್ಥಾನದಿಂದ ಗ್ರಾಮದೇವತೆ ವಳಗೇರಮ್ಮ ದೇವಿಯ ವೈಭವಪೂರ್ಣ ಉತ್ಸವದೊಂದಿಗೆ ಶ್ರೀಲಕ್ಷ್ಮೀ ಬಡಾವಣೆಗೆ ಆಗಮಿಸಲಿದ್ದು ಮಂಗಳವಾದ್ಯ, ಚಂಡಿವಾದ್ಯ, ಕೋಲಾಟ ಮೆರವಣಿಗೆಗೆ ಮೆರುಗು ನೀಡಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved