• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿಯಲ್ಲಿ ಗೊರೂರು ಯೋಗಾನರಸಿಂಹಸ್ವಾಮಿ ಜಾತ್ರೆ
ಫೆ.4ರಂದು ಗೊರೂರು ಗ್ರಾಮದಲ್ಲಿ ಯೋಗನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಅದೇ ದಿನ ಮಧ್ಯಾಹ್ನ ರಥೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗೊರೂರು ಸುತ್ತ ಮುತ್ತಲಿನ ಗ್ರಾಮಸ್ಥರು, ವಿವಿಧ ರಾಜಕೀಯ ಮುಖಂಡರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಶಾಸಕ ಮನವಿ ಮಾಡಿದರು.
ಕರಾಟೆಯಿಂದ ದೈಹಿಕ ಶಕ್ತಿ ಹಾಗೂ ಮಾನಸಿಕ ಶಕ್ತಿ ವೃದ್ಧಿ
ಕರಾಟೆ ಆಗಿರಬಹುದು, ಕ್ರೀಡೆ ಆಗಿರಬಹುದು, ಇಂತಹ ಕ್ರೀಡೆಯು ಸ್ವಯಂ ರಕ್ಷಣೆ ಅಲ್ಲದೇ ದೈಹಿಕ ಶಕ್ತಿ, ಮಾನಸಿಕ ಶಕ್ತಿ ವೃದ್ಧಿಸುವುದರ ಜೊತೆಗೆ ಒಳ್ಳೆಯ ಆರೋಗ್ಯ ಲಭಿಸುತ್ತದೆ ಎಂದರು. ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರಬಹುದು ಜೊತೆಯಲ್ಲಿ ಇಂತಹ ಕ್ರೀಡೆಯಲ್ಲಿ ತೊಡಗಿಸಿಕೊಂಡಿರಬೇಕು ಎಂದು ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಓಪನ್ ೪ನೇ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಉದ್ಘಾಟಿಸಿ ಜನಪ್ರಿಯ ಆಸ್ಪತ್ರೆಯ ಛೇರ್‍ಮನ್ ಡಾ. ಅಬ್ದುಲ್ ಬಶೀರ್‌ ತಿಳಿಸಿದರು.
ಶಾಸಕನಾಗಿ ಮೂಲಭೂತ ಸೌಕರ್ಯ ಕಲ್ಪಿಸಿದ್ದೇನೆ
ಲೋಕೋಪಯೋಗಿ ಇಲಾಖೆಯ ವತಿಯಿಂದ 1 ಕೋಟಿ 50 ಲಕ್ಷ ರು. ವೆಚ್ಚದಲ್ಲಿ ಕಡೂರು ಗಡಿಯಿಂದ ಕರಡಿಹಳ್ಳಿ ಬೋವಿ ಕಾಲೋನಿ ಮಾರ್ಗ ಕಲ್ಲುಸಾದರಹಳ್ಳಿವರಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಕರಡಿಹಳ್ಳಿ ಬೋವಿ ಕಾಲೋನಿ ಗ್ರಾಮದಲ್ಲಿ ಭೂಮಿಪೂಜೆ ನೆರವೇರಿಸಿದರು. ನಾನು ಶಾಸಕನಾದ ಮೇಲೆ ಗ್ರಾಮಗಳಿಗೆ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ಶಾಲೆ ಹಾಗೂ ದೇವಸ್ಥಾನ ನಿರ್ಮಿಸಿಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಕೆರೆಗಳಿಗೆ ನೀರು ಹರಿಸುವುದಾಗಿ ಹೇಳಿದರು.
ಕಬಳಿ ಬಸವೇಶ್ವರ ದೇಗುಲ ವಿವಾದ ಬಗೆಹರಿಸಿದ ನಿರ್ಮಲಾನಂದ ಶ್ರೀ
ತಾಲೂಕಿನ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನ ವಿವಾದ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಮಧ್ಯಸ್ಥಿಕೆಯೊಂದಿಗೆ ಸುಖಾಂತ್ಯಗೊಂಡಿದ್ದು, ಈ ಹಿಂದಿನ ಅರ್ಚಕರೇ ಪೂಜೆ ಮುಂದುವರಿಸುವಂತೆ ನಿರ್ಧರಿಸಲಾಗಿದೆ. ಶ್ರೀ ಕ್ಷೇತ್ರ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಪೂಜೆಗೆ ಸಂಬಂಧಿಸಿದಂತೆ ಅರ್ಚಕರಾದ ರೇಣುಕಾ ಆರಾಧ್ಯ ಕುಟುಂಬಸ್ಥರು ಕಾನೂನು ಮೊರೆಯನ್ನು ಹೋಗಿದ್ದರು. ಆದರೆ ಈ ಕಾನೂನು ಸಮರದಲ್ಲಿ ನ್ಯಾಯಾಂಗ ಇಲಾಖೆಯು ಅರ್ಚಕರ ಪರವಾಗಿ ತಡೆಯಾಜ್ಞೆ ನೀಡಿ ಪೂಜೆ ಮುಂದುವರೆಸುವಂತೆ ಆದೇಶಿಸಿತ್ತು.
ಹಾಸನ ಜಿಲ್ಲೆಗೆ ಡಾ.ಹೆಬ್ಬಾರ್ ಅನುಪಮ ಸೇವೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

ಸಾಧ್ಯವಾದರೆ ಒಳ್ಳೆಯದನ್ನು ಮಾಡಿ, ಅವಕಾಶ ಸಿಗದಿದ್ದರೆ ಉತ್ತಮ ಕೆಲಸ ಮಾಡುವವರ ಜೊತೆ ಕೈಜೋಡಿಸಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕೆಂಗೇರಿಯ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ಸರ್ಕಾರಿ ಸವಲತ್ತನ್ನು ಕಾರ್ಮಿಕರಿಗೆ ತಲುಪಿಸಿ
ಕಾರ್ಮಿಕ ವರ್ಗದವರಿಗೆ ಸರ್ಕಾರದ ಸವಲತ್ತುಗಳು ವಿಫುಲವಾಗಿದ್ದು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ. ಮಂಜು ತಾಕೀತು ಮಾಡಿದರು. ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ‌ ಭದ್ರತೆ ಯೋಜನೆಗಳ ಹಾಗೂ ಕಾರ್ಮಿಕ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
ವಿಕಲಚೇತನರೊಂದಿಗೆ ಹೊಸ ವರ್ಷಾಚರಣೆ
ಚನ್ನರಾಯಪಟ್ಟಣ ರೋಟರಿ ಕ್ಲಬ್ ವಿಷನ್ ವತಿಯಿಂದ ಪಟ್ಟಣದ ಸಮೀಪದ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ಇರುವ ವಿಕಲಚೇತನ ಮಕ್ಕಳ ಪಾಠಶಾಲೆಯಲ್ಲಿ ಮಕ್ಕಳ ಜೊತೆ ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಹೊಸ ವರ್ಷಾಚರಣೆ ಮಾಡಲಾಯಿತು. ಕ್ಲಬ್‌ನ ವತಿಯಿಂದ ೫೦ ಜನ ವಿಕಲಚೇತನ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಯಿತು. ಇಂಥ ಮಕ್ಕಳ ಜೊತೆಯಲ್ಲಿ ಹೊಸ ವರ್ಷವನ್ನು ಆಚರಣೆ ಮಾಡಿದಲ್ಲಿ ವಿಕಲಚೇತನ ಮಕ್ಕಳು ಸಹ ಹೊಸ ವರ್ಷದ ಸಂತೋಷವನ್ನು ಅನುಭವಿಸಬಹುದು ಎಂದರು.
ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಹಾಗೂ ಅಧೀಕ್ಷಕ
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ತಂದೆಯನ್ನೇ ಹೊಡೆದು ಕೊಂದ ಮಗ
ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಶಿಧರ (58 ವರ್ಷ) ಎಂಬುವವರನ್ನ ಮಗನೇ ಹತ್ಯೆ ಮಾಡಿದ್ದು, ನಂತರ ಹೃದಯಾಘಾತದಿಂದ ಪಟ್ಟಿದ್ದಾರೆ ಎಂದು ನಂಬಿಸಲು ಮುಂದಾಗಿ ತಾಯಿ ಹಾಗೂ ಗ್ರಾಮಸ್ಥರ ಹೇಳಿಕೆಯಿಂದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲು ಮಾಡಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved