• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿತರಕರ ಹಿತದೃಷ್ಠಿ ಕಾಯಲು ವಿತರಕರು ಒಗ್ಗೂಡಬೇಕು
ಬಿಸಿಲು, ಚಳಿ, ಗಾಳಿ ಎನ್ನದೇ ದಿನನಿತ್ಯ ಸೂರ್ಯಹುಟ್ಟುವ ಸಮಯದಲ್ಲೇ ಎದ್ದು ಕೆಲಸ ಮಾಡುವ ಕಾಯಕಯೋಗಿಗಳಾಗಿದ್ದು ಅವರ ನೋವು ನಲಿವಿಗೆ, ಕುಟುಂಬದ ನಿರ್ವಹಣೆಗೆ ಸರ್ಕಾರ ಮುಂದಾಗಬೇಕಾಗಿರುವುದು ಅನಿವಾರ್ಯ. ಆದ್ದರಿಂದ ಸಮ್ಮೇಳನ ನಡೆಸಲು ರಾಜ್ಯಾಧ್ಯಕ್ಷ ಶಂಭುಲಿಂಗರವರ ಆದೇಶದಂತೆ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಬಜೆಟ್ ಮುನ್ನ ಸರ್ಕಾರದ ಗಮನ ಸೆಳೆಯಲು ಮಾಡುತ್ತಿರುವ ಕಾರ್ಯಕ್ರಮ ವಿತರಕರ ಹಿತದೃಷ್ಠಿ ಕಾಯಲು ವಿತರಕರು ಒಗ್ಗೂಡಬೇಕು ಎಂದು ಕಿರಣ್‌ ಹೇಳಿದರು.
ದೇಗುಲ ಲೋಕಾರ್ಪಣೆ ಕಾರ್ಯಕ್ರಮ
ಜೀರ್ಣೋದ್ಧಾರಗೊಂಡ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ ಮತ್ತು ಶ್ರೀ ಚಂಡಿಕೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆಯ ಕಳಸ ಕುಂಭಾಭಿಷೇಕ ಫೆ 23ಬರ ಭಾನುವಾರ, ಸೋಮವಾರ ನಡೆಯಲಿದೆ. ಡಾ. ವೀರೇಂದ್ರ ಹೆಗ್ಗಡೆ, ನುಗ್ಗೇಹಳ್ಳಿ ಪುರ ವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕತ್ತರಿ ಘಟ್ಟ ಮಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ್ ಗುರೂಜಿ, ತಾಲೂಕು ಮುಜರಾಯಿ ಅರ್ಕರ ಸಂಘದ ಅಧ್ಯಕ್ಷ ಶ್ರೀಧರ್ ಮೂರ್ತಿ, ಶಾಸಕ ಸಿ.ಎನ್. ಬಾಲಕೃಷ್ಣ, ಇತರರು ಪಾಲ್ಗೊಳ್ಳಲಿದ್ದಾರೆ.
ವಿವಿ ಉಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಎಬಿವಿಪಿ ಹೋರಾಟ
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ನಗರದ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಶಿಕ್ಷಕ ತಜ್ಞರ ದುಂಡುಮೇಜಿನ ಸಭೆ ನಡೆಸಿ ವಿವಿಗೆ ಕಾಯಕಲ್ಪ ನೀಡುವ ದೃಷ್ಟಿಯಿಂದ ಈ ಸಾಲಿನ ವಾರ್ಷಿಕ ಬಜೆಟ್‌ನಲ್ಲಿಯೇ ಅನುದಾನವನ್ನು ಮೀಸಲಿಡಬೇಕೆಂದು ಆಗ್ರಹಿಸಲು ನಿರ್ಧರಿಸಲಾಯಿತು. ವಿವಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗುವುದಾಗಿ ಎಬಿವಿಪಿ ಜಿಲ್ಲಾ ಪ್ರಮುಖ್ ಕಾಂತರಾಜು ತಿಳಿಸಿದರು.
ತಾಳೂರು ಕೃಷಿಪತ್ತಿನ ಸಂಘಕ್ಕೆ ಚುನಾವಣೆ
ತಾಳೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾಸನ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿರವರ ಬಣ ಮೇಲುಗೈ ಸಾಧಿಸಿದೆ. ೧೨ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿಂದುಳಿ ವರ್ಗ-ಎ ಮೀಸಲು ಸ್ಥಾನಕ್ಕೆ ಟಿ. ಬಿ. ರಾಜಶೇಖರ್, ಹಿಂದುಳಿದ ವರ್ಗ-ಬಿ ಎಸ್. ಆರ್. ಹರೀಶ್, ಮಹಿಳಾ ಸಾಮಾನ್ಯ-ವಸಂತಮ್ಮ ಹಾಗೂ ನೀಲಮ್ಮ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಕ್ಕೆ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದರು.
ಇರುವ ಶೈಕ್ಷಣಿಕ ಸವಲತ್ತುಗಳನ್ನು ಬಳಸಿಕೊಂಡು ಸಾಧನೆ ಮಾಡಿ
ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಲಿಕಾ ಪೂರಕ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಉತ್ತಮ ಅವಕಾಶಗಳು ಇದ್ದು, ಅವರು ದೊರೆತ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಪೋಷಕರು ಕಂಡ ಕನಸ್ಸನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಕಲಿಕೆಯ ಕಾರ್ಯಸೂಚಿ ರೂಪಿಸಿಕೊಂಡು ಮುನ್ನಡೆಯುವುದು ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಸಲಹೆ ನೀಡಿದರು. ಓದುವ ಸಮಯದಲ್ಲಿ ನಿಶ್ಚಿಂತೆಯಿಂದ ಓದಿ, ಚೆನ್ನಾಗಿ ಊಟ ಹಾಗೂ ನಿದ್ದೆ ಮಾಡಿ, ಕಲಿಕೆಯನ್ನು ಒತ್ತಡದಲ್ಲಿ ಮಾಡದೇ ಪ್ರೀತಿಯಿಂದ ಕಲಿತಾಗ ಯಶಸ್ಸು ದೊರೆಯುತ್ತದೆ ಎಂದರು.
ಸೇವಾನಿರತ ಮಹಿಳಾ ಪೌರ ಕಾರ್ಮಿಕರ ಮೇಲೆ ಹಲ್ಲೆ
ಸೇವಾನಿರತ ಮಹಿಳಾ ಪೌರಕಾರ್ಮಿಕರ ಮೇಲೆ ಮುಸ್ಲಿಂ ಯುವಕ ಮನ್ನು ಮತ್ತು ಆತನ ತಾಯಿ ಸೇರಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ನಗರದ ೨೩ನೇ ವಾರ್ಡ್‌ನಲ್ಲಿ ಶನಿವಾರ ನಡೆದಿದೆ. ನಮ್ಮ ಮನೆ ಮುಂದೆ ಏಕೆ ಕೊಳೆತಿರುವ ಕಸ ಹಾಗೂ ತ್ಯಾಜ್ಯದ ಗುಡ್ಡೆ ಹಾಕಿದ್ದೀರಾ ಎಂದು ಏಕವಚನದಲ್ಲಿ ಬಾಯಿಗೆ ಬಂದಂತೆ ನಿಂದಿಸಿದ್ದಲ್ಲದೆ, ಮನೆಯಲ್ಲಿದ್ದ ದೊಣ್ಣೆ ತಂದು ಹಲ್ಲೆ ಮಾಡಿ ದುರ್ವರ್ತನೆ ತೋರಿದ್ದಾರೆ. ಮಹಿಳಾ ಪೌರ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೊತೆಯಲ್ಲಿದ್ದವರು ಕೂಡಲೇ ಅವರನ್ನು ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಜಾಜೂರು ಗ್ರಾಪಂ ಶೀಘ್ರ ನಗರಸಭೆಯಾಗಲಿದೆ
ಜಾಜೂರು ಗ್ರಾಮ ಪಂಚಾಯಿತಿಯನ್ನು ಮುಂದಿನ ಬಾರಿ ನಗರಸಭೆಯಾಗಿ ಪರಿವರ್ತಿಸಲಾಗುವುದು. ಈ ನಿಟ್ಟಿನಲ್ಲಿ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಾಸಕ ಕೆ. ಎಂ. ಶಿವಲಿಂಗೇಗೌಡ ತಿಳಿಸಿದರು. ನಗರ ಹೊರವಲಯದ ಜಾಜೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಲೀಲಾಬಾಯಿ ಚಂದ್ರಶೇಖರನಾಯ್ಕ್ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.
ಮಠಾಧೀಶರು ಕೇವಲ ಧ್ಯಾನ, ಪೂಜೆಗೆ ಮೀಸಲಾಗಬಾರದು
ಪುಷ್ಪಗಿರಿ ಮಹಾಸಂಸ್ಥಾನ ವತಿಯಿಂದ ಹಾಸನದ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್, ಫಾರ್ಮಸಿ ಕಾಲೇಜು ಮತ್ತು ಹಾಸ್ಟೆಲ್ ಭೂಮಿಪೂಜೆ ನೆರವೇರಿಸಲು ಪೂರ್ವಭಾವಿ ಸಭೆಯನ್ನು ಕರೆದು ಅದರ ಸಾನ್ನಿಧ್ಯವನ್ನು ವಹಿಸಿ ಮಾತನಾಡುತ್ತಾ ಮಠಾಧೀಶರು ಕೇವಲ ಧ್ಯಾನ ಪೂಜೆಗೆ ಮೀಸಲು ಆಗಬಾರದು. ಶೂನ್ಯದಿಂದ ಪ್ರಾರಂಭವಾದ ಪುಷ್ಪಗಿರಿ ಮಠ ಇಂದು ಪುಷ್ಪಗಿರಿ ಕ್ಷೇತ್ರವಾಗಿದೆ ಎಂದು ಶ್ರೀ ಪುಷ್ಪಗಿರಿ ಕ್ಷೇತ್ರದ ಜಗದ್ಗುರು ಶ್ರೀ ಸೋಮಶೇಖರ ಶಿವಾಚಾರ್ಯರು ತಿಳಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಮಾಧ್ಯಮ ಅಕಾಡೆಮಿ, ರಾಜ್ಯಮಟ್ಟದ ಪ್ರಶಸ್ತಿ ಪಡೆದವರಿಗೆ ಸನ್ಮಾನ

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಿಎಂ ಚರ್ಚೆಗೆ ಆಹ್ವಾನಿಸದಿದ್ರೆ ಬೆಂಗಳೂರು ಚಲೋ : ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ಎಚ್ಚರಿಕೆ

ಅಣ್ಣಾ ಹಜಾರೆ-ಸಂತೋಷ ಹೆಗಡೆ ಇವರುಗಳ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಅನಿರ್ದಿಷ್ಟ ಅವಧಿಗೆ ನಡೆಸುವುದಾಗಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ತಿಳಿಸಿದರು

  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 553
  • next >
Top Stories
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved