• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರಿ ವೇಳೆ ತರಬೇತಿ ವೈದ್ಯರ ಜೊತೆ ಕರ್ತವ್ಯ ನಿರತ ವೈದ್ಯರೂ ಇರಬೇಕು
ನಮ್ಮೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗಳು ಸಿಗುತ್ತಿಲ್ಲ ಎಂದು ಕೆಲವು ದಿನಗಳ ಹಿಂದೆ ಎಲ್ಲಾ ಪ್ರತಿಕೆಗಳಲ್ಲೂ ವರದಿ ಆಗಿತ್ತು, ಈ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದೆ. ಇತ್ತೀಚೆಗೆ ಬಂದಿರುವ ಸ್ತ್ರೀ ರೋಗ ತಜ್ಞರೊಬ್ಬರು ಹೆರಿಗೆ ಮಾಡಿಸಲು ಇಂತಿಷ್ಟು ಹಣ ನೀಡ ಬೇಕು ಇಲ್ಲದಿದ್ದರೆ ಹೆರಿಗೆ ಮಾಡಲ್ಲ ಎನ್ನುತ್ತಿದ್ದಾರಂತೆ ಇದೆಲ್ಲ ಇಲ್ಲಿ ನಡೆಯಲ್ಲ. ಬಡವರಿಗೆ ಚಿಕಿತ್ಸೆ ನೀಡಲು ಹಣಕ್ಕೆ ಒತ್ತಾಯಿಸಿದರೆ ನಿಮಗೆ ಒಳ್ಳೆಯದಾಗಲ್ಲ. ಆ ದೇವರಿಗಾದರು ಹೆದರಿ ಕೆಲಸ ಮಾಡಿ. ಇದನ್ನು ಗಮನಿಸಿ ಸರಿಪಡಿಸಿ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್‌ಗೆ ಶಾಸಕ ಎಚ್.ಡಿ.ರೇವಣ್ಣ ಸೂಚಿಸಿದರು.
ನಾಳೆ ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಗೆ ನಾಮಫಲಕ
ಸರ್ಕಾರಿ ಮಹಿಳಾ ಕಾಲೇಜು ಮುಂಭಾಗ ಶನಿವಾರ ಡಾ. ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಮತ್ತು ರಕ್ತದಾನ ಶಿಬಿರ ಹಾಗೂ ದೇಹದಾನ ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಕಲ್ಯಾಣ ರೀಸರ್ಚ್‌ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ಕರೀಗೌಡ ಮತ್ತು ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್ ತಿಳಿಸಿದರು. ಡಾ. ಗುರುರಾಜ ಹೆಬ್ಬಾರ್ ಸೇವಾ ಪ್ರಶಸ್ತಿ ಪುರಸ್ಕೃತವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಬೆಂಗಳೂರಿನ ಐಗಾಟ್ ಸಂಸ್ಥಾಪಕ ನಿರ್ದೇಶಕ ಡಾ. ಎನ್.ಎಸ್. ನಾಗೇಶ್ ಅವರಿಗೆ ನೀಡಿ ಗೌರವಿಸಲಾಗುತ್ತದೆ.
ಬಾಣಂತಿಯರ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಕೆಲ ವಾರಗಳಿಂದ ರಾಜ್ಯದಲ್ಲಿ ಕರಾಳ ದಿನಗಳು ಸಂಭವಿಸುತ್ತಿದ್ದು, ಸರಿಯಾದ ಚಿಕಿತ್ಸೆ ಸಿಗದೇ ಹಾಗೂ ನಿರ್ಲಕ್ಷ್ಯದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ೨೧೭ಕ್ಕೂ ಹೆಚ್ಚು ಬಾಣಂತಿಯರ ಸಾವು ಆಗಿದ್ದು, ಸರ್ಕಾರ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವ ಮತ್ತು ಆರೋಗ್ಯ ಇಲಾಖೆ ಸೇರಿ ಇಬ್ಬರೂ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಪುನಃ ಸರ್ಕಾರಿ ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ಸಮಯದಲ್ಲಿ ತಾಲೂಕಿನ ಗ್ರಾಮೀಣ ಭಾಗದ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರ ಶ್ರಮ ಹಾಗೂ ವೃತ್ತಿಯ ಮೇಲಿರುವ ಶ್ರದ್ಧೆಯಿಂದಾಗಿ, ಖಾಸಗಿ ಶಾಲೆಗಳನ್ನು ತೊರೆದು ಪುನಃ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಸೇರುವಂತಾಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಳೆಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಹಾಗೂ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದು, ಇತ್ತೀಚೆಗೆ ಪೋಷಕರು ಖಾಸಗಿ ಶಾಲೆಗಳನ್ನು ಬಿಡಿಸಿ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸುತ್ತಿದ್ದಾರೆ.
ಚೌಲಗೆರೆ ಟೋಲ್‌ನಲ್ಲಿ ಸ್ಥಳೀಯರಿಂದಲೂ ಟೋಲ್ ವಸೂಲಿ
ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಚೌಲಗೆರೆ ಟೋಲ್‌ನಲ್ಲಿ, ಸ್ಥಳೀಯರಿಂದ ಟೋಲ್ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಹಾಗೂ ಟೋಲ್ ಸಿಬ್ಬಂದಿ ನಡುವೆ ಪ್ರತಿನಿತ್ಯ ಜಗಳವಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ತಾಲೂಕು ಕರವೇ ಅಧ್ಯಕ್ಷ ಎಚ್ ವಿ ರಾಘವೇಂದ್ರ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳೀಯರಿಂದ ಯಾವುದೇ ಕಾರಣಕ್ಕೂ ಸುಂಕ ವಸೂಲಿ ಮಾಡಿದಂತೆ ಅಧಿಕಾರಿಗಳಿಗೆ ತಿಳಿಸಿದರು. ಟೋಲ್‌ನಲ್ಲಿ ಪ್ರತಿದಿನ ವಸೂಲಾತಿಗೆ ಸಂಬಂಧವಾಗಿ ಒಂದಿಲ್ಲೊಂದು ಜಗಳಗಳು ನಡೆಯುತ್ತಿದ್ದು, ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಈವರೆಗೆ ಆಗದೇ ಇದ್ದ ಅಭಿವೃದ್ಧಿ ನಾನು ಮಾಡಿದ್ದೇನೆ
ದೇಶದ ಸ್ವಾತಂತ್ರ್ಯ ಬಳಿಕ ಕ್ಷೇತ್ರದಲ್ಲಿ ಈವರೆಗೆ ಆಗದೇ ಇದ್ದ ಅಭಿವೃದ್ಧಿಯನ್ನು ಸರ್ವತೋಮುಖವಾಗಿ ನಾನು ಮಾಡಿದ್ದೇನೆ. ಈ ಬಗ್ಗೆ ಯಾರಿಂದಲೂ ಹೇಳಿಸಿಕೊಳ್ಳಬೇಕಿಲ್ಲ ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಟೀಕಾಕಾರರಿಗೆ ತಿರುಗೇಟು ನೀಡಿದರು. ಹೇಮಾವತಿ ಮತ್ತು ಯಗಚಿ ಮೂಲದಿಂದ ನೀರು ತಂದು ಕುಡಿಯುವ ನೀರಿನ ಸಮಸ್ಯೆ ತೀರಿಸಿದೆ. ಎತ್ತಿನಹೊಳೆ ಯೋಜನೆ ಸಂಬಂಧ ಕೇವಲ ರಾಜಕೀಯ ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಆಗದು ಎಂದು ಆಕ್ರೋಶ ಹೊರಹಾಕಿದರು.
ಹಿರಿಯರು ಕಿರಿಯರಿಗೆ ಮಾರ್ಗದರ್ಶಕರಾಗಬೇಕು
ಮನುಷ್ಯ ಒಗ್ಗಟ್ಟಿನಿಂದ ಬದುಕಬೇಕು ಹಾಗೂ ಹಿರಿಯರು ಕಿರಿಯರಿಗೆ ಮಾರ್ಗದರ್ಶಕನಾಗಿ ಸಮಾಜವನ್ನು ತಿದ್ದುವಂತಹ ಕೆಲಸವನ್ನು ಮಾಡಬೇಕು ಹಾಗೂ ಸದಾ ನಗು ನಗುತ್ತಾ ಬದುಕಿದರೆ ಆರೋಗ್ಯಯುತವಾದ ಜೀವನವನ್ನು ಸಾಗಿಸಬಹುದು. ಮನುಷ್ಯ ಕ್ರಿಯಾಶೀಲನಾಗಿದ್ದರೆ ಕಾಯಿಲೆಗಳಿಂದ ಹೊರಬಂದು ನೆಮ್ಮದಿಯ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದು ತಾಲೂಕು ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ನವಲಗುಂದ ತಿಳಿಸಿದರು. ಹಳೆಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ನಮ್ಮ ನಡೆ ನುಡಿ ಆಚಾರ ವಿಚಾರಗಳು ಯುವಜನತೆಗೆ ಪ್ರೇರಕವಾಗಿ ಇರಬೇಕೆಂದು ತಿಳಿಸಿದರು.
ಸ್ವಾಭಿಮಾನಕ್ಕಾಗಿ ಭೀಮಾ ಕೋರೆಗಾಂವ್ ಕದನ
ಬಾಬಾ ಸಾಹೇಬ್ ಡಾ. ಅಂಬೇಡ್ಕರ್‌ ಅವರು ಪ್ರತಿ ಜ.1ರಂದು ಕೋರೆಗಾಂವ್‌ಗೆ ಆಗಮಿಸಿ ಅಲ್ಲಿರುವ ಹುತಾತ್ಮ ಅಸ್ಪೃಶ್ಯ ಮಹಾನ್‌ ಯೋಧರ ಸ್ಮಾರಕ ವಿಜಯಸ್ಥಂಭಕ್ಕೆ ಗೌರವಪೂರ್ವಕ ನಮನ ಸಲ್ಲಿಸುತ್ತಿದ್ದರು. ಅಂಬೇಡ್ಕರ್‌ ರವರ ಹೋರಾಟದ ಬದುಕಿನಲ್ಲಿ ಮಹಾರ್ ಯೋಧರ ಹೋರಾಟ ಪ್ರೇರಣೆ ನೀಡಿತ್ತು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಉಸ್ತುವಾರಿ ಗಂಗಾಧರ್ ಬಹುಜನ್ ತಿಳಿಸಿದರು. ನಾರ್ವೆಪೇಟೆಯಲ್ಲಿ ಆಯೋಜಿಸಲಾಗಿದ್ದ 207ನೇ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಮದ್ಯ ವ್ಯಸನಕ್ಕೆ ಬಲಿಯಾಗದೇ ಉತ್ತಮ ಬದುಕು ರೂಪಿಸಿಕೊಳ್ಳಿ
ಜಾಹೀರಾತುಗಳ ಆಕರ್ಷಣೆ, ಚಲನಚಿತ್ರ ನಟರ ಅನುಕರಣೆ ಸೇರಿದಂತೆ ಹಲವಾರು ಕಾರಣಗಳಿಗೆ ಶೇ. 50ರಷ್ಟು ಯುವಕರು ಮಾದಕ ವ್ಯಸನ ಅಥವಾ ಚಟಗಳಿಗೆ ಒಳಗಾಗುತ್ತಿದ್ದಾರೆ. ಯಾವುದೇ ವ್ಯಸನಕ್ಕೆ ಬಲಿಯಾಗದೇ ಉತ್ತಮ ಬದುಕು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ನರ್ಸಿಂಗ್ ವಿಭಾಗದ ಅಧಿಕಾರಿ ಸುಮಲತಾ ಸಲಹೆ ನೀಡಿದರು. ಮಾದಕ ವ್ಯಸನಿಗಳು ಮಾದಕ ವ್ಯಸನದಿಂದ ಹೊರಬರಲಾಗದೇ ಚಟ ತೀರಿಸಿಕೊಳ್ಳಲು ಯಾವುದೇ ಕಾನೂನು ಬಾಹಿರ ಹಂತಕ್ಕೆ ಬೇಕಾದರು ಇಳಿದು ಬಿಡುತ್ತಾರೆ ಎಂದರು.
ಹಾಸನ : ಹೊಸ ವರ್ಷದ ಆಚರಣೆ ವೇಳೆ ಮಧ್ಯರಾತ್ರಿ ಪ್ರೇಯಸಿಯಿಂದ ಪ್ರಿಯಕರನಿಗೆ ಚಾಕು ಇರಿತ

 ಹೊಸ ವರ್ಷದ ಆಚರಣೆ ವೇಳೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದು ಪ್ರೇಯಸಿ ಮೊದಲೆ ನಿರ್ಧರಿಸಿದಂತೆ ಚಾಕುವಿನಿಂದ ಇರಿದ ಘಟನೆ ಹೊಸ ವರ್ಷದ ಹಿಂದಿನ ದಿವಸ ತಡರಾತ್ರಿಯಲ್ಲಿ ನಡೆದಿದೆ.  

  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved