• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ನಾಳೆ ‘ಪಂಚಮಪದ’, ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೆ.೨೦ ಮತ್ತು ೨೧ ರಂದು ಎರಡು ದಿನಗಳ ಕಾಲ ಪಂಚಮಪದ ಮತ್ತು ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ ನಾಟಕ ಪ್ರದರ್ಶನಗೊಳ್ಳಲಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಣೆ ಮಾಡುವುದರ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಿ ಯಶಸ್ವಿಗೊಳಿಸುವಂತೆ ರಂಗಕರ್ಮಿ ಚಲಂ ಮನವಿ ಮಾಡಿದರು.
ವಿಶ್ವಕರ್ಮ ಸಮುದಾಯ ಭವನ: ಶಾಸಕನಿಂದ ಕಾಮಗಾರಿ ಪೂರ್ಣ ಭರವಸೆ
ಪಟ್ಟಣದ ಗೊಟ್ರುವಳ್ಳಿ ರಸ್ತೆಯಲ್ಲಿರುವ ವಿಶ್ವಕರ್ಮ ಸಮುದಾಯ ಭವನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಮತ್ತೆ ಮರುಚಾಲನೆ ನೀಡಲು ನನ್ನ ವೈಯಕ್ತಿಕ ಸಹಾಯದ ಜತೆಗೆ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಸುವರ್ಣ ಸಂಭ್ರಮ ರಥಕ್ಕೆ ಸ್ವಾಗತ
ಕರ್ನಾಟಕ ಸುವರ್ಣ ಸಂಭ್ರಮ ರಥ ಮಂಗಳವಾರ ಆಲೂರು ಪಟ್ಟಣಕ್ಕೆ ಆಗಮಿಸಿತು. ಕನ್ನಡ ರಥವನ್ನು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್, ಶಿಕ್ಷಣ ಇಲಾಖೆ, ಕನ್ನಡಪರ ಸಂಘಟನೆಗಳ ಮುಖಂಡರು ಸ್ವಾಗತಿಸಿ, ಪುಷ್ಪನಮನ ಸಲ್ಲಿಸಿದರು.
ಸಮರ್ಪಕ ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
ಹೊಳೆನರಸೀಪುರ ಪಟ್ಟಣದಿಂದ ಎಸ್.ಅಂಕನಹಳ್ಳಿ, ಆಲಗೌಡನಹಳ್ಳಿ, ಚಿಕ್ಕಕಾಡನೂರು, ಸಿ.ಹಿಂದಲಹಳ್ಳಿ, ದಾಳಗೌಡನಹಳ್ಳಿ, ಮೂಡಲಕೊಪ್ಪಲು, ಕಲ್ಲಹಳ್ಳಿ, ಹಳ್ಳಿಮೈಸೂರು ಮಾರ್ಗ ಮತ್ತು ಪಟ್ಟಣದಿಂದ ದೊಡ್ಡಕಾಡನೂರು, ನಗರನಹಳ್ಳಿ ಮಾರ್ಗವಾಗಿ ಗ್ರಾಮೀಣ ಸಾರಿಗೆ ಬಸ್ಸುಗಳೇ ಇಲ್ಲ. ಈ ಭಾಗದ ವಿದ್ಯಾರ್ಥಿಗಳು ಹೋಬಳಿ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಿಗೆ ವ್ಯಾಸಂಗ ಮಾಡಲು ದಿನನಿತ್ಯ ನೂರಾರು ವಿದ್ಯಾರ್ಥಿಗಳು ತೆರಳುತ್ತಿದ್ದು, ಬಸ್ಸುಗಳಿಲ್ಲದೆ ಶಾಲಾ ಕಾಲೇಜುಗಳಿಗೆ ತೆರಳಲು ತುಂಬಾ ತೊಂದರೆಯಾಗುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ಬರುತ್ತಿದ್ದ ಬಸ್ಸುಗಳನ್ನು ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶಿಕ್ಷಕರು ದೇಶ ನಿರ್ಮಾಣದ ಶಿಲ್ಪಿಗಳು
ಮೇಧಾವಿಗಳನ್ನು ರಾಷ್ಟ್ರಕ್ಕೆ ನೀಡುವವರು ಶಿಕ್ಷಕರು ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಇನ್ನರ್‌ ವ್ಹೀಲ್ ಅಧ್ಯಕ್ಷೆ ರೇಖಾ ಅಭಿಪ್ರಾಯಪಟ್ಟರು. ಅವರು ರೋಟರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಾವು ಶಿಕ್ಷಕಿ ಕುಸುಮ ಅವರನ್ನು ಅಭಿನಂದಿಸುತ್ತಿದ್ದೇವೆ. ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಶಾಲೆಯ ಪ್ರಗತಿಗೆ ಸಾಕಷ್ಟು ಕಾಳಜಿ ವಹಿಸಿದ್ದಾರೆ. ಈ ಹಿಂದೆ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿರುವುದು ಸಹ ಇವರ ವ್ಯಕ್ತಿತ್ವವನ್ನು ಹೆಚ್ಚಿಸಿದೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಕಾಳಜಿಯನ್ನು ವಹಿಸಲು ಭಗವಂತನು ಅವರಿಗೆ ಸ್ಫೂರ್ತಿಯನ್ನು ನೀಡಲಿ ಎಂದು ಅವರು ಹರಸಿದರು.
ಅರಕಲಗೂಡಿನಲ್ಲಿ ಮೋದಿ ಹುಟ್ಟುಹಬ್ಬದ ಅಂಗವಾಗಿ ಸದಸ್ಯತ್ವ ಅಭಿಯಾನ
ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಗ್ರಾಮದೇವತೆ ಶ್ರೀ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಬಿಜೆಪಿ ಮುಖಂಡ ಪಿ.ಟಿ. ಕೇಶವೇಗೌಡ ಮಾತನಾಡಿ, ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿ ಅವರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
ತೀರ್ಪುಗಾರರು ನಿಸ್ವಾರ್ಥದಿಂದ ಪ್ರತಿಭೆಗಳ ಆಯ್ಕೆ ಮಾಡಿ
ರಾಜ್ಯ ಸರ್ಕಾರವೂ ೨೨ ವರ್ಷಗಳಿಂದ ಸುಪ್ತ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜನೆಗೆ ಒತ್ತು ನೀಡುತ್ತಿದೆ. ಪ್ರತಿಭಾ ಕಾರಂಜಿಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಮ್ಮ ನಾಡಿನ ಸಂಸ್ಕೃತಿಯ ಪರಂಪರೆಯ ಅನಾವರಣಕ್ಕೂ ಸೂಕ್ತ ವೇದಿಕೆಯಾಗಿದೆ ಜತೆಗೆ ವೇದಿಕೆ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಆತ್ಮಸ್ಥೈರ್ಯವನ್ನು ಪಡೆಯುವ ಮತ್ತು ಕಲಿಯುವ ಅವಕಾಶವಿದೆ. ತೀರ್ಪುದಾರರು ಯಾವುದೇ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ನಿಸ್ವಾರ್ಥತೆಯಿಂದ ಪ್ರತಿಭೆಗಳನ್ನು ಆಯ್ಕೆ ಮಾಡಬೇಕು ಎಂದು ಬಿಇಒ ಸೋಮಲಿಂಗೇಗೌಡ ಸಲಹೆ ನೀಡಿದರು.
ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.
ವಿಷ್ಣು ಸೇನಾ ಸಮಿತಿಯಿಂದ ವಿಷ್ಣುವರ್ಧನ್ ಜನ್ಮದಿನಾಚರಣೆ
ಸಾಹಸಸಿಂಹ ವಿಷ್ಣುವರ್ಧನ್ ಅವರ ೭೪ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಸಾಲಗಾಮೆ ರಸ್ತೆಯ ಸರಸ್ವತಿ ದೇವಾಲಯ ವೃತ್ತದ ಬಳಿ ಇರುವ ವಿಷ್ಣುವರ್ಧನ್ ಪ್ರತಿಮೆಗೆ ವಿಷ್ಣು ಸೇನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಯಿಂದ ಮಾಲಾರ್ಪಣೆ ಮಾಡಿ ಕೇಕ್ ಕತ್ತರಿಸಿ ಅನ್ನದಾನ ಮಾಡುವುದರ ಜೊತೆಗೆ ಅವರ ಚಲನಚಿತ್ರದ ಹಾಡುಗಳನ್ನು ಹಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಾಹಸ ಸಿಂಹ, ಕರ್ನಾಟಕ ಭಾರ್ಗವ ಹಾಗೂ ಹೆಸರಾದಂತಹ ನಾಯಕ ನಟ ವಿಷ್ಣುವರ್ಧನ್ ರವರ ೭೪ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ. ಈ ದಿನ ಕರ್ನಾಟಕ ರಾಜ್ಯಾದ್ಯಂತ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಂತೇಶ್ ನೇತೃತ್ವದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವಶಪಡಿಸಿಕೊಂಡಿದ್ದ ಅಕ್ರಮ ಮದ್ಯ ನಾಶ
ಚನ್ನರಾಯಪಟ್ಟಣ ವಲಯ ಅಬಕಾರಿ ನಿರೀಕ್ಷಕರ ಕಚೇರಿ ಆವರಣದಲ್ಲಿ ಪರಿಸರಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಹಾನಿ ಉಂಟಾಗದಂತೆ ಅಕ್ರಮ ಮದ್ಯವನ್ನು ನಾಶಪಡಿಸಲಾಯಿತು. ಅಬಕಾರಿ ಮೊಕದ್ದಮೆ ಹಾಗೂ ಪೊಲೀಸ್ ಮೊಕದ್ದಮೆಗಳಲ್ಲಿ ಸರ್ಕಾರಕ್ಕೆ ವಶಪಡಿಸಿಕೊಳ್ಳಲಾಗಿದ್ದ ಅಕ್ರಮ ಮದ್ಯ, ಬಿಯರ್, ಹಾಗೂ ಸೇಂದಿಯನ್ನು ನಾಶಪಡಿಸುವಂತೆ ಪ್ರಾಧಿಕೃತ ಅಧಿಕಾರಿಗಳು ಹಾಗೂ ಅಬಕಾರಿ ಉಪ ಆಯುಕ್ತರು ಹಾಸನ ಜಿಲ್ಲೆ ಇವರ ಆದೇಶದಂತೆ ಸಪ್ಟೆಂಬರ್ ೨೦೨೩ರಿಂದ ದಾಖಲಾದ ಒಟ್ಟು ೩೧ ಅಬಕಾರಿ ಪ್ರಕರಣಗಳಿಂದ ಒಟ್ಟು ರು.೧,೫೦,೦೦೦ ಮೌಲ್ಯದ ೨೪೬ ಲೀಟರ್‌ ಮದ್ಯ, ೨೦.೭೬೦ ಲೀಟರ್‌ ಬಿಯರ್ ಮತ್ತು ೧೮ ಲೀಟರ್ ಸೇಂದಿಯನ್ನು ನಾಶಪಡಿಸಲಾಯಿತು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 417
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved