• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐವತ್ತಕ್ಕೂ ಹೆಚ್ಚು ಯುವಕರು ಪ್ರೀತಂಗೌಡರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ
ಜೆಡಿಎಸ್‌ಗಾಗಿ ದುಡಿಯುತ್ತಿದ್ದ ಸತ್ಯಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೫೦ಕ್ಕೂ ಹೆಚ್ಚು ಯುವಕರು ಜೆಡಿಎಸ್‌ನಿಂದ ಹೊರಬಂದು ವಿದ್ಯಾನಗರದಲ್ಲಿರುವ ಮಾಜಿ ಶಾಸಕ ಪ್ರೀತಂ ಜೆ. ಗೌಡರ ನಿವಾಸದಲ್ಲಿ ಬಿಜೆಪಿ ಸೇರಿದರು. ಸ್ವಯಂಪ್ರೇರಿತವಾಗಿ ಬಂದ ಯುವಕರಿಗೆ ಪ್ರೀತಂಗೌಡರು ಬಿಜೆಪಿ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ನಿಮಗೆ ಏನಾದರೂ ತೊಂದರೆ ಆಗಿದ್ದರೇ ನಮ್ಮ ಪಕ್ಷಕ್ಕೆ ಬನ್ನಿ ಇಲ್ಲವಾದರೇ ಬರುವುದು ಬೇಡ ಎಂದು ಪ್ರೀತಂ ಗೌಡರು ಸಲಹೆ ನೀಡಿದರು. ಆದರೆ ಪ್ರೀತಂ ಅವರು ನಮ್ಮ ಗ್ರಾಮಕ್ಕೆ ೧೫ ಕೋಟಿ ರು. ವೆಚ್ಚದ ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಇಲ್ಲಿವರೆಗೂ ನಮ್ಮ ಭಾಗದಲ್ಲಿ ಯಾರೂ ಇಂತಹ ಕೆಲಸ ಮಾಡಿಕೊಟ್ಟಿಲ್ಲ. ಇನ್ನು ಪ್ರೀತಂ ಗೌಡರು ನಮಗೆ ಉತ್ತಮ ಸ್ಪಂದನೆ ಕೊಡುತ್ತಾರೆ ಎಂದರು.
ಜೆಡಿಎಸ್‌ ಸಕಲೇಶಪುರ ಕ್ಷೇತ್ರ ಕಳೆದುಕೊಳ್ಳಲು ನಾನೇ ಕಾರಣ
ಹಾಸನ ವಿಧಾನಸಭಾ ಕ್ಷೇತ್ರದ ಗೆಲುವಿಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರ ಕ್ಷೇತ್ರದಲ್ಲಿ ಸೋಲು ಅನುಭವಿಸುವಂತಾಯಿತು. ಇದರಲ್ಲಿ ನನ್ನ ತಪ್ಪಿದೆ ಎಂದು ಶಾಸಕ ಎಚ್.ಡಿ. ರೇವಣ್ಣ ಕಾರ್ಯಕರ್ತರಿಗೆ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಗೆಲ್ಲಬೇಕಿತ್ತು, ಆದರೆ ಕೆಲವರ ಕುತಂತ್ರದಿಂದ ಸೋಲು ಅನುಭವಿಸಬೇಕಾಯಿತು. ಮುಂದಿನ ದಿನಗಳಲ್ಲಿ ಬಡ್ಡಿ ಸಮೇತ ತೀರಿಸುವ ಕಾಲ ಹತ್ತಿರದಲ್ಲಿದೆ. ದೇವೇಗೌಡರ ಕುಟುಂಬ ಇಂತಹ ನೂರಾರು ತನಿಖೆ ಎದುರಿಸಿ ಗೆದ್ದಿದ್ದೀವಿ. ಮುಂಬರುವ ಜಿಲ್ಲಾ ಹಾಗೂ ಪಂಚಾಯಿತಿ ಚುನಾವಣೆಯನ್ನು ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಹೆಚ್ಚು ಜವಾಬ್ದಾರಿ ನೀಡಲಾಗುವುದು ಎಂದರು.
ಅಂಬೇಡ್ಕರ್‌ ನಾಮಫಲಕ ತೆರವಿಗೆ ಪೊಲೀಸರ ಸೂಚನೆ
ಬೇಲೂರು ತಾಲೂಕಿನ ಹಾಲ್ತೊರೆ ಕೊಪ್ಪಲು ಗ್ರಾಮದ ದಲಿತ ಕಾಲೋನಿಗೆ ಹೋಗುವ ರಸ್ತೆಯ ಬಲ ಬದಿಯಲ್ಲಿ ಅಲ್ಲಿನ ದಲಿತ ಯುವಕರು ಮತ್ತು ಗ್ರಾಮಸ್ಥರು ೨೦೨೧ರಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ರವರ ಭಾವಚಿತ್ರವಿರುವ ಫಲಕವನ್ನು ಗ್ರಾಮದ ದಲಿತ ಕೇರಿಗೆ ಹೋಗುವ ರಸ್ತೆ ಬದಿಯಲ್ಲಿ ಸ್ಥಾಪಿಸಲಾಗಿದೆ. ಇದು ರಸ್ತೆಗಾಗಲಿ, ಸಾರ್ವಜನಿಕರಿಗಾಗಲಿ ಯಾವುದೇ ಸಮಸ್ಯೆಯಾಗಿರುವುದಿಲ್ಲ. ಮತ್ತು ಇದರಿಂದ ಈ ಊರಿನ ಯಾವ ಜಾತಿ, ಸಮುದಾಯಗಳ ಹಾಗೂ ಗ್ರಾಮಸ್ಥರಿಂದ ಯಾವುದೇ ವಿರೋಧವೂ ಇಲ್ಲ. ಇತ್ತೀಚೆಗೆ ಬೀಟ್ ಪೊಲೀಸರಿಗೆ ಅಂಬೇಡ್ಕರ್ ಪ್ರತಿಮೆಯ ಫಲಕವು ಕೆಂಗಣ್ಣಿಗೆ ಬಿದ್ದು, ಇದನ್ನು ಸ್ಥಾಪಿಸಲು ಪಾರವಾನಗಿ ಇದೆಯಾ ಎಂದು ಅಲ್ಲಿದ್ದ ದಲಿತ ಯುವಕರು ಗ್ರಾಮಸ್ಥರಿಗೆ ಕೇಳಿ ಅದನ್ನು ತೆರವುಗೊಳಿಸಬೇಕೆಂದು ತಿಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತವಾಗಿದೆ.
ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕಲೆ, ಸಂಸ್ಕೃತಿಯ ಪ್ರತೀಕವಾದ ಹಳೇಬೀಡು, ಬೇಲೂರು, ಶ್ರವಣಬೆಳಗೊಳ ಎಂದ ಅವರು, ದೇಶ ವಿದೇಶಗಳಲ್ಲಿಯೂ ಶಿಲ್ಪಕಲೆಗಳಿಗೆ ಬೇಡಿಕೆ ಇದೆ. ವಿಶ್ವಕರ್ಮ ಸಮುದಾಯದವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಕೀರ್ತಿ ತಂದಿದ್ದಾರೆ ಎಂದು ಶಾಸಕರಾದ ಸ್ವರೂಪ ಪ್ರಕಾಶ್ ತಿಳಿಸಿದರು.
ಮುನಿರತ್ನ ವಿರುದ್ಧ ಸಕಲೇಶಪುರದಲ್ಲಿ ಪ್ರತಿಭಟನೆ
ಕಾಂಗ್ರೆಸ್ ಪಕ್ಷದಲ್ಲಿದ್ದ ವೇಳೆ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮುನಿರತ್ನ ಅವರಿಗೆ ಸಂಸ್ಕಾರದ ಕೊರತೆ ಇದೆ. ಮಹಿಳೆ ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ತಮ್ಮ ದುರಹಂಕಾರದ ಪರಮಾವಧಿಯನ್ನು ತಲುಪಿದ್ದಾರೆ. ಆದ್ದರಿಂದ ತಕ್ಷಣವೆ ಶಾಸಕ ಮುನಿರತ್ನರ ರಾಜೀನಾಮೆ ಪಡೆಯ ಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಿ ಹಳೇ ಬಸ್ ನಿಲ್ದಾಣ ಸಮೀಪ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ಮಕ್ಕಳ ಲೈಂಗಿಕ ದೌರ್ಜನ್ಯದ ಆರೋಪಿಗಳಿಗೆ ಗಲ್ಲಿಗೇರಿಸಬೇಕು
ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಪಿಗಳಿಗೆ ಗಲ್ಲಿಗೇರಿಸುವ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಶಾಸಕ ಸಿ ಎನ್ ಬಾಲಕೃಷ್ಣ ಒತ್ತಾಯಿಸಿದರು. ಹೆಚ್ಚು ಮೊಬೈಲ್ ಬಳಕೆಯಿಂದಲೂ ಇತ್ತೀಚಿನ ವರ್ಷಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಲು ಮುಖ್ಯ ಕಾರಣವಾಗಿದೆ. ಈ ಬಗ್ಗೆ ಮಕ್ಕಳ ಪೋಷಕರು ತಮ್ಮ ಮಗುವಿನ ಚಲನವಲನಗಳ ಬಗ್ಗೆ ಹೆಚ್ಚು ಗಮನಹರಿಸುವಂತೆ ತಿಳಿಸಿದರು. ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದರು.
ವಿಶ್ವಕರ್ಮ ಸಮಾಜದ ಹಿತ ಕಾಯುವುದು ನಮ್ಮ ಜವಾಬ್ದಾರಿ
ಪ್ರಜ್ಞಾವಂತ ಸಮಾಜವಾಗಿರುವ ವಿಶ್ವಕರ್ಮ ಸಮಾಜ ಬಾಂಧವರು ಪಾರಂಪರಿಕವಾಗಿ ತಮ್ಮ ಕಸುಬನ್ನು ಇಂದಿಗೂ ಮುಂದುವರಿಸುತ್ತಾ ಬಂದಿದ್ದು, ನಿಮ್ಮ ಸಮಾಜದ ಹಿತ ಕಾಯುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಈಗಾಗಲೇ ನಗರದ ಹೃದಯ ಭಾಗದಲ್ಲಿ ನಿಮಗೆ ಹೈಟೆಕ್ ಸಮುದಾಯ ಭವನ ನಿರ್ಮಿಸಿ ಕೊಟ್ಟಿದ್ದು ಈ ಸಮುದಾಯ ಭವನ ನಿರ್ಮಾಣಕ್ಕೆ ಇನ್ನೂ ಐದು ಲಕ್ಷಗಳ ಅವಶ್ಯಕತೆ ಇದೆ ಎಂದು ತಾವು ಮಾಡಿರುವ ಮನವಿಯನ್ನು ಪರಿಗಣಿಸಿ ಶೀಘ್ರದಲ್ಲಿ 5 ಲಕ್ಷ ನೀಡುವುದಾಗಿ ಶಾಸಕ ಶಿವಲಿಂಗೇಗೌಡ ಭರವಸೆ ನೀಡಿದರು.
ಪ್ರಧಾನಿ ಮೋದಿ ಭೂಮಿಗೆ ಬಂದ ಭಗವಂತ
ಪ್ರಧಾನಿ ನರೇಂದ್ರ ಮೋದಿ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ, 2014ರಲ್ಲಿ ಪ್ರಧಾನಿಯಾದ ಮೋದಿ ಹಗಲುರಾತ್ರಿಯೆನ್ನದೆ ದೇಶಕ್ಕಾಗಿ ದುಡಿದು ಅಭಿವೃದ್ದಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ 96ನೇ ಸ್ಥಾನದಲ್ಲಿದ್ದ ಭಾರತವನ್ನು 12ನೇ ಸ್ಥಾನಕ್ಕೆ ತಂದು ಭಾರತೀಯರು ಹೆಮ್ಮೆಪಡುವಂತ ಸಾಧನೆಯನ್ನು ಮಾಡಿದ ಮಹಾನ್‌ ಸಾಧಕ ನರೇಂದ್ರ ಮೋದಿಯವರು ಭಾರತೀಯರ ದೃಷ್ಠಿಯಲ್ಲಿ ಕೇವಲ ಅವರು ನರ ಮಾನವರಲ್ಲ ಭೂಮಿಗೆ ಬಂದ ಭಗವಂತ ಎಂದು ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಕೀಲ ಎನ್.ಡಿ. ಪ್ರಸಾದ್ ಹೇಳಿದರು.
ಆಚಾರಿ ಎನ್ನುವುದು ವಿಶ್ವಕರ್ಮರ ಖ್ಯಾತ ನಾಮಪದ
ಆಚಾರಿ ಎಂದರೆ ತಪ್ಪು ಭಾವನೆ ಕಲ್ಪನೆ ಮಾಡಿಕೊಳ್ಳುವ ಅಗತ್ಯವಿಲ್ಲ. ವಿಶ್ವಕರ್ಮ ಜನಾಂಗದವರು ಸಮಾಜದಲ್ಲಿ ಅವರಿವರ ಜಾತಿ, ಶ್ರೀಮಂತ, ಬಡವರು ಎಂದೆಣಿಸದೆ ಪ್ರತಿಯೊಬ್ಬರಿಗೂ ಹಲವು ರೂಪದಲ್ಲಿ ತಮ್ಮ ಕೊಡುಗೆ ನೀಡುತ್ತಿದ್ದಾರೆ. ವಿಶ್ವಕರ್ಮರ ನೆನಪಿಗಾಗಿ ಪಟ್ಟಣದಲ್ಲಿ ಐತಿಹಾಸಿಕ ಸ್ಥಳ ಗುರುತು ಮಾಡಬೇಕು, ಆಕಾರೋ ಆಗಮಾರ್ತಂಡ, ಚಾಕಾರೋ ದೇವತೋತ್ಪತ್ತಿ, ರಿಕಾರೋ ಶಾಸ್ತ್ರ ಕೋವಿದ, ಆಚಾರಿ ಅಕ್ಷರತ್ರಯಂ ಎಂಬಂತೆ, ಆಚಾರಿ ಎಂದರೆ ಮೂರು ವಿಷಯಗಳ ಬಲ್ಲ ಪಾರಂಗತರು ಎಂದು ದೇವರಾಜಪುರ ಹರಿಕಥಾ ವಿದ್ವಾನ್ ಮಲ್ಲೇಶಚಾರ್ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆ
ಹೊಳೆನರಸೀಪುರ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರಧಾನಿ ಮೋದಿಜೀಯವರ ಜನ್ಮದಿನ ಪ್ರಯುಕ್ತ ಮಹಾತ್ಮಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪ್ರಧಾನಿ ಮೋದಿಜೀಯವರ ಭಾವಚಿತ್ರಕ್ಕೆ ಅಭಿಮಾನಿಗಳು ಕ್ಷೀರಾಭಿಷೇಕ ನೆರವೇರಿಸಿ, ಸಿಹಿ ಹಂಚಿದ ನಂತರ ಮಾತನಾಡಿದರು. ಪ್ರಧಾನಿಯವರ ಜನ್ಮದಿನ ಪ್ರಯುಕ್ತ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್, ಹಣ್ಣು ಹಂಪಲು ವಿತರಿಸುತ್ತೇವೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪ್ರಧಾನಿ ಮೋದಿಜೀಯವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ಮಂಡಲ ವ್ಯಾಪ್ತಿಯಲ್ಲಿ ಇಂದಿನಿಂದ ಸದಸ್ಯತ್ವ ಅಭಿಯಾನವನ್ನೂ ಪ್ರಾರಂಭಿಸುತ್ತೇವೆ ಎಂದು ಮಳಲಿ ನಾರಾಯಣ್ ತಿಳಿಸಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 417
  • next >
Top Stories
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved