• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಯನ್ಸ್ ಭವನದಲ್ಲಿ ಆರೋಗ್ಯಕ್ಕಾಗಿ ಯೋಗ ಶಿಬಿರ
ಲಯನ್ಸ್ ಸೇವಾ ಸಂಸ್ಥೆ ಹಾಗೂ ಯೋಗ ಚೇತನ ಕೇಂದ್ರ ಅಡಗೂರು ಇವರ ಸಂಯುಕ್ತಾಶ್ರಯದಲ್ಲಿ ಜ. 2ರಿಂದ 14ರವರೆಗೆ ಆರೋಗ್ಯಕ್ಕಾಗಿ ಯೋಗ ಶಿಬಿರವನ್ನು ಪಟ್ಟಣ ಯಗಚಿ ಸೇತುವೆ ಮಂಜುನಾಥ ಕಲ್ಯಾಣ ಮಂಟಪ ಹಿಂಭಾಗದ ಲಯನ್ಸ್ ಭವನದಲ್ಲಿ ನಡೆಸಲಾಗುತ್ತದೆ ಎಂದು ಬೇಲೂರು ಲಯನ್ಸ್ ಸೇವಾ ಸಂಸ್ಥೆ ಅಧ್ಯಕ್ಷ ಡಾ.ಚಂದ್ರಮೌಳಿ ಹೇಳಿದರು.
ಹೊಸ ವರ್ಷಾಚರಣೆ ವೇಳೆ ಕೆರೆಗೆ ಬಿದ್ದು ಯುವಕರಿಬ್ಬರ ಸಾವು
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆಯ ಏರಿ ಮೇಲೆ ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೂತನ ವರ್ಷದ ಸಂಭ್ರಮಾಚರಣೆ ಮಾಡಲು ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಇಬ್ಬರು ಯುವಕರು ಪಾರ್ಟಿ ಮಾಡಿದ್ದಾರೆ. ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅವರನ್ನು ಹುಡುಕಾಡಿದ ಸಂದರ್ಭದಲ್ಲಿ ಕೆರೆಯ ಏರಿ ಮೇಲೆ ಚಪ್ಪಲಿ ಹಾಗೂ ಮದ್ಯದ ಬಾಟಲು ಕಂಡು ಬಂದಿರುತ್ತದೆ. ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟು ಸಂಜೆ 6ರ ಸಮಯದಲ್ಲಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.
ಕಾಫಿ ಬೆಳೆಗಾರರು ಸಂಘಟಿತರಾದಾಗ ಸಮಸ್ಯೆಗಳಿಗೆ ಪರಿಹಾರ
ಕಾಫಿ ಬೆಳೆಗಾರರು ಸಂಘಟಿತರಾದಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಎ.ಎಸ್. ಪರಮೇಶ್ ತಿಳಿಸಿದರು. ಕಾಡಾನೆ ಹಾವಳಿ, ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ, ಕಾರ್ಮಿಕರ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ನಿರಂತರವಾಗಿ ಕಾಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಮತ್ತು ರಾಜ್ಯ ಸಂಘಗಳು ನಿರಂತರ ಪ್ರಯತ್ನ ನಡೆಸಿವೆ. ಬೆಳೆಗಾರರು ಸಂಘಟಿತರಾಗಬೇಕು ಹಾಗೂ ಸಂಘದ ಸದಸ್ಯತ್ವ ಪಡೆಯಬೇಕು ಎಂದರು.
ನಕಲಿ ದಾಖಲೆ ಸೃಷ್ಟಿಸಿ ಎಸ್ಸಿ, ಎಸ್ಟಿ ಜಾಗ ಮಾರಾಟ ಖಂಡನೆ
ಎಚ್.ಆರ್.ಪಿ. ಜಾಗವೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮಂಜೂರಾಗಿದ್ದ ಸರ್ಕಾರಿ ಭೂಮಿಯನ್ನು ಆಲೂರು ತಾಲೂಕು ಅಧಿಕಾರಿಗಳು ಹಾಗೂ ಉದ್ದಿಮೆದಾರರು ಸೇರಿ ನಕಲಿ ದಾಖಲೆ ಸೃಷ್ಟಿಮಾಡಿ ಮಾರಾಟ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಭೂಮಿ ಉಳಿಸಿಕೊಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯಿಂದ ಮಂಗಳವಾರ ಡೀಸಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು
ಆಲೂರಿನಲ್ಲಿ ಮತ್ತೆ 3 ತಿಂಗಳು ರೈಲು ನಿಲುಗಡೆಗೆ ಸಮ್ಮತಿ
ಜಿಲ್ಲೆಯ ಆಲೂರು ತಾಲೂಕು ಕೇಂದ್ರದಲ್ಲಿ ಕಳೆದ ಆರು ತಿಂಗಳಿನಿಂದ ಪ್ರಯಾಣಿಕ ರೈಲು ನಿಲುಗಡೆಗೆ ಅವಕಾಶ ನೀಡಲಾಗಿತ್ತು. ಆದರೆ, ಕೆಲ ದಿನಗಳಿಂದ ನಿಲುಗಡೆಯನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಮೂರು ತಿಂಗಳು ರೈಲನ್ನು ನಿಲ್ಲಿಸಲು ಸಮ್ಮಿತಿಸಲಾಗಿದೆ ಎಂದು ರಾಧಮ್ಮ ಜನಸ್ಪಂದನಾ ವೇದಿಕೆ ಸಂಸ್ಥಾಪಕ ಹೇಮಂತ್ ಕುಮಾರ್ ತಿಳಿಸಿದರು.
ಮಕ್ಕಳ ಪ್ರತಿಭೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಲಿ
ಆವಿಷ್ಕಾರ ತಂತ್ರಜ್ಞಾನ ಹೆಚ್ಚಾದಂತೆ, ಮನುಷ್ಯ ಸೋಮಾರಿಯಾಗುತ್ತಿದ್ದಾನೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.
ಸರ್ಕಾರ ಮದ್ಯದ ದರ ಕಡಿಮೆ ಮಾಡಲಿ: ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್
ವರ್ಷದ ಕೊನೆಯ ದಿನವನ್ನು ವಿಶ್ವ ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮದ್ಯಪಾನ ಪ್ರಿಯರ ಕೋರಿಕೆಯಂತೆ ಸರ್ಕಾರ ಮದ್ಯದ ದರ ಕಡಿಮೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಹೇಳಿದರು.
ಬಾಂಬ್ ಹಾಕೋದು, ರಕ್ತಕ್ರಾಂತಿ ಮಾಡೋದು ಜನರಿಗೆ ಬೇಕಾಗಿಲ್ಲ
ಅರಸೀಕೆರೆ ತಾಲೂಕಿನ ಜನರಿಗೆ ಅವಶ್ಯಕತೆ ಇರುವುದು ನೀರು. ಅದನ್ನು ಬಿಟ್ಟು ನೀವು ಸಚಿವರಾಗಬೇಕು ಎನ್ನುವ ಆತುರದಲ್ಲಿ ಏನೇನೋ ಮಾತನಾಡಬೇಡಿ ಎಂದು ಜೆಡಿಎಸ್ ಮುಖಂಡ ಸಂತೋಷ್ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಸಲಹೆ ನೀಡಿದ್ದಾರೆ.
ಚಿಕ್ಕಮಗಳೂರಿನ ಜೈನ ಸಂಘದಿಂದ ತೀರ್ಥಂಕರ ಮೂರ್ತಿಗಳಿಗೆ ಮಸ್ತಕಾಭಿಷೇಕ
ಶಿವಪುರ ಕಾವಲಿನ ಜೈನರಗುತ್ತಿಯಲ್ಲಿ ವಿರಾಜಮಾನವಾಗಿರುವ 31 ಅಡಿ ಎತ್ತರದ ಮುನಿಸುವ್ರತ ತೀರ್ಥಂಕರ ಹಾಗೂ 24 ಅಡಿ ಎತ್ತರದ ಪದ್ಮಾಸನ ಭಂಗಿಯಲ್ಲಿ ಕುಳಿತಿರುವ ಶೀತಲನಾಥ ತೀರ್ಥಂಕರ ಮೂರ್ತಿಗಳಿಗೆ ಚಿಕ್ಕಮಗಳೂರು ಜೈನ ಸಮಾಜದಿಂದ ಮಹಾಮಸ್ತಕಾಭಿಷೇಕ ನೆರವೇರಿತು. ದಿಗಂಬರ ಜೈನಮುನಿ ವೀರಸಾಗರ ಮುನಿಮಹಾರಾಜರ ಸಾನಿಧ್ಯದಲ್ಲಿ ನಡೆದ ವೈಭವದ ಮಸ್ತಕಾಭಿಷೇಕವನ್ನು ಚಿಕ್ಕಮಗಳೂರು ಜೈನ ಸಮಾಜದವರು ಮಾತ್ರವಲ್ಲದೆ, ವಿವಿಧೆಡೆಯಿಂದ ಆಗಮಿಸಿದ ಜಿನ ಭಕ್ತರು ವೀಕ್ಷಿಸಿದರು.
ರಾಮನಾಥಪುರ ಬಸ್‌ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯ ಮರೀಚಿಕೆ
ಅರಕಲಗೂಡು ತಾಲೂಕಿನ ಅವಳಿ ಪಟ್ಟಣಗಳಾದ ಕೊಣನೂರು ಮತ್ತು ರಾಮನಾಥಪುರದಲ್ಲಿ ಸುಸಜ್ಜಿತವಾದ ಸಾರಿಗೆ ಬಸ್ ನಿಲ್ದಾಣದ ಕಟ್ಟಡಗಳಿದ್ದರೂ ಅಗತ್ಯ ಮೂಲ ಸೌಕರ್ಯಗಳಿಂದ ವಂಚಿತಗೊಂಡಿವೆ. ಬಸ್ ನಿಲ್ದಾಣದಿಂದ 300 ಮೀಟರ್‌ ದೂರದಲ್ಲಿ ಬಸ್ ಘಟಕ ಇದೆ. ಜಾಗದ ಕೊರತೆಯಿಂದ ಇರುವ ಜಾಗವನ್ನು ಅಭಿವೃದ್ಧಿಗೊಳಿಸಲಾಗಿದ್ದರೂ ಕೂಡ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ, ರಕ್ಷಣಾ ವ್ಯವಸ್ಥೆ, ಸಿಸಿ ಕ್ಯಾಮೆರಾ, ಕಾಂಪೌಂಡ್, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ನಿಲ್ದಾಣ ಸುತ್ತಾ ಕಾಂಪೌಂಡ್ ನಿರ್ಮಿಸಿಲ್ಲ. ಇಲ್ಲಿಯೂ ಕೂಡ ಸೆಕ್ಯೂರಿಟಿ, ಸಿಸಿ ಕ್ಯಾಮೆರಾ ಇಲ್ಲ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved