ಜಾತ್ಯತೀತ ತತ್ವದ ನೆಲೆಗಟ್ಟಿನಲ್ಲಿ ಸುತ್ತೂರು ಕ್ಷೇತ್ರ ಮುನ್ನಡೆದಿದೆಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಬಸವಾದಿ ಶರಣರ ಆಶಯದಂತೆ ಜಾತ್ಯತೀತ ತತ್ವದ ನೆಲೆಗಟ್ಟಿನಲ್ಲಿ ಸುತ್ತೂರು ಶ್ರೀಕ್ಷೇತ್ರ ಮುನ್ನಡೆಯುವ ಮೂಲಕ ನಾಡಿನ ಕಲ್ಯಾಣ ಕಾರ್ಯಕ್ರಮಗಳಿಗೆ ಮೇಲ್ಪಂಕ್ತಿ ಹಾಕೊಟ್ಟಿದೆ ಎಂದು ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ ಬಣ್ಣಿಸಿದರು. ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರ ಆಶಯದಂತೆ ಹಸಿದವರಿಗೆ ಅನ್ನ, ಅಕ್ಷರ, ಅರಿವೆ, ಅರಿವು ನೀಡುವ ಮೂಲಕ ಅಜ್ಞಾನದ ಕತ್ತಲು ಕಳೆದು ಸುಜ್ಞಾನದ ಬೀಜ ಬಿತ್ತುತ್ತಿರುವುದು ಪ್ರಶಂಸನೀಯ ಎಂದರು.