• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೈರವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ 5 ಲಕ್ಷ ಅನುದಾನ
ಮುಳುಕೆರೆ ಗ್ರಾಮದ ಶ್ರೀ ಭೈರವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುರುವೇಕೆರೆ ತಾಲೂಕು ಯೋಜನಾ ಕಚೇರಿ ವತಿಯಿಂದ 5 ಲಕ್ಷ ರು. ಸಹಾಯಧನ ನೀಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣ ತಾಲೂಕಿನಲ್ಲಿ 100ಕ್ಕೂ ಹೆಚ್ಚು ಡೇರಿ ಕಟ್ಟಡಗಳ ನಿರ್ಮಾಣಕ್ಕೆ ಹಾಗೂ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನಸಹಾಯ ಮಾಡುತ್ತಾ ಬರುತ್ತಿದೆ ಅನೇಕ ಗ್ರಾಮಗಳ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು.
ಪ್ರವಾಸಿಗರು ಮೂಲಭೂತ ಸೌಕರ್ಯ ವಂಚಿತ
ಪ್ರಖ್ಯಾತ ಪ್ರವಾಸಿ ಕೇಂದ್ರಕ್ಕೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸದಿರುವ ಬಗ್ಗೆ ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಪ್ರವಾಸೋದ್ಯಮ ಇಲಾಖೆ ಹಾಗೂ ದೇಗುಲದ ಆಡಳಿತದ ವಿರುದ್ಧ ಕಿಡಿಕಾರಿದರು. ಚನ್ನಕೇಶವ ದೇಗುಲಕ್ಕೆ ಬರುವ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಕರ್ಯ ಇಲ್ಲದಿರುವ ಬಗ್ಗೆ ಮಾಧ್ಯಮದಲ್ಲಿ ಪ್ರಕಟಗೊಂಡ ಸುದ್ದಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು. ಪ್ರವಾಸಿಗರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ ಸಂತಾಪ
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರು ಹಾಗೂ ಮಾಜಿ ಪ್ರಧಾನಿಗಳಾದ ಡಾ. ಮನಮೋಹನ್ ಸಿಂಗ್ ನಿಧನದಿಂದ ಇಡೀ ದೇಶಕ್ಕೆ ತುಂಬಲಾರದಂತ ನಷ್ಟ ಉಂಟಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ತಿಳಿಸಿದರು. ಇಡೀ ವಿಶ್ವದಲ್ಲೇ ಉತ್ತಮ ಆರ್ಥಿಕ ತಜ್ಞರಾಗಿ ಜನಾನುರಾಗಿದ್ದ ಅವರು ಸರಳತೆಯಿಂದ ಆಡಳಿತ ನಡೆಸುವ ಮೂಲಕ ಇತರರಿಗೆ ಮಾದರಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಯುಪಿಎ ನೇತೃತ್ವದ ಪ್ರಧಾನ ಮಂತ್ರಿಗಳಾಗಿ ಸುಮಾರು 10 ವರ್ಷಗಳ ಕಾಲ ದೇಶದಲ್ಲಿ ಬಡವರ ದೀನ ದಲಿತರ ಪರವಾದಂತಹ ಆಡಳಿತ ನಡೆಸಿದರು ಎಂದರು.
ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು
ರಾಜ್ಯಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಉಚ್ಚಾಟಿಸಬೇಕು ಎಂದು ಹಿರಿಯ ದಸಂಸ ಮುಖಂಡ ಎಚ್. ಕೆ. ಸಂದೇಶ್ ಹೇಳಿದರು.ನಾವು ಅಂಬೇಡ್ಕರ್ ಅವರ ಮಕ್ಕಳು, ಮರಿಮಕ್ಕಳು. ನಾವು ಬೇರೆಯವರ ಬಗ್ಗೆ ಅವಮಾನಕರವಾಗಿ ಹೀಯಾಳಿಸುವ ಕೆಲಸ ಮಾಡಿಲ್ಲ. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಮದುವೆಯ ಕನಿಷ್ಠ ವಯಸ್ಸು ಹೆಚ್ಚಿಸುವುದು ಒಳ್ಳೆಯದು
ಮದುವೆಗೆ ನಿಗದಿಪಡಿಸಿರುವ ವಯಸ್ಸು ಹುಡುಗಿಗೆ 18 ಹುಡುಗರಿಗೆ 21 ವರ್ಷ ಇದ್ದರೂ ಹುಡುಗ ಮತ್ತು ಹುಡುಗಿ ಕನಿಷ್ಠ ಪದವಿ ಶಿಕ್ಷಣ ಪೂರೈಸಿ, ಸಂಸಾರವನ್ನು ಸಮರ್ಥವಾಗಿ ನಿಭಾಯಿಸುವ ವಯಸ್ಸು ಅಂದರೆ ಇಬ್ಬರಿಗೂ 25 ವರ್ಷ ತುಂಬುವುದು ಒಳ್ಳೆಯದು ಎಂದು ಗ್ರಾ.ಪಂ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ತಿಳಿಸಿದರು. ಶಾಲಾ, ಕಾಲೇಜು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಸಮಯದಲ್ಲಿ ಸರಿಯಾದ ದಾರಿಯನ್ನು ಆಯ್ಕೆ ಮಾಡಿಕೊಂಡು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕು ಎಂದು ತಿಳಿಸಿದರು.
ಖಾಸಗಿ ಶಾಲಾ ಪೈಪೋಟಿಯಲ್ಲಿ ಸರ್ಕಾರಿ ಶಾಲಾ ಪ್ರಗತಿ ಶಿಕ್ಷಕರಿಗೆ ಸವಾಲು
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಅನೇಕ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು ಸಹ ಪೋಷಕರನ್ನು ಖಾಸಗಿ ಶಾಲೆಗಳ ಬಾಹ್ಯನೋಟ ಸೆಳೆಯುತ್ತಿದೆ. ಇದು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸವಾಲಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್ ಅಭಿಪ್ರಾಯಪಟ್ಟರು. ವರ್ಷವಿಡೀ ಶೈಕ್ಷಣಿಕ ಚಟುವಟಿಕೆಯಲ್ಲಿ ಮಕ್ಕಳು ತೊಡಗಿರುತ್ತಾರೆ, ಅವರಿಗೂ ಒಂದು ಸಂತೋಷದ ಕ್ಷಣವನ್ನು ರೂಪಿಸಿಕೊಡಬೇಕಾಗುತ್ತದೆ ಎಂದರು.
ಕಲಸಿಂದ ಪಿಎಸಿಸಿಎಸ್ ಅಧ್ಯಕ್ಷರಾಗಿ ಸ್ವಾಮಿ ಅವಿರೋಧ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಕಲಸಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಿರ್ದೇಶಕ ಬೆಲಸಿಂದ ಗ್ರಾಮದ ಬಿ.ಎನ್. ಸ್ವಾಮಿ ರವರು ಅವಿರೋಧವಾಗಿ ಆಯ್ಕೆಗೊಂಡರು. . ಇವರನ್ನು ಹೊರತುಪಡಿಸಿ ಬೇರ್‍ಯಾರು ನಾಮಪತ್ರ ಸಲ್ಲಿಸದ ಕಾರಣ ಇವರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ. ವಿಜಯೇಂದ್ರ ಘೋಷಿಸಿದರು.
ರಾಜ್ಯಮಟ್ಟದ ಹೊನಲು ಬೆಳಕಿನ ಹ್ಯಾಂಡ್ ಬಾಲ್ ಪಂದ್ಯಾವಳಿ
ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ ೨೭ರ ಶುಕ್ರವಾರ ಸಂಜೆ ೧೯ನೇ ರಾಜ್ಯಮಟ್ಟದ ೨೦ ವರ್ಷದ ವಯೋಮಿತಿಯ ಪುರುಷರು ಮತ್ತು ಮಹಿಳೆಯರ ಹೊನಲು ಬೆಳಕಿನ ಹ್ಯಾಂಡ್ ಬಾಲ್ ಪಂದ್ಯಾವಳಿ ಪ್ರಾರಂಭವಾಗಿ ಡಿಸೆಂಬರ್ ೨೯ರ ಭಾನುವಾರ ಮುಕ್ತಾಯವಾಗಲಿದೆ ಎಂದು ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆ ಸಲಹೆಗಾರರಾದ ಜೆ.ಐ. ನಿರಂಜನ್ ರಾಜ್ ಮತ್ತು ಕಾರ್ಯದರ್ಶಿ ಸಿಎನ್. ವಿಶ್ವನಾಥ್ ತಿಳಿಸಿದರು.
ಸಚಿವರಾಗಿ ಮನಸ್ಸಿಗೆ ಬಂದಂತೆ ಮಾತಾಡಿದ್ದಾರೆ
ಡಾ.ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಸಂಸ(ಅಂಬೇಡ್ಕರ್ ವಾದ)ಹಾಗೂ ದಲಿತ ಮುಖಂಡರು ಡಾ.ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ ಅಂಬೇಡ್ಕರರ ಭಾವಚಿತ್ರಗಳನ್ನಿಡಿದು ಬುಧವಾರ ಪ್ರತಿಭಟಿಸಿದರು.
ಜೆಪಿನಗರ ಚರ್ಚ್‌ನಲ್ಲಿ ಕ್ರಿಸ್‌ಮಸ್‌
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಕ್ರೈಸ್ತ ಬಾಂಧವರು ಅತ್ಯಂತ ಸಡಗರದಿಂದ ಆಚರಿಸಿದರು. ಪಟ್ಟಣದ ಜೆಪಿ ನಗರದ ಸಂತ ಮಿಕೇಕೇನರ ದೇವಾಲಯದ ಧರ್ಮಗುರು ಫಾದರ್‌ ಪೃಸನ್ನ ಕುಮಾರ್ ಏಸುವಿನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬಾಲ ಏಸುವಿನ ಪ್ರತಿಮೆಯನ್ನು ಅವರ ಜೀವನಾಧರಿತ ಕಥೆ ಸಾರುವ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved