• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿಯ ವೇಗದಲ್ಲಿ ಮೂಲ ಸಂಸ್ಕೃತಿ ಮರೆಯಬಾರದು
ಬೆಳೆಯುವ ವೇಗದಲ್ಲಿ ಮೂಲ ಸಂಸ್ಕೃತಿಯನ್ನು ಮರೆಯುತ್ತಿರುವುದು ದುರಂತಕ್ಕೆ ಕಾರಣವಾಗಲಿದೆ ಎಂದು ಕೇಂದ್ರ ಕೈಗಾರಿಕ ಸಚಿವ ಎಚ್.ಡಿ ಕುಮಾರಸ್ವಾಮಿ ಎಚ್ಚರಿಸಿದರು. ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಗಳು ರೈತರಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಬೇಡಿಕೆ ಇದೆ. ಈ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕಿದೆ. ಹಾಸನ ಆಲೂಗಡ್ಡೆಗಳ ತವರಾಗಿತ್ತು. ಆದರೆ, ಇಂದು ಆಲೂಗಡ್ಡೆ ಬೆಳೆಯನ್ನು ಹುಡುಕಬೇಕಿದೆ. ಇದಕ್ಕೆಲ್ಲ ಕಾರಣ ಆರೋಗ್ಯಪೂರ್ಣ ತಳಿಗಳನ್ನು ಹುಡುಕಿಕೊಡದಿರುವುದೇ ಕಾರಣವಾಗಿದೆ ಎಂದರು.
ಆಯ್ದ ಅತಿಗಣ್ಯ ಗ್ರಾಹಕರಿಗಾಗಿ ಕೆನರಾ ಕ್ರೆಸ್ಟ್‌
ಇತ್ತೀಚೆಗೆ ನಗರದಲ್ಲಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯು ಆಯೋಜಿಸಲಾಗಿದ್ದ ತನ್ನ ಕೆನರಾ ಕ್ರೆಸ್ಟ್ ಗ್ರಾಹಕರ ಸಭೆಯನ್ನು ಮಂಗಳೂರು ವೃತ್ತ ಉಪ ಮಹಾಪ್ರಬಂಧಕರಾದ ಶೈಲೇಂದ್ರನಾಥ್ ಶೀತ್ ಉದ್ಘಾಟಿಸಿದರು. ಗ್ರಾಹಕರ ಸೇವೆಯನ್ನು ಉತ್ಕೃಷ್ಟ ದರ್ಜೆಗೆ ಏರಿಸುವ ಗುರಿಯೊಂದಿಗೆ ಕೆನರಾ ಬ್ಯಾಂಕ್ ಕೆನರಾ ಕ್ರೆಸ್ಟ್ ಎಂಬ ಆದ್ಯತಾ ಸೇವಾ ಸೌಲಭ್ಯವನ್ನು ಜಾರಿ ಮಾಡಿದೆ.
ತೀವ್ರ ಹೃದಯಾಘಾತಕ್ಕೆ ಒಳಗಾದ ರೋಗಿಯ ಯಶಸ್ವಿ ಚಿಕಿತ್ಸೆ
ವರ್ಷದ ಬಸವರಾಜು ಅವರನ್ನು ಸಮಾಲೋಚಿಸಿದ ತಕ್ಷಣ ಆಂಜೋಗ್ರಾಮ್ ಮೂಲಕ ಹೃದಯದ ಪ್ರಮುಖ ರಕ್ತನಾಳದ ಶೇ.೧೦೦ರಷ್ಟು ಬ್ಲಾಕ್ ಆಗಿರುವುದು ತಿಳಿದು ಬಂದಿದೆ. ನಂತರ ಡಾ.ಮದಕರಿನಾಯಕರವರು ರೋಗಿಯ ಸಂಬಂಧಿಕರಿಗೆ ಮುಂದಿನ ಚಿಕಿತ್ಸೆಯ ಬಗ್ಗೆ ತಿಳಿವಳಿಕೆ ನೀಡಿ ಏಂಜಿಯೋಪ್ಲಾಸ್ಟಿ ಹಾಗೂ ಹೃದಯದ ಕೆಲಸವನ್ನು ನಿಯಂತ್ರಿಸಲು ಹೆಚ್ಚಿನ ಚಿಕಿತ್ಸೆ ನೀಡಿ ಯಶಸ್ವಿ ಚಿಕಿತ್ಸೆಯಿಂದ ರೋಗಿಯನ್ನು ಪ್ರಾಣಾಪಾಯದಿಂದ ಬದುಕುಳಿಸಿದ್ದಾರೆ. ಹಾಗೂ ೯ ದಿನಗಳ ಆಸ್ಪತ್ರೆಯ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಿ ರೋಗಿಯನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಆವಿಷ್ಕಾರಗಳಾಗಬೇಕಿದೆ ಎಂದ ನಿರ್ಮಲಾನಂದನಾಥ ಶ್ರೀ
ರೈತರು ಆಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ದೇಶದಲ್ಲಿ ಶೇ. ೬೫ರಷ್ಟು ಜನರು ಕೃಷಿಕರಾಗಿದ್ದು ಹಿಂದೆ ಕೃಷಿವಲಯದಿಂದ ಶೇ. ೫೦ರಷ್ಟು ಆದಾಯ ಬರುತ್ತಿದ್ದರೆ, ಇದರ ಪ್ರಮಾಣ ಈಗ ಶೇ. ೧೮ಕ್ಕೆ ಕುಸಿದಿದೆ. ಕೃಷಿ, ಉತ್ಪಾದನೆ ಹಾಗೂ ಸೇವಾ ಕ್ಷೇತ್ರದಿಂದ ದೇಶಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಸೇವಾ ಕ್ಷೇತ್ರದಿಂದ ಬರುತ್ತಿರುವ ಆದಾಯ ಶೇ. ೫೫ರಷ್ಟಿದೆ. ದೇಶದ ವಿದ್ಯಾವಂತ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಉತ್ಪಾದನೆ ಕ್ಷೇತ್ರ ಬೃಹತ್ ಪ್ರಮಾಣದಲ್ಲಿ ಬೆಳೆಯುವ ಅಗತ್ಯವಿದೆ ಎಂದರು.
ಮೈಸೂರು ಗಲಭೆ ಪ್ರಕರಣದ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ನೀಡುವುದು ಸೂಕ್ತವಲ್ಲ : ಕೇಂದ್ರ ಸಚಿವ ಎಚ್‌ಡಿಕೆ

 ರಾಜಕೀಯ ನಾಯಕರು ಕ್ಷುಲ್ಲಕ ವಿಚಾರಗಳಿಗಿಂತ ಮುಖ್ಯ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಮುಖ್ಯ ಶಿಕ್ಷಕರ ಅಮಾನತು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಶಾಲೆ ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿಗಳು ತರಗತಿಗೆ ಹಾಜರಾಗದೆ ಪ್ರತಿಭಟನೆ ಆರಂಭಿಸಿದರು. ಮುಖ್ಯ ಶಿಕ್ಷಕರಾಗಿರುವ ರಾಥೋಡ್ ಹಿಂದಿ ಶಿಕ್ಷಕರಾಗಿದ್ದು ಉತ್ತಮ ಬೋಧನೆ ನಡೆಸುತ್ತಾರೆ. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹತ್ತಿರದಲ್ಲೇ ಇದೆ. ಇದರಿಂದ ಕಲಿಕೆಗೆ ತೊಂದರೆಯಾಗಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ಶಾಲಾ ಆಡಳಿತ ಮಂಡಳಿ ಅವರ ವಿರುದ್ಧ ಕೈಗೊಂಡಿರುವ ಅಮಾನತು ಶಿಕ್ಷೆ ಖಂಡನಾರ್ಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಕಲೇಶಪುರದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ
ಮನಸ್ಸನ್ನು ಸರಿಯಾಗಿ ಉಪಯೋಗಿಸುವ ಕಲೆ ತಿಳಿಯದವರು ಬದುಕನ್ನು ಭಾರ ಮಾಡಿಕೊಳ್ಳುತ್ತಾರೆ. ಆದ್ದರಿಂದ, ಮನಸ್ಸನ್ನು ಒಳ್ಳೆಯ ಕೆಲಸಗಳಿಗೆ ಉಪಯೋಗಿಸವತ್ತ ಗಮನವಿರಲಿ. ಮನಸ್ಸನ್ನು ಉತ್ತಮ ಕೆಲಸಗಳಿಗೆ ಬಳಸಲು ಸಂಸ್ಕಾರದ ಅಗತ್ಯವಿದೆ. ಸಂಸ್ಕಾರ ಕಲಿಸುವುದು ತಾಯಂದಿರ ಜವಾಬ್ದಾರಿ. ಮನಸ್ಸು ಎಂಬುದು ಸರಳವಾಗಿದೆ, ಈ ಮನಸ್ಸನ್ನು ಸರಿಯಾಗಿ ಬಳಸಿಕೊಂಡಾಗ ಅತ್ಯಧ್ಬುತ ಸಾಧನೆ ಸಾಧ್ಯ ಎಂದು ಶತೋತ್ತರ ರಜತ ಹುಣ್ಣಿಮೆ ಹಾಗೂ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟಿಸಿ ನಿರ್ಮಲಾನಂದನಾಥ ಶ್ರೀ ತಿಳಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 5ನೇ ದಿನಕ್ಕೆ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಎಂ.ಜಿ. ರಸ್ತೆ ಬಳಿ ಇರುವ ತಹಸೀಲ್ದಾರ್ ಕಚೇರಿ ಮುಂದೆ ತಮ್ಮ ಕೆಲಸ ಸ್ಥಗಿತಗೊಳಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ 5ನೇ ದಿನವಾದ ಶುಕ್ರವಾರ ರೈತ ಸಂಘ, ಕರವೇ ಸೇರಿದಂತೆ ವಿವಿಧ ಸಂಘಸಂಸ್ಥೆಗಳು ಭಾಗವಹಿಸಿ ಸಾಥ್‌ ನೀಡಿದವು. ಕಚೇರಿ ಸೇರಿದಂತೆ ಕನಿಷ್ಠ ಕುರ್ಚಿ ಅಗತ್ಯ ಸಲಕರಣೆಗಳನ್ನು ಸಹ ನೀಡುತ್ತಿಲ್ಲ. ಕಳೆದ ೧೦ -೧೫ ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಮಂತ್ರಿಮಂಡಲ ಸಿದ್ದು ಬಣ ಡಿಕೆಶಿ ಬಣವಾಗಿ ಇಬ್ಭಾಗ
ಸರ್ಕಾರದ ಮಂತ್ರಿಮಂಡಲದಲ್ಲಿರುವ ಸಚಿವರು ಎರಡು ಭಾಗವಾಗಿದ್ದಾರೆ. ಒಂದು ಸಿದ್ದರಾಮಯ್ಯ ಬಣ, ಇನ್ನೊಂದು ಡಿ.ಕೆ.ಶಿವಕುಮಾರ್ ಬಣ, ಡಿ.ಕೆ.ಶಿವಕುಮಾರ್ ಒಂದು ದಾರಿ ಹಿಡಿದರೆ ಸಿದ್ದರಾಮಯ್ಯ ಅವರ ಬಣ ಇನ್ನೊಂದು ದಾರಿ ಹಿಡಿಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ ವಾಗ್ದಾಳಿ ನಡೆಸಿದರು. ಸಿಎಂ ಬದಲಾವಣೆಯ ಕುರಿತು ಹೇಳಿಕೆ ನೀಡಿ, ನವೆಂಬರ್ ೧೫-೧೬ರೊಳಗೆ ಸಿಎಂ ಬದಲಾವಣೆಯಾಗಲಿದೆ. ಇಲ್ಲವಾದರೆ, ಕಾಂಗ್ರೆಸ್‌ನಲ್ಲಿ ಭಾರೀ ಅಸಮಾಧಾನ ಮೂಡಲಿದೆ. ಈ ಕುರಿತು ನನಗೆ ಖಚಿತ ಮಾಹಿತಿ ಇದೆ ಎಂದು ಬಹಿರಂಗಪಡಿಸಿದರು ಎಂದರು.
ಶಾಸಕ ಸುರೇಶ್ ವಿರುದ್ಧ ಅರಣ್ಯಾಧಿಕಾರಿಗಳ ಪ್ರತಿಭಟನೆ
ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣದ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿಸಿ ಹೊಡೆಸುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಎಚ್.ಕೆ. ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿ ಉಪವಿಭಾಗಾಧಿಕಾರಿ ಮಾರುತಿ ಅವರಿಗೆ ಮನವಿ ಸಲ್ಲಿಸಿದರು. ಜನಪ್ರತಿನಿಧಿಗಳಿಗೆ ಸರ್ಕಾರದ ರೀತಿ ರಿವಾಜುಗಳ ಬಗ್ಗೆ ಅರಿವಿದ್ದರೂ ಸಹ ಇಲಾಖಾ ಸಿಬ್ಬಂದಿಗಳು ಕಾಡಾನೆ ಹಾವಳಿ ತಡೆಗಟ್ಟಲು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಿಳಿವಳಿಕೆ ಇದ್ದರೂ ಕೂಡ ಉದ್ದೇಶ ಪೂರ್ವಕವಾಗಿ ಸರ್ಕಾರಿ ಅಧಿಕಾರಿಗಳನ್ನು ನಿಂದಿಸಿರುತ್ತಾರೆ ಎಂದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved