• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರ ಸಹಸ್ರ ಕೂಟ ಜೀನಾಲಯ ಅಭಿವೃದ್ಧಿ
ಅರಸೀಕೆರೆ ನಗರದಲ್ಲಿರುವ ಏಕಶೀಲ ಸಹಸ್ರಕೂಟ ಜಿನಾಲಯ ದೇಶದಲ್ಲಿಯೇ ವಿಶಿಷ್ಟವಾಗಿದೆ. ಈ ಬಸದಿಯನ್ನು ಮೂಲ ಸೌಕರ್ಯಗಳ ಮೂಲಕ ಅಭಿವೃದ್ಧಿಪಡಿಸಲು ಕಾರ್ಯ ಪ್ರವೃತ್ತವಾಗಲಿದ್ದು, ಶ್ರವಣಬೆಳಗೊಳ ಶ್ರೀಮಠವು ಎಲ್ಲ ರೀತಿಯ ಜವಾಬ್ದಾರಿ ತೆಗೆದುಕೊಂಡು ಸ್ಥಳೀಯ ಜಿನಾಲಯವನ್ನು ವಿಶ್ವದಲ್ಲಿ ಧಾರ್ಮಿಕ ಶ್ರದ್ಧಾಕೇಂದ್ರವನ್ನಾಗಿ ಕೊಂಡೊಯ್ಯಲಾಗುವುದು ಎಂದು ಶ್ರವಣಬೆಳಗೊಳ ಶ್ರೀಮಠದ ಪೀಠಾಧ್ಯಕ್ಷರಾದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.
ಮಿಶ್ರ ಬೇಸಾಯ ಪದ್ಧತಿಯಿಂದ ಮಾತ್ರ ಲಾಭ ಸಾಧ್ಯ
ರೈತರು ಸಾಂಪ್ರದಾಯಿಕ ಬೆಳೆಗೆ ಜೋತು ಬೀಳದೇ ಮಿಶ್ರ ಬೆಳೆ ಬೇಸಾಯ ಪದ್ಧತಿಗೆ ಮುಂದಾದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂದು ಶಾಸಕ ಎ. ಮಂಜು ತಿಳಿಸಿದರು. ರೈತರಿಗೆ ಅನ್ಯಾಯ ಮಾಡಿದರೆ ನಮಗೆ ನಾವೇ ಮೋಸ ಮಾಡಿಕೊಂಡಂತಾಗುತ್ತದೆ. ಸೌಕರ್ಯಗಳನ್ನು ಉಪಯೋಗಿಸಿಕೊಳ್ಳುವುದು ರೈತರ ಜವಾಬ್ದಾರಿ ಆಗಬೇಕು. ಶೇ. 90ರಷ್ಟು ಸಬ್ಸಿಡಿ ಸೌಲಭ್ಯ ಇರುವ ಹನಿ ನೀರಾವರಿ ಹೊಂದುವ ಮುಖೇನ ವೈಜ್ಞಾನಿಕ ಬೇಸಾಯ ಪದ್ಧತಿ ಅನುಸರಿಸಬೇಕು ಎಂದು ಸಲಹೆ ನೀಡಿದರು.
ವಾಟೇಹೊಳೆ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ಕ್ರಿಸ್ಮಸ್‌ ಆಚರಣೆ
ಆಲೂರು ತಾಲೂಕಿನ ವಾಟೇಹೊಳೆಯಲ್ಲಿರುವ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ನಡೆದ ಕ್ರಿಸ್‌ಮಸ್ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕ್ರಿಸ್‌ಮಸ್ ಎಂಬುದು ಸೌಹಾರ್ದತೆಯಾಗುತ್ತಿದ್ದು, ಸಡಗರವಾಗಿ, ಜಾತಿ-ಧರ್ಮಗಳ ಭೇದವಿಲ್ಲದೆ ಆಚರಣೆಯಲ್ಲಿ ಭಾಗವಹಿಸುತ್ತಾರೆ. ನಮ್ಮ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ಕ್ರೆಸ್ತ ಬಾಂಧವರೊ ದಿಗೆ ಅನ್ಯ ಧರ್ಮೀಯರು ಸಹ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗಿಯಾಗಿ ಸಾಮರಸ್ಯ ಮೆರೆದಿದ್ದಾರೆ ಎಂದು ತಿಳಿಸಿದರು.
ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣದ ಪ್ರಯುಕ್ತ ತಾಲೂಕು ದಸಂಸ (ಪ್ರೊ. ಕೃಷ್ಣಪ್ಪ ಬಣ) ತಾಲೂಕಿನಲ್ಲಿ ದಲಿತ ಚಳವಳಿಯನ್ನು ಕಟ್ಟಿದ ಹೋರಾಟಗಾರರ ಸ್ಮರಣೆ , ಹಿರಿಯ ದಲಿತ ಮುಖಂಡರಿಗೆ ಗೌರವಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ. 27ರಂದು ಹಮ್ಮಿಕೊಂಡಿದೆ ಎಂದು ಸಂಚಾಲಕ ಪಿ. ಶಂಕರ್ ತಿಳಿಸಿದರು. ಹತ್ತನೇ ತರಗತಿ, ದ್ವಿತೀಯ ಪಿಯು ಮತ್ತು ಪದವಿ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಇಂದು ಜಿಲ್ಲೆಯ ಪತ್ರಕರ್ತರಿಗೆ ವಿಮೆ ಬಾಂಡ್ ವಿತರಣೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಸುರಕ್ಷತೆಗಾಗಿ ಮೊದಲ ಬಾರಿಗೆ ಮಾಡಿಸಿರುವ ವಿಮಾ ಬಾಂಡ್ ವಿತರಣೆ ಹಾಗೂ ಸುವರ್ಣ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಲಿದೆ. ಅಂದೇ ಸಂಘದಿಂದ ಹೊರತಂದಿರುವ ೨೦೨೫ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಕೆ. ಎಚ್.ವೇಣುಕುಮಾರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇವೇಗೌಡರ ಸಾಧನೆ ಬಗ್ಗೆ ಮಾತಾಡುವ ನೈತಿಕತೆ ಸಂಸದರಿಗಿಲ್ಲ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮತ್ತು ಅವರ ಕುಟುಂಬದವರು ಏನು ಕೆಲಸ ಮಾಡಿದ್ದಾರೆ ಎನ್ನುವ ಬಗ್ಗೆ ಮಾತನಾಡಲು ಸಂಸದ ಶ್ರೇಯಸ್‌ಗೆ ನೈತಿಕತೆ ಇಲ್ಲ. ಹಾಗೆಯೇ ಅವರು ಏನು ಕೆಲಸ ಮಾಡಿದ್ದಾರೆ ಎಂದು ತಿಳಿಯಲು ಸಂಸದರು ಜಿಲ್ಲೆಯ ಪ್ರವಾಸ ಕೈಗೊಂಡು ಎಲ್ಲೆಲ್ಲಿ ಏನು ಕೆಲಸ ಆಗಿದೆ ಪಟ್ಟಿ ಮಾಡಿಕೊಳ್ಳಲಿ. ಇವರು ಮಾಡಿದ ಅಭಿವೃದ್ಧಿ ಕೆಲಸವನ್ನು ಸಂಸದರಾದ ಶ್ರೇಯಸ್ ಪಟೇಲ್ ಅವರು ಕೂಡ ಮಾಡಿ ತೋರಿಸಲಿ ಎಂದು ಕೆ.ಎಸ್. ಲಿಂಗೇಶ್ ಸವಾಲು ಹಾಕಿದರು.
ಅರಸೀಕೆರೆ ಪುರಸಭೆಯಿಂದ ಬಡವರಿಗೆ ಸೈಟ್‌ ಹಂಚಿಕೆ
ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕರ ಸಂಘ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಪಟ್ಟಣದ ದೇವಸ್ಥಾನ ರಸ್ತೆಯ ಶ್ರೀ ರಾಮ ಹಾಲ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂಘದಲ್ಲಿ ಸದಸ್ಯರು ತೀರ ಕಷ್ಟದಲ್ಲಿದ್ದಾರೆ ಅವರಿಗೆ ಪುರಸಭೆಯ ಸಹಾಯಧನವನ್ನು ಕೊಡಿಸುತ್ತೇವೆ. ಸಂಘಕ್ಕೆ ಒಂದು ನಿವೇಶನವನ್ನು ಮಾಡಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ ಅದರಂತೆ ನಮ್ಮ ಲೇಔಟ್ ಒಳಗಡೆ ಸಿ ಎ ಸೈಟ್ ಎಂಬುದನ್ನು ಕೊಡಲು ಅವಕಾಶವಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಸಿಗಬೇಕೆಂಬುದು ನನ್ನ ಆಶಯ
ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ಬೂದುಕಾಲುವೆ, ಸಿ.ಸಿ.ಚರಂಡಿ ಮತ್ತು ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ , ಸಿ.ಸಿ.ಚರಂಡಿ ಮತ್ತು ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಮ್ಮ ಅವಧಿಯಲ್ಲಿ ಇಡೀ ತಾಲೂಕು, ಕ್ಷೇತ್ರದಾದ್ಯಂತ ಗುಣಮಟ್ಟದ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಕ್ಷೇತ್ರದ ಜನರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಸಿಗಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ಹಿಂದಿ ಹೇರಿಕೆಯ ಒತ್ತಡದ ನಡುವೆ ಕನ್ನಡದ ಅಸ್ಮಿತೆ ಎತ್ತಿಹಿಡಿಯಬೇಕು
ಕನ್ನಡ ಸಾಹಿತ್ಯ ಸಮ್ಮೇಳನಗಳು ಅರ್ಥಪೂರ್ಣತೆಯನ್ನು ಕಳೆದುಕೊಳ್ಳುತ್ತಿದ್ದು ಅಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸರ್ಕಾರ ಸ್ಪಂದಿಸದೆ ನಿರ್ಲಕ್ಷ್ಯ ತಾಳುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾದ ಸರ್ವಾಧ್ಯಕ್ಷರು ಮಂಡಿಸಿದ ನಿರ್ಣಯಗಳನ್ನು ಕನಿಷ್ಠ ಜಾರಿ ತರುವ ಬಗ್ಗೆ ಆಲೋಚಿಸಿದರೆ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಮನ್ನಣೆ ಸಿಗುತ್ತದೆ ಎಂದು ಕಿವಿಮಾತು ಹೇಳಿದರು.
ಜಿಲ್ಲೆಯಾದ್ಯಂತ ವಿವಿಧ ಚರ್ಚ್‌ಗಳಲ್ಲಿ ಕ್ರಿಸ್ಮಸ್ ಸಂಭ್ರಮ
ಹಾಸನ ನಗರದ ವಿವಿಧ ಚರ್ಚ್ಗಳಲ್ಲಿ ಕ್ರಿಸ್ಮಸ್ ಸಂಭ್ರಮದೊಂದಿಗೆ ಯೇಸುವಿನಲ್ಲಿ ಪ್ರಾರ್ಥನೆ ಮಾಡಿದ್ದು, ಜಿಲ್ಲೆಯ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ರಾತ್ರಿಯಿಂದ ಮತ್ತು ಬೆಳಿಗ್ಗೆ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಸಮುದಾಯದವರಿಗೆ ಶುಭಕೋರಿದರು. ಡಿಸೆಂಬರ್ ೨೪ರಂದು ಮಧ್ಯ ರಾತ್ರಿ ೧೨ ಗಂಟೆಯಿಂದಲೇ ಬಹಳ ಹರ್ಷದಿಂದ, ಪ್ರೀತಿಯಿಂದ ಯಾವ ಮತಬೇಧವಿಲ್ಲದೇ ಎಲ್ಲಾರೂ ಕೂಡ ಆಚರಿಸಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved