ಆಲೂರಿನ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು. ಬಡವರ ಬಗ್ಗೆ ಕಾಳಜಿ ವಹಿಸಲು ಮತ್ತು ಯಾರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಜನರನ್ನು ಪ್ರೇರೇಪಿಸುವುದು ಹಾಗೂ ಜನರ ನಡುವೆ ಪ್ರೀತಿ, ಭ್ರಾತೃತ್ವ ಮೂಡಿಸುವ ಸಲುವಾಗಿ ಕುಟುಂಬ ಸಭೆಗಳನ್ನು ನಡೆಸುವುದು ವಿಶೇಷ. ವಿವಿಧೆಡೆ ಹಾಡುಗಾರಿಕೆಯ ಮೂಲಕ ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ, ನಾವು ಹುಟ್ಟುವ ಜಾಗ ನಮ್ಮ ಆಯ್ಕೆಯಾಗಿರುವುದಿಲ್ಲ ಆದರೆ ಯೇಸು ಸ್ವಾಮಿ ಅವರು ಹುಟ್ಟಿದ ಬಗ್ಗೆ ಶತಮಾನಗಳ ಮುಂಚೆಯೇ ದೇವರು ತಿಳಿಯಪಡಿಸಿದ್ದರು.