• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೊಳಿಸಿ
ಸುಪ್ರೀಂಕೋರ್ಟ್ ತೀರ್ಪು ನೀಡಿ ೪೦ ದಿನಗಳು ಕಳೆದಿವೆ. ಸರ್ಕಾರ ಈ ಬಗ್ಗೆ ದೃಢ ನಿಲುವು ತಾಳಿಲ್ಲ. ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿಶಿಷ್ಟರ ಮೀಸಲಾಗಿ ವರ್ಗೀಕರಣಕ್ಕೆ ಒತ್ತಾಯಿಸಿ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹ ೨೦೨೪ ಸೆಪ್ಟಂಬರ್ ೯ರಂದು ಫ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಬೃಹತ್ ಪ್ರತಿಭಟನಾ ನಡೆಸಿ ಮನವಿ ಸಲ್ಲಿಸಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ತಿಳಿಸಿದರು.
ಲಾಟರಿ ಮೂಲಕ ಬಿಜೆಪಿ ಪಾಲಾದ ಹಂಚೂರು ಗ್ರಾಪಂ
ಆಲೂರು ತಾಲೂಕಿನ ಹಂಚೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪುಷ್ಪ ಹಾಗೂ ಉಪಾಧ್ಯಕ್ಷರಾಗಿ ಷಣ್ಮುಖ ಚುನಾಯಿತರಾದರು. ಓರ್ವ ಮಹಿಳಾ ಸದಸ್ಯರ ಮತ ತಿರಸ್ಕಾರಗೊಂಡಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು ಅವರು ಲಾಟರಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಲಾಟರಿಯಲ್ಲಿ ಪುಷ್ಪ ಹಾಗೂ ಷಣ್ಮುಖ ಅವರಿಗೆ ಅದೃಷ್ಟ ಒಲಿಯಿತು.
ಪರಿಸರ ಸ್ನೇಹಿ ವಸ್ತುಗಳಿಂದ ಗಣಪ ಮೂರ್ತಿ ತಯಾರಿಕೆ
ಎಸ್.ಆರ್‌.ಎಸ್ ಪ್ರಜ್ಞಾ ಶಾಲೆಯ ವಿದ್ಯಾರ್ಥಿಗಳು ವಿವಿಧ ಆಕೃತಿಯ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ವೈವಿಧ್ಯಮಯ ವಸ್ತುಗಳಾದ ಜೇಡಿಮಣ್ಣು, ವಿವಿಧ ಬಗೆಯ ಕಾಳುಗಳು, ಧಾನ್ಯಗಳು, ವಿವಿಧ ಸಸ್ಯ ಮತ್ತು ಮರಗಳ ಎಲೆಗಳು, ಅನುಪಯುಕ್ತ ಕಾಗದಗಳು, ಕೊಬ್ಬರಿ, ವಿವಿಧ ತರಕಾರಿ ಹಾಗೂ ಹಣ್ಣುಗಳ ಸಿಪ್ಪೆಗಳು ಮತ್ತು ಇತರೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ಸುಮಾರು ೪೦೦ಕ್ಕೂ ಹೆಚ್ಚು ವಿವಿಧ ಮಾದರಿಯ ಗಣೇಶನ ಮೂರ್ತಿಗಳನ್ನು ತಮ್ಮಲ್ಲಿರುವ ಕೌಶಲ್ಯದ ಮೂಲಕ ಸೃಜನಾತ್ಮಕವಾಗಿ ತಯಾರಿಸಿ ತಮ್ಮಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು. ಗಣೇಶನ ಮೂರ್ತಿಗಳನ್ನು ಶಾಲಾ ಸಭಾಂಗಣದಲ್ಲಿ ಅಲಂಕಾರಿಕವಾಗಿ ಪ್ರತಿಷ್ಠಾಪಿಸಿ, ಪೂಜೆ ನೆರವೇರಿಸಿ ವಿದ್ಯಾರ್ಥಿಗಳಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು.
ಹಾಸನಾಂಬ ಜಾತ್ರೆಯಲ್ಲಿ ಅನ್ನದಾನಕ್ಕೆ ಅವಕಾಶ ನೀಡಿ
ಹಾಸನ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಕಳೆದ ಬಾರಿ ತಾಯಿ ಹಾಸನಾಂಬ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಅನ್ನದಾನ ಕಾರ್ಯಕ್ರಮವನ್ನು ಮಾಡಲಾಯಿತು. ಹಾಗೆಯೇ ಈ ಬಾರಿಯೂ ರಾತ್ರಿ ವೇಳೆ ಅಂದರೆ ರಾತ್ರಿ ೯ ಗಂಟೆಯಿಂದ ರಾತ್ರಿ ೧೨ಗಂಟೆಯವರೆಗೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ಮಾಡಲು ಮತ್ತು ಪ್ರತಿದಿನ ನಮ್ಮ ಸಂಘದ ವತಿಯಿಂದ ಸ್ವಯಂ ಸೇವಕರಾಗಿ ತಾಯಿ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ತಮ್ಮಲ್ಲಿ ವಿನಂತಿಸುತ್ತೇವೆ ಎಂದು ಜಿಲ್ಲಾ ವಿಶ್ವಕರ್ಮ ಚಿನ್ನ, ಬೆಳ್ಳಿ ಕೆಲಸಗಾರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.
ಮಯೂರ ಹೋಟೆಲ್‌ಗೆ ಆಹಾರ ಸುರಕ್ಷತಾಧಿಕಾರಿಗಳ ಭೇಟಿ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಾದ ಹೋಟೆಲ್ ಮಯೂರ ವೇಲಾಪುರಿ, ಹೋಟೆಲ್ ಮಯೂರ ಯಗಚಿ ಹಾಗೂ ಮಯೂರ ಶಾಂತಲಾ ಹಳೇಬೀಡು ಘಟಕಗಳಿಗೆ, ಹಾಸನ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಗಳಾದ ಬಸವೇಗೌಡ ಮತ್ತು ತಂಡ ಭೇಟಿ ನೀಡಿ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿತು. ಅಡುಗೆ ಕೋಣೆ ಉಗ್ರಾಣ ಹಾಗೂ ಉಪಹಾರ ಗೃಹ ಇವುಗಳನ್ನು ಪರಿಶೀಲಿಸಿ ಕೆಲ ಸಲಹೆ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದರು. ಮೂರು ಹೋಟೆಲ್‌ಗಳ ಸ್ವಚ್ಛತೆ ಮತ್ತು ಆಹಾರ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ‌
ಲಕ್ಕುಂದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯಾಗಿ ಕೆ ಪಿ ರಾಧಾ ಆಯ್ಕೆ
ತಾಲೂಕಿನ ಬಿಕ್ಕೋಡು ಹೋಬಳಿ ಲಕ್ಕುಂದ ಗ್ರಾಮ ಪಂಚಾಯಿತಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೀತಾ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಸದಸ್ಯೆ ರಾಧಾರವರು ಅಧ್ಯಕ್ಷೆ ಸ್ಧಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಹತ್ತು ಜನ ಸದಸ್ಯರನ್ನು ಒಳಗೊಂಡಿರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷೆ ಸ್ಧಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷೆ ಸ್ಥಾನಕ್ಕಾಗಿ ರಾಧಾ ಹಾಗೂ ಗೀತಾ ನಡುವೆ ಸ್ಪರ್ಧೆ ನಡೆದು ಚುನಾವಣೆಯಲ್ಲಿ ರಾಧಾ 6 ಮತಗಳನ್ನು ಪಡೆದರೆ, ತಮ್ಮ ಪ್ರತಿಸ್ಪರ್ಧಿ ಗೀತಾ 4 ಮತಗಳನ್ನು ಪಡೆದು ಪರಾಭವಗೊಂಡರು.
ಅರಕಲಗೂಡು ತಾಲೂಕಿನಾದ್ಯಂತ ಗಣಪತಿ ಪ್ರತಿಷ್ಠಾಪನೆ
ಅರಕಲಗೂಡು ತಾಲೂಕಿನಾದ್ಯಂತ ಗೌರಿ ಗಣೇಶ ಹಬ್ಬವನ್ನು ಶನಿವಾರ ಸಂಭ್ರಮದಿಂದ ಆಚರಿಸಿದರು. ಪಾಳೇಗಾರ ಕೃಷ್ಣಪ್ಪನಾಯಕನ ಆಳ್ವಿಕೆಯ ಇತಿಹಾಸ ಪ್ರಸಿದ್ಧವಾಗಿರುವ ಕೋಟೆ ಗಣಪತಿ ಕೊತ್ತಲಿಗೆ ಪ್ರತಿದಿನವೂ ನೂರಾರು ಭಕ್ತಾದಿಗಳು ಗಣಪತಿಕೊತ್ತಲಿನ ಗಣಪತಿ ದೇವರ ದರ್ಶನಕ್ಕೆ ಮತ್ತು ಹರಳಿಮರ, ಬನ್ನಿಮರ, ಎಕ್ಕದ ಗಿಡದ ಪೂಜೆಗಾಗಿ ಆಗಮಿಸುವ ಭಕ್ತಿಯ ಸ್ಥಳವಾಗಿದ್ದು, ಕೋಟೆ ಗಣಪತಿ ಕೊತ್ತಲಿನ ಸ್ಥಳದಲ್ಲಿ ಪ್ರತಿವರ್ಷವೂ ಗಣೇಶ ಮಹೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ, ಶಾಲಾ ಕಾಲೇಜಿನ ವಾರ್ಷಿಕೋತ್ಸವಗಳು, ಸಾರ್ವಜನಿಕರ ಇತರೆ ಸಭೆಗಳು ನಡೆದುಕೊಂಡು ಬರುತ್ತಿದೆ.
ಅದ್ಧೂರಿಯಾಗಿ ನೆರವೇರಿದ ಪಾಂಚಜನ್ಯ ಗಣೇಶ ಪ್ರತಿಷ್ಠಾಪನೆ
ಪಾಂಚಜನ್ಯ ಹಿಂದೂ ಗಣಪತಿ ಸಮಿತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶನಿವಾರ ಮಧ್ಯಾಹ್ನದಂದು ಗಣ್ಯರ ಎದುರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಗಣೇಶ ಪ್ರತಿಷ್ಠಾಪನೆಯು ಅದ್ಧೂರಿಯಾಗಿ ನೆರವೇರಿತು. ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾಧ್ಯಮದೊಂದಿಗೆ ಮಾತನಾಡಿ, ನಗರದಲ್ಲಿ ಪಾಂಚಜನ್ಯ ವತಿಯಿಂದ ಎಲ್ಲಾ ಸ್ವಯಂ ಸೇವಕರು ಸೇರಿ ವಿಘ್ನೇಶ್ವರನನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಆರೋಗ್ಯ, ಆಯಾಸ್ಸು, ಐಶ್ವರ್ಯ ಮತ್ತು ಶಾಂತಿ, ನೆಮ್ಮದಿ ನೀಡಿ ದೇವರು ಕಾಪಾಡಲಿ ಎಂದು ಭಗವಂತನಲ್ಲಿ ಹಾರೈಸುತ್ತೇನೆ ಎಂದರು.
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ತುಂಬಬೇಕು
ವಿದ್ಯಾವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತರ ಬಳಗದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಪ್ರಾಂಶುಪಾಲ ಎಂ ಎಂ ರಮೇಶ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವಂತೆ ಕರೆ ನೀಡಿದರು. ಉತ್ತಮ ಸ್ವಾಸ್ಥ್ಯ ಮತ್ತು ಸದೃಢ ಸಮಾಜ ಕಟ್ಟುವಲ್ಲಿ ಇಂದಿನ ಮಕ್ಕಳೇ ಮುಂದಿನ ಜನಾಂಗ ಮತ್ತು ಇಂದಿನ ವಿದ್ಯಾರ್ಥಿಗಳೇ ಮುಂದಿನ ಸತ್ಪ್ರಜೆಗಳು. ಹಾಗಾಗಿ ಅವರಲ್ಲಿ ವಿದ್ಯಾರ್ಥಿದೆಸೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಮೂಡುವಂತೆ ಮತ್ತು ನಮ್ಮ ದೇಶದ ಸಂಸ್ಕೃತಿ ಪರಂಪರೆ ಯಲ್ಲಿ ಗೌರವ ಮೂಡುವಂತೆ ಮತ್ತು ಈ ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಅಸಂಖ್ಯಾತ ಶೂರರ ಬಲಿದಾನಗಳ ಸ್ಮರಣೆಯನ್ನು ನೆನಪಿಟ್ಟುಕೊಳ್ಳುವಂತೆ ಶಿಕ್ಷಕರು ಬೋಧಿಸಬೇಕು ಎಂದು ಹೇಳಿದರು.
ಜೂನಿಯರ್ ಕಾಲೇಜು ಮೈದಾನದಲ್ಲಿ ಪೇಟೆ ಗಣಪತಿ ಪ್ರತಿಷ್ಠಾಪನೆ
ಬೇಲೂರು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಪೇಟೆ ಗಣಪತಿ ಎಂದೇ ಹೆಸರುವಾಸಿಯಾಗಿರುವ ಗಣೇಶ ಮೂರ್ತಿಯನ್ನು ಹೋಮ ಹವನದೊಂದಿಗೆ ಪ್ರತಿಷ್ಠಾಪಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ಸಹ ಎಲ್ಲಾ ಸ್ನೇಹಿತರ ಬಳಗದ ವತಿಯಿಂದ ಅದ್ಧೂರಿಯಾಗಿ ಗಣೇಶ ಮೂರ್ತಿಯನ್ನು ಹೋಮ ಹವನದೊಂದಿಗೆ ಪ್ರತಿಷ್ಠಾಪಿಸಲಾಗಿದೆ. ವಿಘ್ನೇಶ್ವರನ ಆಶೀರ್ವಾದದಿಂದ ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು, ರೈತರು ಹಸನ್ಮುಖರಾಗಿದ್ದು ಅದರಂತೆ ಭಗವಂತನ ಕರುಣೆ ಈ ಸಮಿತಿಯ ಮೇಲೆ ಅವರೆಲ್ಲಾ ಕೆಲಸಕಾರ್ಯಗಳು ಈಡೇರಲಿ ಎಂದು ಶುಭಹಾರೈಸಿ, ಪೇಟೆ ಗಣಪತಿ ಸೇವ ಕಾರ್ಯಗಳಿಗೆ ವಿಸರ್ಜನೆ ತನಕ ಎಲ್ಲಾ ಸಹಕಾರವನ್ನು ಪುರಸಭೆ ವತಿಯಿಂದ ನೀಡಲಾಗುವುದು ಎಂದರು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 417
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್‌ ಗಿರಿನಾಥ್‌
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved