• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯಾಗಿ ಪ್ರತಿಷ್ಠಾಪನೆಗೊಂಡ ಪೆಂಡಾಲ್ ಗಣಪತಿ
ಹಾಸನ ನಗರದ ಸಿಟಿ ಬಸ್ ನಿಲ್ದಾಣ ರಸ್ತೆ ಬಳಿ ಇರುವ ಪೆಂಡಾಲ್ ಗಣಪತಿ ಪ್ರತಿಷಾಪನಾ ಮಹೋತ್ಸವಕ್ಕೆ ಗಣ್ಯರು ಹಾಗೂ ಭಕ್ತರ ಸಮ್ಮುಖದಲ್ಲಿ ಶನಿವಾರ ಮಧ್ಯಾಹ್ನ ಸುಮಾರು ೧೨:೩೫ರ ವೇಳೆಗೆ ಮಹಾಮಂಗಳಾರತಿಯೊಂದಿಗೆ ಚಾಲನೆ ದೊರಕಿತು. ಶ್ರೀ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಡಾ. ಎಚ್. ನಾಗರಾಜು ಮಾತನಾಡಿ, ಹಾಸನ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಶ್ರೀ ಗಣಪತಿ ಸೇವಾ ಸಮಿತಿ ೭೦ನೇ ವರ್ಷದ ಗಣೇಶ ಪ್ರತಿಷ್ಠಾಪನೆಯ ಉದ್ಘಾಟನೆ ಆಗುವ ಮೂಲಕ ಮೊದಲ ದಿನ ಪ್ರಾರಂಭವಾಗಿದೆ.
ಮಹಾಗಣಪತಿ ಭವನದಲ್ಲಿ ಗಣಪತಿ ಪ್ರತಿಷ್ಠಾಪನೆ
ಶ್ರಿ ಮಹಾಗಣಪತಿ ಭವನದಲ್ಲಿ ನಿರ್ಮಿಸಿರುವ ಎಂಟು ಅಡಿ ಎತ್ತರದ ಜೇಡಿಮಣ್ಣಿನ ಗಣೇಶ ಮೂರ್ತಿ ಮುಂಭಾಗದಲ್ಲಿ ಬಾಳೆಕಂದು ನೆಟ್ಟು ಅದರ ಮುಂದೆ ಕನ್ನಡಿಯನ್ನು ಇಡಲಾಯಿತು. ಕಲಾವಿದ ಕೆ.ಸತೀಶ್ ಹಾಗೂ ಅರ್ಚಕ ಶ್ರೀಷಾಚಾರ್ ಅವರ ನೇತೃತ್ವದಲ್ಲಿ ಶ್ರೀ ಗಣೇಶಮೂರ್ತಿಗೆ ಕಣ್ಣು ಬರೆಯುತ್ತಿದ್ದಂತೆ ಪರದೆ ಸರಿಸಿ, ಬಾಳೆಕಂದು ಕತ್ತರಿಸಿ, ಕನ್ನಡಿಯಲ್ಲಿ ಗಣೇಶ ಮೂರ್ತಿಯನ್ನು ತೋರಿಸಿ, ನಂತರ ಸಾರ್ವಜನಿಕರಿಗೆ ಶ್ರೀ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಶ್ರೀ ಸ್ವಾಮಿಯ ಬೆಳ್ಳಿಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ ನೆರವೇರಿಸಿ, ಸಂಪ್ರದಾಯದ ಆಚರಣೆಯಂತೆ ಪೂಜಾ ಕೈಂಕರ್ಯ ನೆರವೇರಿಸಿ, ಮಂಗಳಾರತಿ ನಂತರ ತೀರ್ಥ, ಮೋದಕ ಹಾಗೂ ಸಕ್ಕರೆ ಮಿಶ್ರಿತ ಕಡ್ಲೆಹಿಟ್ಟು ಪ್ರಸಾದ ವಿತರಿಸಲಾಯಿತು.
ಲಾಭದಲ್ಲಿ ಬೆಳವಾಡಿ ಕೃಷಿ ಸಹಕಾರಿ ಸಂಘ
ಬೆಳವಾಡಿ ಕೃಷಿ ಪತ್ತಿನ ಸಹಕಾರಿ ಸಂಘವು 1976ರಲ್ಲಿ ಪ್ರಾರಂಭವಾಗಿ 2023-24ರ ವೇಳೆಗೆ ಸುಮಾರು 996 (ಷೇರುದಾರರನ್ನು) ಒಟ್ಟು 36 ಲಕ್ಷರೂಗಳ ಷೇರು ಹಣವನ್ನು ಹೊಂದಿದ್ದು, ಕೃಷಿ ಸಾಲ ಮರುಪಾವತಿಯಲ್ಲಿ ದಾಖಲೆಯನ್ನು ಹೊಂದಿದೆ. 2023-24ರಲ್ಲಿ ಒಟ್ಟು 5,91,000 (ಐದು ಲಕ್ಷದ ತೊಂಬತ್ತೊಂದು ಸಾವಿರ) ನಿವ್ವಳ ಲಾಭವನ್ನು ಗಳಿಸಿದೆ ಎಂದು ಬೆಳವಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಹಾಲಿ ಅಧ್ಯಕ್ಷರಾದ ಆರ್‌ ನಿಂಗೇಗೌಡ ತಿಳಿಸಿದರು. 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಎಲ್ಲ ನಿರ್ದೇಶಕರ ಸಹಕಾರ ಸಲಹೆಗಳಿಂದ ಸಂಘವು ತನ್ನದೇ ಆದ ಸ್ವಂತ ಕಟ್ಟಡವನ್ನು ಹೊಂದಿದೆ ಎಂದರು.
ಎತ್ತಿನಹೊಳೆ ಯೋಜನೆ : ಕೊರತೆ ನೀಗಿಸಲು ಹೊಸ ಚಿಂತನೆ - ಮುಖ್ಯಮಂತ್ರಿ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆಯಲ್ಲಿ ಕೊರತೆ ಬೀಳುತ್ತಿರುವ ನೀರನ್ನು ತಗ್ಗು ಪ್ರದೇಶದ ಹಳ್ಳಗಳಿಂದ ಸಂಗ್ರಹಿಸಿ ಪೂರೈಸಲು ಸರ್ವೆ ಕಾರ್ಯ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2027ರ ವೇಳೆಗೆ ಯೋಜನೆಯ ಎರಡನೇ ಹಂತ ಪೂರ್ಣಗೊಳ್ಳಲಿದ್ದು, ಏಳು ಜಿಲ್ಲೆಗಳಿಗೆ ಕುಡಿಯುವ ನೀರು ತಲುಪಲಿದೆ.
ಗ್ಯಾರಂಟಿ ಯೋಜನೆಗಳು ಸಂಪೂರ್ಣ ಅನುಷ್ಠಾನಗೊಂಡಿವೆ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಾಲೂಕಿನಲ್ಲಿ 54 ಸಾವಿರ ಮಂದಿ ಇದ್ದು, ಈ ಪೈಕಿ 51 ಸಾವಿರಮಂದಿಗೆ ಪ್ರತಿ ತಿಂಗಳು 2 ಸಾವಿರ ರು. ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 5 ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಶೇ.97ರಷ್ಟು ಅನುಷ್ಠಾನಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್‌ ಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕುರಿತು ಸಮಿತಿ ಸದಸ್ಯರು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿ ಶೇ.100ರಷ್ಟು ಗುರಿ ಸಾಧಿಸಲು ಕಾರ್ಯಕ್ರಮ ರೂಪಿಸಬೇಕೆಂದು ಅವರು ಸಲಹೆ ನೀಡಿದರು.
ಆಲೂರಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡರವರು, ಶಿಕ್ಷಕರು ತಮ್ಮ ವೃತ್ತಿ ಮತ್ತು ಜೀವನದಲ್ಲಿ ಕಪ್ಪು ಚುಕ್ಕೆಗಳು ಎದುರಾಗದಂತೆ ಸೇವೆ ಮಾಡಬೇಕು ಎಂದರು. ಪ್ರಾಥಮಿಕ, ಪ್ರೌಢಶಾಲೆ ಮತ್ತು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಮರಣ ಹೊಂದಿದ ನೌಕರರ ಕುಟುಂಬಗಳಿಗೆ ಸನ್ಮಾನಿಸಲಾಯಿತು.
ಶಿಕ್ಷಕರ ದಿನದ ಅಂಗವಾಗಿ ರಕ್ತದಾನ ಶಿಬಿರ
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪಟ್ಟಣದ ನೌಕರರ ಭವನದಲ್ಲಿ ಚನ್ನರಾಯಪಟ್ಟಣದ ಸ್ವಯಂಪ್ರೇರಿತ ರಕ್ತ ನಿಧಿ ಕೇಂದ್ರ ಮತ್ತು ರೋಟರಿ ಕ್ಲಬ್ ವಿಷನ್ ವತಿಯಿಂದ ಶಿಕ್ಷಕರಿಗೆ ರಕ್ತದಾನ ಶಿಬಿರವನ್ನು ಮತ್ತು ಮಧುಮೇಹ ತಪಾಸಣೆ ಕಣ್ಣಿನ ಪರೀಕ್ಷೆ ಉಚಿತ ಇಸಿಜಿ ಪರೀಕ್ಷೆ ಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉದ್ಘಾಟನೆಯನ್ನು ಮಾಡಿ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸುಮಾರು ೩೦ ಜನರು ರಕ್ತದಾನವನ್ನು ಮಾಡಿದರು.
ಗ್ರಾಮದ ಜಮೀನು ರಿಯಲ್‌ ಎಸ್ಟೇಟ್‌ಗೆ
ಚನ್ನರಾಯಪಟ್ಟಣ ಸಮೀಪದ ಕಸಬಾ ಹೋಬಳಿ ಬಂಡಿಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ ೯೦ರಿಂದ ೯೪ರಲ್ಲಿ ಸುಮಾರು ೧೦ಕ್ಕೂ ಹೆಚ್ಚು ರೈತರು ಕಾಲದಿಂದಲೂ ಸಹ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ ಕೆಲ ರಿಯಲ್ ಎಸ್ಟೇಟ್ ಉದ್ಯಮಿಗಳು ಈ ಜಮೀನು ನಮಗೆ ಸೇರಿದ್ದು ಎಂದು ರೈತರನ್ನ ದಬ್ಬಾಳಿಕೆ ಮೂಲಕ ಹೊರಹಾಕಿ ಲೇಔಟ್ ಮಾಡಲು ಮುಂದಾಗಿದ್ದಾರೆ. ಬಂಡಿಹಳ್ಳಿ ಗ್ರಾಮಸ್ಥರಿಂದ ಗ್ರಾಮದ ಜಮೀನನ್ನು ಉಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಲ್ಕನೇ ವಾರ್ಡ್‌ನಲ್ಲಿದ್ದ ತ್ಯಾಜ್ಯದ ರಾಶಿ ತೆರವು
ಹಲವು ವರ್ಷಗಳಿಂದ ರೋಗಗಳ ತಾಣವಾಗಿದ್ದ ನಾಲ್ಕನೇ ವಾರ್ಡಿನಲ್ಲಿರುವ ತ್ಯಾಜ್ಯದ ರಾಶಿಯನ್ನು ಪಟ್ಟಣ ಪಂಚಾಯಿತಿ ವತಿಯಿಂದ ತೆರವುಗೊಳಿಸಲಾಯಿತು. ಸುಮಾರು ಎರಡು ಗುಂಟೆ ಖಾಲಿ ಜಾಗದಲ್ಲಿ ಬೃಹತ್ ಗುಡ್ಡೆ ಬೆಳೆದು ಹಾವು, ಕ್ರಿಮಿಕೀಟಗಳು ಮತ್ತು ಸೊಳ್ಳೆಗಳ ತಾಣವಾಗಿತ್ತು. ಅಕ್ಕಪಕ್ಕ ವಾಸದ ಮನೆಗಳಿದ್ದರಿಂದ ಆಗಾಗ ರೋಗರುಜಿನಗಳು ಎದುರಾಗುತ್ತಿತ್ತು. ಪಟ್ಟಣ ಪಂಚಾಯಿತಿ, ಆರೋಗ್ಯ ಇಲಾಖೆ ಮೌಖಿಕ ಸೂಚನೆ ನೀಡಿದರೂ ಮಾಲೀಕರು ಅವಕಾಶ ಕೊಡುತ್ತಿರಲಿಲ್ಲ. ಇತ್ತೀಚೆಗೆ ನಾಲ್ಕನೇ ವಾರ್ಡಿನಲ್ಲಿ ಡೆಂಘೀ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಶುಚಿಗೊಳಿಸಬೇಕೆಂದು ಪತ್ರಿಕೆ ಮತ್ತು ಸ್ಥಳೀಯರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ
ಸರ್ಕಾರಿ ಶಾಲೆ, ಸಮಗ್ರ ಪ್ರಶಸ್ತಿ, ಆಲೂರು ಸುದ್ದಿ, ಹಾಸನ ಸುದ್ದಿ, ಕ್ರೀಡಾಕೂಟ, ಪ್ರಾಥಮಿಕ ಪಾಠ ಶಾಲೆಗಳ ಕ್ರೀಡಾಕೂಟ,ವಿದ್ಯಾರ್ಥಿಗಳು,Govt School, Comprehensive Award, Aluru News, Hassan News, Sports Event, Primary School Sports Event, Studentsಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಪಾಠ ಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಪಾಠಶಾಲಾ ವಿದ್ಯಾರ್ಥಿಗಳು " ಸಮಗ್ರ ಪ್ರಶಸ್ತಿ " ಪಡೆಯುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಖೋ ಖೋ ಪ್ರಥಮ, ಥ್ರೋ ಬಾಲ್ ಪ್ರಥಮ, 100×4 ರಿಲೇ ಪ್ರಥಮ, ವಾಲಿಬಾಲ್ ದ್ವಿತೀಯ ಸೇರಿದಂತೆ ರಿಷಿತ್ ಗೌಡ 400 ಮೀ ದ್ವಿತೀಯ, 100 ಮೀ ತೃತೀಯ, ವಿದ್ಯಾಸಾಗರ್ 600 ಮೀ ದ್ವಿತೀಯ ಸ್ಥಾನ ಪಡೆದಿದ್ದಾರೆ.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 417
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved