• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನ್ಯಾಳು ಸರ್ಕಾರಿ ಶಾಲೆಯ ವಾರ್ಷಿಕೋತ್ಸವ
ಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು. ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು.
ಜೆಎಸ್‌ಎಸ್‌ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಗುಂಪುವಿಮೆ
ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀಗಳ ಕಾಳಜಿ ಹಾಗೂ ದೂರದೃಷ್ಠಿಯ ಫಲವಾಗಿ ಜೆಎಸ್‌ಎಸ್ ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಐದು ಲಕ್ಷ ರುಪಾಯಿಗಳ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ಆಡಳಿತ ಮಂಡಳಿಯು ಕಲ್ಪಿಸಿದೆ. ಇಂತಹ ಅನುಕೂಲತೆಗಳನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಸುತ್ತೂರು ಮಠದ ಸ್ವಾಮೀಜೀಯವರಿಗೆ ನಾವೆಲ್ಲರೂ ಸದಾ ಋಣಿಗಳಾಗಿರಬೇಕು ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಅಭಿಪ್ರಾಯಪಟ್ಟರು.
ಅಡಿಬೈಲು ರಂಗನಾಥ ಸ್ವಾಮಿ ಜಾತ್ರೆಗೆ ಚಾಲನೆ
ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಡಿಬೈಲು ಗ್ರಾಮದ, ಶ್ರೀ ಬಿಂದಿಗಮ್ಮ ಹಾಗೂ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರದಿಂದ ಉತ್ಸವಗಳು ಪ್ರಾರಂಭವಾಗಿವೆ. ಭಾನುವಾರ ಸಂಜೆ ಮಹಾ ಮಂಗಳಾರತಿಯ ಮೂಲಕ ಬಿಂದಿಗೆಮ್ಮ ಅಡಿಬೈಲು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ಬೆಳಗ್ಗೆ ಹೇಮಾವತಿ ನದಿಯಿಂದ ಪವಿತ್ರ ತೀರ್ಥವನ್ನು ತಂದು ಪುಣ್ಯ ಪ್ರೋಕ್ಷಣೆ ಮಾಡಿ ನಂತರ ಅಭಿಷೇಕ ಉತ್ಸವ ನಡಸಿದ ನಂತರ ಶ್ರೀ ಬಿಂದಿಗೆ ಅಡಿಬೈಲು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
ಅಭಿವೃದ್ಧಿಗೆ ಅಗತ್ಯ ಅನುದಾನ ದೊರಕಿಸಲು ಪ್ರಯತ್ನ ಮಾಡುವೆ
ಅರಕಲಗೂಡು ಪಟ್ಟಣ ಹಾಗೂ ತಾಲೂಕಿನಲ್ಲಿ ನೆನಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳಲು ಅಗತ್ಯ ನೆರವು ದೊರಕಿಸಿಕೊಡಲು ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕ್ರೀಡಾಕೂಟ ಆಯೋಜಿಸಿ ಪ್ರೀತಿ ತೋರಿದ್ದೀರಿ. ಅಧಿಕಾರದ ಎರಡೂ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ. ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕ್ರೀಡಾಕೂಟ ಆಯೋಜಿಸಿ ಪ್ರೀತಿ ತೋರಿದ್ದೀರಿ. ನಿಮ್ಮ ಪ್ರೀತಿ ವಿಶ್ವಾಸ ಬೆಂಬಲ ಇರುವವರೆಗೆ ರಾಜಕೀಯ ವಿರೋಧಿಗಳ ಷಡ್ಯಂತರಗಳಿಗೆ ಜಗ್ಗದೆ ಅತ್ಯಂತ ಜನಪರವಾಗಿ ಕಾರ್ಯ ನಡೆಸಲಿದ್ದಾರೆ ಎಂದರು.
ಮನಸೂರೆಗೊಂಡ ವಿವಿಧ ರಾಜ್ಯಗಳ ಕಲಾಪ್ರಕಾರಗಳು
ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ 325ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಪ್ರದರ್ಶನಗಳು ನೃತ್ಯ ಲೋಕವನ್ನು ವೈಭವವಾಗಿ ಅನಾವರಣಗೊಳಿಸಿತು. ದೇಶ ವಿದೇಶಗಳ ನೂರಾರು ವಿದ್ಯಾರ್ಥಿಗಳು ತಂಡೋಪತಂಡವಾಗಿ ಒಂದೇ ವೇದಿಕೆಯಲ್ಲಿ ನಡೆಸಿಕೊಟ್ಟ ವಿವಿಧ ರಾಜ್ಯಗಳ ಕಲೆ, ಜನಪದ ನಾಟ್ಯ ಪ್ರಕಾರಗಳು ಮೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡು ಬೆರಗಾಗುವಂತೆ ಮಾಡಿದರು. ದೇಶದ ಸಾಂಸ್ಕೃತಿಕ ಕಲಾ ಸಿರಿವಂತಿಕೆಯನ್ನ ಸಾರಿದವು. ಅಷ್ಟೇ ಅಲ್ಲ ನೃತ್ಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತೊಟ್ಟಿದ್ದ ವೇಷಭೂಷಣ ಕಾರ್ಯಕ್ರಮದ ಕಳೆಯನ್ನು ಮತ್ತಷ್ಟು ರಂಗೇರುವಂತೆ ಮಾಡಿತು.
ಬೇಲೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ದೆಹಲಿಯ ಮತದಾರರು ಭಾರತೀಯ ಜನತಾ ಪಾರ್ಟಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯ ಬೆಂಬಲಕ್ಕೆ ನಿಂತು ಬಿಜೆಪಿಗೆ ಅಧಿಕಾರವನ್ನು ನೀಡುವ ಮೂಲಕ ಕೇಜ್ರಿವಾಲ್ ಅವರ ಭ್ರಷ್ಟ ಆಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹಾಸನ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರೇಣುಕುಮಾರ್ ಹೇಳಿದರು. ದೆಹಲಿಯಲ್ಲಿ ಬಿಜೆಪಿ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಘಟಕದಿಂದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಮ ಪಂಚಾಯ್ತಿಗಳು ಸ್ಥಳೀಯ ಸರ್ಕಾರವಿದ್ದಂತೆ
ಗ್ರಾಮ ಪಂಚಾಯ್ತಿಯು ಸ್ಥಳೀಯ ಸರ್ಕಾರವಿದ್ದಂತೆ. ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಪೂರೈಸುವಲ್ಲಿ ಪಂಚಾಯ್ತಿ ಆಡಳಿತ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು ಹಾಗೂ ಪಂಚಾಯ್ತಿ ಆಡಳಿತ ಉತ್ತಮವಾಗಿದ್ದರೆ ಗ್ರಾಮಸ್ಥರು ಕೂಡ ಯಾವುದೇ ತಕರಾರು ಮಾಡದೆ ತೆರಿಗೆ ಪಾವತಿಸುತ್ತಾರೆ. ಆದ್ದರಿಂದ ಪಂಚಾಯ್ತಿ ಆಡಳಿತವೂ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ತಾ.ಪಂ. ಇಒ ಜಿ.ಮುನಿರಾಜು ಸಲಹೆ ನೀಡಿದರು. ಬೆಟ್ಟದ ಸಾತೇನಹಳ್ಳಿಯೂ ತೆರಿಗೆ ಪಾವತಿಯಲ್ಲಿ ಹಿಂದುಳಿದ ಗ್ರಾಮವಾಗಿದೆ ಈ ಬಗ್ಗೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಹೊನ್ನಾಳಮ್ಮ ದೇವಾಲಯದ ಲೋಕಾರ್ಪಣೆ
ದೇವಾಲಯಗಳು ನಮ್ಮ ಸಂಸ್ಕೃತಿ ಪರಂಪರೆ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ ಮಂಜು ತಿಳಿಸಿದರು. ರಾಮನಾಥಪುರ ಹತ್ತಿರವಿರುವ ಬೇಲಿ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಹೊನ್ನಾಳಮ್ಮ ಹಾಗೂ ಚಿಕ್ಕಮ್ಮ ದೇವರ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ ಮಾತ್ರ ನಾವು ಹಿಡಿದ ಕೆಲಸಗಳು ಕೈಗೂಡುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಹ ದೊರೆಯುತ್ತದೆ ಎಂದರು.
ಅರಕಲಗೂಡಿನ ಕ್ರೀಡಾಂಗಣಕ್ಕೆ 25 ಲಕ್ಷ ರುಪಾಯಿ ಬಿಡುಗಡೆ
ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 25 ಲಕ್ಷ ರು. ಹಣ ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ತಿಳಿಸಿದರು. ಕ್ರೀಡೆ ಮತ್ತು ದೈಹಿಕ ವ್ಯಾಯಾಮ ಮನುಷ್ಯನ ಚಟುವಟಿಕೆಯ ಜೀವನಕ್ಕೆ ಸಹಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರಾಜ್ಯದ ಅಸ್ಮಿತೆ. ಸದಾ ಜನಪರ ಚಿಂತನೆಯಲ್ಲಿ ತೊಡಗಿರುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಬರಿದಾಯಿತು ಎಂಬ ಆಪಾದನೆ ಹುರುಳಿಲ್ಲದ್ದು. ಈ ಯೋಜನೆಗಳಿಂದ ಬಡಕುಟುಂಬಗಳು ನೆಮ್ಮದಿಯ ಬದುಕು ಕಂಡುಕೊಂಡಿವೆ ಎಂದರು.
ಬಸವಾಪಟ್ಟಣ ಫ್ರೌಢಶಾಲೆಗೆ ಗ್ರಾಮೀಣಾಭಿವೃದ್ಧಿ ಸಂಘದಿಂದ ಡೆಸ್ಕ್‌ಗಳ ಕೊಡುಗೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಸವಾಪಟ್ಟಣ ಗ್ರಾಮದ ಕೆ.ಪಿ.ಎಸ್ ಶಾಲೆಗೆ ಹತ್ತು ಡೆಸ್ಕ್ ಮತ್ತು ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಿದೆ. ಡೆಸ್ಕ್ ಮತ್ತು ಬೆಂಚ್‌ಗಳನ್ನು ನೀಡಿದ ಗ್ರಾಮಾಭಿವೃದ್ಧಿ ಸಂಘದ ಕಾರ್ಯ ಶ್ಲಾಘನೀಯ ಎಂದು ಕೆ.ಪಿ.ಎಸ್ ಶಾಲೆಯ ಉಪಪ್ರಾಂಶುಪಾಲರಾದ ಚಂದ್ರಪ್ಪ ಕರಿ ಭೀಮಣ್ಣರವರು ತಿಳಿಸಿದ್ದಾರೆ. ಸರ್ಕಾರದ ಅನುದಾನದ ಜೊತೆಗೆ ಇಂತಹ ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ಇದರಿಂದ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved