• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಡೆಕೆರೆ ಗ್ರಾಪಂ ಅಧ್ಯಕ್ಷರಾಗಿ ವಸಂತ ಗುರುಮೂರ್ತಿ
ತಾಲೂಕಿನ ಬೆಂಡೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚಿಕ್ಕೂರು ಗ್ರಾಮದ ವಸಂತ ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಸೈದಹಳ್ಳಿ ಮೂರ್ತಿ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ವಸಂತ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರು ಹಾಗೂ ಸದಸ್ಯರ ಒಡಗೂಡಿ ಬೆಂಡೆಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಚೌಲಗೆರೆ ಟೋಲ್ ವಿವಾದಕ್ಕೆ ಸಂಸದರಿಂದ ತೆರೆ
ಆಲೂರು ಸಮೀಪದ ಚೌಲಗೆರೆ ಟೋಲ್ ಬಳಿ ಸುಂಕ ವಸೂಲಿ ಕುರಿತಾಗಿ ಏರ್ಪಟ್ಟಿದ್ದ ಗೊಂದಲಕ್ಕೆ ಸಂಸದ ಶ್ರೇಯಸ್ ಪಟೇಲ್ ತೆರೆ ಹೇಳಿದರು. ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯರು, ಕನ್ನಡಪರ ಸಂಘಟನೆಗಳು, ಟೋಲ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಸಂಸದರು, ಸಮಸ್ಯೆಯನ್ನು ಸೌಹಾರ್ದತಹಿತವಾಗಿ ಇತ್ಯರ್ಥಪಡಿಸಿದರು.
ವಲಸಿಗ ಕೂಲಿಗಳ ಬಗ್ಗೆ ಎಚ್ಚರ ವಹಿಸುವಂತೆ ಎಸ್ಪಿಗೆ ಮನವಿ
ಹೊರರಾಜ್ಯಗಳಿಂದ ಕೂಲಿ ಕೆಲಸಕ್ಕೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಲಸಿಗರ ಮೇಲೆ ಸೂಕ್ತ ನಿಗಾವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೇಲೂರು ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ವಿ ಎಸ್ ಭೋಜೇಗೌಡ ಅವರ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಅವರಿಗೆ ಮನವಿ ಸಲ್ಲಿಸಲಾಯಿತು. ತಮ್ಮ ಕುಲಕಸುಬನ್ನೇ ನಂಬಿಕೊಂಡು ಬಂದಿದ್ದ ಸ್ಥಳೀಯ ಕಾರ್ಮಿಕರು ಇಂದು ಕೆಲಸವಿಲ್ಲದೆ ಪರದಾಡುವಂತಾಗಿದೆ ಎಂದರು.
ಹಾಸನ : ಅಗ್ನಿಶಾಮಕ ದಳದ ವತಿಯಿಂದ ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ

ಹಿಮ್ಸ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಅಗ್ನಿ ಅವಘಡಗಳಾದಾಗ ಅನುಸರಿಸಬೇಕಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಅಗ್ನಿಶಾಮಕ ದಳದ ಕರ್ತವ್ಯಗಳ ಬಗ್ಗೆ ವಿವರಿಸಿದರು. 

ನಾಟಕವನ್ನು ನೋಡುವ ಹವ್ಯಾಸ ಬೆಳೆಸಿಕೊಳ್ಳಿ
ನಾಟಕ ನೋಡುವ ಅಭಿರುಚಿ ಇರಬೇಕು. ಆದರೆ ಪ್ರಸ್ತುತದಲ್ಲಿ ಎಷ್ಟೇ ಟಿ,ವಿ ಚಾನೆಲ್‌ಗಳು, ಧಾರವಾಹಿಗಳು ಇದ್ದರೂ ಸಹ ಜನರಿಗೆ ನಾಟಕಗಳಿಂದ ಸಿಗುವ ಮನರಂಜನೆ, ಧಾರ್ಮಿಕ ಭಾವನೆ, ಸಾಂಸ್ಕೃತಿಕ, ಸಾಮಾಜಿಕ, ಚಿಂತನೆ ಮುಂತಾದ ಅನೇಕ ವಿಷಯಗಳ ಬಗ್ಗೆ ತಿಳಿಯಲು ಸಹಾಯಕಾರಿಯಾಗಿದೆ ಎಂದು ಹಾಸನ ಜವೇನಹಳ್ಳಿ ಮಠದ ಮಠಾಧೀಶರಾದ ಶ್ರೀ ಸಂಗಮೇಶ್ವರ ಸ್ವಾಮೀಜಿ ತಿಳಿಸಿದರು. , ಹಿಂದಿನಿಂದ ನಾಟಕೋತ್ಸವ ಪ್ರದರ್ಶನವನ್ನು ತರಳಬಾಳು ಮಠದ ಸಾಣೇಹಳ್ಳಿ ಮಠದ ಶ್ರೀ ಶಿವಕುಮಾರ ಕಲಾ ತಂಡದವರು ಅತ್ಯುತ್ತಮ ಪ್ರದರ್ಶನವನ್ನು ನುರಿತ ಕಲಾವಿದರು ನಡೆಸಿಕೊಂಡು ಬರುತ್ತಿದ್ದಾರೆ ಎಂದರು.
ಹಳೇಬೀಡು ದೇವಾಲಯದ ಮುಖ್ಯರಸ್ತೆಯ ಕಾಮಗಾರಿ ವೀಕ್ಷಣೆ
ವಿಶ್ವ ಪರಂಪರೆ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಐತಿಹಾಸಿಕ ಸ್ಥಳವಾದ ಹಳೇಬೀಡಿನ ಶ್ರೀ ಹೊಯ್ಸಳೇಶ್ವರ ದೇವಾಲಯದ ರಸ್ತೆಯ ಕಾಮಗಾರಿಯನ್ನು ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ವೀಕ್ಷಿಸಿದರು. ವೀಕ್ಷಣೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಮಗಾರಿ ವಿಳಂಬವಾಗಿರುವುದು ಬೇಸರದ ವಿಚಾರವಾಗಿದೆ . ಹಳೇಬೀಡಿಗೆ ಪ್ರವಾಸಿಗರು ಹಾಗೂ ವಾಹನಗಳು ಹೆಚ್ಚು ಬರುತ್ತಿರುವುದು ರಸ್ತೆಯಲ್ಲಿ ನಿತ್ಯವು ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆದು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಮಾಡಬೇಕೆಂದು ಆದೇಶಿಸಿದರು.
ರಜೆ ದಿನ ರಾಮನಾಥಪುರದಲ್ಲಿ ಭಕ್ತರ ದಂಡು
"ದಕ್ಷಿಣ ಕಾಶಿ " ಎಂದೇ ಪ್ರಖ್ಯಾತಿ ಹೊಂದಿರುವ ರಾಮನಾಥಪುರ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾ ರಥೋತ್ಸವ ಜನವರಿ 5ರಂದು ಭಾನುವಾರ ನಡೆಯುವ ಹಿನ್ನೆಲೆಯಲ್ಲಿ ರಜಾ ದಿನವಾದ ಭಾನುವಾರ ರಾಮನಾಥಪುರದಲ್ಲಿ ಎಲ್ಲೆಂದರಲ್ಲಿ ಜನಸಂದಣಿಯಿದ್ದು ಜಾತ್ರೆಮೈದಾನ, ದೇವಾಲಯಗಳು ಮತ್ತು ಸ್ನಾನಘಟ್ಟ ಭಕ್ತರಿಂದ ತುಂಬಿ ತುಳುಕಿತು. ಈ ಹಿಂದೆ ಡಿ. 7ರಂದು ಜರುಗಿದ ಪ್ರಸನ್ನ, ಶ್ರೀ ಸುಬ್ರಮಣ್ಯಸ್ವಾಮಿ ರಥೋತ್ಸವದಿಂದ ಆರಂಭವಾಗಿರುವ. ಈ ಜಾತ್ರೆಯು ತುಳು ಷಷ್ಠಿಯ ಜನವರಿ 5 ರ ವರೆಗೂ ಜರುಗಲಿದ್ದು, ಒಂದು ತಿಂಗಳಕಾಲ ಪ್ರತಿನಿತ್ಯವೂ ಸಹ ಭಕ್ತರು ಭೇಟಿ ನೀಡುತ್ತಾರೆ.
ಕಣತೂರಿನಲ್ಲಿ ಎತ್ತರದ ಶಿವಲಿಂಗ ಲೋಕಾರ್ಪಣೆ
ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಕಣತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 21 ಅಡಿ ಎತ್ತರದ ಶಿವಲಿಂಗ ಮತ್ತು ಶಿವನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಡಿ. 23ರ ಸೋಮವಾರ ನಡೆಯಲಿದೆ ಎಂದು ಕಣತೂರು ಶಂಕರ ಲಿಂಗೇಶ್ವರ ಟ್ರಸ್ಟ್ ಅಧ್ಯಕ್ಷ ಕೆ ಬಿ ಬಾಲಲೋಚನ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಶಿವನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಸಂಸದ ಶ್ರೇಯಸ್ ಪಟೇಲ್ ಉದ್ಘಾಟಿಸುವರು.
ಪ್ರಾಮಾಣಿಕರಾಗಿದ್ದರೆ ಸ್ವಯಂ ಉದ್ಯೋಗದಲ್ಲಿ ಉತ್ತುಂಗಕ್ಕೇರಬಹುದು
ಸಂವಿಧಾನವು ಎಲ್ಲರಿಗೂ ಬದುಕುವ ಅವಕಾಶ ನೀಡಿದೆ. ಆ ನಿಟ್ಟಿನಲ್ಲಿ ಯಾರು ಯಾವುದೇ ಉದ್ಯೋಗವನ್ನು ಆರಿಸಿಕೊಳ್ಳಲು ಅವಕಾಶ ನೀಡಿದೆ. ಭಾರತದಲ್ಲಿ ಇರುವ ಮಾನವ ಸಂಪನ್ಮೂಲ, ಭೌಗೋಳಿಕ ಸಂಪನ್ಮೂಲ, ಅರ್ಥಿಕ ಶಕ್ತಿ ಇನ್ಯಾವುದೇ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಮುರುಂಡಿ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲೋಹಿತ್ ತಿಳಿಸಿದರು. ವಿವಿಧ ಕ್ಷೇತ್ರಗಳ ಮೂಲಕ ಸೇವೆ ಸಲ್ಲಿಸಲು ಪ್ರೇರಣೆ ನೀಡುವ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಹಕಾರಿಯಾಗಲಿವೆ ಎಂದರು.
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ
ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved