• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಅಕ್ರಮ ಬಾಂಗ್ಲಾ ವಲಸಿಗರರನ್ನು ದೇಶದಿಂದ ಹೊರಗೆ ಹಾಕಿ ಮತ್ತು ಅವರಿಗೆ ಭಾರತದೊಳಗೆ ನಕಲಿ ಐಡಿ ಕಾರ್ಡ್‌ಗಳನ್ನು ಮಾಡಿಕೊಳ್ಳಲು ಸಹಕರಿಸಿದವರ ವಿರುದ್ಧ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೊಟ್ಟಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಕಲಿ ಆಧಾರ್ ಕಾರ್ಡ್ ನಂತಹ ಮಹತ್ತರ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿರುವುದು ಮತ್ತು ಇದಕ್ಕೆ ಪ್ರಭಾವಿಗಳು ಮತ್ತು ಸರ್ಕಾರಿ ನೌಕರರೇ ಸಹಕರಿಸುತ್ತಿರುವುದು ದೇಶದ್ರೋಹವೇ ಸರಿ ಎಂದು ಆಕ್ರೋಶ ಹೊರಹಾಕಿದರು.
ಅಕ್ರಮ ವಲಸಿಗರಿಂದ ದೇಶದ ಆಂತರಿಕ ಭದ್ರತೆಗೆ ಅಪಾಯ
ಇತ್ತೀಚಿನ ದಿನಗಳಲ್ಲಿ ಅಸ್ಸಾಂ ರಾಜ್ಯದ ಹೆಸರು ಹೇಳಿಕೊಂಡು ವಲಸೆ ಬರುತ್ತಿರುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ. ವಲಸೆ ಕಾರ್ಮಿಕರ ಕೆಲವರು ಹೈದರಾಬಾದ್ ಹೆಸರು ಹೇಳಿದರೆ ಆಧಾರ್ ಕಾರ್ಡಲ್ಲಿ ಬೇರೆ ಊರಿನ ಮಾಹಿತಿ ಇದೆ. ಇನ್ನು ಕೆಲವರು ಅಸ್ಸಾಂ ರಾಜ್ಯದವರೆಂದು ಹೇಳುತ್ತಾರೆ. ಆದರೆ ಅವರ ಬಳಿ ಯಾವುದೇ ಮಾಹಿತಿ ಇಲ್ಲ. ಅಸ್ಸಾಂ ರಾಜ್ಯದ ಹೆಸರು ಹೇಳಿಕೊಂಡು ಬರುತ್ತಿರುವವರು ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂಬ ಶಂಕೆ ವ್ಯಕ್ತವಾಗಿದೆ. ಅಕ್ರಮ ವಲಸಿಗರ ಕುರಿತು ತನಿಖೆ ನಡೆಸುವಲ್ಲಿ ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಎನ್. ರವಿಕುಮಾರ್ ದೂರಿದರು.
ಒಂದೇ ಊರಿನಲ್ಲಿ ಒಂದೇ ರಾತ್ರಿ 8 ಮನೆಗಳಲ್ಲಿ ಕಳ್ಳತನ
ಗ್ರಾಮದಲ್ಲೆಲ್ಲಾ ಮಿಕ್ಸಿ ಮಾರಾಟ ಮಾಡುವ ನೆಪದಲ್ಲಿ ತಿರುಗಾಡಿ ಬೀಗ ಹಾಕಿರುವ ಮನೆಗಳನ್ನು ಗಮನಿಸಿರುವ ಕಳ್ಳರು, ರಾತ್ರಿ ಎಂಟು ಮನೆಗಳಲ್ಲಿ ಕಳ್ಳತನ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ರಂಗನಾಯಕನ ಕೊಪ್ಪಲು ಗ್ರಾಮದಲ್ಲಿ ಡಕಾಯಿತರು ಹಾಡುಹಗಲೇ ಮನೆ ದರೋಡೆ ಮಾಡಿದ ಘಟನೆ ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ದರೋಡೆ ಮಾಡಿ ಮೂವರು ಚೋರರು ಪರಾರಿಯಾಗುತ್ತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕಳವು ಪ್ರಕರಣ ದಾಖಲಾಗಿದೆ.
ಆರೋಪ ರುಜುವಾತು ಮಾಡಿದ್ರೆ ಅರಸೀಕೆರೆಯನ್ನೇ ಬಿಡುವೆ
ಕಳೆದ ಚುನಾವಣೆಯಲ್ಲಿ ನಾನು ಆರು ಸಾವಿರ ಮತಗಳನ್ನು ಪಡೆದಿರುವುದನ್ನು ಪ್ರಸ್ತಾಪಿಸಿ, ಇತರೆ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ನಗರಸಭಾ ಅಧ್ಯಕ್ಷ ಸಮೀವುಲ್ಲಾ, ಶ್ರೀ ಜೇನುಕಲ್ ಬೆಟ್ಟವೇಕೆ ಅವರ ಮಸೀದಿಗೆ ಹೋಗಿ ಪ್ರಮಾಣ ಮಾಡೋಣ ರುಜುವಾತು ಮಾಡಿದರೆ ಅರಸೀಕೆರೆಯನ್ನೇ ಬಿಡುವೆ, ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಶಾಸಕರನ್ನೇ ಕೇಳಲಿ ಎಂದು ಕರ್ನಾಟಕ ಹೆದ್ದಾರಿ ನಿಗಮದ ಮಾಜಿ ಅಧ್ಯಕ್ಷ ಜಿವಿಟಿ ಬಸವರಾಜ್ ಸವಾಲು ಹಾಕಿದರು. ಗಂಜಿಗೆರೆಯಿಂದ ಅರಸೀಕೆರೆಯವರೆಗೆ ನನ್ನ ಬಗ್ಗೆ ಒಂದೇ ಒಂದು ನಿರ್ದಿಷ್ಟ ಆರೋಪವನ್ನು ಇವರು ರುಜುವಾತು ಪಡಿಸಿದರೆ ನಾನು ಅರಸೀಕೆರೆಯನ್ನೇ ಬಿಡುತ್ತೇನೆ ಎಂದು ಪುನರುಚ್ಛರಿಸಿದರು.
ಪರಿಶಿಷ್ಟರ ಒಳಮಿಸಲಾತಿ ಶೀಘ್ರ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಪರಿಶಿಷ್ಟರ ಮಿಸಲಾತಿ ವರ್ಗೀಕರಣ ಶೀಘ್ರವಾಗಿ ಜಾರಿ ಮಾಡಲು ಆಗ್ರಹಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೯ರಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ. ಎನ್. ಮೂರ್ತಿ ತಿಳಿಸಿದರು. ಕೂಡಲೇ ಮುಖ್ಯಮಂತಿಗಳು ಸಚಿವ ಸಂಪುಟ ಸಭೆ ನಡೆಸಿ ನ್ಯಾಯಮೂರ್ತಿ ಎ.ಜೆ. ಸದಾಶಿವ ರವರ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಅನುಷ್ಠಾನ ಮಾಡಲು ಆಗ್ರಹಿಸಿದೆ. ವಿಳಂಬ ಮಾಡಿದಲ್ಲಿ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಬಹುಜನರು ಚುನಾವಣೆಯನ್ನೇ ಬಹಿಷ್ಕರಿಸಲಾಗುವುದಾಗಿ ಎಚ್ಚರಿಕೆ ನೀಡಿದರು.
ನೀರಿನ ವಾಲ್ವ್‌ ತೆರವುಗೊಳಿಸದಂತೆ ಒತ್ತಾಯ
ಪುರಸಭೆ ವ್ಯಾಪ್ತಿಯ ೧೭ನೇ ವಾರ್ಡಿನ ೨ನೇ ಬೀದಿಯಲ್ಲಿನ ಮೇಲ್ಬಾಗದ ಕೆಲ ಮನೆಗಳಿಗೆ ಕುಡಿಯುವ ನೀರು ನಲ್ಲಿಗಳಲ್ಲಿ ಬಾರದೆ ನೇರವಾಗಿ ಇಳಿಜಾರಿಗೆ ಹೋಗುತಿದ್ದುದರಿಂದ ನೀರು ಪೋಲಾಗುತಿತ್ತು. ಇದನ್ನು ತಡೆಗಟ್ಟಿದರೆ ಮೇಲ್ಭಾಗದ ಮನೆಗಳಿಗೂ ನೀರು ಸಿಗುವಂತೆ ಮಾಡಿ ಎಂದು ಎಲ್ಲರೂ ಸಹಿ ಮಾಡಿ ಮನವಿ ಸಲ್ಲಿಸಿದ್ದರಿಂದ ಅಧಿಕಾರಿಗಳು ಸಿಬ್ಬಂದಿ ಕಳುಹಿಸಿ ಕಂಟ್ರೋಲ್ ವಾಲ್ ಅಳವಡಿಸಿದ್ದರು. ಆದರೆ ಈ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳದೆ ವೈಯಕ್ತಿಕ ಕಾರಣಗಳಿಗಾಗಿ ಇಲ್ಲಿ ಹಾಕಿರುವ ಕಂಟ್ರೋಲ್ ವಾಲ್ ತೆಗೆಯುವಂತೆ ಅಧಿಕಾರಿ ಮತ್ತು ಅಧ್ಯಕ್ಷರಿಗೆ ಕೆಲವರು ಒತ್ತಡ ಹಾಕುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸ್ಥಳೀಯರು ಸೇರಿ ವಾಲ್ ಇರುವ ಸ್ಥಳದಲ್ಲೆ ಸೇರಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.
ನಾನು ಶಾಸಕನಲ್ಲ ಜನಸೇವಕ ಎಂದ ಎಚ್ ಕೆ ಸುರೇಶ್‌
ಬೇಲೂರು ಶಾಸಕ ಎಚ್‌ ಕೆ ಸುರೇಶ್‌ ಹುಟ್ಟುಹಬ್ಬ ಹಿನ್ನೆಲೆ ಆಶಾಕಾರ್ಯಕರ್ತರು, ಪೌರಕಾರ್ಮಿಕರಿಗೆ ಗೌರವ ಸನ್ಮಾನ ಮಾಡಲಾಗಿದೆ. ರೈತರಿಗೆ ಉಚಿತವಾಗಿ ಗಿಡಗಳನ್ನು ನೀಡಲಾಗಿದೆ. ಜೊತೆಗೆ ರಕ್ತದಾನ ಮಹಾದಾನ ಎಂಬ ಹಿನ್ನೆಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಲಾಗಿದೆ. ನಾನು ಎಂದಿಗೂ ಶಾಸಕನಲ್ಲ, ಬದಲಾಗಿ ನಿಮ್ಮ ಸೇವಕ ಎಂಬ ಭಾವನೆಯಿಂದ ಕಾರ್ಯನಿರ್ವಹಿಸುತ್ತಿದ್ದೇನೆ.ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುವುದುನನ್ನ ಮೂಲ ಗುರಿಯಾಗಿದೆ. ಇಲ್ಲಿನ ಜನರ ಕಷ್ಟಗಳನ್ನು ನಾನು ವಿಧಾನಸಭೆ ಚುನಾವಣೆ ಪೂರ್ವದಲ್ಲೇ ಅರಿತಿದ್ದೇನೆ ಎಂದು ಶಾಸಕರು ಹೇಳಿದರು.
ಎತ್ತಿನಹೊಳೆ ಯೋಜನೆಗೆ ಭಗೀರಥ ಪ್ರಯತ್ನ
ಎತ್ತಿನಹೊಳೆ ಯೋಜನೆ ತುಮಕೂರು ಕೋಲಾರದವರೆಗೆ ನೀರು ಹರಿಸೋ ಯೋಜನೆ. ೨೦೧೪ರಲ್ಲಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಆಗ ಈ ಯೋಜನೆ ಜಾರಿ ಆಗುವುದಿಲ್ಲ ಎಂದು ಈ ಜಿಲ್ಲೆಯ ವಿರೋಧಿ ಬಣ ಹೇಳುತ್ತಾ ಬಂದಿತ್ತು. ಆದರೆ ಈಗ ಆ ಯೋಜನೆ ಫಲಪ್ರದವಾಗಿದೆ. ಸೆಪ್ಟೆಂಬರ್ ೬ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ, ಫಲಾನುಭವಿ ಜಿಲ್ಲೆ ಹಾಗೂ ತಾಲೂಕುಗಳ ಶಾಸಕರು, ಸಚಿವರು ಭಾಗಿಯಾಗುತ್ತಾರೆ. ಒಂದೇ ಪಂಪ್‌ನಿಂದ ಹರಿಯುತ್ತಿರುವ ನೀರಿನಿಂದ ಈಗಾಗಲೆ ಹಲವು ಕೆರೆಗಳು ತುಂಬಿವೆ. ಇನ್ನೂ ನಾಲ್ಕು ವಿಯರ್‌ಗಳಿಂದ ನೀರು ಹರಿಯುವ ಯೋಜನೆಗೆ ಚಾಲನೆ ಸಿಗಲಿದೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದರು.
ಪ್ರತಿಯೊಬ್ಬರೂ ತಾಯಿಯ ಹೆಸರಲ್ಲಿ ಒಂದು ಗಿಡ ನೆಡಿ
ತಾಯಿಯ ಹೆಸರಿನಲ್ಲಿ ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಯಶಸ್ಸು ಲಭಿಸುತ್ತದೆ. ತಾಯಿ ವರ್ಣಿಸಲು ಅಸಾಧ್ಯವಾದ ಸಂಬಂಧ ಹಾಗೂ ಪೂಜ್ಯ ಭಾವನೆ ಇರುವ ಕಾರಣದಿಂದ "ತಾಯಿಯ ಹೆಸರಿನಲ್ಲಿ ಒಂದು ಮರ " ಎಂಬ ವಿಶೇಷ ಯೋಜನೆಯಡಿ ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸುವ ಮೂಲಕ ಪರಿಸರ ರಕ್ಷಣೆಯ ಜತೆಗೆ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡುವ ವಿನೂತನ ಕಾರ್ಯಕ್ರಮದಲ್ಲಿ ನಾವುಗಳು ಕೈ ಜೋಡಿಸಿ, ಗಿಡಗಳನ್ನು ನೆಟ್ಟು ಪೋಷಿಸೋಣವೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿ ಮಠ್ ಸಲಹೆ ನೀಡಿದರು.
ಅರಸೀಕೆರೆಯಲ್ಲಿ ಬಾಂಗ್ಲಾ ನುಸುಳುಕೋರ ಮತದಾರರು
ಬಾಂಗ್ಲಾದೇಶದಿಂದ ಭಾರತದ ಗಡಿ ನುಸುಳಿ ಬಂದಂತಹ ಅಕ್ರಮ ವಲಸಿಗರು ಅರಸೀಕೆರೆ ತಾಲೂಕು ಒಂದರಲ್ಲೆ ಮೂರರಿಂದ ಮೂರೂವರೆ ಸಾವಿರದಷ್ಟು ಮತದಾರರಾಗಿದ್ದಾರೆ. ಇಂತಹ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸಿ ಆಧಾರ್ ನೋಂದಣಿ ಮಾಡುತ್ತಿರುವ ಜಾಲದ ಮೂಲವನ್ನು ಮೊದಲು ಪತ್ತೆಹಚ್ಚಿ ಇಷ್ಟು ದೊಡ್ಡ ದೇಶದ್ರೋಹಿ ಜಾಲಕ್ಕೆ ಕಡಿವಾಣ ಹಾಕಬೇಕೆಂದು ಜೆಡಿಎಸ್ ಪಕ್ಷದ ಮುಖಂಡ ಎನ್.ಆರ್‌. ಸಂತೋಷ್ ಆಗ್ರಹಿಸಿದರು. ಕೆಲ ದಿನಗಳ ಹಿಂದೆ ಹಾಸನ ನಗರದ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟದಲ್ಲೇ ಇರುವ ಆಧಾರ್ ನೋಂದಣಿ ಕೇಂದ್ರದಲ್ಲಿಯೇ ಬಾಂಗ್ಲಾದೇಶದ ವಲಸಿಗರಿಗೆ ನಕಲಿ ದಾಖಲೆ ಮೂಲಕ ಆಧಾರ್‌ ಕಾರ್ಡ್‌ ನೀಡುತ್ತಿರುವ ಬಗ್ಗೆ ಪತ್ತೆಯಾಗಿದೆ. ಪುಡಿಗಾಸಿನ ಆಸೆಗೆ ದೇಶದ್ರೋಹಿಗಳು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved