• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೂರ ಜಮೀನಿನಲ್ಲಿ ಚಿರತೆ ಓಡಾಟ ಶಂಕೆ, ಶೋಧ ಕಾರ್ಯಕ್ಕೆ ವಿದ್ಯುತ್ ಅಡಚಣೆ
ಕೆಲ ಗ್ರಾಮಗಳಲ್ಲಿ ಆಗಾಗ ಚಿರತೆ ಓಡಾಟದಿಂದ ಭಯಗೊಳ್ಳುತ್ತಿರುವ ರೈತರು ಕೃಷಿ ಚಟುವಟಿಕೆ ನಡೆಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ
ಒಳಚರಂಡಿ ಕಾಮಗಾರಿಯನ್ನು ತುರ್ತಾಗಿ ಮುಗಿಸಿ
ನನೆಗುದಿಗೆ ಬಿದ್ದಿರುವ ಒಳಚರಂಡಿ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಂಡು ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಎ. ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು. 2013ರಲ್ಲಿ 18 ಕೋಟಿ ರು. ವೆಚ್ಚದಲ್ಲಿ ಆರಂಭಗೊಂಡ ಕಾಮಗಾರಿ 12 ವರ್ಷ ಕಳೆದರೂ ಇನ್ನೂ ಕುಂಟುತ್ತಾ ಸಾಗಿದೆ. ಕಾಮಗಾರಿ ವೆಚ್ಚ 39 ಕೋಟಿ ರು.ಗೆ ಏರಿಕೆಯಾಗಿದೆ, ಸರ್ಕಾರ ಹಣವನ್ನೂ ಬಿಡುಗಡೆಮಾಡಿದೆ. ತ್ಯಾಜ್ಯ ಘಟಕ ನಿರ್ವಹಣೆಗೆ ಅಗತ್ಯ ಜಮೀನು ಗುರುತಿಸಿ ನೋಂದಾಯಿಸಿ ಕೊಟ್ಟಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಪೂರ್ಣಗೊಳ್ಳದೆ ಪಟ್ಟಣದ ಜನತೆ ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸಿ ಚಾಲನೆ ನೀಡಲಿ
ಸಕಲೇಶಪುರ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸದೇ ಮೀರಿ ಉದ್ಘಾಟನೆ ಮಾಡಲು ಮುಂದಾದರೆ ಬೃಹತ್ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಾವು ಅಭಿವೃದ್ಧಿಗೆ ಕೇಳಿರುವುದು ೫ ಕೋಟಿ, ಅವರು ಕೊಡ್ತೀನಿ ಎಂದಿರುವುದು ೫೦ ಲಕ್ಷ. ಭೂಮಿ ಪೂಜೆ ಮಾಡಬೇಕಾದರೇ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಕೇವಲ ೧೪ ಲಕ್ಷ ರು.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೀಘ್ರ ಹೌಸಿಂಗ್ ಫಾರ್‌ ಆಲ್ ಯೋಜನೆ ಫಲಾನುಭವಿಗಳಿಗೆ ಸೂರು : ಶಾಸಕ ಕೆ.ಎಂ ಶಿವಲಿಂಗೇಗೌಡ

ಅಧಿಕಾರ ಶಾಶ್ವತವಲ್ಲ, ತಮಗೆ ಸಿಕ್ಕ ಅವಕಾಶದ ಸಂದರ್ಭದಲ್ಲಿ ಮಾಡುವ ಜನಪರ ಕೆಲಸ ಕಾರ್ಯಗಳೇ ಶಾಶ್ವತ ಎಂದು ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಆದ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು.

ಬೇಲೂರು : ತಾಲೂಕಿನ ಬಿಕ್ಕೋಡು ರಸ್ತೆಯಲ್ಲೇ ಓಡಾಟ ನಡೆಸುತ್ತಿರುವ 30ಕ್ಕೂ ಹೆಚ್ಚು ಕಾಡಾನೆಗಳು

ತಾಲೂಕಿನ ಬಿಕ್ಕೋಡು ಹೋಬಳಿ ತಗರೆ ಮತ್ತು ಕೋಗಿಲೆಮನೆ ಪ್ರದೇಶದಲ್ಲಿ ಸುಮಾರು 30ಕ್ಕೂ ಹೆಚ್ಚು ಕಾಡಾನೆಗಳು ರಸ್ತೆಯಲ್ಲಿ ಓಡಾಡುತ್ತಿದ್ದು, ವಾಹನ ಸವಾರರು ಮತ್ತು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಅಪ್ರಾಪ್ತರಿಗೆ ವಾಹನ ನೀಡುವುದು ಶಿಕ್ಷಾರ್ಹ ಅಪರಾಧ - ರಸ್ತೆ ಸುರಕ್ಷಾ ನಿಯಮ ಪಾಲನೆ ಅತ್ಯಗತ್ಯ

ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನಗಳ ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು, ರಸ್ತೆ ಸುರಕ್ಷಾ ನಿಯಮಗಳಲ್ಲಿ ಮುಖ್ಯವಾದ ಹೆಲ್ಮೆಟ್ ಧರಿಸುವುದು, ನಿಧಾನಗತಿಯ ಚಾಲನೆ ಮಾಡುವ ಸಲಹೆಯನ್ನು ತಪ್ಪದೇ ಪಾಲನೆ ಮಾಡುವುದು ಅತ್ಯಗತ್ಯ

ಜಗತ್ತಿನಲ್ಲಿ ಜ್ಞಾನದ ಮುಂದೆ ಯಾವುದೂ ಮುಖ್ಯವಲ್ಲ
ಜಗತ್ತಿನಲ್ಲಿ ಜ್ಞಾನದ ಮುಂದೆ ಯಾವುದೂ ಕೂಡ ಮುಖ್ಯವಾಗಲಾರದು. ಜ್ಞಾನಮಾರ್ಗದಲ್ಲಿ ಸಾಗಿದರೆ ಬದುಕು ಉಜ್ವಲವಾಗುತ್ತದೆ ಎಂದು ಹಾಸನ ಎವಿಕೆ ಕಾಲೇಜು ಪ್ರಾಂಶುಪಾಲ ಡಾ. ಎಸ್. ಸಿ. ಯತೀಶ್ವರ್‌ ತಿಳಿಸಿದರು. ಋಷಿಮುನಿಗಳ ಕಾಲದಿಂದಲೂ ಭಾರತ ದೇಶದ ಜ್ಞಾನದ ಶಕ್ತಿ ಜಗತ್ತಿಗೆ ತಿಳಿದಿದೆ. ನಿತ್ಯ ಏಕಾಗ್ರತೆಯಿಂದ ಸ್ವಲ್ಪ ಸಮಯ ಧ್ಯಾನ ಮಾಡಿ ಜ್ಞಾನ ಸಂಪಾದಿಸಿಕೊಳ್ಳಿ ಶಿಕ್ಷಣದ ಮಹತ್ವ ಉನ್ನತಿಯಾಗಲು ಸಾಧ್ಯವಾಗುತ್ತದೆ ಎಂದರು.
ಪಾರು ಪಾರ್ವತಿ ಕನ್ನಡ ಸಿನಿಮಾ ಯಶಸ್ಸು
ಪಾರು ಪಾರ್ವತಿ ಸಿನಿಮಾ ರಿಲೀಸ್ ಆದ ಮೇಲೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಪ್ರಚಾರದ ಪ್ರಯಾಣ ಸಾಗುತ್ತಿದೆ. ಈಗ ನನ್ನ ಹುಟ್ಟೂರು ಹಾಸನ ಜಿಲ್ಲೆಗೆ ಆಗಮಿಸಿದ್ದೇವೆ. ನಮ್ಮ ತಂದೆ ತಾಯಿ ನಾನು ಎಲ್ಲಾ ಇಲ್ಲಿಯೇ ಹುಟ್ಟಿ ಬೆಳೆದಿರುವುದು. ಈ ಸಿನಿಮಾದಲ್ಲಿ ಒಟ್ಟು ಐದು ಹಾಡುಗಳಿದ್ದು, ಎಲ್ಲವೂ ವಿಭಿನ್ನವಾಗಿದೆ. ಆಗಾಗ್ಗೆ ಸಲ್ಪ ಕಾಮಿಡಿ ಸನ್ನಿವೇಶಗಳು ನಾಯಕ ನಟನಿಂದಲೇ ಸಿಗಲಿದೆ. ನಾಯಕ ನಟ ಇನ್ನು ಕನ್ನಡವನ್ನು ಕಲಿತು ಅವರೆ ಡಬ್‌ ಕೂಡ ಮಾಡಿರುವುದು ವಿಶೇಷವಾಗಿದೆ ಎಂದರು.
ಪ್ಲಾಸ್ಟಿಕ್ ಮುಕ್ತ ಹಾಸನ ನಮ್ಮ ಫುಡ್‌ಪಾರ್ಕಿನ ಮುಂದಿನ ಗುರಿ
ಫುಡ್ ಪಾರ್ಕಿನ ೨೦೨೫-೨೬ನೇ ಸಾಲಿನ ಗುರಿಗಳು ಎಂದರೇ ಸುಸ್ಥಿರ ವೃತ್ತಾಕಾರದ ಆರ್ಥಿಕತೆ ಪರಿಚಯಿಸುವುದು, ವಿದೇಶಿ ಖರೀದಿದಾರರು ಕಳೆದ ವರ್ಷ ೨೦೨೪ ಡಿಸೆಂಬರ್ ೩೧ ಗುಜರಾತ್ ಜೊತೆ ಮಾಡಿಕೊಂಡಿದ್ದ ಒಪ್ಪಂದಗಳು ಕೊನೆಯಾಗಿದ್ದು, ನಮ್ಮ ಫುಡ್ ಪಾರ್ಕ್ ಜೊತೆ ನೇರ ಖರೀದಿ ಒಪ್ಪಂದ ಮಾಡಿಕೊಂಡಿರುವ ಕಾರಣ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡಿ ತಿಂಗಳಿಗೆ ಕನಿಷ್ಠ ೫ ಕೋಟಿ ಮೊತ್ತದ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ಸಿದ್ಧಪಡಿಸಿದ ಆಹಾರ ಸಂಸ್ಕರಣಾ ವಸ್ತುಗಳನ್ನು ರಫ್ತು ಮಾಡುವುದು ಆಗಿದೆ ಎಂದು ಅಶೋಕ್‌ ತಿಳಿಸಿದರು.
ಮಾಚಿದೇವರ ದಾರಿಯಲ್ಲಿ ಎಲ್ಲರೂ ನಡೆಯಬೇಕಿದೆ
ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಆಲೂರು ತಾಲೂಕು ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಮಾಚಿದೇವ ಸಂಘದ ಸಹಯೋಗದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶ್ರೀಸಾಮಾನ್ಯನಾಗಿದ್ದ ಮಡಿವಾಳ ಮಾಚಿದೇವರ ಜೀವನ ಸಂದೇಶದ ಕಥೆಯನ್ನು ಅರ್ಥಪೂರ್ಣವಾಗಿ ತಿಳಿಸಿದ ಅವರು, 12ನೇ ಶತಮಾನದ ವಚನ ಕ್ರಾಂತಿಯೂ ಕನ್ನಡಕ್ಕೆ ದೊಡ್ಡ ಸಂಪತ್ತು ಎಂದು ವಿವರಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved