• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಟಿಕಲ್‌ 370 ರದ್ದು ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಅಂಬೇಡ್ಕರ್ ಜೀವನಾಧಾರಿತ ದಿ ರೂಲರ್ಸ್ ಚಿತ್ರ ತೆರೆಗೆ
ಡಾ. ಞಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಜೀವನದಾರಿದ ದಿ ರೂಲರ್ಸ್ ಚಿತ್ರ ತೆರೆಕಂಡ ಹಿನ್ನೆಲೆಯಲ್ಲಿ ನಗರದ ಪೃಥ್ವಿ ಚಿತ್ರಮಂದಿರದ ಆವರಣದಲ್ಲಿ ಚಿತ್ರತಂಡದಿಂದ ಸಂಭ್ರಮಾಚರಣೆ ನಡೆಸಿದರು. ಸಂವಿಧಾನದ ಶಕ್ತಿ ಎಂಬ ಶೀರ್ಷಿಕೆ ಅಡಿಯಲ್ಲಿ ನೈಜ ಘಟನೆಗಳನ್ನು ಆಧರಿಸಿ ಚಿತ್ರ ನಿರ್ಮಾಣವಾಗಿದ್ದು, ಅಂತಾರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಕೆಂ ಸಂದೇಶ್‌ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಮಾಡಿದ್ದು , ಉದಯ್ ಭಾಸ್ಕರ್‌ ಅವರು ನಿರ್ದೇಶಿಸಿ ಅಶ್ವತ್ಥ್‌ ಬೆಳಗೆರೆಯವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಬಾಡಿಗೆ ಕಟ್ಟದ ವಾಣಿಜ್ಯ ಮಳಿಗೆಗಳಿಗೆ ಪುರಸಭೆಯಿಂದ ಬೀಗ
ಬಾಡಿಗೆ ವಸೂಲಿ ಮಾಡಿ ಅಥವಾ ಅಮಾನತಿಗೆ ಸಿದ್ಧರಾಗಿ ಎಂಬ ಜಿಲ್ಲಾಧಿಕಾರಿಗಳ ಆದೇಶದಿಂದ ಬೆದರಿದ ಪುರಸಭೆ ಅಧಿಕಾರಿಗಳು ಶುಕ್ರವಾರ ಹಾಗೂ ಶನಿವಾರ ಕಾರ್ಯಾಚರಣೆ ನಡೆಸಿ ಹೇಮಾವತಿ ಸಂಕೀರ್ಣದಲ್ಲಿನ ಎರಡು ಅಜಾದ್ ರಸ್ತೆಯಲ್ಲಿ ೧೦ನೇ ಹಣಕಾಸು ಯೋಜನೆಯಡಿ ನಿರ್ಮಿಸಿದ್ದ ಐದು ಮಳಿಗೆಗಳಿಗೆ ಬೀಗ ಹಾಕಲಾಯಿತು. ಈ ಐದು ಮಳಿಗೆಗಳಿಂದ ೨೦ ಲಕ್ಷ ಬಾಡಿಗೆ ಬಾಕಿ ಇದ್ದು ಒಳಬಾಡಿಗೆ ನೀಡುವ ಮೂಲಕ ಬಾಡಿಗೆದಾರರಿಗೆ ಹಾಗೂ ಪುರಸಭೆಗೆ, ಪುರಸಭೆ ಮಾಜಿ ಅಧ್ಯಕ್ಷರೊಬ್ಬರು ವಂಚಿಸಿದ್ದಾರೆ ಎಂಬ ಆರೋಪ ಮಳಿಗೆಗಳಿಗೆ ಬೀಗ ಹಾಕುವ ವೇಳೆ ಕೇಳಿ ಬಂದಿತ್ತು. ಪುರಸಭೆಗೆ ಸೇರಿದ ೧೪೦ ಮಳಿಗೆಗಳಿದ್ದು, ೮೯ ಲಕ್ಷ ಬಾಡಿಗೆ ಬಾಕಿ ಇದೆ. ಎರಡು ದಿನಗಳ ಕಾರ್ಯಾಚರಣೆಯಲ್ಲಿ ೧೫ ಲಕ್ಷ ರು. ವಸೂಲಾತಿಯಾಗಿದೆ.
ನಕಲಿ ಆಧಾರ್‌ ಮಾಡುವ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ
ನಕಲಿ ದಾಖಲೆ ಸೃಷ್ಟಿಸಿ ಹೊರಗಿನವರಿಗೆ ಆಧಾರ್ ಕಾರ್ಡ್ ಕೊಡುವ ಕೆಲಸ ನಡೆದಿದೆ. ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಅನೇಕರು ಸೇರಿ ಈ ಕೃತ್ಯದಲ್ಲಿ ತೊಡಗಿದ್ದು, ಇಂಟರ್‌ನೆಟ್ ಕೇಂದ್ರದವರೂ ಇದರಲ್ಲಿ ಭಾಗಿ ಆಗಿದ್ದಾರೆ. ಸ್ಪಂದನಾ ಸೇರಿ ಅನೇಕ ಕಡೆ ಆಧಾರ್ ಕಾರ್ಡ್ ಮಾಡುತ್ತಾರೆ. ಬಾಂಗ್ಲಾ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸಿ ಜಿಲ್ಲೆಯಲ್ಲಿ ನಕಲಿ ಆಧಾರ್‌ ಕಾರ್ಡ್ ಸೃಷ್ಠಿ ಮಾಡುತ್ತಿದ್ದ ಜಾಲ ಹಾಸನದಲ್ಲಿ ಬಯಲಿಗೆ ಬಂದಿದ್ದು, ಕೂಡಲೇ ಈ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅರಕಲಗೂಡು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು.
ಗಾಣಿಗ ಸಮುದಾಯದಿಂದ ಶನಿದೇವರ ವೈಭವದ ಉತ್ಸವ
ಚನ್ನರಾಯಪಟ್ಟಣದ ಬಾಗೂರು ರಸ್ತೆಯಿಂದ ಪ್ರಾರಂಭಗೊಂಡ ಶನಿದೇವರ ಮೂರ್ತಿ ಹೊತ್ತ ಬೆಳ್ಳಿರಥ ಕೆ. ಆರ್‌. ವೃತ್ತ, ಹಳೇ ಬಸ್‌ನಿಲ್ದಾಣ, ಆಂಜನೇಯಸ್ವಾಮಿ ದೇವಸ್ಥಾನದ ಮಾರ್ಗವಾಗಿ ಕೋಟೆ ಬೀದಿ, ಹೊಸ ಬಸ್ ನಿಲ್ದಾಣದ ವರೆಗೆ ಚಂಡೆ, ವಾದ್ಯಗೋಷ್ಠಿ, ಮಹಿಳೆಯರಿಂದ ಭದ್ರಕಾಳಿ, ವೀರಭದ್ರನ ಕುಣಿತ, ಲಂಬಾಣಿ ಕುಣಿತ, ಚಂಡೆವಾದ್ಯ, ಮಂಗಳವಾದ್ಯದೊಂದಿಗೆ ದೇವರಿಗೆ ವಿಶೇಷ ಅಲಂಕಾರದೊಂದಿಗೆ ಶೃಂಗರಿಸಲಾಗಿತ್ತು. ಗಾಣಿಗರ ಶ್ರೀ ಶನಿದೇವರ ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ಶ್ರೀ ಶನಿದೇವರ ವೈಭವದ ಉತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು.
ಕೃಷ್ಣ ರಾಧೆ ವೇಷಧರಿಸಿ ಕಂಗೊಳಿಸಿದ ಸರ್ಕಾರಿ ಶಾಲೆ ಪುಟಾಣಿಗಳು
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಿಂದ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳು ಪ್ರಾರಂಭವಾಗಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊದಲ ವರ್ಷದಿಂದಲೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪುಟಾಣಿ ಮಕ್ಕಳು ಕರಷ್ಣ, ರಾಧೆ ವೇಷ ಧರಿಸಿ ಹಾಡಿಗೆ ನೃತ್ಯ ಮಾಡುವ ಮೂಲಕ ನೋಡುಗರ ಗಮನ ಸೆಳೆದಿದ್ದಾರೆ. ಸರ್ಕಾರಿ ಶಾಲೆಯೊಂದು ತನಗೆ ಸಿಗುವ ಅತ್ಯಲ್ಪ ಸಂಪನ್ಮುಲಗಳೊಂದಿಗೆ ಉತ್ತಮವಾಗಿ ಸಾಗುತ್ತಿದೆ.ಈಗ ಸರಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಿರುವುದು ಇನ್ನು ಪ್ರೋತ್ಸಾಹ ಸಿಕ್ಕಿದಂತಾಗಿದೆ.
ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕರಿಸಿ
ನೀವು ಒಳ ಒಪ್ಪಂದ ಮಾಡಿಕೊಂಡು ಗಿಮಿಕ್ ರಾಜಕೀಯ ಮಾಡಿದಿರಿ, ನಿಮ್ಮ ಪಕ್ಷದ ಮತ್ತೊಬ್ಬರು ಇಲ್ಲಿಗೆ ಬರುತ್ತಿದ್ದಾರೆ ಎಂಬುದನ್ನು ಅರಿತು ನಾವು ಬದುಕಿದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಈ ರೀತಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದೀರ.ಸುಳ್ಳು ಆರೋಪವನ್ನು ಮಾಡಬೇಡಿ. ನಮ್ಮ ಸದಸ್ಯರು ನಿಮ್ಮ ಹೇಳಿಕೆ ವಿರುದ್ಧ ಕಾನೂನು ಹೋರಾಟಕ್ಕೆ ಹೊರಟರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ, ಬಸವರಾಜ್‌ರವರೇ ಹುಷಾರ್ ಇದು ಲಾಸ್ಟ್ ವಾರ್ನಿಂಗ್. ನೀವು ಹಿರಿಯರು ಮಾರ್ಗದರ್ಶನವನ್ನು ಕೊಡಿ ನಾನು ಸ್ವಾಗತಿಸುತ್ತೇನೆ ಎಂದು ಸಮಿವುಲ್ಲಾ ಎಚ್ಚರಿಕೆ ನೀಡಿದರು.
ದ್ವಾರಸಮುದ್ರ ಕೆರೆಗೆ ಶಾಶ್ವತ ನೀರು ಪೂರೈಕೆ
ದ್ವಾರಸಮುದ್ರ ಕೆರೆ ಮುಂಗಾರು ಮಳೆ ಹಾಗೂ ಏತ ನೀರಾವರಿ ಯೋಜನೆಯಿಂದ ಮೈತುಂಬಿ ಹರಿಯುತ್ತಿರುವುದು ಸಂತೋಷದ ವಿಚಾರ. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದರು.
ಸಕಲೇಶಪುರದ ಕ್ರೀಡಾಂಗಣಕ್ಕೆ ಬೇಕಿದೆ ಕಾಯಕಲ್ಪ
ಸಕಲೇಶಪುರ ಪಟ್ಟಣದಲ್ಲಿರುವ ಈಗಾಗಲೇ ಹದಗೆಟ್ಟಿರುವ ತಾಲೂಕು ಕ್ರೀಡಾಂಗಣದಲ್ಲಿ ಹೆಜ್ಜೆ ಇಟ್ಟಲೆಲ್ಲ ಇರುವೆ ಹುತ್ತಗಳಿದ್ದು ಮುಚ್ಚುವ ಯತ್ನವನ್ನು ತಾಲೂಕು ಆಡಳಿತ ನಡೆಸುತ್ತಿಲ್ಲ. ಪರಿಣಾಮ ಇರುವೆ ಹುತ್ತಕ್ಕೆ ಕಾಲು ಹಾಕಿ ಸಾಕಷ್ಟು ವಿದ್ಯಾರ್ಥಿಗಳು ಕಾಲಿಗೆ ಕಚ್ಚಿಸಿಕೊಂಡಿದ್ದರೆ, ಕ್ರೀಡಾಂಗಣದ ಸುತ್ತ ಇರುವ ಗಿಡಗಂಟಿಗಳು ವಿದ್ಯಾರ್ಥಿಗಳನ್ನು ಭಯಪಡಿಸುವಂತಿದೆ. ಇದಲ್ಲದೆ ಕ್ರಿಡಾಂಗಣದಲ್ಲಿ ಅಡಿಗಳಷ್ಟು ನೀರಿದ್ದು ನೀರು ಕೆಸರಿನಲ್ಲೆ ವಿದ್ಯಾರ್ಥಿಗಳು ಆಟ ಆಡಬೇಕಿದೆ. ಇದರಿಂದಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿರುವ ತಮ್ಮ ನೈಜ ಕೌಶಲ್ಯವನ್ನು ತೋರ್ಪಡಿಸಲು ಸಾಧ್ಯವಿಲ್ಲದಾಗಿದೆ. ಕ್ರೀಡಾಂಗಣದಲ್ಲಿ ಶೌಚಗೃಹವಿದ್ದರೂ ನೀರಿನ ಸೌಲಭ್ಯವಿಲ್ಲದ ಕಾರಣ ದೇಹಬಾಧೆ ತೀರಿಸಿಕೊಳ್ಳಲು ವಿದ್ಯಾರ್ಥಿಗಳು ಗಿಡಗಂಟಿಗಳ ಮೊರೆ ಹೋಗಬೇಕಿದೆ.
ಎಂಸಿಇ ವಿದ್ಯಾರ್ಥಿಗಳಿಂದ ಬೇಲೂರು ದೇಗುಲ ಸುತ್ತ ಸ್ವಚ್ಛತೆ
ಎಂಸಿಇ ವಿದ್ಯಾರ್ಥಿನಿಯರು ಬೇಲೂರಿನ ಗ್ರೀನರಿ ಟ್ರಸ್ಟ್, ಭಾರತ್ ಸೇವಾ ದಳದೊಂದಿಗೆ ಪಟ್ಟಣದ ಅಮೃತಲಿಂಗೇಶ್ವರ ಕಲ್ಯಾಣಿ ಆವರಣ ಹಾಗೂ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಹಿಂಭಾಗ ವಾಹನಗಳ ನಿಲುಗಡೆ ಸ್ಥಳದಲ್ಲಿ ಇದ್ದ ಕಸಗಳನ್ನು ಸ್ವಚ್ಛ ಮಾಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾಸನದ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಬೇಲೂರಿನ ಗ್ರೀನರಿ ಟ್ರಸ್ಟ್ ಹಾಗೂ ಭಾರತ್ ಸೇವಾ ದಳದೊಂದಿಗೆ ಬೇಲೂರು ದೇಗುಲ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved